ದಕ್ಷಿಣ ಕನ್ನಡ

ಕೋರ್ಟ್‌ ವ್ಯಾಜ್ಯಗಳ ರಾಜಿ ಸಂಧಾನಕ್ಕೆ ವಿಶೇಷ ಮಧ್ಯಸ್ಥಿಕೆ ಅಭಿಯಾನ

ಎಲ್ಲ ರೀತಿಯ ಪ್ರಕರಣಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಅವಕಾಶ ಮಂಗಳೂರು: ಎಲ್ಲ ಹಂತದ ನ್ಯಾಯಾಲಯಗಳಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ಪ್ರಾರಂಭವಾಗಿದ್ದು, ಅಕ್ಟೋಬರ್‌ 7ರ ವರೆಗೆ ನಡೆಯಲಿದೆ ಎಂದು ದ.ಕ ಜಿಲ್ಲಾ ಪ್ರಧಾನ ನ್ಯಾಯಾಧೀಶ ಬಸವರಾಜ್ ತಿಳಿಸಿದ್ದಾರೆ. ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, […]

ಕೋರ್ಟ್‌ ವ್ಯಾಜ್ಯಗಳ ರಾಜಿ ಸಂಧಾನಕ್ಕೆ ವಿಶೇಷ ಮಧ್ಯಸ್ಥಿಕೆ ಅಭಿಯಾನ Read More »

ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುತ್ತಾ ಕೇಂದ್ರ?

ಸ್ವಾಮೀಜಿಗಳ ನಿಯೋಗಕ್ಕೆ ಅಮಿತ್‌ ಶಾ ನೀಡಿದರು ಭರವಸೆ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದ ಎಲ್ಲ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ಸ್ವಾಮೀಜಿಗಳ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಧರ್ಮಸ್ಥಳದ ಮೇಲಿನ ಅಪಪ್ರಚಾರ ಸಂಬಂಧಿತ ಎಲ್ಲ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಬೇಕೆಂದು ಆಗ್ರಹಿಸಿ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ

ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುತ್ತಾ ಕೇಂದ್ರ? Read More »

ನಾರಾವಿ ಗ್ರಾಮ ಪಂಚಾಯತಿಗೆ ವಿಧಾನ ಪರಿಷತ್‍ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ

ನಾರಾವಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತಿಗೆ ಇಂದು ವಿಧಾನ ಪರಿಷತ್ತಿನ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಚರ್ಚಿಸಿ ಪರಿಶೀಲಿಸಿದರು. ಕೇಂದ್ರ ಸರ್ಕಾರದ MGNREGA, ಪ್ರಧಾನ ಮಂತ್ರಿ ಆವಾಸ್ ಯೋಜನೆ, 15ನೇ ಹಣಕಾಸು ಅನುದಾನ, ಸ್ವಚ್ಛ ಭಾರತ

ನಾರಾವಿ ಗ್ರಾಮ ಪಂಚಾಯತಿಗೆ ವಿಧಾನ ಪರಿಷತ್‍ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ Read More »

ಮಂಗಳೂರು : ಫ್ಲ್ಯಾಟ್‌ನಿಂದ 9.46 ಲ.ರೂ. ಚಿನ್ನಾಭರಣ ಕಳವು

ಮಂಗಳೂರು : ನಗರದ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ವೊಂದರಿಂದ ಸುಮಾರು 9.46 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಜಗದೀಶ್ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ. ಜಗದೀಶ್‌ ಮತ್ತವರ ಮಕ್ಕಳು ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಈ ಫ್ಲ್ಯಾಟ್‌ನಲ್ಲಿ ಜಗದೀಶ್‌ರ ಪತ್ನಿ ಒಬ್ಬರೇ ಇದ್ದರು. ಅವರ ಆರೋಗ್ಯ ಸರಿ ಇಲ್ಲದ ಕಾರಣ ಮಹಿಳೆಯೊಬ್ಬರನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದರು. ಮನೆ ಕೆಲಸದಾಕೆ ಕಳೆದ ಜು.21ರಿಂದ ಕೆಲಸಕ್ಕೆ ಬರುವುದನ್ನು ನಿಲ್ಲಿಸಿದ್ದಳು. ಫೋನ್ ಕರೆಗಳನ್ನು ಕೂಡ ಸ್ವೀಕರಿಸುತ್ತಿರಲಿಲ್ಲ. ಬಳಿಕ ಜಗದೀಶ್‌ರ ಪತ್ನಿಯ ಆರೋಗ್ಯದಲ್ಲಿ

ಮಂಗಳೂರು : ಫ್ಲ್ಯಾಟ್‌ನಿಂದ 9.46 ಲ.ರೂ. ಚಿನ್ನಾಭರಣ ಕಳವು Read More »

ಸುಳ್ಯ : ಕಾರು-ಟ್ಯಾಂಕರ್ ಡಿಕ್ಕಿಯಾಗಿ ಮಹಿಳೆ ಸಾವು; ಇಬ್ಬರಿಗೆ ಗಂಭೀರ ಗಾಯ

ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಬಳಿಯ ಕಡೇಪಾಲ ಬಳಿ ಬುಧವಾರ ಕಾರು ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೊಡಗು ಜಿಲ್ಲೆಯ ಸಿದ್ದಾಪುರದ ನೆಲ್ಲಿಹುದಿಕೇರಿಯ ನಿವಾಸಿ ಶೋಭಾ (47) ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಟ್ಯಾಂಕರ್ ಮಡಿಕೇರಿಯಿಂದ ಸುಳ್ಯದ ಕಡೆಗೆ ಹೋಗುತ್ತಿತ್ತು, ಕಾರು ಮಡಿಕೇರಿ ಕಡೆಗೆ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿತ್ತು. ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ

ಸುಳ್ಯ : ಕಾರು-ಟ್ಯಾಂಕರ್ ಡಿಕ್ಕಿಯಾಗಿ ಮಹಿಳೆ ಸಾವು; ಇಬ್ಬರಿಗೆ ಗಂಭೀರ ಗಾಯ Read More »

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಸೌಜನ್ಯಾ ಕೇಸ್‌ನಲ್ಲಿ ಕ್ಲೀನ್‌ಚಿಟ್‌ ಪಡೆದವರಿಗೆ ಎಸ್‌ಐಟಿ ನೋಟಿಸ್‌

ವಿಚಾರಣೆಗೆ ಹಾಜರಾದ ಸೌಜನ್ಯಾ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಉದಯಕುಮಾರ್‌ ಜೈನ್‌ ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ದಿನಕಳೆದಂತೆ ಅನೂಹ್ಯ ತಿರುವುಗಳನ್ನು ಪಡೆಯುತ್ತಿದೆ. ಇಂದು ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಆರೋಪಿಗಳನ್ನು ಎಸ್‌ಐಟಿ ಇಂದು ವಿಚಾರಣೆಗೆ ಕರೆಸಿರುವುದು ಕುತೂಹಲ ಮೂಡಿಸಿದೆ. ಈ ನಡೆಯಿಂದ ಸೌಜನ್ಯಾ ಪ್ರಕರಣದ ತನಿಖೆಯನ್ನು ಎಸ್‌ಐಟಿ ಕೈಗೆತ್ತಿಕೊಂಡಿತಾ ಎಂಬ ಪ್ರಶ್ನೆಯೂ ಮೂಡಿದೆ. ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪ ಹೊತ್ತು ಕ್ಲೀನ್‌ಚಿಟ್‌ ಪಡೆದವರಿಗೆ ವಿಶೇಷ ತನಿಖಾ ತಂಡ ಬುಲಾವ್‌

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಸೌಜನ್ಯಾ ಕೇಸ್‌ನಲ್ಲಿ ಕ್ಲೀನ್‌ಚಿಟ್‌ ಪಡೆದವರಿಗೆ ಎಸ್‌ಐಟಿ ನೋಟಿಸ್‌ Read More »

ಮಂಗಳೂರು: ಮಹಿಳೆಗೆ ಕಿರುಕುಳ ನೀಡಿದ ಪೊಲೀಸ್‌ ಸಿಬ್ಬಂದಿ ಅಮಾನತು

ಕರೆ ಮಾಡಿ, ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಪೊಲೀಸ್‌ ಸಿಬ್ಬಂದಿ ಮಂಗಳೂರು: ಮಹಿಳೆಗೆ ಅಶ್ಲೀಲ ಕರೆ ಮತ್ತು ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಆಗಸ್ಟ್ 23ರಂದು ಕೌಟುಂಬಿಕ ಕಲಹದ ಬಗ್ಗೆ ದೂರು ನೀಡಲು ಠಾಣೆಗೆ ಭೇಟಿ ನೀಡಿದ್ದರು. ಆಗ ಇನ್ಸ್‌ಪೆಕ್ಟರ್ ಸಂದೇಶ್ ಅವರು ಪತಿ ಮತ್ತು ಪತ್ನಿ ಇಬ್ಬರನ್ನೂ ಕರೆದು ಮಧ್ಯಸ್ಥಿಕೆ ವಹಿಸಿ ಪ್ರಕರಣವನ್ನು ಇತ್ಯರ್ಥಗೊಳಿಸಿ

ಮಂಗಳೂರು: ಮಹಿಳೆಗೆ ಕಿರುಕುಳ ನೀಡಿದ ಪೊಲೀಸ್‌ ಸಿಬ್ಬಂದಿ ಅಮಾನತು Read More »

ಮಹಿಳೆಯ ಆಭರಣ ಕಳವು : ವಿಮಾನ ನಿಲ್ದಾಣದ ಸಿಬ್ಬಂದಿ ಸಹಿತ ಐವರ ಬಂಧನ

ಮಹಿಳೆಯ ಬ್ಯಾಗಿನಿಂದ 4.5 ಲ.ರೂ. ಮೌಲ್ಯದ ನೆಕ್ಲೆಸ್‌ ಎಗರಿಸಿದ್ದ ಆರೋಪಿಗಳು ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಚೆಕ್-ಇನ್ ಲಗೇಜ್‌ನಿಂದ ಚಿನ್ನಾಭರಣಗಳನ್ನು ಕದ್ದ ಆರೋಪದ ಮೇಲೆ ಏರ್ ಇಂಡಿಯಾ SATSನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಬ್ಯಾಗೇಜ್ ನಿರ್ವಹಣಾ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಕಳವು ಮಾಲನ್ನು ಖರೀದಿಸಿದ ಆರೋಪ ಹೊತ್ತಿರುವ ಐದನೇ ವ್ಯಕ್ತಿಯನ್ನು ಸಹ ಬಂಧಿಸಲಾಗಿದೆ. ಕಾಣೆಯಾದ ಚಿನ್ನದ ಗಣನೀಯ ಭಾಗವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಆಗಸ್ಟ್ 30ರಂದು ಬೆಳಗ್ಗೆ ಬೆಂಗಳೂರಿನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್

ಮಹಿಳೆಯ ಆಭರಣ ಕಳವು : ವಿಮಾನ ನಿಲ್ದಾಣದ ಸಿಬ್ಬಂದಿ ಸಹಿತ ಐವರ ಬಂಧನ Read More »

ಬಿಜೆಪಿ ನೆರವಿನ ಕೊಡುಗೆಯನ್ನು ನಿರಾಕರಿಸಿದ ಸೌಜನ್ಯಾ ತಾಯಿ

ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದರೆ ಖರ್ಚುವೆಚ್ಚ ಭರಿಸುವ ಭರವಸೆ ನೀಡಿದ ವಿಜಯೇಂದ್ರ ಧರ್ಮಸ್ಥಳ: ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣದ ಮರುತನಿಖೆ ಕೋರಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದರೆ ಅದರ ಪೂರ್ತಿ ಖರ್ಚನ್ನು ಭರಿಸುವ ಬಿಜೆಪಿ ಕೊಡುಗೆಯನ್ನು ಸೌಜನ್ಯಾ ತಾಯಿ ಕುಸುಮಾವತಿ ನಿರಾಕರಿಸಿದ್ದಾರೆ. ಬಿಜೆಪಿ ನಿಯೋಗ ಮನೆಗೆ ಬಂದು ಹೋದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಕುಸುಮಾವತಿ ತನಗೆ ರಾಜಕೀಯದವರ ಮೇಲೆ ನಂಬಿಕೆ ಇಲ್ಲ. ಹೋರಾಟ ಮಾಡುತ್ತಿರುವ ಸಂದರ್ಭದಲ್ಲಿ ನಮ್ಮನ್ನು ವಿರೋಧಿಸಿದವರು ಈಗ ಸಹಾಯ ಮಾಡಲು ಬಂದಿರುವುದು ಏಕೆ ಎಂದು

ಬಿಜೆಪಿ ನೆರವಿನ ಕೊಡುಗೆಯನ್ನು ನಿರಾಕರಿಸಿದ ಸೌಜನ್ಯಾ ತಾಯಿ Read More »

ಮಂಗಳೂರು : ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ವೀಡಿಯೊ ಹಂಚಿಕೊಂಡ ದುರುಳರು

ಇನ್‌ಸ್ಟಾಗ್ರಾಂನಲ್ಲಿ ಪರಿಚಿತಳಾದವಳನ್ನು ನಂಬಿಸಿ ದುಷ್ಕೃತ್ಯ; ಏಳು ಯುವಕರು ಸೆರೆ ಮಂಗಳೂರು : ಅಪ್ರಾಪ್ತ‌ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ವೀಡಿಯೊ ಮಾಡಿ ಅದನ್ನು ಹರಿಬಿಟ್ಟ ಪ್ರಕರಣ ಆಘಾತಕಾರಿ ಪ್ರಕರಣ ಬಜಪೆಯಲ್ಲಿ ಸಂಭವಿಸಿದ್ದು, ಈ ಸಂಬಂಧ ಏಳು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಪರಿಚಿತಳಾದ ಕಾಲೇಜು ವಿದ್ಯಾರ್ಥಿನಿಯನ್ನು ಪ್ರೇಮಿಸುವ ನೆಪದಲ್ಲಿ ಅತ್ಯಾಚಾರ ಎಸಗಲಾಗಿದೆ ಎಂಬ ವಿಚಾರ ತನಿಖೆಯಿಂದ ತಿಳಿದುಬಂದಿದೆ. ಬಂಧಿತರನ್ನು ಕಾರ್ತಿಕ್, ರಾಕೇಶ್‌ ಸಲ್ಡಾನ, ಜೀವನ್‌, ಸಂದೀಪ್‌, ರಕ್ಷಿತ್, ಶ್ರವಣ್, ಸುರೇಶ್ ಎಂದು ಗುರುತಿಲಾಗಿದೆ. ಅಪ್ರಾಪ್ತ ವಯಸ್ಸಿನ

ಮಂಗಳೂರು : ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ವೀಡಿಯೊ ಹಂಚಿಕೊಂಡ ದುರುಳರು Read More »

error: Content is protected !!
Scroll to Top