ದಕ್ಷಿಣ ಕನ್ನಡ

ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರ ಬಂಧನ

ಮನೆಯವರು ಮಲಗಿರುವಾಗಲೇ 20 ಲ.ರೂ. ಮೌಲ್ಯದ ಸೊತ್ತು ಕಳವು ಮಾಡಿದ್ದ ಚಾಲಾಕಿಗಳು ಮಂಗಳೂರು: ನಗರದ ಲಾಲ್‌ಬಾಗ್‌ನ ಅಪಾರ್ಟ್ಮೆಂಟ್‌ವೊಂದರ ಮೂರು ಫ್ಲಾಟ್‌ಗಳಿಂದ ಮನೆಯವರು ಮಲಗಿರುವಾಗಲೇ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳವುಗೈದ ಪ್ರಕರಣಕ್ಕೆ ಸಂಭಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಸ್ಸಾಂನ ಕಾಚಾರ್‌ ಜಿಲ್ಲೆಯ ಅಭಿಜಿತ್ ದಾಸ್ (24) ಹಾಗೂ ದೇಬಾ ದಾಸ್ (21) ಎಂದು ಗುರುತಿಸಲಾಗಿದೆ. ಆರೋಪಿ ಅಭಿಜಿತ್ ದಾಸ್ ಎಂಬಾತನ ಮೇಲೆ […]

ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರ ಬಂಧನ Read More »

ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ : ಯುವಕ ಸೆರೆ

ನಿಟ್ಟೆ ಅಭಿಷೇಕ್‌ ಆಚಸರ್ಯ ಅತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಕೃತ್ಯ ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮತ್ತು ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಅವಮಾನ ಮತ್ತು ಮಾನಸಿಕ ಯಾತನೆಯನ್ನುಂಟು ಮಾಡಿದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಯುವಕ ಓರ್ವನನ್ನು ಬಂಧಿಸಿದ್ದಾರೆ. ಮಂಗಳೂರಿನ ಕಾವೂರು ಕಾಪಿಗುಡ್ಡದ ಆಕಾಶ್ ಭವನ ನಿವಾಸಿ ನಿಖಿಲ್ ರಾಜ್ (27) ಸೆರೆಯಾಗಿರುವ ಆರೋಪಿ. ಬೆಳ್ಮಣ್‌ನ ಲಾಡ್ಜ್‌ನಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಕಾರ್ಕಳದ ನಿಟ್ಟೆ ಪರಪ್ಪಾಡಿಯ ಅಭಿಷೇಕ್ ಆಚಾರ್ಯ ದೂರುದಾರರಿಗೆ

ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ : ಯುವಕ ಸೆರೆ Read More »

ವಿಷ ಸೇವಿಸಿದ್ದ ವ್ಯಕ್ತಿ ಮೃತ್ಯು

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿಯ ಕಳೆಂಜದಲ್ಲಿ ನಡೆದಿದ್ದು ಧರ್ಮಸ್ಥಳ ‌ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ ಅನುರಾಜ್ (43) ಮೃತ ವ್ಯಕ್ತಿಯಾಗಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ ಈತ ಅ.17ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿದ್ದು ಆತನನ್ನು ಕೂಡಲೇ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಚಿಕಿತ್ಸೆಗೆ ಸ್ಪಂದಿಸದೆ ಅ18ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತನ ಸಹೋದರ ಬಾಬು ನೀಡಿರುವ ದೂರಿನಂತೆ‌ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

ವಿಷ ಸೇವಿಸಿದ್ದ ವ್ಯಕ್ತಿ ಮೃತ್ಯು Read More »

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ಮಲತಂದೆ ಬಂಧನ

ಐದು ವರ್ಷ ಸತತವಾಗಿ ಲೈಂಗಿಕ ದೌರ್ಜನ್ಯಕ್ಕೊಳಪಡಿಸಿ ಪೀಡಿಸಿದ್ದ ತಂದೆ ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಆಕೆಯ ಮಲತಂದೆಯೇ ಹಲವು ವರ್ಷಗಳಿಂದ ಅತ್ಯಾಚಾರಗೈದ ಆಘಾತಕಾರಿ ಘಟನೆ ಉಳ್ಳಾಲದಲ್ಲಿ ಬೆಳಕಿಗೆ ಬಂದಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಮೀರ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯ ತಂದೆ ಮೃತಪಟ್ಟ ಬಳಿಕ ಆಕೆಯ ತಾಯಿ ಅಮೀರ್ ಎಂಬಾತನ ಜೊತೆ ವಿವಾಹವಾಗಿ ಕುಂಪಲದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಈ ಮಧ್ಯೆ ತಾಯಿ

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ಮಲತಂದೆ ಬಂಧನ Read More »

ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಶಿಕ್ಷಕಿ ಸಾವು

ಬಹಳ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ನೃತ್ಯ ಶಿಕ್ಷಕಿ ಸುಳ್ಯ : ವಿರಳ ಹಾಗೂ ತೀರ ಅಪರೂಪದ ಕಾಯಿಲೆ Hyper IGE Mediated Mast cell activation syndromeನಿಂದ (ಹೈಪರ್-IgE ಸಿಂಡ್ರೋಮ್‌) ಬಳಲುತ್ತಿದ್ದ ಗಾಂಧಿನಗರ ನಿವಾಸಿ ಚಾಂದಿನಿ ಜೀವನ್ಮರಣ ಹೋರಾಟ ಕೊನೆಗೂ ಫಲಿಸಿಲ್ಲ. ಕಳೆದ ಕೆಲವು ವರ್ಷಗಳಿಂದ ಚಾಂದಿನಿ ಈ ಕಾಯಿಲೆಯಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಇವರಿಗಿದ್ದ ಕಾಯಿಲೆ ಏನು ಎಂಬುದನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಬಹಳ ಸಮಯ ಹಿಡಿದಿತ್ತು. ಅಂತಿಮವಾಗಿ ಇವರಿಗೆ ಇದ್ದಿದ್ದು

ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಶಿಕ್ಷಕಿ ಸಾವು Read More »

ಹೂಡಿಕೆ ನೆಪದಲ್ಲಿ ಕೋಟ್ಯಂತರ ರೂ. ವಂಚನೆ : ಗಂಡ-ಹೆಂಡತಿ ಸೆರೆ

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಲಾಭ ಗಳಿಸಿಕೊಡುತ್ತೇವೆ ಎಂದು ನಂಬಿಸಿ ಕಿನ್ನಿಗೋಳಿ ಪರಿಸರದ ಪರಿಚಯಸ್ಥ ಜನರಿಗೆ ಕೋಟಿಗಟ್ಟಲೆ ರೂಪಾಯಿ ವಂಚಿಸಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಿನ್ನಿಗೋಳಿ ಸಮೀಪದ ಕವತ್ತಾರಿನ ರಿಚರ್ಡ್‌ ಡಿಸೋಜ ಮತ್ತು ಅವನ ಹೆಂಡತಿ ರಶ್ಮಿ ರೀಟಾ ಪಿಂಟೊ ಸೆರೆಯಾಗಿರುವ ಆರೋಪಿಗಳು. ಮೂಲ್ಕಿ ಪೊಲೀಸ್‌ ಠಾಣೆಯಲ್ಲಿ ಅವರ ವಿರುದ್ಧ ಸಾರ್ವಜನಿಕರಿಗೆ ಹೂಡಿಕೆ ನೆಪದಲ್ಲಿ ಸುಮಾರು 1.5 ಕೋ. ರೂ. ವಂಚಿಸಿದ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಸುಮಾರು ಒಂದೂವರೆ ವರ್ಷದಿಂದ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದರು. ಮೂಲ್ಕಿ

ಹೂಡಿಕೆ ನೆಪದಲ್ಲಿ ಕೋಟ್ಯಂತರ ರೂ. ವಂಚನೆ : ಗಂಡ-ಹೆಂಡತಿ ಸೆರೆ Read More »

ಬಾಲಕನಿಗೆ ಸ್ಕೂಟರ್‌ ನೀಡಿದ ವ್ಯಕ್ತಿಗೆ 32 ಸಾವಿರ ರೂ. ದಂಡ

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಕಾರಣಕ್ಕೆ ವಾಹನ ಮಾಲಕನಿಗೆ ಬಂಟ್ವಾಳ ನ್ಯಾಯಾಲಯ 32 ಸಾವಿರ ರೂ. ದಂಡ ವಿಧಿಸಿದೆ. ಕಳೆದ ಸೆಪ್ಟಂಬರ್‌ನಲ್ಲಿ ಪುತ್ತೂರು ಕಡೆಯಿಂದ ವಿಟ್ಲದತ್ತ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕ ಚಲಾಯಿಸುತ್ತಿದ್ದ ಇನ್ನೊಂದು ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಬಂಟ್ವಾಳ ಎಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯ ವಿಚಾರಣೆ ನಡೆಸಿ ಬಾಲಕ

ಬಾಲಕನಿಗೆ ಸ್ಕೂಟರ್‌ ನೀಡಿದ ವ್ಯಕ್ತಿಗೆ 32 ಸಾವಿರ ರೂ. ದಂಡ Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಕಸಾಯಿಖಾನೆ ಸ್ಥಳಗಳು ಜಪ್ತಿ

ಗೋಹತ್ಯೆ ನಡೆಸಿದ ಸ್ಥಳಗಳೆಂದು ಗುರುತಿಸಿ ಮುಟ್ಟುಗೋಲು ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ ಗ್ರಾಮಾಂತರ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಖಲಾಗಿರುವ ಜಾನುವಾರು ಹತ್ಯೆ ಪ್ರಕರಣಗಳ ತನಿಖೆಯ ಭಾಗವಾಗಿ ಕಸಾಯಿಖಾನೆಗಳಿದ್ದ ಸ್ಥಳಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಮತ್ತು ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಕೆರೆಬಳಿ ಪ್ರದೇಶದಲ್ಲಿ ಆರೋಪಿಗಳಾದ ನಾಸೀರ್ ಮತ್ತು ಇತರರು ದನವನ್ನು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಕಸಾಯಿಖಾನೆ ಸ್ಥಳಗಳು ಜಪ್ತಿ Read More »

ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತ ದಾಳಿ

ಪ್ರಾಣಿಗಳ ಆಹಾರ ಪೂರೈಕೆ ಸಹಿತ ವಿವಿಧ ವ್ಯವಹಾರಗಳಲ್ಲಿ ಲೋಪದೋಷದ ಆರೋಪ ಮಂಗಳೂರು : ನಗರದ ಹೊರವಲಯದ ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ಡಾರೆ. ಡಿವೈಎಸ್‌ಪಿ ಡಾ.ಗಾನ ಪಿ ಕುಮಾರ್ ನೇತೃತ್ವದ ತಂಡ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಕಂಡುಬಂದ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದೆ. ಅನುದಾನ ದುರುಪಯೋಗ, ಆದಾಯ ಮತ್ತು ವೆಚ್ಚದ ಬಗ್ಗೆ ಪರಿಶೀಲನೆ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ,

ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತ ದಾಳಿ Read More »

ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್‌ ಅಮ್ಮಣ್ಣಾಯ ಇನ್ನಿಲ್ಲ

ಪೌರಾಣಿಕ, ತುಳು ಪ್ರಸಂಗಗಳ ಅಮೋಘ ಭಾಗವತಿಕೆಯ ಪರಂಪರೆ ಕೊನೆಯ ಕೊಂಡಿ ಮಂಗಳೂರು : ರಸರಾಗ ಚಕ್ರವರ್ತಿ ಎಂದು ಅರಿಯಲ್ಪಡುತ್ತಿದ್ದ ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್‌ ಅಮ್ಮಣ್ಣಾಯ ಗುರುವಾರ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು. ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯಕ್ಷಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರು ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು ಮೂಡಿಸಿ ಯಕ್ಷಗಾನ ಕ್ಷೇತ್ರಕ್ಕೆ ಹೊಸ ದಿಕ್ಕು ತೋರಿಸಿದ್ದರು. ಯಕ್ಷಗಾನ ಕ್ಷೇತ್ರದ ಹಿರಿಯ

ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್‌ ಅಮ್ಮಣ್ಣಾಯ ಇನ್ನಿಲ್ಲ Read More »

error: Content is protected !!
Scroll to Top