ದಕ್ಷಿಣ ಕನ್ನಡ

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಪೂರೈಸುತ್ತಿದ್ದ ಯುವಕ ಸೆರೆ

11 ಲಕ್ಷ ರೂ. ಮೌಲ್ಯದ ಮಾದಕವಸ್ತು, ಮೊಬೈಲ್‌ ವಶ ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜುಗಳಿಗೆ ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಆರೋಪಿ ಮೊಹಮ್ಮದ್ ಅರ್ಷದ್ ಖಾನ್ (29) ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿಯ ಮಟ್ಟಂಚೇರಿಯ ಮೌಲಾನಾ ಆಜಾದ್ ರಸ್ತೆಯವನಾಗಿದ್ದು, ಮಂಗಳೂರಿನ ದೇರಳಕಟ್ಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ. ನಿಷೇದಿತ ಮಾದಕ ವಸ್ತು ಎಂಡಿಎಂಎನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದ. ಅವನಿಂದ ಸುಮಾರು 53.29 ಗ್ರಾಂ ಎಂಡಿಎಂಎ ಮತ್ತು 2.33 […]

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಪೂರೈಸುತ್ತಿದ್ದ ಯುವಕ ಸೆರೆ Read More »

ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾದ ಮಹೇಶ್‌ ಶೆಟ್ಟಿ ತಿಮರೋಡಿ

ಕೆಲ ದಿನಗಳಿಂದ ಯಾರಿಗೂ ಸಿಗದಿದ್ದ ತಿಮರೋಡಿ ಇಂದು ದಿಢೀರ್‌ ಹಾಜರು ಮಂಗಳೂರು: ಕೆಲ ದಿನಗಳಿಂದ ಯಾರಿಗೂ ಕಾಣಿಸದಿದ್ದ ಮಹೇಶ್‌ ಶೆಟ್ಟಿ ತಿಮರೋಡಿ ಇಂದು ದಿಢೀರ್‌ ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲು ಇಂದು ಹಾಜರಾಗಿದ್ದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಅವರನ್ನು ನಿಂದಿಸಿದ ಆರೋಪದಲ್ಲಿ ಬ್ರಹ್ಮಾವರ ಠಾಣೆಯಲ್ಲಿ ದಾಖಲಾದ ಕೇಸ್‌ಗೆ ಸಂಬಂದಿಸಿ ಆಗಸ್ಟ್‌ 21ರಂದು ಉಜಿರೆಯ ತಿಮರೋಡಿ ನಿವಾಸಕ್ಕೆ ಪೊಲೀಸರು ಆಗಮಿಸಿ ಮಹೇಶ್‌ ಶೆಟ್ಟಿಯನ್ನು ಬಂಧಿಸಿದ್ದರು. ಬಂಧನದ ವೇಳೆ

ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾದ ಮಹೇಶ್‌ ಶೆಟ್ಟಿ ತಿಮರೋಡಿ Read More »

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಗಣಪತಿ ಹೋಮ, ತೆನೆ ಪೂಜೆ | ಸಭಾಭವನದ ಹಾಸು ಕಲ್ಲು ಉದ್ಘಾಟನೆ

ಕಾಣಿಯೂರು: ಕುದ್ಮಾರಿನ ಜನತೆಯ ಪ್ರೀತಿ, ಸಹಕಾರ ಶ್ಲಾಘನೀಯವಾಗಿದ್ದು ದೇವಸ್ಥಾನದ ಬ್ರಹ್ಮಕಲಶೋತ್ಸವವು ಎಲ್ಲರ ಸಹಕಾರದಿಂದ ಅತ್ಯಂತ ಸಂಭ್ರಮದಿಂದ ಯಶಸ್ವಿಯಾಗಿ ನಡೆದಿದೆ ಎಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈ ಹೇಳಿದರು. ಅವರು ಆ.27 ರಂದು ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಸಭಾಭವನದ ನೆಲಕ್ಕೆ ಅಳವಡಿಸಿದ ಹಾಸು ಕಲ್ಲನ್ನು ಉದ್ಘಾಟಿಸಿ ಮಾತನಾಡಿದರು. ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಮಾತನಾಡಿ, ಶಾಂತಿಮೊಗರು ಕ್ಷೇತ್ರವು

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಗಣಪತಿ ಹೋಮ, ತೆನೆ ಪೂಜೆ | ಸಭಾಭವನದ ಹಾಸು ಕಲ್ಲು ಉದ್ಘಾಟನೆ Read More »

ದೊಂಡೋಲೆ ಚೌತಿ ತಾಳಮದ್ದಳೆಗೆ ಅಮೃತ ಮಹೋತ್ಸವದ ಸಂಭ್ರಮ | ದೊಂಡೋಲೆ  ತಾಳಮದ್ದಳೆ ನಿರಂತರವಾಗಿ ಮುಂದುವರಿಯಲಿ: ಡಿ.ಹರ್ಷೇಂದ್ರ ಕುಮಾರ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ಯಾನುಭೋಗರಾಗಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಸೇರಿದಂತೆ ಮೂರು ತಲೆಮಾರಿನ ಹೆಗ್ಗಡೆಯವರೊಂದಿಗೆ ಕಚೇರಿಯ ಲೆಕ್ಕಪತ್ರ ಮತ್ತು ಕಂದಾಯ ವಿಭಾಗದ  ಕಾರ್ಯನಿರ್ವಹಣೆಯಲ್ಲಿ ಖ್ಯಾತಿ ಪಡೆದ ಕಲಾ ಪ್ರೇಮಿ ದೊಂಡೋಲೆ ಕೆ. ಸೂರ್ಯನಾರಾಯಣ ರಾವ್ 1951 ರಲ್ಲಿ ದೊಂಡೋಲೆ ಮನೆಯಲ್ಲಿ ಗಣೇಶ ಚತುರ್ಥಿಯಂದು  ಶ್ರೀ ಗಣೇಶನ ಪ್ರತಿಷ್ಠೆಯೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಜನೆ ಮತ್ತು  ಯಕ್ಷಗಾನ ತಾಳಮದ್ದಳೆಯನ್ನು ಪ್ರಾರಂಭಿಸಿದರು. ಆರಂಭದ ಕಾಲಘಟ್ಟದಲ್ಲಿ ಧರ್ಮಸ್ಥಳ ಪರಿಸರದ ಕಲಾವಿದರು, ಕೆಲವು ಯಕ್ಷಗಾನ ಸಂಘಗಳ ಕಲಾವಿದರು ಭಾಗವಹಿಸುತ್ತಾ ಮುಂದುವರಿದ  ಕಾರ್ಯಕ್ರಮವು

ದೊಂಡೋಲೆ ಚೌತಿ ತಾಳಮದ್ದಳೆಗೆ ಅಮೃತ ಮಹೋತ್ಸವದ ಸಂಭ್ರಮ | ದೊಂಡೋಲೆ  ತಾಳಮದ್ದಳೆ ನಿರಂತರವಾಗಿ ಮುಂದುವರಿಯಲಿ: ಡಿ.ಹರ್ಷೇಂದ್ರ ಕುಮಾರ್ Read More »

ಬಂಟ್ವಾಳ : 13 ವರ್ಷದ ಬಾಲಕನಿಂದ ಮಹಿಳೆಯರಿಗೆ ಕಿರುಕುಳ!

ರಾತ್ರಿ ಹೊತ್ತು ಸ್ಕೂಟರ್‌ನಲ್ಲಿ ಬಂದು ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಬಾಲಕ ಬಂಟ್ವಾಳ : ಪಾಣೆಮಂಗಳೂರು ಪೇಟೆಯಲ್ಲಿ 13 ವರ್ಷ ಪ್ರಾಯದ ಬಾಲಕನೊಬ್ಬ ಮಹಿಳೆಯರಿಗೆ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿ ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪಾಣೆಮಂಗಳೂರು ಪೇಟೆ ಪ್ರದೇಶದಲ್ಲಿ ಕೆಲ ದಿನಗಳ ಹಿಂದೆ ರಾತ್ರಿ ಸುಮಾರು 7.30-8 ಗಂಟೆಯ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಮಹಿಳೆಯರಿಗೆ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಕಿರುಕುಳ

ಬಂಟ್ವಾಳ : 13 ವರ್ಷದ ಬಾಲಕನಿಂದ ಮಹಿಳೆಯರಿಗೆ ಕಿರುಕುಳ! Read More »

ಮಂಗಳೂರಿನಲ್ಲೂ ನಡೆಯಲಿದೆ ಸಂಪುಟ ಸಭೆ : ಸ್ಪೀಕರ್‌ ಖಾದರ್‌ ಮಾಹಿತಿ

ಕರಾವಳಿಯ ಬೇಡಿಕೆಗಳಿಗೆ ಸ್ಪಂದಿಸಲು ಸದವಕಾಶ ಮಂಗಳೂರು: ಮಂಗಳೂರಿನಲ್ಲಿ ಸಂಪುಟ ಸಭೆ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಸಚಿವ ಸಂಪುಟ ಸಭೆಗೆ ಮುಂಚಿತವಾಗಿ ಜಿಲ್ಲೆಯ ಅವಶ್ಯಕತೆಗಳ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸುವಂತೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಸೂಚಿಸಿದ್ದಾರೆ. ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಲಬುರಗಿ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಸಭೆಗಳು ನಡೆದಿವೆ. ಬಿಜಾಪುರದ ನಂತರ ಮಂಗಳೂರು ಸಚಿವ

ಮಂಗಳೂರಿನಲ್ಲೂ ನಡೆಯಲಿದೆ ಸಂಪುಟ ಸಭೆ : ಸ್ಪೀಕರ್‌ ಖಾದರ್‌ ಮಾಹಿತಿ Read More »

ಚಾಲಕನ ನಿರ್ಲಕ್ಷ್ಯ, ಅತಿವೇಗ ತಲಪಾಡಿಯ ಭೀಕರ ಅಪಘಾತಕ್ಕೆ ಕಾರಣ

ಗಾಯಾಳುಗಳ ಚಿಕಿತ್ಸೆಯ ಪೂರ್ತಿ ವೆಚ್ಚ ಭರಿಸುವುದಾಗಿ ಹೇಳಿದ ಕೆಎಸ್‌ಆರ್‌ಟಿಸಿ ಮಂಗಳೂರು: ತಲಪಾಡಿಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತ ಆಘಾತದ ಅಲೆಯೆಬ್ಬಿಸಿದೆ. ಚಾಲಕನೊಬ್ಬನ ನಿರ್ಲಕ್ಷ್ಯ 6 ಮಂದಿಯ ಜೀವ ಕಸಿದಿದೆ. ಆರು ಮಂದಿ ತಮ್ಮದಲ್ಲದ ತಪ್ಪಿಗೆ ವಿನಾಕಾರಣ ಪ್ರಾಣ ತೆತ್ತಿರುವುದು ನಿಜಕ್ಕೂ ದುರಂತ. ಬಸ್‌ ಚಾಲಕನ ಅತಿವೇಗ, ಅಜಾಗರೂಕತೆ ಕಾರಣ ಎಂದು ಕೆಎಸ್‌ಆರ್‌ಟಿಸಿ ಕೂಡ ಒಪ್ಪಿಕೊಂಡಿದೆ. ಬಸ್‌ ಚಾಲಕ ನಿಜಲಿಂಗಪ್ಪ ಚಲವಾದಿಯ ಅಜಾಗರೂಕತೆಯಿಂದ ಅಪಘಾತವಾಗಿದೆ. ಕಾಸರಗೋಡಿನಿಂದ ಮಂಗಳೂರಿಗೆ ಹೊರಟಿದ್ದ ಬಸ್‌ (ನಂ. KA19F3407) ತಲಪಾಡಿ ಟೋಲ್‌ಗಿಂತ 150

ಚಾಲಕನ ನಿರ್ಲಕ್ಷ್ಯ, ಅತಿವೇಗ ತಲಪಾಡಿಯ ಭೀಕರ ಅಪಘಾತಕ್ಕೆ ಕಾರಣ Read More »

ತಲಪಾಡಿಯಲ್ಲಿ ಭೀಕರ ಅಪಘಾತ : 6 ಮಂದಿ ಸಾವು

ಉಳ್ಳಾಲ: ತಲಪಾಡಿಯ ಟೋಲ್ ಗೇಟ್ ಸಮೀಪ ರಿಕ್ಷಾ ಮತ್ತು ಬಸ್ ನಡುವೆ ಭೀಕರ ಅಪಘಾತ ನಡೆದಿದ್ದು, ಒಂದೇ ಕುಟುಂಬದ ಐದು ಜನ ಸೇರಿ ಒಟ್ಟು ಆರು ಮಂದಿ ಮೃತ ಪಟ್ಟಿದ್ದಾರೆ. ಮೃತರನ್ನು ರಿಕ್ಷಾ ಚಾಲಕ ಹೈದರ್ ಆಲಿ(47), ಫರಂಗಿಪೇಟೆಯ ಅವ್ವಮ್ಮ, ಅಜ್ಜಿನಡ್ಕದ ಖತುಜಾ (60), ಹಸ್ನಾ, ನಫೀಸಾ (52), ಆಯೆಶಾ (19) ಎಂದು ಗುರುತಿಸಲಾಗಿದೆ. ಖತುಜಾ ಮತ್ತು ನಫೀಸಾ ಸಹೋದರಿಯರಾಗಿದ್ದು, ಅವ್ವಮ್ಮ ನಫೀಸಾರ ಅತ್ತೆ. ಹಸ್ನ ಅವರು ಖತುಜಾ ಅವರ ಪುತ್ರಿಯಾಗಿದ್ದರೆ, ಆಯೆಶಾ ಅವರು ನಫೀಸಾರ ಪುತ್ರಿಯಾಗಿದ್ದಾರೆ.

ತಲಪಾಡಿಯಲ್ಲಿ ಭೀಕರ ಅಪಘಾತ : 6 ಮಂದಿ ಸಾವು Read More »

ಬಂಟ್ವಾಳ : ತಲವಾರಿನಿಂದ ಕೊಲ್ಲಲು ಯತ್ನಿಸಿದ್ದಾರೆ ಎಂದು ಸುಳ್ಳು ದೂರು ನೀಡಿದಾತ ಅರೆಸ್ಟ್‌

ಸಾರ್ವಜನಿಕ ಶಾಂತಿ ಕದಡುವ ಉದ್ದೇಶದಿಂದ ಕೊಲೆಯತ್ನದ ಕಥೆ ಕಟ್ಟಿದ್ದ ಆರೋಪಿ ಬಂಟ್ವಾಳ: ಸಜಿಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಜೂನ್ 11ರಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಸಜಿಪಮುನ್ನೂರು ನಿವಾಸಿ ಉಮರ್ ಫಾರೂಕ್ ಎಂಬಾತ ನೀಡಿದ ದೂರು ಸುಳ್ಳು ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಜಿಪಮುನ್ನೂರು ಗ್ರಾಮದ ನಿವಾಸಿ ಉಮರ್ ಪಾರೂಕ್ (48) ಜೂನ್ 1 ರಂದು ಮುಂಜಾನೆ ಜೀಪಿನಲ್ಲಿ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ ಸಜಿಪನಡು ಗ್ರಾಮದ

ಬಂಟ್ವಾಳ : ತಲವಾರಿನಿಂದ ಕೊಲ್ಲಲು ಯತ್ನಿಸಿದ್ದಾರೆ ಎಂದು ಸುಳ್ಳು ದೂರು ನೀಡಿದಾತ ಅರೆಸ್ಟ್‌ Read More »

ಬದಲಾಗಲಿದೆ ಚಾರ್ಮಾಡಿ ಘಾಟಿ ರಾತ್ರಿ ಸಂಚಾರ ನಿಯಮ

ರಾತ್ರಿ ಹೊತ್ತು ಒಂಟಿ ವಾಹನ ಸಂಚಾರಕ್ಕೆ ನಿರ್ಬಂಧ ಮಂಗಳೂರು: ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಹೊತ್ತು ವಾಹನ ಸಂಚಾರ ನಿಯಮ ಬದಲಾವಣೆ ಮಾಡಲಾಗಿದೆ. ಅಕ್ರಮವಾಗಿ ಮರಳು ಸಾಗಾಟ, ಗೋ ಸಾಗಾಟ ಮತ್ತು ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡುವುದು ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೊಟ್ಟಿಗೆಹಾರದ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆಯನ್ನು ಬಿಗುಗೊಳಿಸಲು ನಿರ್ಧರಿಸಲಾಗಿದೆ. ಕೊಟ್ಟಿಗೆಹಾರ ಬಳಿ ಇರುವ ಪೊಲೀಸ್ ಚೆಕ್‌ಪೋಸ್ಟ್​ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರೂ ಇನ್ನುಮುಂದೆ ತಪಾಸಣೆ

ಬದಲಾಗಲಿದೆ ಚಾರ್ಮಾಡಿ ಘಾಟಿ ರಾತ್ರಿ ಸಂಚಾರ ನಿಯಮ Read More »

error: Content is protected !!
Scroll to Top