ದಕ್ಷಿಣ ಕನ್ನಡ

ಧರ್ಮಗಳ ನಡುವೆ ದ್ವೇಷ ಹರಡುವ ಹೇಳಿಕೆ: SDPI ನಾಯಕ ರಿಯಾಜ್ ಕಡಂಬು ಬಂಧನ

ಉಡುಪಿ: ಪ್ರಚೋದನಾಕಾರಿ ಹೇಳಿಕೆ ನೀಡುವ ಮೂಲಕ ಧರ್ಮ ಧರ್ಮಗಳ ನಡುವೆ ದ್ವೇಷ ಹರಡುವ ಕೆಲಸ ಮಾಡಿರುವ ಆರೋಪದಲ್ಲಿ SDPI ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು‌ನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಉಡುಪಿಯಲ್ಲಿ ದೂರು ದಾಖಲಾಗಿತ್ತು‌. ಆರೋಪಿ ರಿಯಾಜ್ ಜಾಮೀನು ನಿಯಮಗಳನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಆತನನ್ನು ಉಡುಪಿ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆಜ್ಞೆ ನೀಡಿದೆ. ಆರೋಪಿ ರಿಯಾಜ್ ಸಾಮಾಜಿಕ ಸಾಮರಸ್ಯ ಕದಡುವ ಆಧಾರ ರಹಿತ ಹೇಳಿಕೆಗಳನ್ನು ನೀಡುತ್ತಿರುವುದು ಸಾಮಾಜಿಕ […]

ಧರ್ಮಗಳ ನಡುವೆ ದ್ವೇಷ ಹರಡುವ ಹೇಳಿಕೆ: SDPI ನಾಯಕ ರಿಯಾಜ್ ಕಡಂಬು ಬಂಧನ Read More »

ಮುಂಬೈ : ಕಟ್ಟಡದಿಂದ ಸಿಮೆಂಟ್‌ ಬ್ಲಾಕ್‌ ಬಿದ್ದು ಕಿನ್ನಿಗೋಳಿಯ ಯುವತಿ ಸಾವು

ನಡೆದುಕೊಂಡು ಹೋಗುತ್ತಿರುವಾಗ ತಲೆ ಮೇಲೆ ಬಿದ್ದ ಸಿಮೆಂಟ್‌ ಬ್ಲಾಕ್‌ ಮುಂಬೈ : ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್‌ ಬ್ಲಾಕ್‌ ತಲೆಮೇಲೆ ಬಿದ್ದು ಕಿನ್ನಿಗೋಳಿ ಮೂಲದ ಯುವತಿಯೊಬ್ಬರು ಮುಂಬೈಯಲ್ಲಿ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಸಂಭವಿಸಿದೆ. ಮುಂಬೈಯ ಜೋಗೇಶ್ವರಿ ಪೂರ್ವದ ಠಾಕೂರ್ ರಸ್ತೆಯಲ್ಲಿರುವ ಮಹಾರಾಜ ಭವನ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ 22 ವರ್ಷದ ಸಂಸ್ಕೃತಿ ಅಮೀನ್ ಎಂಬ ಯುವತಿ ಸಾವನ್ನಪ್ಪಿದ್ದಾರೆ. ಕಿನ್ನಿಗೋಳಿಯ ಪದ್ಮಾವತಿ ಲಾನ್ ಮತ್ತು ಮಲ್ಟಿಪರ್ಪಸ್ ಹಾಲ್ ಮತ್ತು ಮುಂಬೈಯ ಕೋಟ್ಯಾನ್

ಮುಂಬೈ : ಕಟ್ಟಡದಿಂದ ಸಿಮೆಂಟ್‌ ಬ್ಲಾಕ್‌ ಬಿದ್ದು ಕಿನ್ನಿಗೋಳಿಯ ಯುವತಿ ಸಾವು Read More »

ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನ ಭೀತಿಯಲ್ಲಿ ತಿಮರೋಡಿ

ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಇಟ್ಟುಕೊಂಡ ಪ್ರಕಣ ಧರ್ಮಸ್ಥಳ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುರುವಾರ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ತನ್ನ ವಿರುದ್ಧ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಕೋರಿದ್ದರು. ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಬಸವರಾಜ್

ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನ ಭೀತಿಯಲ್ಲಿ ತಿಮರೋಡಿ Read More »

ಪಾಲಿಶಿಂಗ್‌ ನೆಪದಲ್ಲಿ 14 ಗ್ರಾಂ ಚಿನ್ನ ಎಗರಿಸಿದ ವಂಚಕ

ದಾರಿಮಧ್ಯೆ ಸಿಕ್ಕ ಅಪರಿಚಿತನ ಮಾತು ನಂಬಿ ಮೋಸ ಹೋದ ಮಹಿಳೆ ಮಂಗಳೂರು : ಆಭರಣ ಪಾಲಿಶಿಂಗ್ ಮಾಡಿಕೊಡುವ ಸೋಗಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ವಿಧವೆಯೋರ್ವರನ್ನು ಯಾಮಾರಿಸಿ ಆಕೆಯ ಕತ್ತಿನ ಸರದಿಂದ 14 ಗ್ರಾಂ ಚಿನ್ನವನ್ನು ಕರಗಿಸಿ ಹೊತ್ತೊಯ್ದ ಘಟನೆ ಉಳ್ಳಾಲ ತಾಲೂಕಿನ ಅಂಬ್ಲಮೊಗರು ಎಂಬಲ್ಲಿ ನಡೆದಿದೆ. ಉಳ್ಳಾಲ ತಾಲೂಕಿನ ಅಂಬ್ಲಮೊಗರು ನಿವಾಸಿ ಸುಂದರಿ (60) ವಂಚಕನಿಂದ‌ ಮೋಸ ಹೋದವರು. ಸುಂದರಿ ಅವರು ದಿನನಿತ್ಯಲೂ ಸುದರ್ಶನ್ ಶೆಟ್ಟಿ ಎಂಬವರ ಮನೆಗೆ ಕೆಲಸಕ್ಕೆ ತೆರಳಿ ಮಧ್ಯಾಹ್ನ 12 ಗಂಟೆಗೆ ಮರಳುತ್ತಿದ್ದರು.

ಪಾಲಿಶಿಂಗ್‌ ನೆಪದಲ್ಲಿ 14 ಗ್ರಾಂ ಚಿನ್ನ ಎಗರಿಸಿದ ವಂಚಕ Read More »

ಕಾಂತಾರದಲ್ಲಿ ದೈವಾರಾಧನೆ ಬಳಕೆ : ದೈವಾರಾಧಾಕರಿಂದ ದೈವಕ್ಕೇ ದೂರು

ದೈವ ಆವೇಶದ ರೀಲ್ಸ್‌ಗಳಿಂದ ಪಾವಿತ್ರ್ಯಕ್ಕೆ ಅಪಚಾರ ಎಂದು ಕಳವಳ ಮಂಗಳೂರು: ಕಾಂತಾರಾ ಚಿತ್ರದಲ್ಲಿದ್ದಂತೆ ಈಗ ಕಾಂತಾರ ಅಧ್ಯಾಯ 1ರಲ್ಲೂ ದೈವಾರಾಧನೆ ಮತ್ತು ದೈವದ ಆವೇಶವನ್ನು ತೋರಿಸಿರುವುದಕ್ಕೆ ನಟ, ನಿರ್ದೇಶಕ ರಿಷಬ್‌ ಶೆಟ್ಟಿಯವರ ಮೇಲೆ ದೈವಾರಾಧಾಕರು ಅಸಮಾಧಾನಗೊಂಡಿದ್ದಾರೆ. ತೆರೆಯ ಮೇಲೆ ದೈವದ ಆವೇಶವನ್ನು ನೋಡಿದ ಕೆಲವರು ಪುಕ್ಕಟೆ ಪ್ರಚಾರಕ್ಕಾಗಿ ಅದೇ ರೀತಿ ಆವೇಶದ ಅಭಿನಯ ಮಾಡಿ ರೀಲ್ಸ್‌ಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಾಕುತ್ತಿರುವುದು ಹೆಚ್ಚಾಗುತ್ತಿದೆ. ಇದರಿಂದ ದೈವಾರಾಧನೆಯ ಪಾವಿತ್ರ್ಯಕ್ಕೆ ಅಪಚಾರವಾಗುತ್ತಿದೆ ಎಂದು ದೈವಾರಾಧಾಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇದೀಗ

ಕಾಂತಾರದಲ್ಲಿ ದೈವಾರಾಧನೆ ಬಳಕೆ : ದೈವಾರಾಧಾಕರಿಂದ ದೈವಕ್ಕೇ ದೂರು Read More »

ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 29 ಸಾವಿರ ರೂ ದಂಡ

ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ ವಿಧಿಸಿದೆ. ಮಾರುತಿ ಕಂಬಾಲ್ ದಂಡ ಪಾವತಿಸಬೇಕಾದ ವ್ಯಕ್ತಿ ಎಂದು ತಿಳಿದುಬಂದಿದೆ. ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್ ಬ್ಯಾಡಗಿ ಅವರು ಮಾರುತಿ ಕಂಬಾಲ್‌ಗೆ ದಂಡ ವಿಧಿಸಿ ಆದೇಶ ನೀಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 29 ಸಾವಿರ ರೂ ದಂಡ Read More »

ಉಳ್ಳಾಲದಲ್ಲಿ ಮೀನು ಸಂಸ್ಕರಣಾ ಘಟಕ ಬೆಂಕಿಗಾಹುತಿ

ಮಂಗಳೂರು : ಉಳ್ಳಾಲದ ಕೋಟೆಪುರದಲ್ಲಿರುವ ಮೀನಿನ ಆಹಾರ ತಯಾರಿಕ ಸಂಸ್ಕರಣಾ ಘಟಕದ ಗೋದಾಮು ಬುಧವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಶವಾಗಿದೆ. ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಖಾದರ್ ಎಂಬವರಿಗೆ ಸೇರಿದ ಎಂಎಂಪಿ ಫಿಶ್ ಫುಡ್ ಗೋದಾಮಿಗೆ ರಾತ್ರಿ ಬೆಂಕಿಹತ್ತಿಕೊಂಡಿದೆ. ಬೆಂಕಿಯ ಕೆನ್ನಾಲೆ ಹೊರಗೂ ಆವರಿಸಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ನೀರು ಎರಚಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ತುಂಬಾ ಹೊತ್ತಿನ ನಂತರ ಮಂಗಳೂರಿನಿಂದ ಅಗ್ನಿ ಶಾಮಕ ದಳದ ವಾಹನ ಬಂದು ಬೆಂಕಿ ನಂದಿಸಿದೆ. ಉಳ್ಳಾಲ ಪೊಲೀಸರು ಸ್ಥಳದಲ್ಲಿದ್ದರು.

ಉಳ್ಳಾಲದಲ್ಲಿ ಮೀನು ಸಂಸ್ಕರಣಾ ಘಟಕ ಬೆಂಕಿಗಾಹುತಿ Read More »

ಶರಣ್‌ ಪಂಪ್‌ವೆಲ್‌ಗೆ 2 ಲ.ರೂ. ದಂಡ ವಿಧಿಸಿದ ಹೈಕೋರ್ಟ್‌

ಗಣೇಶೋತ್ಸವದಲ್ಲಿ ಹೈಕೋರ್ಟ್‌ ಷರತ್ತು ಉಲ್ಲಂಘಿಸಿದ ಆರೋಪ ಬೆಂಗಳೂರು: ಆದೇಶ ಉಲ್ಲಂಘನೆ ಆರೋಪ ಎದುರಿಸುತ್ತಿದ್ದ ವಿಶ್ವ ಹಿಂದೂ ಪರಿಷತ್​​ ಸಹಕಾರ್ಯದರ್ಶಿ ಶರಣ್ ಪಂಪ್​​ವೆಲ್​​ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. ಇದರಲ್ಲಿ ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ. ಮತ್ತು ಪೋಲಿಸ್ ಕ್ಷೇಮಾಭಿವೃದ್ಧಿ ನಿಧಿಗೆ 1 ಲಕ್ಷ ರೂ ನೀಡಲು ಬುಧವಾರ ಕೋರ್ಟ್‌ ಆದೇಶ ನೀಡಿದೆ. ಇತ್ತೀಚೆಗೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನಲೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಶರಣ್ ಪಂಪ್​​ವೆಲ್​​ಗೆ ನಿರ್ಬಂಧ ವಿಧಿಸಿತ್ತು.

ಶರಣ್‌ ಪಂಪ್‌ವೆಲ್‌ಗೆ 2 ಲ.ರೂ. ದಂಡ ವಿಧಿಸಿದ ಹೈಕೋರ್ಟ್‌ Read More »

ಮಂಗಳೂರು : 9.72 ಲ.ರೂ.ಮೌಲ್ಯದ ಇ-ಸಿಗರೇಟ್‌ ವಶ

ಅಂಗಡಿಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇ-ಸಿಗರೇಟ್‌ ಮಂಗಳೂರು : ನಗರದ ಪ್ರಮುಖ ವಾಣಿಜ್ಯ ಸಂಕೀರ್ಣದಲ್ಲಿರುವ ಅಂಗಡಿಯ ಮೇಲೆ ಬರ್ಕೆ ಪೊಲೀಸರು ದಾಳಿ ನಡೆಸಿ, ಇ-ಸಿಗರೇಟ್ ಮತ್ತು ಇತರ ವಸ್ತುಗಳು ಸೇರಿದಂತೆ 9.72 ಲಕ್ಷ ಮೌಲ್ಯದ ಸೊತ್ತುಗಳನ್ನು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಮಂಗಳೂರಿನ ಲಾಲ್‌ಬಾಗ್ ಬಳಿಯ ಅಂಗಡಿಯೊಂದು ಯಾವುದೇ ಪರವಾನಗಿ ಪಡೆಯದೇ ಇ-ಸಿಗರೇಟ್, ಹುಕ್ಕಾ ಪರಿಕರಗಳು ಮತ್ತು ಭಾರತೀಯ ಹಾಗೂ ವಿದೇಶಿ ಸಿಗರೇಟ್‌ಗಳನ್ನು ಕಾನೂನುಬಾಹಿರವಾಗಿ ಮಾರಾಟ ಮತ್ತು ಸಂಗ್ರಹಿಸುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಈ ವಸ್ತುಗಳನ್ನು

ಮಂಗಳೂರು : 9.72 ಲ.ರೂ.ಮೌಲ್ಯದ ಇ-ಸಿಗರೇಟ್‌ ವಶ Read More »

ಬಾಗಿಲಿನ ಚಿಲಕ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಬೆಳ್ತಂಗಡಿ: ಕುತ್ಲೂರು ಗ್ರಾಮದ ಮಂಜುಶ್ರೀ ನಗರದ ಮನೆಯೊಂದರ ಬಾಗಿಲ ತಿಲಕ ಮುರಿದು 9.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದ ಘಟನೆ ನಡೆದಿದೆ. ಅವಿನಾಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಈ ಕೈಚಳಕ ತೋರಿದ್ದಾರೆ. ಈ ಘಟನೆ ಆ. 2 ರಿಂದ ಆ. 6 ರ ನಡುವೆ ನಡೆದಿದೆ ಎಂದು ವೇಣೂರು ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಮನೆಯ ಮುಂಭಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿ, ಬೆಡ್ ರೂಂ ಒಳಗಿದ್ದ ಕಪಾಟಿನ

ಬಾಗಿಲಿನ ಚಿಲಕ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು Read More »

error: Content is protected !!
Scroll to Top