ದಕ್ಷಿಣ ಕನ್ನಡ

ಸವಣೂರು ಗ್ರಾಮ ಬೂತ್ 65 ರಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಸವಣೂರು : ಸುಳ್ಯ ಮಂಡಲ, ಕುಟ್ರುಪ್ಪಾಡಿ ಮಹಾಶಕ್ತಿ ಶಕ್ತಿ ಕೇಂದ್ರದ, ಸವಣೂರು ಗ್ರಾಮ ಬೂತ್ ಸಂಖ್ಯೆ 65 ರಲ್ಲಿ ಬಿಜೆಪಿ ಸಂಸ್ಥಾಪನಾ ದಿನವನ್ನು ಬೂತ್ ಅಧ್ಯಕ್ಷರಾದ ತೀರ್ಥರಾಮ ಕೆಡೆಂಜಿಯವರ ಮನೆಯಲ್ಲಿ ಆಚರಿಸಲಾಗಿದೆ. ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿ, ಸವಣೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಚೇತನ್ ಕುಮಾರ್ ಕೋಡಿಬೈಲು, ಗ್ರಾಮಪಂಚಾಯಿತಿ ಸದಸ್ಯರಾದ ರಾಜೀವಿ ವಿ ಶೆಟ್ಟಿ, ಇಂದಿರಾ ಬೇರಿಕೆ, […]

ಸವಣೂರು ಗ್ರಾಮ ಬೂತ್ 65 ರಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ Read More »

ಜೀವನ್ ತಾವ್ರೊ ಆತ್ಮಹತ್ಯೆ ಪ್ರಕರಣ | ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ಅಮ್ಮಾಡಿ ತನಿಯಮನೆ ನಿವಾಸಿ ಜೀವನ್ ತಾವೊ ಅವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಪೊಲೀಸ್ ಠಾಣೆ ಸಿಬ್ಬಂದಿ ಬಂಧಿಸಿದ್ದಾರೆ. ಕುರಿಯಾಳ ಮೂಲದ ಪ್ರವೀಣ್ ಡೆಸಾ ಮತ್ತು ರೋಹನ್ ಪಿಂಟೊ ಈ ಆರೋಪದಲ್ಲಿ ಬಂಧಿಸಲ್ಪಟ್ಟವರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜೀವನ್ ತಾವ್ರೊ ಆತ್ಮಹತ್ಯೆ ಪ್ರಕರಣ | ಇಬ್ಬರು ಆರೋಪಿಗಳ ಬಂಧನ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆಮ್ಮಿಂಜೆ ವಲಯದಿಂದ ಸಂಘದ ಸದಸ್ಯೆಯ ಸಾಲ ಮನ್ನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆಮ್ಮಿಂಜೆ ವಲಯದ ಕೆಮ್ಮಿಂಜೆ ಒಕ್ಕೂಟದ  ಕೊರಗಜ್ಜ ಸ್ವಸಹಾಯ ಸಂಘದ  ಸದಸ್ಯರಾದ ಲಲಿತರವರು ಟೋಟಲ್ ಸಂಘದಿಂದ 4 ಲಕ್ಷ ಸಾಲವನ್ನು ಪಡೆದಿದ್ದು . 3ಲಕ್ಷ ,82 ಸಾವಿರ ಸಾಲದ ಮೊತ್ತ ಬಾಕಿ ಇದ್ದು. ಇವರ ಸಾಲವನ್ನು ಮನ್ನ ಮಾಡಲಾಗಿದೆ. ಇದರ ಮಂಜೂರಾತಿ ಪತ್ರವನ್ನು  ಕೆಮ್ಮಿಂಜೆ ಚಾಮುಂಡೇಶ್ವರಿ ದೇವಸ್ಥಾನದ ಅಧ್ಯಕ್ಷರಾದ ರಾಮಶೆಟ್ಟಿ ಹಾಗೂ ಸಮಿತಿಯ ಕಾರ್ಯದರ್ಶಿಯಾವರಾದ ಶೇಖರ್ ಆಚಾರ್ಯ. ಹಾಗೂ ಒಕ್ಕೂಟದ ಅಧ್ಯಕ್ಷರಾದ ಚೇತನ್ ಇವರು ಲಲಿತ ಇವರಿಗೆ ಮಂಜೂರಾತಿ ಪತ್ರವನ್ನು  ವಿತರಿಸಿದರು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆಮ್ಮಿಂಜೆ ವಲಯದಿಂದ ಸಂಘದ ಸದಸ್ಯೆಯ ಸಾಲ ಮನ್ನ Read More »

ಕಾರು – ರಿಕ್ಷಾ ನಡುವೆ ಡಿಕ್ಕಿ | ನಾಲ್ವರಿಗೆ ಗಾಯ  

ಮೂಲ್ಕಿ: ಮಂಗಳೂರಿನಿಂದ ಮೂಲ್ಕಿ ಕಾರ್ನಾಡು ಕಡೆಗೆ ಬರುತ್ತಿದ್ದ ರಿಕ್ಷಾ ಒಂದಕ್ಕೆ ಕಾರೊಂದು ಹಿಂಬದಿಯಿಂದ ಢಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಚಾಲಕ ಸೇರಿ ನಾಲ್ವರು ಗಾಯಗೊಂಡ ಘಟನೆ ಮೂಲ್ಕಿಯ ಕೊಲ್ಲಾಡು ಹೆದ್ದಾರಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಅಬ್ದುಲ್ ಬಶೀರ್ (35), ಪ್ರಯಾಣಿಕರಾದ ಮರಕಡದ ಶೋಭಾ (55), ಕುಂಜತ್ತಬೈಲ್‌ನ ಭವಾನಿ (65) ಮತ್ತು ಪಣಂಬೂರಿನ ವಸಂತಿ (72) ಎನ್ನಲಾಗಿದೆ. ಕಾರು ಹತೋಟಿ ಕಳೆದುಕೊಂಡು ನಿಧಾನವಾಗಿ ಮೂಲ್ಕಿಯತ್ತ ಹೋಗುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ರಿಕ್ಷಾ ಚಾಲಕ ಒಂದಷ್ಟು

ಕಾರು – ರಿಕ್ಷಾ ನಡುವೆ ಡಿಕ್ಕಿ | ನಾಲ್ವರಿಗೆ ಗಾಯ   Read More »

ಗೇರುಕಟ್ಟೆಯಲ್ಲಿ 12 ದಿನಗಳ ಉಚಿತ ವ್ಯಕ್ತಿತ್ವ ವಿಕಸನ ಶಿಬಿರ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕಕೇಂದ್ರ ಕಛೇರಿ ತುಮಕೂರು ನೇತ್ರಾವತಿ ವಲಯ ಬೆಳ್ತಂಗಡಿ ತಾಲೂಕು ಕಳಿಯ ಶಾಖೆಯ ವತಿಯಿಂದ  ಕ್ಷೀರಸಂಗಮ ಸಭಾ ಭವನದಲ್ಲಿ 12 ದಿನಗಳ ಮಕ್ಕಳ ಚೈತನ್ಯ ಶಿಬಿರವ ಶ್ರೀ ರಾಮನವಮಿಯಂದು ಪ್ರಾರಂಭವಾಯಿತು. ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೇರುಕಟ್ಟೆ ಕ್ಷೀರಸಂಗಮ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಗೌಡ ಅಧ್ಯಕ್ಷತೆ ವಹಿಸಿದ್ದು,  ಶಿಬಿರದಲ್ಲಿ ಭಾಗವಹಿಸಿ  ತರಬೇತಿಯನ್ನು ಪಡೆದು  ಮಕ್ಕಳು ಸಂಸ್ಕಾರವಂತರಾಗಿ ಸಮಾಜದಲ್ಲಿ

ಗೇರುಕಟ್ಟೆಯಲ್ಲಿ 12 ದಿನಗಳ ಉಚಿತ ವ್ಯಕ್ತಿತ್ವ ವಿಕಸನ ಶಿಬಿರ Read More »

ಕಾರಿನಲ್ಲಿ ಹುಚ್ಚಾಟ ಮೆರೆದ ಯುವಕರು | ಪ್ರಕರಣ ದಾಖಲಾಗುತ್ತಿದ್ದಂತೆ ಯುವಕರು ಎಸ್ಕೇಪ್‍

ಸುಳ್ಯ: ಸಂಪಾಜೆ ಬಳಿ ಕಾರಿನಲ್ಲಿ ಹುಚ್ಚಾಟ ಮೆರೆದ ಪ್ರಕರಣದಲ್ಲಿ ಸುಮೋಟೊ ಕೇಸ್ ದಾಖಲಾಗುತ್ತಿದ್ದಂತೆ ಯುವಕರು ತಲೆಮರೆಸಿಕೊಂಡಿದ್ದಾರೆ. ಭಟ್ಕಳ ಮೂಲದ ಯುವಕರು ಕಾರಿನಲ್ಲಿ ಹುಚ್ಚಾಟ ಮೆರೆದಿರುವ ವೀಡಿಯೋ ವೈರಲ್ ಆಗಿದೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ BNS ಆಕ್ಟ್ 281 IMV ಆಕ್ಟ್ ನ 184 ಸೆಕ್ಷನ್ ಅಡಿ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಫೋನ್ ಸ್ವಿಚ್ ಆಫ್ ಮಾಡಿ ಯುವಕರು ಎಸ್ಕೆಪ್ ಆಗಿದ್ದಾರೆ. ಸಂಪಾಜೆ-ಸುಳ್ಯ ರಸ್ತೆಯಲ್ಲಿ KA09MG5880 ನಂಬರ್‌ನ ಕಾರಿನಲ್ಲಿ ಒಟ್ಟು ಏಳು ಮಂದಿ

ಕಾರಿನಲ್ಲಿ ಹುಚ್ಚಾಟ ಮೆರೆದ ಯುವಕರು | ಪ್ರಕರಣ ದಾಖಲಾಗುತ್ತಿದ್ದಂತೆ ಯುವಕರು ಎಸ್ಕೇಪ್‍ Read More »

ಮಾಟ ತೆಗೆಯುವ ನೆಪದಲ್ಲಿ ಕಿರುಕುಳ : ಆರೋಪಿ ಬಂಧನ

ಮಂಗಳೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಮಾಟಮಂತ್ರ ತೆಗೆಯುವ ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಅವರು ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಕೂಳೂರು

ಮಾಟ ತೆಗೆಯುವ ನೆಪದಲ್ಲಿ ಕಿರುಕುಳ : ಆರೋಪಿ ಬಂಧನ Read More »

ತಾಯಿ-ಮಗ ಆತ್ಮಹತ್ಯೆಗೆ ಯತ್ನ | ಮಗ ಮೃತ್ಯು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಸುಬ್ರಹ್ಮಣ್ಯ: ತಾಯಿ-ಮಗ ಇಬ್ಬರೂ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಮಗ ಮೃತಪಟ್ಟು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಬ್ರಹ್ಮಣ್ಯ ಸಮೀಪದ ನಾಲ್ಕೂರು ಗ್ರಾಮದಲ್ಲಿ ಇಂದು ನಡೆದಿದೆ. ಸುಲೋಚನಾ ಹಾಗೂ ಮಗ ನಿತಿನ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದು, ಮಗ ನಿತಿನ್‍ (35) ಮೃತಪಟ್ಟಿದ್ದಾರೆ. ತಾಯಿ ಸುಲೋಚನಾ ಅವರನ್ನು ಸುಳ್ಯ  ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ. ಮೃತ ನಿತಿನ್ ಐಟಿಐ ವಿದ್ಯಾಭ್ಯಾಸ ಹೊಂದಿದ್ದು, ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಕಳೆದ ಒಂದು ವರ್ಷದ

ತಾಯಿ-ಮಗ ಆತ್ಮಹತ್ಯೆಗೆ ಯತ್ನ | ಮಗ ಮೃತ್ಯು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು Read More »

ಕಾಲೇಜು ವಿದ್ಯಾರ್ಥಿನಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ : ಪೋಕ್ಸೋ ಪ್ರಕರಣ ದಾಖಲು

ಪುತ್ತೂರು: ಅಟೋ ಚಾಲಕನೋರ್ವ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಪುತ್ತೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿಗೆ ರಜೆ ಇದ್ದ ಸಂದರ್ಭ ಮನೆಯಲ್ಲಿದ್ದ ವಿದ್ಯಾರ್ಥಿನಿ ಮೇಲೆ ಆಟೋ ಚಾಲಕ ಮಂಜುನಾಥ್ ಕಟ್ಟಿತ್ತಡ್ಕ ಎಂಬಾತ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದಾನೆ. ಕಳೆದ ಆಗಸ್ಟ್ ತಿಂಗಳಲ್ಲಿ ಯುವತಿ ಒಬ್ಬಳೇ ಇದ್ದ ಸಂದರ್ಭ ನೀರು ಕೇಳುವ ಮನೆಗೆ ಬಂದು ಅತ್ಯಾಚಾರ ಎನ್ನಲಾಗಿದೆ. ಈ ವಿಚಾರವನ್ನು ಯಾರಲ್ಲೂ ಹೇಳಬಾರದು ಎಂದು ಬೆದರಿಕೆ ಒಡ್ಡಿದ್ದು, 7-8 ಬಾರಿ ದೈಹಿಕ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ. ಯುವತಿಯ

ಕಾಲೇಜು ವಿದ್ಯಾರ್ಥಿನಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ : ಪೋಕ್ಸೋ ಪ್ರಕರಣ ದಾಖಲು Read More »

ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಮರದ ದಂಡನಾಯಕ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗಣ್ಯರಿಂದ, ಸಾರ್ವಜನಿಕರಿಂದ ಪುಷ್ಪಾರ್ಚನೆ | ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಚಾಲನೆ

ಮಂಗಳೂರು: ಬಾವುಟಗುಡ್ಡೆಯಲ್ಲಿ ಪ್ರತಿಷ್ಟಾಪಿಸಲಾಗಿರುವ ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಮರದ ದಂಡನಾಯಕ ,ಸಂಘಟನ ಚತುರ,ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗಣ್ಯರಿಂದ,ಸಾರ್ವಜನಿಕರಿಂದ ಪುಷ್ಪಾರ್ಚನೆ ಮತ್ತು ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಸಂಸ್ಮರಣಾ ಕಾರ್ಯಕ್ರಮ ಹಾಗೂ ಚಿತ್ರಕಲಾ ಸ್ಪರ್ಧೆ ಶನಿವಾರ ನಡೆಯಿತು . ಮಂಗಳೂರಿನ ಬಾವುಟಗಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ. ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಿದರು. ಈ

ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಮರದ ದಂಡನಾಯಕ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗಣ್ಯರಿಂದ, ಸಾರ್ವಜನಿಕರಿಂದ ಪುಷ್ಪಾರ್ಚನೆ | ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಚಾಲನೆ Read More »

error: Content is protected !!
Scroll to Top