ದಕ್ಷಿಣ ಕನ್ನಡ

ಜಾನುವಾರು ಅಕ್ರಮ ಸಾಗಾಟ ಪ್ರಕರಣ : ಜಪ್ತಿ ಮಾಡಿದ ಮನೆ ವಾಪಸು ನೀಡಲು ಆದೇಶ

ಕರು ಮಾರಾಟ ಮಾಡಿದವರ ಮನೆ ಜಪ್ತಿ ಮಾಡಿದ್ದು ಕಾನೂನು ವ್ಯಾಪ್ತಿ ಮೀರಿದ ಕ್ರಮ ಎಂದ ಪುತ್ತೂರು ಎಸಿ ಬೆಳ್ತಂಗಡಿ : ದನ ಮಾರಾಟ ಮಾಡಿದ ಕಾರಣಕ್ಕೆ ಪಟ್ರಮೆ ಗ್ರಾಮದ ಪಟ್ಟೂರಿನಲ್ಲಿ ಮನೆ ಜಪ್ತಿ ಮಾಡಿದ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸರು ಕಾನೂನು ವ್ಯಾಪ್ತಿಯನ್ನು ಮೀರಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಜೊಹರಾ ಸಾರಮ್ಮ ಅವರ ವಾಸದ ಮನೆಯನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅಕ್ರಮವಾಗಿ ಕಾರಿನಲ್ಲಿ ದನ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಧರ್ಮಸ್ಥಳ […]

ಜಾನುವಾರು ಅಕ್ರಮ ಸಾಗಾಟ ಪ್ರಕರಣ : ಜಪ್ತಿ ಮಾಡಿದ ಮನೆ ವಾಪಸು ನೀಡಲು ಆದೇಶ Read More »

ವಂಚಕ ರೋಷನ್‌ ಸಲ್ಡಾನನ 2.85 ಕೋ. ರೂ. ಮೌಲ್ಯದ ಆಸ್ತಿ ಜಪ್ತಿ

ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ 200 ಕೋ. ರೂ. ವಂಚಿಸಿದ್ದ ಆರೋಪಿ ಮಂಗಳೂರು: ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಕೋಟಿಗಟ್ಟಲೆ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನನ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮಂಗಳೂರು ಉಪವಲಯ ಕಚೇರಿ ಅಧಿಕಾರಿಗಳು ರೋಷನ್ ಸಲ್ಡಾನನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿದ್ದಾರೆ. ರೋಷನ್ ಸಲ್ಡಾನ ಸಾಲ

ವಂಚಕ ರೋಷನ್‌ ಸಲ್ಡಾನನ 2.85 ಕೋ. ರೂ. ಮೌಲ್ಯದ ಆಸ್ತಿ ಜಪ್ತಿ Read More »

ಇಂಟರ್‌ಲಾಕ್‌ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ, ನಿರ್ವಾಹಕನಿಗೆ ಗಾಯ

ಸುಳ್ಯ: ಇಂಟರ್‌ಲಾಕ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ ಮತ್ತು ನಿರ್ವಾಹಕ ಗಾಯಗೊಂಡ ಘಟನೆ ಸುಳ್ಯ ಅಜ್ಜಾವರ ಗ್ರಾಮದ ಮುಳ್ಯ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮುಳ್ಯದ ಯತೀಶ್ ಎಂಬವರ ಹೊಸ ಮನೆಯ ಅಂಗಳಕ್ಕೆ ಅಳವಡಿಸಲು ಇಂಟರ್‌ಲಾಕ್ ತುಂಬಿಕೊಂಡು ಹೋಗುತ್ತಿರುವಾಗ ಲಾರಿ ಪಲ್ಟಿಯಾಗಿದೆ.ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕರಿಬ್ಬರು ಗಾಯಗೊಂಡಿದ್ದಾರೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ನಿರ್ವಾಹಕ ನವೀನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂಟರ್‌ಲಾಕ್‌ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ, ನಿರ್ವಾಹಕನಿಗೆ ಗಾಯ Read More »

ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್‌ಗೆ ಸಮೀಕ್ಷೆ ನಡೆಸಲು ಸಮಿತಿ ರಚನೆ

ಶಿರಾಡಿ ಘಾಟ್​ನಲ್ಲಿ ಹೆದ್ದಾರಿ, ರೈಲ್ವೆ ಮಾರ್ಗ ನಿರ್ಮಾಣ ಸಾಧಕ-ಬಾಧಕ ಅಧ್ಯಯನ ಮಂಗಳೂರು : ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್​​ಗೆ ಸಂಬಂಧಿಸಿದಂತೆ ಹಾಸನದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್​ನಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೆ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ. ಶಿರಾಡಿ ಘಾಟ್​​ನಲ್ಲಿ ಸುರಂಗ ಮಾರ್ಗ ನಿರ್ಮಾಣದ ಜಂಟಿ ಸಮೀಕ್ಷೆಗೆ ಸಮಿತಿ ರಚಿಸಲು ಕೋರಿ ಸಂಸದ ಬ್ರಿಜೇಶ್ ಚೌಟ ಕೇಂದ್ರ ಸಚಿವ

ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್‌ಗೆ ಸಮೀಕ್ಷೆ ನಡೆಸಲು ಸಮಿತಿ ರಚನೆ Read More »

ಕರಾವಳಿಯಲ್ಲಿ ಕಾರುಗಳ ಮಾರಾಟ ಶೇ. 30 ಹೆಚ್ಚಳ

ಜಿಎಸ್‌ಟಿ ಇಳಿಕೆ; ಹಬ್ಬದ ಕೊಡುಗೆಗಳ ಪರಿಣಾಮ ಗರಿಗೆದರಿದ ವ್ಯಾಪಾರ ವಹಿವಾಟು ಮಂಗಳೂರು : ಕೇಂದ್ರ ಸರ್ಕಾರ ಜಿಎಸ್‌ಟಿ ಇಳಿಕೆ ಮಾಡಿದ ಪರಿಣಾಮವಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲೂ ವ್ಯಾಪಾ ವಹಿವಾಟುಗಳು ವೃದ್ಧಿ ಕಂಡಿವೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ದಸರಾ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕಾರುಗಳ ಮಾರಾಟ ಶೇ.30ರಷ್ಟು ಏರಿಕೆ ಕಂಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹಬ್ಬದ ಸೀಸನ್‌ನಲ್ಲಿ ವಾಹನಗಳ ಖರೀದಿ ಗಣನೀಯವಾಗಿ ಹೆಚ್ಚಾಗಿದೆ. ಅನೇಕರು ದೀಪಾವಳಿಯನ್ನು ಹೊಸ ವಾಹನಗಳೊಂದಿಗೆ ಸಂಭ್ರಮಿಸಿದ್ದಾರೆ. ದಸರಾದಿಂದಲೇ

ಕರಾವಳಿಯಲ್ಲಿ ಕಾರುಗಳ ಮಾರಾಟ ಶೇ. 30 ಹೆಚ್ಚಳ Read More »

ಯುವ ಕಂಬಳ ಸಂಘಟಕ ಅಭಿಷೇಕ್‌ ಆಳ್ವ ಶವ ಪಡುಬಿದ್ರೆ ನದಿ ಕಿನಾರೆಯಲ್ಲಿ ಪತ್ತೆ

ಬುಧವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ಅಭಿಷೇಕ್‌ ಆಳ್ವ ಉಡುಪಿ: ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್‌ಚಂದ್ರ ಆಳ್ವ ಅವರ ಪುತ್ರ ಉದ್ಯಮಿ ಅಭಿಷೇಕ್‌ ಆಳ್ವ (29) ಅವರ ಮೃತದೇಹ ಶುಕ್ರವಾರ ಮುಂಜಾನೆ ಕಾಪು ತಾಲೂಕಿನ ಹೆಜಮಾಡಿ ಸಮೀಪ ಶಾಂಭ ವಿ ನದಿ ಕಿನಾರೆಯಲ್ಲಿ ಕಂಡುಬಂದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ತಂದೆಯಂತೇ ಅಭಿಷೇಕ್‌ ಆಳ್ವ ಕೂಡ ಕಂಬಳ ಪ್ರೇಮಿಯಾಗಿದ್ದು, ಜೊತೆಗೆ ತಂದೆಯ ಉದ್ಯಮವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದರು. ವಾಮಂಜೂರು ತಿರುವೈಲು ಕಂಬಳ ಬಹಳ ಪ್ರಸಿದ್ಧವಾಗಿದ್ದು, ಇದನ್ನು ಸಂಘಟಿಸಲು ಅಭಿಷೇಕ್‌

ಯುವ ಕಂಬಳ ಸಂಘಟಕ ಅಭಿಷೇಕ್‌ ಆಳ್ವ ಶವ ಪಡುಬಿದ್ರೆ ನದಿ ಕಿನಾರೆಯಲ್ಲಿ ಪತ್ತೆ Read More »

ಕಡಬ : 14 ವರ್ಷದ ಬಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ

ಕಡಬ: ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಖಂಡಿಗ‌ ಮನೆಯ ಗಗನ್(14) ಎಂದು ಗುರುತಿಸಲಾಗಿದೆ. ಗುರುವಾರ ಎಂದಿನಂತೆ ಶಾಲೆಗೆ ತೆರಳಿದ್ದ ಗಗನ್ ಶಾಲೆಯಿಂದ‌ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ

ಕಡಬ : 14 ವರ್ಷದ ಬಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ Read More »

ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ಮಾಡಿದ ಇಬ್ಬರ ಬಂಧನ

ಸಹಪಾಠಿಯ ಆರೋಗ್ಯ ವಿಚಾರಿಸಲು ಹೋಗುತ್ತಿದ್ದ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಹಲ್ಲೆ ಉಪ್ಪಿನಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾರಿಯ ಆರೋಗ್ಯ ವಿಚಾರಿಸಲು ಆತನ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ತಾಫ ಪೆರಿಯಡ್ಕ ಹಾಗೂ ಮುಸ್ತಾಫ ಬಂಧಿತ ಆರೋಪಿಗಳು ನ.6ರಂದು ಕಾಲೇಜೊಂದರ 9 ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ತಮ್ಮ ಸಹಪಾಠಿಯ ಆರೋಗ್ಯ ವಿಚಾರಿಸಲು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ

ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ಮಾಡಿದ ಇಬ್ಬರ ಬಂಧನ Read More »

ಧರ್ಮಸ್ಥಳ ಪ್ರಕರಣ : ಹೈಕೋರ್ಟಿಗೆ ಪಿಐಎಲ್‌ ಹಾಕಿದ ಕುಸುಮಾವತಿ

74 ನಾಪತ್ತೆ ಪ್ರಕರಣ ಕುರಿತು ಎಫ್‌ಐಆರ್‌ ದಾಖಲಿಸಿ ತನಖೆ ನಡೆಸಲು ಆಗ್ರಹ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ಸಂಭವಿಸಿದ್ದು, ಕೊಲೆಯಾದ ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿ ಅನಾಥ ಶವ ಮತ್ತು ನಾಪತ್ತೆ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಲು ಮನವಿ ಮಾಡಿದ್ದಾರೆ. ಮಾಹಿತಿಗಳ ಪ್ರಕಾರ 74 ನಾಪತ್ತೆ ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ನಾಪತ್ತೆ ಪ್ರಕರಣಗಳನ್ನು ಎಫ್‌ಐಆರ್‌ ಆಗಿ ಪರಿವರ್ತಿಸಬೇಕು ಎಂದು ಕುಸುಮಾವತಿ ಪಿಐಎಲ್‌ನಲ್ಲಿ ಮನವಿ ಮಾಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಮೃತ ದೇಹಗಳನ್ನು

ಧರ್ಮಸ್ಥಳ ಪ್ರಕರಣ : ಹೈಕೋರ್ಟಿಗೆ ಪಿಐಎಲ್‌ ಹಾಕಿದ ಕುಸುಮಾವತಿ Read More »

ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟಿ ನೀಡಿದ ಮಹಿಳೆಗೆ 26 ಸಾವಿರ ರೂ. ದಂಡ

ಮಂಗಳೂರು : ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟಿ ಚಲಾಯಿಸಲು ನೀಡಿದ ತಾಯಿಗೆ ಮಂಗಳೂರಿನ 4ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ. ಕಳೆದ ಅಕ್ಟೋಬರ್ 10ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಎಂಬ ಮಹಿಳೆ ತನ್ನ ಅಪ್ರಾಪ್ತ ಮಗನಿಗೆ ಸ್ಕೂಟಿ ಚಲಾಯಿಸಲು ನೀಡಿದ್ದಾರೆ. ಈ ಬಗ್ಗೆ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನವೆಂಬರ್ 5ರಂದು ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 4ನೇ ಜೆ.ಎಂ.ಎಪ್.ಸಿ ನ್ಯಾಯಾಲಯ, ಅಪ್ರಾಪ್ತ ಬಾಲಕನಿಗೆ ಸ್ಕೂಟಿ ಚಲಾಯಿಸಲು ನೀಡಿದ್ದಕ್ಕೆ ವಾಹನದ ಮಾಲೀಕರಿಗೆ

ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟಿ ನೀಡಿದ ಮಹಿಳೆಗೆ 26 ಸಾವಿರ ರೂ. ದಂಡ Read More »

error: Content is protected !!
Scroll to Top