ದಕ್ಷಿಣ ಕನ್ನಡ

ಧರ್ಮಸ್ಥಳ ಪ್ರಕರಣ : ಸೌಜನ್ಯಾ ತಾಯಿ ಸಹಿತ 20 ಮಂದಿ ವಿರುದ್ಧ ಕೇಸ್‌

ಅಕ್ರಮವಾಗಿ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಪ್ರಕರಣ ಬೆಳ್ತಂಗಡಿ: ಅನುಮತಿಯಿಲ್ಲದೆ ಪೊಲೀಸರ‌ ಸೂಚನೆಯನ್ನು ನಿರ್ಲಕ್ಷಿಸಿ ಬೆಳ್ತಂಗಡಿ ಮಿನಿವಿಧಾನ ಸೌಧದ ರಸ್ತೆಯಲ್ಲಿ ಹಾಗೂ ಮಿನಿವಿಧಾನ ಸೌಧದ ಎದುರು ಸೋಮವಾರ ಅಕ್ರಮ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆಯುಂಟುಮಾಡಿದ ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ ಸೌಜನ್ಯ ಪರ ಹೋರಾಟಗಾರರಾದ ಅನಿಲ್ ಅಂತರ, ಪ್ರಸನ್ನ ರವಿ ಸೇರಿದಂತೆ 20ಮಂದಿ ಹಾಗೂ ಇತರರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎ.ಎಸ್.ಐ. ದುರ್ಗಾದಾಸ್ ಅವರ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಅ.27ರಂದು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ […]

ಧರ್ಮಸ್ಥಳ ಪ್ರಕರಣ : ಸೌಜನ್ಯಾ ತಾಯಿ ಸಹಿತ 20 ಮಂದಿ ವಿರುದ್ಧ ಕೇಸ್‌ Read More »

ಫ್ಲೈವುಡ್‌ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಓರ್ವ ಸಾವು, ಹಲವು ಮಂದಿಗೆ ಗಂಭೀರ ಗಾಯ

ಕುಂಬಳೆಯ ಪ್ರಸಿದ್ಧ ಅನಂತಪುರ ಕ್ಷೇತ್ರದ ಸಮೀಪ ಇರುವ ಕಾರ್ಖಾನೆಯಲ್ಲಿ ದುರಂತ ಮಂಗಳೂರು : ಪಕ್ಕದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪ ಅನಂತಪುರದಲ್ಲಿ ನಿನ್ನೆ ರಾತ್ರಿ ಫ್ಲೈವುಡ್ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಓರ್ವ ಕಾರ್ಮಿಕ ಮೃತಪಟ್ಟು 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಡೆಕೋರ್ ಪ್ಯಾನಲ್ ಇಂಡಸ್ಟ್ರೀಸ್ ಸಂಸ್ಥೆಯಲ್ಲಿ ಈ ಮಹಾದುರಂತ ಸಂಭವಿಸಿದೆ. ಅನಂತಪುರ ಕೖಗಾರಿಕಾ ಪ್ರಾಂಗಣದ ಫ್ಲೈವುಡ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಈ ದುರಂತ ಉಂಟಾಗಿದೆ. ಸೋಮವಾರ ರಾತ್ರಿ ಸುಮಾರು ಏಳರ ವೇಳೆಗೆ ಭಾರಿ ಸ್ಫೋಟ ಸಂಭವಿಸಿದ್ದು,

ಫ್ಲೈವುಡ್‌ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಓರ್ವ ಸಾವು, ಹಲವು ಮಂದಿಗೆ ಗಂಭೀರ ಗಾಯ Read More »

ಧರ್ಮಸ್ಥಳ ಪ್ರಕರಣ : ತಿಮರೋಡಿ ಟೀಮ್‌ಗೆ ಡೆಡ್‌ಲೈನ್‌ ವಿಧಿಸಿದ ಎಸ್‌ಐಟಿ

ವಿಚಾರಣೆಗೆ ಹಾಜರಾಗಲು ಮತ್ತೆ 7 ದಿನಗಳ ಕಾಲಾವಕಾಶ ಧರ್ಮಸ್ಥಳ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನಿನ್ನೆ ಮಹೇಶ್‌ ತಿಮರೋಡಿ ಮತ್ತು ಟೀಮ್‌ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದೆ. ಮಹೇಶ್‌ ಶೆಟ್ಟಿ ತಿಮರೋಡಿ ತನ್ನ ವಕೀಲರನ್ನು ಕಳುಹಿಸಿ ಕಾಲಾವಕಾಶ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಮಹೇಶ್ ಶೆಟ್ಟಿ ತಿಮರೋಡಿಗೆ ಏಳು ದಿನ ಹಾಗೂ ಇನ್ನುಳಿದ ಮೂವರಿಗೆ ನಾಲ್ಕು ದಿನದ ಒಳಗೆ ವಿಚಾರಣೆಗೆ ಹಾಜರಾಗಲು ಡೆಡ್‌ಲೈನ್‌ ವಿಧಿಸಿ ಕಾಲಾವಕಾಶ ನೀಡಿದೆ. ರಾಜ್ಯಾದ್ಯಂತ ಸದ್ದು ಮಾಡಿದ್ದ ಬುರುಡೆ ಪ್ರಕರಣ ತನಿಖೆ ಅಂತಿಮ ಘಟ್ಟದಲ್ಲಿದ್ದು, ಸೋಮವಾರದ

ಧರ್ಮಸ್ಥಳ ಪ್ರಕರಣ : ತಿಮರೋಡಿ ಟೀಮ್‌ಗೆ ಡೆಡ್‌ಲೈನ್‌ ವಿಧಿಸಿದ ಎಸ್‌ಐಟಿ Read More »

ಧರ್ಮಸ್ಥಳ ಪ್ರಕರಣ : ಸುಜಾತ ಭಟ್‌ ವಿಚಾರಣೆಗೆ ಹಾಜರು

ಇಂದು ಎಸ್‌ಐಟಿಯಿಂದ ನಾಲ್ವರ ಮಹತ್ವದ ವಿಚಾರಣೆ ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಎಸ್.ಐ‌.ಟಿ ವಿಚಾರಣೆಗೆ ಸುಜಾತ ಭಟ್‌ ಆಗಮಿಸಿದ್ದಾರೆ. ಬೆಂಗಳೂರಿನಿಂದ ಇಂದು ಬೆಳಗ್ಗೆ ಆಗಮಿಸಿದ ಸುಜಾತ ಭಟ್ ಎಸ್‌ಐಟಿ ಅಧಿಕಾರಿಗಳ ಎದುರು ಹಾಜರಾಗಿದ್ದಾರೆ. ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ಬೆಳಗ್ಗೆ ಎಸ್.ಐ.ಟಿ ಕಚೇರಿಗೆ

ಧರ್ಮಸ್ಥಳ ಪ್ರಕರಣ : ಸುಜಾತ ಭಟ್‌ ವಿಚಾರಣೆಗೆ ಹಾಜರು Read More »

ಸುಳ್ಯ : ಚಪ್ಪಲಿಯೊಳಗೆ ಸೇರಿಕೊಂಡಿದ್ದ ಹಾವು ಕಚ್ಚಿ ಮಹಿಳೆ ಅಸ್ವಸ್ಥ

ಸುಳ್ಯ: ಚಪ್ಪಲಿಯೊಳಗೆ ಸೇರಿಕೊಂಡಿದ್ದ ವಿಷದ ಹಾವು ಕಚ್ಚಿ ಮಹಿಳೆ ಅಸ್ವಸ್ಥರಾದ ಘಟನೆ ಭಾನುವಾರ ಅಲೆಟ್ಟಿಯಲ್ಲಿ ಸಂಭವಿಸಿದೆ. ಅಲೆಟ್ಟಿ ಗ್ರಾಮದ ಕೋಲ್ಚಾರಿನ ವಿನುತಾ ಹಾವಿನ ಕಡಿತಕ್ಕೊಳಗಾದವರು. ವಿನುತಾ ನಿನ್ನೆ ಬೆಳಗ್ಗೆ ಮನೆಯ ಅಂಗಳದಲ್ಲಿಟ್ಟಿದ್ದ ಚಪ್ಪಲಿ ಧರಿಸಲು ಹೋದಾಗ ಅದರೊಳಗೆ ಸೇರಿಕೊಂಡಿದ್ದ ವಿಷದ ಹಾವು ಕಾಲಿಗೆ ಕಚ್ಚಿದೆ. ಕೂಡಲೇ ಅವರನ್ನು ಮನೆಯವರು ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆ ಬಳಿಕ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುಳ್ಯ : ಚಪ್ಪಲಿಯೊಳಗೆ ಸೇರಿಕೊಂಡಿದ್ದ ಹಾವು ಕಚ್ಚಿ ಮಹಿಳೆ ಅಸ್ವಸ್ಥ Read More »

ಬಂಟ್ವಾಳ : ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಯುವಕ ಸಾವು

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ಹೊಳೆನರಸೀಪುರದ ಸಂಜಯ್‌ (25) ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಉಪ್ಪಿನಂಗಡಿ ಅಡ್ಡಹೊಳೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಸಂಭವಿಸಿದೆ. ಕಾರು ಚಾಲಕ ಅರಕಲಗೂಡು ನಿವಾಸಿ ಸಂದೀಪ್‌, ಕಾರಿನಲ್ಲಿದ್ದ ಶೇಷ, ಮಹೇಶ್‌ ಅವರು ಅಪಾಯದಿಂದ ಪಾರಾಗಿದ್ದಾರೆ. ಸಂಜಯ್‌ ಹಾಗೂ ಇತರರು ತಮ್ಮ ತೋಟದಲ್ಲಿ ಬೆಳೆದ ಹೂಗಳನ್ನು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾರಾಟ ಮಾಡಲು ಉಡುಪಿಗೆ ಬಂದಿದ್ದರು. ಹೂವು ಮಾರಾಟ ಮಾಡಿ ಮತ್ತೆ ಊರಿಗೆ ಮರಳುತ್ತಿದ್ದ ವೇಳೆ ಈ ದುರ್ಘ‌ಟನೆ

ಬಂಟ್ವಾಳ : ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಯುವಕ ಸಾವು Read More »

ಚೂರಿ ಇರಿತ ಪ್ರಕರಣ : ಪ್ರಮುಖ ಆರೋಪಿ ಸೆರೆ

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ ಎದುರು ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ರೌಡಿ ಶೀಟರ್ ಗುರುರಾಜ್ ಆಚಾರಿ ಎಂಬಾತನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮತ್ತೊಬ್ಬ ಆರೋಪಿ ಅಶೋಕ್ ಎಂಬಾತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಬಾರ್‌ನೊಳಗೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯು ತೀವ್ರಗೊಂಡು ಹೊರಗೆ ಚಾಕು ಇರಿತದಲ್ಲಿ ಅಂತ್ಯಗೊಂಡಿತ್ತು. ಈ ಘಟನೆಯಲ್ಲಿ ಗಾಯಗೊಂಡಿರುವ ನಿಝಾಮ್ ಮತ್ತು ಹಸನ್ ಮುಕ್ಷಿತ್ ಸ್ಥಳೀಯ ಆಸ್ಪತ್ರೆಯಲ್ಲಿ

ಚೂರಿ ಇರಿತ ಪ್ರಕರಣ : ಪ್ರಮುಖ ಆರೋಪಿ ಸೆರೆ Read More »

ಅಂತಿಮ ಹಂತಕ್ಕೆ ತಲುಪಿದ ಬುರುಡೆ ಷಡ್ಯಂತ್ರದ ತನಿಖೆ; ಸೋಮವಾರ ನಿರ್ಣಾಯಕ ವಿಚಾರಣೆ

ತಿಮರೋಡಿ ಸಹಿತ ನಾಲ್ವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌ ಮಂಗಳೂರು: ಧರ್ಮಸ್ಥಳ ಬುರುಡೆ ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ವಿಚಾರಣೆಗಾಗಿ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಜಯಂತ್‌ ಟಿ. ಮತ್ತು ವಿಠಲ ಗೌಡ ಅವರಿಗೆ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಿದ್ದು, ಈ ನೋಟಿಸ್‌ ಸುತ್ತ ನಾನಾ ರೀತಿಯ ಊಹಾಪೋಹಗಳು ಹುಟ್ಟಿಕೊಂಡಿವೆ. ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ವಿಠಲ ಗೌಡರಿಗೆ ನೋಟಿಸ್ ನೀಡಲಾಗಿದೆ.

ಅಂತಿಮ ಹಂತಕ್ಕೆ ತಲುಪಿದ ಬುರುಡೆ ಷಡ್ಯಂತ್ರದ ತನಿಖೆ; ಸೋಮವಾರ ನಿರ್ಣಾಯಕ ವಿಚಾರಣೆ Read More »

ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್‌

ಅ.27ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕ್ರೀಡಾಕೂಟಕ್ಕೆ ಚಾಲನೆ ಮಂಗಳೂರು: ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಅಂತಾರಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ “ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2025” ಕ್ರೀಡಾಕೂಟ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 27ರಂದು ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಿದ್ದಾರೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರೀಡಾಕೂಟ ನಡೆಯುತ್ತಿದ್ದು, ಯಾವುದೇ ಲೋಪವಾಗದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲೆಯ ಕ್ರೀಡಾ ಮೂಲಸೌಲಭ್ಯಗಳು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಬೇಕು. ಈ ಕ್ರೀಡಾಕೂಟದಲ್ಲಿ ದೇಶ-ವಿದೇಶಗಳಿಂದ ಕ್ರೀಡಾಪಟುಗಳು

ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್‌ Read More »

ನಮ್ಮ ಮಾತು ಕೇಳದಿದ್ದರೆ ಬೀಳುತ್ತೆ ಕೇಸ್‌ : ಕ್ರಿಮಿನಲ್‌ಗಳಿಗೆ ಕಮಿಷನರ್‌ ಸುಧೀರ್ ರೆಡ್ಡಿ ವಾರ್ನಿಂಗ್

ಪಟಾಕಿ ಅಂಗಡಿ ಮಾಲಕರಿಂದ ಸುಲಿಗೆ ಮಾಡಿದ ಹಿನ್ನೆಲೆಯಲ್ಲಿ ಎಚ್ಚರಿಕೆ ಮಂಗಳೂರು: ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ಜೊತೆಗೆ ತಿರುಗಾಡದಂತೆ ಈ ಮೊದಲೇ ಹೇಳಿದ್ದೆ. ರೌಡಿಗಳ ಜೊತೆಗಿದ್ದು ಅಪರಾಧದಲ್ಲಿ ಸಿಲುಕಬೇಡಿ ಎಂದೂ ಹೇಳಿದ್ದೆ. ನೀವು ನಮ್ಮ ಮಾತು ಕೇಳ್ತಾ ಇಲ್ಲ ಎನಿಸುತ್ತೆ. ನಮ್ಮ ಮಾತು ಕೇಳಲ್ಲಾಂದ್ರೆ ನಾವು ಏನು ಮಾಡಬೇಕೆಂದು ಗೊತ್ತಿದೆ. ನಾವು ನಮ್ಮ ಕೆಲಸ ಮಾಡ್ತೀವಿ. ನಿಮ್ಮ ಇಷ್ಟದಂತೆ ಮಾಡ್ಕೊಂಡ್ರೆ ನಮಗೆ ತೊಂದರೆ ಇಲ್ಲ. ಏನು ಬೇಕಾದರೂ ಮಾಡ್ಕೊಂಡು ಹೋಗಿ‌. ಪೊಲೀಸರು ತಮ್ಮ ಕೆಲಸ ಮಾಡುತ್ತಾರೆ ಎಂದು ಮಂಗಳೂರು

ನಮ್ಮ ಮಾತು ಕೇಳದಿದ್ದರೆ ಬೀಳುತ್ತೆ ಕೇಸ್‌ : ಕ್ರಿಮಿನಲ್‌ಗಳಿಗೆ ಕಮಿಷನರ್‌ ಸುಧೀರ್ ರೆಡ್ಡಿ ವಾರ್ನಿಂಗ್ Read More »

error: Content is protected !!
Scroll to Top