ದಕ್ಷಿಣ ಕನ್ನಡ

ಇರಾಕೋಡಿಯಲ್ಲಿ ಪಿಕಪ್ ಚಾಲಕನ ಬರ್ಬರ ಹತ್ಯೆ | ಮರಳು ಅನ್‍ ಲೋಡ್ ಮಾಡುತ್ತಿದ್ದ ವೇಳೆ ಘಟನೆ

ಬಂಟ್ವಾಳ: ಪಿಕಪ್ ಚಾಲಕರೊಬ್ಬರನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ. ಕೊಳತ್ತಮಜಲು ನಿವಾಸಿ ರಹೀಮ್ ಎಂಬಾತ ಹತ್ಯೆಗೀಡಾದವರು. ರಹೀಮ್‍ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ರಹೀಮ್ ಜೊತೆ ಇನ್ನೊರ್ವ ಸ್ಥಳದಲ್ಲಿದ್ದು,  ಆತನಿಗೂ ಕಡಿಯಲಾಗಿದೆ. ಆತನಿಗೆ ಕೈಗೆ ಗಾಯ ವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು […]

ಇರಾಕೋಡಿಯಲ್ಲಿ ಪಿಕಪ್ ಚಾಲಕನ ಬರ್ಬರ ಹತ್ಯೆ | ಮರಳು ಅನ್‍ ಲೋಡ್ ಮಾಡುತ್ತಿದ್ದ ವೇಳೆ ಘಟನೆ Read More »

ಹಾಲಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆ

ಬಿಜೆಪಿ ಹೈಕಮಾಂಡ್ ಹಾಲಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡಿದ್ದು, ಈ ಮೂಲಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ತಕ್ಷಣದಿಂದಲೇ ಜಾರಿಯಾಗುವಂತೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ ಇಬ್ಬರು ಶಾಸಕರಿಗೆ ನೋಟಿಸ್ ನೀಡಿತ್ತು. ಆ ನೋಟಿಸ್‌ಗೆ ಮೇ

ಹಾಲಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆ Read More »

ವಿದ್ಯುತ್‍ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಚಾಲಕ ಮೃತ್ಯು

ಬಂಟ್ವಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‍ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಭಂಡಾರಕೊಟ್ಟಿಗೆ ನಿವಾಸಿ ಜಯಂತ್ ಗೌಡ ಮೃತಪಟ್ಟ ಚಾಲಕ. ತುಂಬೆಯ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್‌ ಸಿಬ್ಬಂದಿಯಾಗಿದ್ದ ಜಯಂತ್ ಗೌಡ  ಕಾರಿನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ವಿದ್ಯುತ್‍ ಕಂಬಕ್ಕೆ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡು ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾರು  ಸಂಪೂರ್ಣ ನುಜ್ಜು ಗುಜ್ಜಾಗಿದ್ದು ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿದ್ಯುತ್‍ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಚಾಲಕ ಮೃತ್ಯು Read More »

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಪ್ರತಿಭಟಿಸಿದವರ ಮೇಲೆ ಕೇಸ್‌

ಬಜ್ಪೆ ಚಲೋ ಆಯೋಜಕರು, ಭಾಷಣಕಾರರ ವಿರುದ್ಧ ಎಫ್‌ಐಆರ್‌ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಸದಸ್ಯರು ನಡೆಸಿದ ಬಜ್ಪೆ ಚಲೋ ಪ್ರತಿಭಟನೆಯ ಆಯೋಜಕರು ಮತ್ತು ಭಾಷಣಕಾರರ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ ಭಾನುವಾರ ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಬಜ್ಪೆಯ ಶಾರದಾ ಮಂಟಪದ ಬಳಿ ಪ್ರತಿಭಟನೆಯನ್ನು ಪೊಲೀಸರ ಅನುಮತಿಯಿಲ್ಲದೆ ನಡೆಸಲಾಗಿತ್ತು.

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಪ್ರತಿಭಟಿಸಿದವರ ಮೇಲೆ ಕೇಸ್‌ Read More »

ಜೂ.1 : ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-ರಾಷ್ಟ್ರೀಯ ಕಲಾ ಸಮ್ಮೇಳನ

ಎಂಟು ತಂಡಗಳಿಂದ ಯಕ್ಷಗಾನ ಸ್ಪರ್ಧೆ; ಕ್ರಿಕೆಟಿಗ ರೋಹಿತ್‌ ಶರ್ಮ ತಾರಾ ಮೆರುಗು ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಜೂನ್ 1ರಂದು ಮಂಗಳೂರಿನ ಹೊರವಲಯದ ಅಡ್ಯಾರ್ ಗಾರ್ಡನ್‌ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025 ರಾಷ್ಟ್ರೀಯ ಕಲಾ ಸಮ್ಮೇಳನ ನಡೆಯಲಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲಗುತ್ತು ಸತೀಶ್ ಶೆಟ್ಟಿ ತಿಳಿಸಿದ್ದಾರೆ. ಕಳೆದ ವರ್ಷ ಯಕ್ಷ ಸಂಭ್ರಮಕ್ಕೆ ಜನಪ್ರಿಯ ನಟ ಸುದೀಪ್‌ ತಾರಾ ಮೆರುಗು ನೀಡಿದ್ದರೆ ಈ ವರ್ಷ ಖ್ಯಾತ

ಜೂ.1 : ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-ರಾಷ್ಟ್ರೀಯ ಕಲಾ ಸಮ್ಮೇಳನ Read More »

ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ : ದ.ಕ. ಜಿಲ್ಲಾದ್ಯಂತ ಎಲ್ಲಾ ಶಾಲೆ, ಪದವಿಪೂರ್ವ  ಕಾಲೇಜುಗಳಿಗೆ ಎರಡು ದಿನ ರಜೆ ಘೊಷಣೆ

ಮಂಗಳೂರು: ಕರಾವಳಿಯಲ್ಲಿ ಭಾರಿ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಿ ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲೇ ಮೇ 27 ಮತ್ತು 28 ರಂದು ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ನದಿ, ಸಮುದ್ರ ತೀರಗಳಿಗೆ ತೆರಳದಂತೆ

ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ : ದ.ಕ. ಜಿಲ್ಲಾದ್ಯಂತ ಎಲ್ಲಾ ಶಾಲೆ, ಪದವಿಪೂರ್ವ  ಕಾಲೇಜುಗಳಿಗೆ ಎರಡು ದಿನ ರಜೆ ಘೊಷಣೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಬಿ.ಸಿ ಟ್ರಸ್ಟ್  (ರಿ )  ವಿಟ್ಲ ತಾಲೂಕಿನ  ಅಳಿಕೆ ವಲಯದಿಂದ   ಮಕ್ಕಳಿಗೆ ಉಚಿತ ಪುಸ್ತಕ  ವಿತರಣೆ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಬಿ.ಸಿ ಟ್ರಸ್ಟ್  (ರಿ )  ವಿಟ್ಲ ತಾಲೂಕಿನ  ಅಳಿಕೆ ವಲಯದ   ಅಳಿಕೆ ಕಾರ್ಯ ಕ್ಷೇತ್ರದ ಒಕ್ಕೂಟ ಸಭೆಯಲ್ಲಿ  ಗ್ರಾಮದ ಮಕ್ಕಳಿಗೆ ಉಚಿತ ಪುಸ್ತಕ  ವಿತರಣೆ ಕಾರ್ಯಕ್ರಮ ನಡೆಯಿತು. ಒಕ್ಕೂಟದ  ನಿಕಟ ಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿಯವರ ನೇತೃತ್ವದಲ್ಲಿ ಉಚಿತ ಪುಸ್ತಕವನ್ನು ಮಕ್ಕಳಿಗೆ   ವಿತರಿಸಲಾಯಿತು. ಕಾರ್ಯಕ್ರಮದ  ಅಧ್ಯಕ್ಷತೆಯನ್ನು  ಒಕ್ಕೂಟದ  ಅಧ್ಯಕ್ಷರಾದ  ರವೀಶ್ ರವರು ವಹಿಸಿದರು. ಕಾರ್ಯಕ್ರಮದಲ್ಲಿ  ಅಳಿಕೆ ಪಂಚಾಯತ್ ಅಧ್ಯಕ್ಷರಾದ  ಪದ್ಮನಾಭ ಪೂಜಾರಿ ಹಾಗೂ ಶಾಲಾ ಮುಖೋಪಾಧ್ಯಾಯ  ಈಶ್ವರ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಬಿ.ಸಿ ಟ್ರಸ್ಟ್  (ರಿ )  ವಿಟ್ಲ ತಾಲೂಕಿನ  ಅಳಿಕೆ ವಲಯದಿಂದ   ಮಕ್ಕಳಿಗೆ ಉಚಿತ ಪುಸ್ತಕ  ವಿತರಣೆ Read More »

ವಾಗೀಶ್ ವಿ 68 ಅಫೀಷಿಯಲ್ ಅರ್ಪಿಸುವ ಸಸ್ಪೆನ್ಸ್ ಲವ್ ಸ್ಟೋರಿಯ  ಟೈಟಲ್ ಪೋಸ್ಟರ್  ಬಿಡುಗಡೆ

ಬೆಳ್ತಂಗಡಿ : ವಾಗೀಶ್ ವಿ 68 ಆಫೀಷಿಯಲ್ ಅರ್ಪಿಸುವ ಸಸ್ಪೆನ್ಸ್ ಲವ್ ಸ್ಟೋರಿಯ  ಟೈಟಲ್ ಪೋಸ್ಟರ್  ಮೇ. 25 ಭಾನುವಾರ ಬಿಡುಗಡೆಯಾಗಿದೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ವಿಶ್ವನಾಥ ಕೆ ವಿಟ್ಲ ಇವರು  ಮೋಕೆದ ತಿರ್ಲ್ ಕಿರು ಸಸ್ಪೆನ್ಸ್ ಲವ್ ಸ್ಟೋರಿಯ ಟೈಟಲ್ ಬಿಡುಗಡೆ ಮಾಡಿದ್ದಾರೆ.  ಹಾಗೆಯೆ ಮೋಕೆದ ತಿರ್ಲ್ [True love (Fake love) =? ಎಂಬ ಕುತೂಹಲಕಾರಿಯಾದ ಸಿನಿಮಾ ಇದಾಗಿದೆ. ಈ ಸಸ್ಪೆನ್ಸ್ ತುಳು ಲವ್ ಸ್ಟೋರಿಯ ಟ್ರೈಲರ್ ಅತಿ ಶೀಘ್ರದಲ್ಲಿ

ವಾಗೀಶ್ ವಿ 68 ಅಫೀಷಿಯಲ್ ಅರ್ಪಿಸುವ ಸಸ್ಪೆನ್ಸ್ ಲವ್ ಸ್ಟೋರಿಯ  ಟೈಟಲ್ ಪೋಸ್ಟರ್  ಬಿಡುಗಡೆ Read More »

ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ | ಚಾಲಕ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ನಿಡಿಗಲ್ ಸೇತುವೆಯ ಸಮೀಪದಲ್ಲಿರುವ ದಯಲ್ ಬಾಗ್ ಕ್ರಾಸ್ ಬಳಿ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ಇಂದು (ಮೇ. 26) ಮುಂಜಾನೆ ನಡೆದಿದೆ. ಚಾಲಕ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಚಾಲಕನಿಗೆ  ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ | ಚಾಲಕ ಪ್ರಾಣಾಪಾಯದಿಂದ ಪಾರು Read More »

ಭಾರೀ ಮಳೆ ಹಿನ್ನಲೆಯಲ್ಲಿ ಇಂದು ಅಂಗನವಾಡಿಗಳಿಗೆ ರಜೆ ಘೋಷಣೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಇಂದು( ಮೇ 26) ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲೇ ಜಿಲ್ಲೆಯ ಅನೇಕ ಕಡೆಗಳಲ್ಲಿ ಭಾರೀ ಹಾನಿಯುಂಟು ಮಾಡಿದೆ. ಈ ಹಿನ್ನಲೆಯಲ್ಲಿ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದ್ದು, ದ.ಕ.ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಹಿನ್ನಲೆಯಲ್ಲಿ ಇಂದು ಅಂಗನವಾಡಿಗಳಿಗೆ ರಜೆ ಘೋಷಣೆ Read More »

error: Content is protected !!
Scroll to Top