ದಕ್ಷಿಣ ಕನ್ನಡ

ಧರ್ಮಸ್ಥಳಕ್ಕೆ ಇಂದು ಬಿಜೆಪಿ ಶಾಸಕರ ತಂಡ ಭೇಟಿ

ಬಿಜೆಪಿ-ಕಾಂಗ್ರೆಸ್‌ ಕಿತ್ತಾಟ ; ರಾಜಕೀಯ ವಿವಾದವಾಗಿ ಬದಲಾದ ಪ್ರಕರಣ ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಆರೋಪದ ತನಿಖೆಗೆ ಅವರಸದಲ್ಲಿ ಎಸ್‌ಐಟಿ ರಚನೆ ಮಾಡಿದ ವಿಚಾರ ಈಗ ರಾಜಕೀಯ ವಿವಾದವಾಗಿ ಬದಲಾಗಿದೆ. ಸರ್ಕಾರದ ವಿರುದ್ಧ ಬಿಜೆಪಿ ಮುಗಿಬಿದ್ದಿದ್ದು, ನಿನ್ನೆ ಬಿಜೆಪಿ ಎಂಎಲ್‌ಸಿ ವಿಶ್ವನಾಥ್‌ ನೇತೃತ್ವದಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ತನಕ ಬೃಹತ್‌ ವಾಹನ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಇದರ ಬೆನ್ನಿಗೆ ಭಾನುವಾರ (ಆ.17) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗ ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ. ಪೊಲೀಸರ ವಿಚಾರಣೆ, […]

ಧರ್ಮಸ್ಥಳಕ್ಕೆ ಇಂದು ಬಿಜೆಪಿ ಶಾಸಕರ ತಂಡ ಭೇಟಿ Read More »

13ನೇ ಸ್ಥಳದಲ್ಲಿ ಗುಂಡಿ ಅಗೆಯುವ ಕಾರ್ಯಾಚರಣೆಯೂ ಮುಗಿಯಿತು, ಮುಂದೇನು?

ಎಷ್ಟು ಅಗೆದರೂ ಶವದ ಕುರುಹು ಸಿಗದಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ನಡೆ ಬಗ್ಗೆ ಕುತೂಹಲ ಧರ್ಮಸ್ಥಳ : ಮುಸುಕುಧಾರಿ ಅನಾಮಿಕನ ಹೇಳಿಕೆ ನಂಬಿ ಮಾಡಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸತತ 14 ದಿನ ಭೂಮಿ ಅಗೆದರೂ ಶವ ಹೂತಿರುವ ಯಾವುದೇ ಕುರುಹು ಪತ್ತೆಯಾಗಿಲ್ಲ. ಹೀಗಾಗಿ ಎಸ್‌ಐಟಿಯ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಮೂಡಿದೆ. ಮುಸುಕುಧಾರಿ ಇನ್ನೂ ಅನೇಕ ಜಾಗಗಳನ್ನು ತೋರಿಸಲು ಮುಂದಾಗಿದ್ದಾನೆ. ಆದರೆ ಇಷ್ಟರ ತನಕ ಅವನು ತೋರಿಸಿದ ಯಾವ ಜಾಗದಲ್ಲೂ ಯಾವುದೇ ಕುರುಹು ಸಿಗದಿರುವಾಗ

13ನೇ ಸ್ಥಳದಲ್ಲಿ ಗುಂಡಿ ಅಗೆಯುವ ಕಾರ್ಯಾಚರಣೆಯೂ ಮುಗಿಯಿತು, ಮುಂದೇನು? Read More »

ಮಂಗಳೂರು: ನೈತಿಕ ಪೊಲೀಸ್‌ಗಿರಿ ಮಾಡಿದ 6 ಮಂದಿ ಬಂಧನ

ಅನ್ಯಕೋಮಿನ ಯುವಕನ ಜೊತೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಪ್ರಶ್ನಿಸಿದ್ದಕ್ಕೆ ಕೇಸ್‌ ಮಂಗಳೂರು: ನಗರದಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಆರೋಪದ ಮೇಲೆ ಪಾಂಡೇಶ್ವರ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಗಣೇಶ್, ಶ್ರೇಯಸ್, ಚಿಂಚು, ಚಂದನ್, ನಾಗರಾಜ್ ಹಾಗು ರಾಮಚಂದ್ರ ಎಂದು ಗುರುತಿಸಲಾಗಿದೆ. ಆ.11ರಂದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಅನ್ಯಕೋಮಿನ ಯುವಕ ಜೊತೆ ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ಸರ್ವಿಸ್ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿಗಳು ತಡೆದು ಅಡ್ಡಿಪಡಿಸಿ ಜೀವಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಪ.ಪೂ. ಕಾಲೇಜೊಂದರ

ಮಂಗಳೂರು: ನೈತಿಕ ಪೊಲೀಸ್‌ಗಿರಿ ಮಾಡಿದ 6 ಮಂದಿ ಬಂಧನ Read More »

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಂಟ್ವಾಳ ಉಪತಹಶೀಲ್ದಾರ್‌, ಮತ್ತಿಬ್ಬರು

ಪೌತಿ ಖಾತೆ ಮಾಡಿಕೊಡಲು 20 ಸಾವಿರ ರೂ. ಲಂಚ ಸ್ವೀಕರಿಸುವಾಗ ರೆಡ್‌ಹ್ಯಾಂಡ್‌ ಆಗಿ ಹಿಡಿದ ಪೊಲೀಸರು ಬಂಟ್ವಾಳ : ಜಮೀನಿಗೆ ಪೌತಿ ಖಾತೆ ಮಾಡಿಕೊಡಲು 20 ರೂ. ಸಾವಿರ ರೂ. ಲಂಚ ಸ್ವೀಕರಿಸುತ್ತಿರುವಾಗಲೇ ಬಂಟ್ವಾಳ ಉಪತಹಶೀಲ್ದಾರ್‌ ಸೇರಿ ಮೂವರನ್ನು ಲೋಕಾಯುಕ್ತ ಪೊಲೀಸರು ರೆಡ್‌ಹ್ಯಾಂಡ್‌ ಅಗಿ ಹಿಡಿದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮಧ್ಯಾಹ್ನ ತಾಲೂಕು ಕಚೇರಿಯ ಮೇಲೆ ದಾಳಿ ನಡೆಸಿದ್ದು, ಲಂಚ ಪಡೆಯುತ್ತಿರುವಾಗಲೇ ಉಪತಹಶೀಲ್ದಾರ್ ಸೇರಿದಂತೆ ಮೂವರು ವ್ಯಕ್ತಿಗಳನ್ನು ಹಿಡಿದು ಪ್ರಕರಣ ದಾಖಲಸಿಕೊಂಡಿದ್ದಾರೆ. ಆರೋಪಿಗಳನ್ನು ಉಪತಹಶೀಲ್ದಾರ್ ರಾಜೇಶ್ ನಾಯಕ್,

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಂಟ್ವಾಳ ಉಪತಹಶೀಲ್ದಾರ್‌, ಮತ್ತಿಬ್ಬರು Read More »

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯ ಮಂಪರು ಪರೀಕ್ಷೆ ಆಗಲಿದೆಯಾ?

ಗುಂಡಿಗಳಲ್ಲಿ ಹೆಣಗಳ ಕುರುಹು ಪತ್ತೆಯಾಗದಿರುವ ಹಿನ್ನೆಲೆಯಲ್ಲಿ ಹೆಚ್ಚುತ್ತಿದೆ ಅನುಮಾನ ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟೆದ್ದೇನೆ ಎಂದು ಆರೋಪಿಸಿದ ಮುಸುಕುಧಾರಿ ವ್ಯಕ್ತಿ ತೋರಿಸಿದ 16ಕಿಇಂತಲೂ ಹೆಚ್ಚು ಸ್ಥಳಗಳಲ್ಲಿ ಅಗೆದರೂ ಶವದ ಯಾವುದೇ ಕುರುಹುಗಳು ಪತ್ತೆಯಾಗದಿರುವ ಹಿನ್ನೆಲೆಯಲ್ಲಿ ಈ ವ್ಯಕ್ತಿಯನ್ನೇ ವಶಕ್ಕೆ ತೆಗೆದುಕೊಂಡು ತನಿಖೆಗೆ ಒಳಪಡಿಸಬೇಕೆಂಬ ಆಗ್ರಹ ಬಲವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅವನನ್ನು ಮಂಪರು ಪರೀಕ್ಷೆಗೆ ಒಳಪಡಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಮುಸುಕುಧಾರಿ ತೋರಿಸಿದ ಬಹುಮುಖ್ಯ ಸ್ಥಳ ಎನ್ನಲಾಗುತ್ತಿದ್ದ 13ನೇ ಪಾಯಿಂಟ್‌ನಲ್ಲಿ ಮಂಗಳವಾರ ಜಿಪಿಆರ್‌

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯ ಮಂಪರು ಪರೀಕ್ಷೆ ಆಗಲಿದೆಯಾ? Read More »

ಕೆಂಪುಕಲ್ಲು ಗಣಿಗಾರಿಕೆಗೆ ಶೀಘ್ರ ಸರಳ ನಿಯಮ ರಚನೆ

ಹೋರಾಟಕ್ಕೆ ಮಣಿದ ಸರ್ಕಾರ; ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಹೊಸ ನಿಯಮ ರಚಿಸುವ ತೀರ್ಮಾನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಇತ್ತೀಚೆಗೆ ತಲೆದೋರಿರುವ ಕೆಂಪುಕಲ್ಲು ಅಭಾವದ ವಿರುದ್ಧ ನಡೆಸಿದ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಸರ್ಕಾರ ಶೀಘ್ರದಲ್ಲೇ ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿ ಹೊಸ ನಿಯಮ ರಚಿಸಲು ನಿರ್ಧರಿಸಿದೆ. ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ವಿಚಾರದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಕೆಲ

ಕೆಂಪುಕಲ್ಲು ಗಣಿಗಾರಿಕೆಗೆ ಶೀಘ್ರ ಸರಳ ನಿಯಮ ರಚನೆ Read More »

ಗಿರೀಶ್‌ ಮಟ್ಟೆಣ್ಣವರ್‌, ಯೂಟ್ಯೂಬರ್‌ ವಿರುದ್ಧ ಜೈನರಿಗೆ ಅಪಮಾನ ಮಾಡಿದ ಕೇಸ್‌

ಧರ್ಮಸ್ಥಳ ಅವಹೇಳನ, ಅಪಪ್ರಚಾರ ವಿರುದ್ಧ ರಾಜ್ಯಾದ್ಯಂತ ಹೆಚ್ಚುತ್ತಿದೆ ಅಸಹನೆ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ ಮಟ್ಟೆಣ್ಣವರ್‌ ಹಾಗೂ ಯೂಟ್ಯೂಬರ್‌ ವಿರುದ್ಧ ಹುಬ್ಬಳ್ಳಿಯಲ್ಲಿ ಕೇಸ್‌ ದಾಖಲಾಗಿದೆ. ಧರ್ಮಸ್ಥಳಕ್ಕೆ ಸಂಬಂಧಿಸಿ ಮಾತನಾಡುತ್ತ ಜೈನ ಧರ್ಮೀಯರ ವಿರುದ್ಧ ಅವಮಾನಕರ ಹೇಳಿಕೆ, ಜೈನರ ನಂಬಿಕೆಗಳಿಗೆ ಧಕ್ಕೆ ಎಸಗಿದ್ದಾರೆ ಎಂದು ಹುಬ್ಬಳ್ಳಿಯ ಛಬ್ಬಿ ಗ್ರಾಮದ ಅಜೀತ್‌ ಬಸಾಪುರ ಎಂಬವರು ಹುಬ್ಬಳ್ಳಿ ಗ್ರಾಮೀನ ಪೊಲೀಸ್‌ ಟಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್‌ಸ್ಪೆಕ್ಟರ್‌ ಜೀರೊ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ

ಗಿರೀಶ್‌ ಮಟ್ಟೆಣ್ಣವರ್‌, ಯೂಟ್ಯೂಬರ್‌ ವಿರುದ್ಧ ಜೈನರಿಗೆ ಅಪಮಾನ ಮಾಡಿದ ಕೇಸ್‌ Read More »

ಆಯುಷ್ಮಾನ್‌ ಯೋಜನೆ ಜಾರಿ ಮಾಡದ ಕರ್ನಾಟಕ ಸರ್ಕಾರ : ಸದನದಲ್ಲಿ ಕ್ಯಾ.ಬ್ರಿಜೇಶ್‌ ಚೌಟ ಪ್ರಸ್ತಾವ

70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ ನೀಡುವ ಯೋಜನೆಗೆ ತನ್ನ ಪಾಲು ಕೊಡದ ರಾಜ್ಯ ಸರ್ಕಾರ ಮಂಗಳೂರು: 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರ ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಸಂಸತ್ತಿನಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ದೇಶಾದ್ಯಂತ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ

ಆಯುಷ್ಮಾನ್‌ ಯೋಜನೆ ಜಾರಿ ಮಾಡದ ಕರ್ನಾಟಕ ಸರ್ಕಾರ : ಸದನದಲ್ಲಿ ಕ್ಯಾ.ಬ್ರಿಜೇಶ್‌ ಚೌಟ ಪ್ರಸ್ತಾವ Read More »

ಧರ್ಮಸ್ಥಳ ಪ್ರಕರಣ : ಮಾನವ ಹಕ್ಕು ಆಯೋಗದಿಂದಲೂ ತನಿಖೆ

ಐಪಿಎಸ್‌ ಅಧಿಕಾರಿಯನ್ನೊಳಗೊಂಡಿರುವ ತಂಡದಿಂದ ವಿವಿಧೆಡೆ ತೆರಳಿ ಮಾಹಿತಿ ಸಂಗ್ರಹ ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತನಿಖೆ ಆರಂಭಿಸಿದೆ. ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ಆಯೋಗದ ಅಧಿಕಾರಿಗಳ ತಂಡ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಬೀಡುಬಿಟ್ಟ ನಾಲ್ವರು ಅಧಿಕಾರಿಗಳ ತಂಡದಲ್ಲಿ ಓರ್ವ ಐಪಿಎಸ್ ಅಧಿಕಾರಿ ಇದ್ದಾರೆ. ವಿವಿಧ ಆಯಾಮಗಳಲ್ಲಿ ದಾಖಲೆ ಮತ್ತು ಮಾಹಿತಿಗಳ ಸಂಗ್ರಹ ಮಾಡುತ್ತಿರುವ ತಂಡ ಪಂಚಾಯತ್‌ನಿಂದ ದಾಖಲೆಗಳನ್ನು ಕೇಳಿ ಪರಿಶೀಲನೆ ನಡೆಸುತ್ತಿದೆ. ಮುಂದಿನ

ಧರ್ಮಸ್ಥಳ ಪ್ರಕರಣ : ಮಾನವ ಹಕ್ಕು ಆಯೋಗದಿಂದಲೂ ತನಿಖೆ Read More »

ಧರ್ಮಸ್ಥಳ ಪ್ರಕರಣದ ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ: ಡಾ. ಜಿ. ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ SIT ತನಿಖೆ ನಡೆಸುತ್ತಿದ್ದು, ಅದು ಪೂರ್ಣವಾಗುವ ವರೆಗೆ ತಾನು ಈ ಸಂಬಂಧ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಹಲವರು ಸಾಕಷ್ಟು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ನನ್ನ ಗಮನಕ್ಕೂ ಬಂದಿದೆ. ಆದರೆ ತನಿಖೆ ಮುಗಿಯುವ ವರೆಗೆ ಈ ಬಗ್ಗೆ ಮಾತನಾಡುವುದು ಸಮಂಜಸವಲ್ಲ. ತನಿಖೆಯ ಬಳಿಕ ವಾಸ್ತವಾಂಶ ಬೆಳಕಿಗೆ ಬರಲಿದೆ ಎಂದಿದ್ದಾರೆ. ಈ ಬಗ್ಗೆ ಸದನದಲ್ಲಿ ಪ್ರಶ್ನೆಗಳು ಬಂದರೆ ಉತ್ತರ ನೀಡಲಾಗುವುದು ಎಂದು ಅವರು ನುಡಿದಿದ್ದಾರೆ.

ಧರ್ಮಸ್ಥಳ ಪ್ರಕರಣದ ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ: ಡಾ. ಜಿ. ಪರಮೇಶ್ವರ್ Read More »

error: Content is protected !!
Scroll to Top