ದಕ್ಷಿಣ ಕನ್ನಡ

ಕೇರಳಕ್ಕೆ ಸಾಗಿಸುತ್ತಿದ್ದ 20.80 ಲ.ರೂ. ವಶ : ಆರೋಪಿ ಬಂಧನ

ದಾಖಲೆ ಪತ್ರಗಳಿಲ್ಲದೆ ಮಂಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪಾರ ಹಣ ಸಾಗಾಟ ಮಂಗಳೂರು : ಮಂಗಳೂರಿನಿಂದ ಕೇರಳಕ್ಕೆ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 20.80 ಲ.ರೂ.ಯನ್ನು ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಿಕನಿಂದ ವಶಪಡಿಸಿಕೊಳ್ಳಲಾಗಿದೆ. ಮಂಗಳೂರಿನಿಂದ ಕಾಸರಗೋಡಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಪ್ರಯಾಣಿಕನಿಂದ 20.80 ಲಕ್ಷ ರೂ. ನಗದು ಹಣವನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮಂಗಳೂರಿನ ಜಯಶೀಲ ಪುಟ್ಟಣ್ಣ ಶೆಟ್ಟಿ(52) ಎಂಬಾತನನ್ನು ಬಂಧಿಸಲಾಗಿದೆ. ವಾಹನ ತಪಾಸಣೆ ಮಾಡುತ್ತಿದ್ದ ಅಬಕಾರಿ ಸಿಬ್ಬಂದಿಗಳು ಈತನ ಬ್ಯಾಗನ್ನು ಪರಿಶೀಲಿಸಿದಾಗ ನಗದು ಪತ್ತೆಯಾಗಿದೆ. […]

ಕೇರಳಕ್ಕೆ ಸಾಗಿಸುತ್ತಿದ್ದ 20.80 ಲ.ರೂ. ವಶ : ಆರೋಪಿ ಬಂಧನ Read More »

ಧರ್ಮಸ್ಥಳ ಪ್ರಕರಣ : ಹೊಸ ಸ್ಥಳದಲ್ಲೂ ಸಿಗದ ಮೃತದೇಹದ ಅವಶೇಷ

ಮೃತದೇಹ ಹೂತಿರುವುದನ್ನು ನೋಡಿದ್ದೇವೆ ಎಂದು ಇನ್ನಿಬ್ಬರಿಂದ ದೂರು ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರ ತೋರಿಸಿದ ಬೊಳಿಯಾರು ಸಮೀಪದ ಅರಣ್ಯದಲ್ಲಿ ಎಸ್‌ಐಟಿ ತಂಡ ಶುಕ್ರವಾರ ಕಾರ್ಯಾಚರಣೆ ನಡೆಸಿದ್ದು, ಆದರೆ ಅಲ್ಲಿ ಕೂಡ ಏನೂ ಸಿಕ್ಕಿಲ್ಲ. ಮುಸುಕುಧಾರಿ ದೂರುದಾರ ಈ ಹಿಂದೆ 13 ಸ್ಥಳಗಳಲ್ಲಿ ತೋರಿಸಿದ್ದ ಜಾಗಗಳ ಹೊರತಾಗಿ ಇನ್ನೂ ಕೆಲವು ಜಾಗಗಳನ್ನು ತೋರಿಸಿದ್ದು, ಅಲ್ಲೂ ಗುರುತು ಮಾಡಿ ಅಗೆಯಲು ತೊಡಗಿದ್ದಾರೆ. ಶುಕ್ರವಾರ ಮಧ್ಯಾಹ್ನದ ವೇಳೆ ಎಸ್‌ಐಟಿ ಸಾಕ್ಷಿ ದೂರುದಾರನೊಂದಿಗೆ

ಧರ್ಮಸ್ಥಳ ಪ್ರಕರಣ : ಹೊಸ ಸ್ಥಳದಲ್ಲೂ ಸಿಗದ ಮೃತದೇಹದ ಅವಶೇಷ Read More »

ಕಾರು ಡಿಕ್ಕಿ : ರಸ್ತೆ ಬದಿ ನಿಂತಿದ್ದ ಬೇಕರಿ ಮಾಲೀಕನಿಗೆ ಗಂಭಿರ ಗಾಯ

ಸ್ಕೂಟಿ ಪಂಕ್ಚರ್‌ ಆದ ಹಿನ್ನೆಲೆಯಲ್ಲಿ ರಸ್ತೆ ಬದಿ ನಿಂತಿದ್ದಾಗ ಡಿಕ್ಕಿ ಹೊಡೆದ ಕಾರು ವಿಟ್ಲ: ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ದ್ವಿಚಕ್ರ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಬೆಳಗ್ಗೆ ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ಬೇಕರಿಯ ಮಾಲೀಕ ಜಗನ್ನಾಥ ಶೆಟ್ಟಿಗಾರ್ ಗಂಭೀರ ಗಾಯಗೊಂಡವರು. ಜಗನ್ನಾಥ ಶೆಟ್ಟಿಗಾರ್ ಇಂದು ಬೆಳಗ್ಗೆ ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ದಾರಿಮಧ್ಯೆ ಅವರ ದ್ವಿಚಕ್ರ ವಾಹನದ ಟಯರ್ ಪಂಕ್ಚರ್

ಕಾರು ಡಿಕ್ಕಿ : ರಸ್ತೆ ಬದಿ ನಿಂತಿದ್ದ ಬೇಕರಿ ಮಾಲೀಕನಿಗೆ ಗಂಭಿರ ಗಾಯ Read More »

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯಿಂದ ಗನ್‌ಮ್ಯಾನ್‌ ಭದ್ರತೆಗೆ ಕೋರಿಕೆ

ನನ್ನ ಮೇಲೂ ದಾಳಿಯಾಗುವ ಸಾಧ್ಯತೆಯಿದೆ ಎಂದು ಎಸ್‌ಐಟಿ ಮುಂದೆ ಹೇಳಿಕೊಂಡ ದೂರುದಾರ ಮಂಗಳೂರು: ಧರ್ಮಸ್ಥಳ ಪ್ರಕರಣದ ಕೇಂದ್ರವಾಗಿರುವ ಮುಸುಕುಧಾರಿ ಅನಾಮಿಕ ವ್ಯಕ್ತಿ ಎಸ್‌ಐಟಿ ಬಳಿ ತನಗೆ ಗನ್‌ಮ್ಯಾನ್‌ ರಕ್ಷಣೆ ನೀಡುವಂತೆ ಕೋರಿಕೆ ಸಲ್ಲಿಸಿದ್ದಾರೆ. ಬುಧವಾರ ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ ಬಳಿಕ ತುಸು ಉದ್ವಿಗ್ನ ವಾತಾವರಣವಿದೆ. ಬುಧವಾರ ಸಂಜೆ ಧರ್ಮಸ್ಥಳದಲ್ಲಿ ನಡೆದ ಘರ್ಷಣೆಯ ಬಳಿಕ ದೂರುದಾರನಿಂದ ಈ ವಿಶೇಷ ಮನವಿ ಬಂದಿದೆ. ನನ್ನ ಮೇಲೂ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಗನ್‌ಮ್ಯಾನ್‌ ನೀಡಬೇಕೆಂದು ಮನವಿ ಮಾಡಿದ್ದಾರೆ.

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯಿಂದ ಗನ್‌ಮ್ಯಾನ್‌ ಭದ್ರತೆಗೆ ಕೋರಿಕೆ Read More »

ಧರ್ಮಸ್ಥಳ ಪ್ರಕರಣ : ಪುನೀತ್‌ ಕೆರೆಹಳ್ಳಿ, ಮಟ್ಟಣ್ಣವರ್‌, ತಿಮರೋಡಿ ವಿರುದ್ಧ ಎಫ್‌ಐಆರ್‌

ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಕೇಸ್‌ ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನಡೆದ ಗುಂಪು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಪುನೀತ್ ಕೆರೆಹಳ್ಳಿ ವಿರುದ್ಧ ಪ್ರತ್ಯೇಕ ದೂರುಗಳು ದಾಖಲಾಗಿವೆ. ಧರ್ಮಸ್ಥಳದಲ್ಲಿ ಬುಧವಾರ ಸಂಭವಿಸಿದ ಗಲಭೆ ಪ್ರಕರಣದಲ್ಲಿ ಗಲಾಟೆಗೆ ಪ್ರಚೋದನೆ ನೀಡಿದ್ದಕ್ಕಾಗಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಪುನೀತ್ ಕೆರೆಹಳ್ಳಿ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಧರ್ಮಸ್ಥಳದಲ್ಲಿ ನಡೆದ ಗಲಭೆಯಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ ಮಾತನಾಡಿದ್ದಾರೆ

ಧರ್ಮಸ್ಥಳ ಪ್ರಕರಣ : ಪುನೀತ್‌ ಕೆರೆಹಳ್ಳಿ, ಮಟ್ಟಣ್ಣವರ್‌, ತಿಮರೋಡಿ ವಿರುದ್ಧ ಎಫ್‌ಐಆರ್‌ Read More »

ಮಂಗಳೂರೇ ಭಾರತದಲ್ಲಿ ಅತ್ಯಂತ ಸುರಕ್ಷಿತ ನಗರ

ಜಾಗತಿಕವಾಗಿ ನಡೆದ ಸಮೀಕ್ಷೆಯಲ್ಲಿ ಕುಡ್ಲಕ್ಕೆ ಸಿಕ್ಕಿದ ಅಪೂರ್ವ ಹಿರಿಮೆ ಮಂಗಳೂರು: ದೇಶದಲ್ಲೇ ಅತ್ಯಂತ ಸುರಕ್ಷಿತ ನಗರ ಎಂದರೆ ನಮ್ಮ ಮಂಗಳೂರು. ಜಾಗತಿಕ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಮಂಗಳೂರಿಗೆ ಈ ಅಪೂರ್ವವಾದ ಹಿರಿಮೆ ಸಿಕ್ಕಿದೆ. ಡೇಟಾ ಸಂಸ್ಥೆ ನಂಬಿಯೊ ಪ್ರಕಟಿಸಿದ 2025ರ ಮಧ್ಯಭಾಗದ ಸುರಕ್ಷತಾ ಸೂಚ್ಯಂಕ ವರದಿಯಲ್ಲಿ ಮಂಗಳೂರು ನಗರ ಭಾರತದ ಅತ್ಯಂತ ಸುರಕ್ಷಿತ ನಗರವೆಂಬ ಸ್ಥಾನವನ್ನು ಪಡೆದುಕೊಂಡಿದೆ. 74.2 ಸುರಕ್ಷತಾ ಅಂಕಗಳೊಂದಿಗೆ ದೇಶದಲ್ಲಿ ಅಗ್ರಸ್ಥಾನದಲ್ಲಿರುವ ಮಂಗಳೂರು ಜಾಗತಿಕ ಮಟ್ಟದಲ್ಲಿ 49ನೇ ಶ್ರೇಯಾಂಕವನ್ನು ಗಳಿಸಿದೆ. ನಗರದ ಈ ಉನ್ನತ

ಮಂಗಳೂರೇ ಭಾರತದಲ್ಲಿ ಅತ್ಯಂತ ಸುರಕ್ಷಿತ ನಗರ Read More »

ಧರ್ಮಸ್ಥಳ: ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಓರ್ವ ಸೆರೆ

150ಕ್ಕೂ ಮಂದಿಯ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಬುಧವಾರ ಸಂಭವಿಸಿದ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಕನ್ಯಾಡಿಯ ನಿವಾಸಿ, ಜೀಪು ಚಾಲಕ ಸೋಮನಾಥ ಸಪಲ್ಯ (48) ಬಂಧಿತ ಆರೋಪಿ. ಆರೋಪಿಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆಂದು ಆರೋಪಿಸಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 150ಕ್ಕೂ ಅಧಿಕ ಜನರ ವಿರುದ್ಧ ಪ್ರತ್ಯೇಕ

ಧರ್ಮಸ್ಥಳ: ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಓರ್ವ ಸೆರೆ Read More »

ಧರ್ಮಸ್ಥಳ ಪ್ರಕರಣ : ಗಿರೀಶ್‌ ಮಟ್ಟಣ್ಣನವರ್‌, ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌

ಖಾಸಗಿ ವಾಹಿನಿ ವರದಿಗಾರರ ಮೇಲೆ ಹಲ್ಲೆ ಮಾಡಿದ ಕೇಸ್‌ ದಾಖಲು ಮಂಗಳೂರು: ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗಿರೀಶ್‌ ಮಟ್ಟಣನವರ್‌ , ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಯೂಟ್ಯೂಬರ್‌ ಸಮೀರ್‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ವರದಿಗಾರ ಹರೀಶ್‌ ಅವರ ದೂರಿನಂತೆ ಬಿಎನ್‌ಎಸ್‌ ಸೆಕ್ಷನ್‌ 115(2), 189(2), 191(2), 351(2), 352, 190 ಅಡಿ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಗಿರೀಶ್‌ ಮಟ್ಟಣನವರ್‌ (ಎ1), ಮಹೇಶ್‌ ಶೆಟ್ಟಿ ತಿಮರೋಡಿ(ಎ2) ಯೂಟ್ಯೂಬರ್‌ ಸಮೀರ್‌(ಎ3),

ಧರ್ಮಸ್ಥಳ ಪ್ರಕರಣ : ಗಿರೀಶ್‌ ಮಟ್ಟಣ್ಣನವರ್‌, ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ Read More »

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ : ಇ.ಡಿ.ಯಿಂದಲೂ ತನಿಖೆ

ಮೂರು ವರ್ಷದ ಹಿಂದೆ ಆಟೋರಿಕ್ಷಾದಲ್ಲಿ ಬಾಂಬ್‌ ಸ್ಫೋಟಗೊಂಡ ಪ್ರಕರಣ ಮಂಗಳೂರು : ಮಂಗಳೂರಿನ ಕಂಕನವಾಡಿ ಬಳಿ 2022ರಲ್ಲಿ ಆಟೋರಿಕ್ಷಾದಲ್ಲಿ ಸಂಭವಿಸಿದ್ದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಗೆ ಈಗ ಜಾರಿ ನಿರ್ದೇಶನಾಲಯ ಎಂಟ್ರಿ ಕೊಟ್ಟಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯಡಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ. ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಮುಖ್ಯ ಆರೋಪಿ ಸೈಯದ್ ಯಾಸೀನ್​ನ ಬ್ಯಾಂಕ್​ ಖಾತೆಯನ್ನು ಜಪ್ತಿ ಮಾಡಲಾಗಿದೆ. ಉಗ್ರ ಸಂಘಟನೆಯನ್ನು ಭಾರತದಾದ್ಯಂತ ವಿಸ್ತರಿಸುವುದು, ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ : ಇ.ಡಿ.ಯಿಂದಲೂ ತನಿಖೆ Read More »

ಧರ್ಮಸ್ಥಳ ಪ್ರಕರಣ : ಬಿಗುವಿನ ಪರಿಸ್ಥಿತಿ ನಡುವೆಯೇ ಇಂದು 13ನೇ ಪಾಯಿಂಟ್‌ ಶೋಧ

ಕ್ಷೇತ್ರಕ್ಕೆ ಅವಮಾನ ಮಾಡುತ್ತಿರುವವರ ವಿರುದ್ಧ ಸಿಡಿದ ಧರ್ಮಸ್ಥಳ ಗ್ರಾಮಸ್ಥರು ಮಂಗಳೂರು: ಬುಧವಾರ ನಡೆದ ಹಲ್ಲೆ, ಘರ್ಷಣೆಯ ಅಹಿತಕರ ಘಟನೆಯ ಬಳಿಕ ಧರ್ಮಸ್ಥಳದ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದ್ದು, ಇದರ ನಡುವೆಯೇ ಇಂದು ಅತಿ ಮಹತ್ವದ್ದು ಎನ್ನಲಾಗಿರುವ 13ನೇ ಪಾಯಿಂಟ್‌ನಲ್ಲಿ ಅಗೆತ ಕಾರ್ಯಾಚರಣೆ ನಡೆಯಲಿದೆ. ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ಉತ್ಖನನ ಕಾರ್ಯ ಕೊನೆಯ ಹಂತಕ್ಕೆ ಬಂದು ನಿಂತಿದೆ. ಈ ನಡುವೆ ಕೊನೆಯ ಪಾಯಿಂಟ್ ಆಗಿರುವ 13ನೇ ಜಾಗದ ಉತ್ಖನನ ವಿಶೇಷ ತನಿಖಾ ತಂಡ ಕಗ್ಗಂಟಾಗಿದೆ. ದೂರುದಾರ ಮುಸುಕುಧಾರಿ ತೋರಿಸಿದ

ಧರ್ಮಸ್ಥಳ ಪ್ರಕರಣ : ಬಿಗುವಿನ ಪರಿಸ್ಥಿತಿ ನಡುವೆಯೇ ಇಂದು 13ನೇ ಪಾಯಿಂಟ್‌ ಶೋಧ Read More »

error: Content is protected !!
Scroll to Top