ದಕ್ಷಿಣ ಕನ್ನಡ

ಹೆಲ್ಪಿಂಗ್ ಫ್ರೆಂಡ್ಸ್ ಪೊಳಲಿ ವತಿಯಿಂದ ಭವತಿ ಭಿಕ್ಷಾಂದೇಹಿ ಮೂಲಕ ಸಹಾಯಧನ ವಿತರಣೆ

ಪೊಳಲಿ: ಹೆಲ್ಪಿಂಗ್ ಫ್ರೆಂಡ್ಸ್ ಪೊಳಲಿ (ರಿ.) ಇದರ 8ನೇ ಸೇವಾ ಯೋಜನೆ ಅಡಿಯಲ್ಲಿ ಭವತಿ ಭಿಕ್ಷಾಂದೇಹಿ ಮೂಲಕ ಪೊಳಲಿ ರಾಜರಾಜೇಶ್ವರಿ ಅಮ್ಮನವರ ಜಾತ್ರಾ ಸಂದರ್ಭದಲ್ಲಿ ನಿಧಿ ಸಂಗ್ರಹಣಾ ಅಭಿಯಾನ ನಡೆಸಲಾಗಿದ್ದು, ಒಟ್ಟುಗೂಡಿದ ಒಟ್ಟು ಮೊತ್ತ 1,98,088 ಅನ್ನು ಪೊಳಲಿ ದೇವಸ್ಥಾನದಲ್ಲಿ ಅತಿಥಿಗಳ ಮೂಲಕ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಸಿದಬಿರುವೆರ್ ಕುಡ್ಲ ಸ್ಥಾಪಕ ಅಧ್ಯಕ್ಷರು ಉದಯ್ ಪೂಜಾರಿ, ಉದ್ಯಮಿ ಪ್ರಸಾದ್ ಗರೋಡಿ, ಖ್ಯಾತ ಯೂಟ್ಯೂಬರ್ ವಿಶ್ವನಾಥ್ ಪೂಜಾರಿ ಮತ್ತು ವಿವಿನ್ ಪೂಜಾರಿ, ಲೈಫ್ ಆಫ್ […]

ಹೆಲ್ಪಿಂಗ್ ಫ್ರೆಂಡ್ಸ್ ಪೊಳಲಿ ವತಿಯಿಂದ ಭವತಿ ಭಿಕ್ಷಾಂದೇಹಿ ಮೂಲಕ ಸಹಾಯಧನ ವಿತರಣೆ Read More »

ಭಾರಿ ಗಾಳಿ ಮಳೆ : ಕಾರಿನ ಮೇಲೆ ಬಿದ್ದ ಮರ

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಅಪಾರ ಹಾನಿ ಬೆಳ್ತಂಗಡಿ: ಬೆಳ್ತಂಗಡಿಯ ಎಲ್ಲೆಡೆ ಸೋಮವಾರ ಸಂಜೆ, ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಬೃಹತ್ ಗಾತ್ರದ ರೆಂಬೆಯೊಂದು ಮುರಿದುಬಿದ್ದು ಕಾರಿಗೆ ಹಾನಿಯಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪತ್ರಕರ್ತರೊಬ್ಬರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಮುಂಡಾಜೆ ಗ್ರಾ.ಪಂ. ವ್ಯಾಪ್ತಿಯ ಚಾಮುಂಡಿ ನಗರ ಪರಿಸರದಲ್ಲಿ ರಾಮಕ್ಕ ಎಂಬವರ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದೆ. ಈ ಪ್ರದೇಶದ ಇನ್ನೂ ನಾಲ್ಕು

ಭಾರಿ ಗಾಳಿ ಮಳೆ : ಕಾರಿನ ಮೇಲೆ ಬಿದ್ದ ಮರ Read More »

46.50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ : ಇಬ್ಬರ ಬಂಧನ

ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಆರೋಪಿಗಳು ಮಂಗಳೂರು: ನಗರ ಜಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಬೃಹತ್ ಪ್ರಮಾಣದ ಎಂಡಿಎಂಎ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭಾನುವಾರ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಪೆರ್ಮಾನ್ನೂರು ಪಿಲಾರು ಹೊಸಗದ್ದೆ ಮನೆ ನಿವಾಸಿ ಪರ್ವೇಜ್ ಅಲಿಯಾಸ್ ದಾವೂದ್ ಪರ್ವೇಜ್ (40) ಮತ್ತು ನಜರತ್ ಅಲಿ (37) ಬಂಧಿತ ಆರೋಪಿಗಳು. ಬೈಕ್‌ನಲ್ಲಿ ಎಂಡಿಎಂಎ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಕಂಕನಾಡಿ ನಗರ ಠಾಣಾ ಪೊಲೀಸರು ಆರೋಪಿಗಳನ್ನು

46.50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ : ಇಬ್ಬರ ಬಂಧನ Read More »

ಬೆಳ್ತಂಗಡಿ : ರೈಲಿನಿಂದ ಬಿದ್ದು ಶಬರಿಮಲೆ ಯಾತ್ರಿಕ ಸಾವು

ಬೆಳ್ತಂಗಡಿ: ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ವಸಂತ ಪೂಜಾರಿ (60) ಎಂದು ಗುರುತಿಸಲಾಗಿದೆ. ಶಬರಿಮಲೆ ಯಾತ್ರೆಗಾಗಿ ಮಂಗಳೂರಿನಿಂದ ಕೇರಳಕ್ಕೆ ರೈಲು ಮೂಲಕ ಅವರು ಏ.17ರಂದು ಪ್ರಯಾಣಿಸಿದ್ದರು. ಅದೇ ದಿನ ರಾತ್ರಿ ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೇರಳದ ತ್ರಿಶೂರ್ ಆಸ್ಪತ್ರೆಗೆ ಅವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶನಿವಾರ ತಡರಾತ್ರಿ ಸಾವನ್ನಪ್ಪಿದ್ದರು. ಭಾನುವಾರ ಮೃತದೇಹವನ್ನು ಸ್ವಗ್ರಾಮಕ್ಕೆ ರವಾನಿಸಲಾಗಿದೆ.

ಬೆಳ್ತಂಗಡಿ : ರೈಲಿನಿಂದ ಬಿದ್ದು ಶಬರಿಮಲೆ ಯಾತ್ರಿಕ ಸಾವು Read More »

ಫಾಲ್ಸ್‌ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ : ಇಬ್ಬರು ಯುವಕರು ಸೆರೆ

ಮೇ 10ರಂದು ವಿವಾಹವಾಗಲಿದ್ದ ಓರ್ವ ಆರೋಪಿ ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರಗೈದ ಆರೋಪದಲ್ಲಿ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್(28) ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನವನೀತ್(26) ಬಂಧಿತ ಆರೋಪಿಗಳು. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ 15 ವರ್ಷದ ಬಾಲಕಿಯನ್ನು ಆರೋಪಿಗಳು ಪುಸಲಾಯಿಸಿ ಏ.16ರಂದು ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಕರೆದೊಯ್ದು ಅತ್ಯಾಚಾರ ಮಾಡಿರುವ ಬಗ್ಗೆ ಸಂತ್ರಸ್ತೆ ಮನೆಯವರಿಗೆ ತಿಳಿಸಿದ್ದಾಳೆ. ಈ

ಫಾಲ್ಸ್‌ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ : ಇಬ್ಬರು ಯುವಕರು ಸೆರೆ Read More »

ಕೊಣಾಜೆ : ಜಾತ್ರೆಗೆಂದು ಹೋದ ಬಾಲಕಿ ನಾಪತ್ತೆ

ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು ಅಡ್ಕದ 16 ವರ್ಷದ ಬಾಲಕಿಯೊಬ್ಬಳು ಏಪ್ರಿಲ್ 12 =ರಿಂದ ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಾಗಿದೆ. ನಾಪತ್ತೆಯಾದ ಬಾಲಕಿಯನ್ನು ಜಗದೀಶ್ ಪೂಜಾರಿ ಮತ್ತು ಗುಲಾಬಿ ದಂಪತಿಯ ಪುತ್ರಿ ಚೈತನ್ಯ ಎಂದು ಗುರುತಿಸಲಾಗಿದೆ. ಹರೇಕಳದ ರಾಮಕೃಷ್ಣ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಈಕೆ, ಇತ್ತೀಚೆಗಷ್ಟೇ ಪರೀಕ್ಷೆ ಮುಗಿಸಿ ಮನೆಯಲ್ಲಿದ್ದಳು. ಬಾಲಕಿಯ ತಾಯಿ ಗುಲಾಬಿ ನೀಡಿದ ದೂರಿನ ಪ್ರಕಾರ, ಏಪ್ರಿಲ್ 12ರಂದು ಬೆಳಗ್ಗೆ ಸುಮಾರು 7.30ಕ್ಕೆ ಸ್ನೇಹಿತರೊಂದಿಗೆ ಪೊಳಲಿ ದೇವಸ್ಥಾನಕ್ಕೆ ಹೋಗುವುದಾಗಿ ತಂದೆಗೆ

ಕೊಣಾಜೆ : ಜಾತ್ರೆಗೆಂದು ಹೋದ ಬಾಲಕಿ ನಾಪತ್ತೆ Read More »

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸಿದ ಅಪರಾಧಿಗೆ 5 ವರ್ಷ ಜೈಲು

ಮಂಗಳೂರು : ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪಿ ಟಿ.ಇ. ಜೋಸೆಫ್ ಎಂಬಾತನಿಗೆ ಮಂಗಳೂರು ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. 2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಲ್ಲಿ ಅಂದಾಜು 50,000 ರೂ.ಮೌಲ್ಯದ 1.500 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c) ಜೊತೆಗೆ 20(b) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸಿದ ಅಪರಾಧಿಗೆ 5 ವರ್ಷ ಜೈಲು Read More »

ಮಂಗಳೂರು : ಲಾಡ್ಜ್‌ನಲ್ಲಿ ತಂಗಿದ್ದವರ ಚಿನ್ನಾಭರಣ ಕಳವು

ಮಂಗಳೂರು : ನಗರದ ಬಿಜೈ ಬಳಿಯ ಖಾಸಗಿ ಲಾಡ್ಜ್‌ವೊಂದರಲ್ಲಿ ಇರಿಸಿದ್ದ ಬ್ಯಾಗ್‌ನಿಂದ ಚಿನ್ನಾಭರಣ ಕಳವಾದ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಬಿಜೈ ಬಳಿಯ ಖಾಸಗಿ ಲಾಡ್ಜ್‌ನಲ್ಲಿ ತಾನು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಏ.13ರಂದು ಬೆಳಗ್ಗೆ 6.30ರಿಂದ ತಂಗಿದ್ದು, ಏ.15ರಂದು ಬೆಳಗ್ಗೆ 8.30ಕ್ಕೆ ತಣ್ಣೀರುಬಾವಿ ಬೀಚ್‌ಗೆ ಹೋಗುವ ವೇಳೆ ಬ್ಯಾಗ್‌ನಲ್ಲಿ ಲ್ಯಾಪ್‌ಟಾಪ್, ಮಕ್ಕಳ ಎರಡು ಉಂಗುರ, ಪತ್ನಿಯ ಒಂದು ಉಂಗುರ ಮತ್ತು ತನಗೆ ಸೇರಿದ ಬ್ರಾಸ್‌ಲೆಟ್‌ಗಳನ್ನಿಟ್ಟು ರೂಮ್‌ಗೆ ಲಾಕ್ ಮಾಡಿ ಕೀಯನ್ನು ಕೊಂಡು ಹೋಗಿದ್ದೆ.

ಮಂಗಳೂರು : ಲಾಡ್ಜ್‌ನಲ್ಲಿ ತಂಗಿದ್ದವರ ಚಿನ್ನಾಭರಣ ಕಳವು Read More »

ಮಂಗಳೂರು: ಲಾಠಿಚಾರ್ಜ್ ಪ್ರಕರಣದ 101 ಆರೋಪಿಗಳು ಖುಲಾಸೆ

2017ರಲ್ಲಿ ನಗರದಲ್ಲಿ ನಡೆದ ಲಾಠಿಚಾರ್ಜ್‌ ಪ್ರಕರಣ ಮಂಗಳೂರು : ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ 2017ರ ಏ.4ರಂದು ನಡೆದ ಲಾಠಿಚಾರ್ಜ್ ಪ್ರಕರಣದ ಎಲ್ಲ 101 ಆರೋಪಿಗಳನ್ನು ಬಿಡುಗಡೆಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಅಹ್ಮದ್ ಖುರೇಶಿ ಎಂಬಾತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸದೆ ದೌರ್ಜನ್ಯ ನಡೆಸಿದ್ದರು ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ಮುಂದಾಗಿದ್ದರು. ಈ ಸಂದರ್ಭ ಪರಿಸ್ಥಿತಿ

ಮಂಗಳೂರು: ಲಾಠಿಚಾರ್ಜ್ ಪ್ರಕರಣದ 101 ಆರೋಪಿಗಳು ಖುಲಾಸೆ Read More »

ಮಾನಸಿಕ ಖಿನ್ನತೆ: ವಿಷ ಕುಡಿದು ಯುವಕ ಆತ್ಮಹತ್ಯೆ

ಕಡಬ: ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ‌ನರಳುತ್ತಿದ್ದ ಯುವಕನೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಳಿಕುಕ್ಕುವಿನಲ್ಲಿ ‌ನಡೆದಿದೆ. ಮೃತನನ್ನು ಅಂಬೆಕಲ್ಲು ‌ನಿವಾಸಿ ಕಿಶನ್ ಎ. ಎಚ್.(32) ಎಂದು ಗುರುತಿಸಲಾಗಿದೆ. ಕಿಶನ್ ಕಳೆದ ಎರಡು ವರ್ಷಗಳಿಂದ ಗುತ್ತಿಗಾರಿನ ಸಂಸ್ಥೆಯೊಂದರಲ್ಲಿ ‌ಲೋನ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ಕೆಲ ಸಮಯದಿಂದ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಅವರ ಸ್ಥಿತಿಗೆ ಕಾರಣ ಏನು ಎನ್ನುವ ಬಗ್ಗೆ ಮನೆಯವರು ವಿಚಾರಣೆ ನಡೆಸಿದರೂ ‌ಸಹ ಯಾವುದೇ ಮಾಹಿತಿಯನ್ನು ಅವರಿಂದ ಪಡೆದುಕೊಳ್ಳಲಾಗುತ್ತಿರಲಿಲ್ಲ ಎಂದು

ಮಾನಸಿಕ ಖಿನ್ನತೆ: ವಿಷ ಕುಡಿದು ಯುವಕ ಆತ್ಮಹತ್ಯೆ Read More »

error: Content is protected !!
Scroll to Top