ದಕ್ಷಿಣ ಕನ್ನಡ

ಬೆಳ್ತಂಗಡಿ : ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಲ್ಲೆಸೆತ

ಬೆಳ್ತಂಗಡಿ: ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಹಾನಿಯುಂಟುಮಾಡಿದ ಘಟನೆ ಮಂಗಳವಾರ ಸಂಭವಿಸಿದ್ದು, ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮಸ್ಥಳ ಡಿಪ್ಪೋದ ಸಂಚಾರ ನಿಯಂತ್ರಕ ಪಿ ದಾವೂದ್ ಎಂಬವರು ಬಸ್ಸಿಗೆ ಅಜ್ಞಾತ ದುಷ್ಕರ್ಮಿಗಳು ಕಲ್ಲು ಹೊಡೆದಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಕೆ.ಎ 21 ಎಫ್ 0103 ನಂಬರ್‌ನ ಬಸ್ಸನ್ನು ಚಾಲಕ ಧರ್ಮಸ್ಥಳದಿಂದ ಸುಬ್ರಹ್ಮಣ್ಯದ ಕಡೆಗೆ ಚಲಾಯಿಸುತ್ತಿದ್ದ ವೇಳೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ […]

ಬೆಳ್ತಂಗಡಿ : ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಲ್ಲೆಸೆತ Read More »

ಧರ್ಮಸ್ಥಳ ಪ್ರಕರಣ ಪಾರದರ್ಶಕ ತನಿಖೆ : ಪರಮೇಶ್ವರ

ಎಸ್‌ಐಟಿ ವಿವೇಚನೆಯಂತೆ ತನಿಖೆ; ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟನೆ ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸಂಪೂರ್ಣ ತನಿಖೆಯನ್ನು ಎಸ್‍ಐಟಿ ಅಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದೇವೆ. ಇದು ಗಂಭೀರವಾದ ಪ್ರಕರಣವಾದ್ದರಿಂದ ಎಚ್ಚರಿಕೆಯಿಂದ ಪಾರದರ್ಶಕವಾಗಿ ತನಿಖೆ ನಡೆಯುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರ ಗುರುತಿಸುವ ಸ್ಥಳಗಳನ್ನು ಎಸ್‍ಐಟಿ ಅಧಿಕಾರಿಗಳು ಅಗೆಯುವ ಬಗ್ಗೆ ತೀರ್ಮಾನ ಮಾಡುತ್ತಾರೆ, ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಎಸ್‍ಐಟಿ ತಂಡ ಪಾರದರ್ಶಕವಾಗಿ ತನಿಖೆ ತನಿಖೆ ನಡೆಸುವ ವಿಶ್ವಾಸವಿದೆ. ಸಂಪೂರ್ಣ ತನಿಖೆ ಬಳಿಕ ವರದಿಯನ್ನು ಸಲ್ಲಿಸಿದಾಗ ಸರ್ಕಾರ

ಧರ್ಮಸ್ಥಳ ಪ್ರಕರಣ ಪಾರದರ್ಶಕ ತನಿಖೆ : ಪರಮೇಶ್ವರ Read More »

ಧರ್ಮಸ್ಥಳ ಪ್ರಕರಣ : ಇಂದು 11ನೇ ಪಾಯಿಂಟ್‌ನಲ್ಲಿ ನೆಲ ಅಗೆಯುವ ಕಾರ್ಯಾಚರಣೆ

ಗುರುತಿಸಿದ ಎಲ್ಲ ಸ್ಥಳಗಳಲ್ಲಿ ಅಗೆಯಲು ತೀರ್ಮಾನ ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನೆಲ ಅಗೆಯುವ ಕಾರ್ಯಾಚರಣೆ ಮಂಗಳವಾರವೂ ಮುಂದುವರಿದಿದೆ. ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ದೂರುದಾರ ಈ ಹಿಂದೆ ಗುರುತಿಸಿದ್ದ 11ನೇ ಪಾಯಿಂಟ್‌ನಲ್ಲಿ ಎಸ್ಐಟಿ ಇಂದು ಶೋಧ ಕಾರ್ಯಾಚರಣೆ ಆರಂಭಿಸಿದೆ. ಸೋಮವಾರದ ಕಾರ್ಯಾಚರಣೆಯ ವೇಳೆ ದೂರುದಾರ ಈ ಹಿಂದೆ ತೋರಿಸಿದ್ದ 11ನೇ ಜಾಗಕ್ಕಿಂತ ಮುಂದಕ್ಕೆ ಕಾಡಿನೊಳಗೆ ಎಸ್ಐಟಿ ಅಧಿಕಾರಿಗಳನ್ನು ಕರೆದೊಯ್ದಿದ್ದು, ಅಲ್ಲಿ ನೆಲದ ಮೇಲೆಯೇ ಅಸ್ಥಿಪಂಜರದ ಅವಶೇಷಗಳು ಸಿಕ್ಕಿವೆ. ಅವುಗಳನ್ನು ತಜ್ಞರ

ಧರ್ಮಸ್ಥಳ ಪ್ರಕರಣ : ಇಂದು 11ನೇ ಪಾಯಿಂಟ್‌ನಲ್ಲಿ ನೆಲ ಅಗೆಯುವ ಕಾರ್ಯಾಚರಣೆ Read More »

ಉಪ್ಪಿನಂಗಡಿ : ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳನ ಬಂಧನ

ಐದು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಆರೋಪಿ ಉಪ್ಪಿನಂಗಡಿ : ಹಲವು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಮೂಲದ ಆರೋಪಿ ಸೊಹೈಲ್ ಅಲಿಯಾಸ್ ಸೊಹಿಬ್‌ನನ್ನು (24) ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಒಟ್ಟು ಎಂಟು ಕಳ್ಳತನ ಪ್ರಕರಣಗಳಲ್ಲಿ ಸೊಹೈಲ್ ಭಾಗಿಯಾಗಿರುವುದನ್ನು ಪತ್ತೆಹಚ್ಚಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 2020 ಮತ್ತು 2022ರಲ್ಲಿ ಅವನ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. 2020ರಲ್ಲಿ ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ತಲಾ ಒಂದು

ಉಪ್ಪಿನಂಗಡಿ : ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳನ ಬಂಧನ Read More »

ಧರ್ಮಸ್ಥಳ ಪ್ರಕರಣ : 15 ವರ್ಷದ ಬಾಲಕಿಯ ಕೊಳೆತ ಶವ ಹೂತಿದ್ದಾರೆ ಎಂದು ದೂರು

ದಿನಕ್ಕೊಂದು ತಿರುವು ಪಡೆಯುತ್ತಿರುವ ಶವ ಹುಡುಕಾಟ ಕಾರ್ಯಾಚರಣೆ ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ನಿಗೂಢ ಸರಣಿ ಸಾವುಗಳ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಸೋಮವಾರ ಮತ್ತೊಂದು ದೂರು ನೀಡಲಾಗಿದೆ. ಬೆಳ್ತಂಗಡಿ ತಾಲೂಕಿನ ಇಚಿಲಂಪಾಡಿ ನಿವಾಸಿ ಸಾಮಾಜಿಕ ಹೋರಾಟಗಾರ ಜಯಂತ್ ಸೋಮವಾರ ಮೂವರು ವ್ಯಕ್ತಿಗಳ ಜೊತೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಹೋಗಿ 15 ವರ್ಷಗಳ ಹಿಂದೆ ನಡೆದ ಹದಿಹರೆಯದ ಬಾಲಕಿಯ ನಿಗೂಢ ಸಾವು ಸಂಭವಿಸಿದೆ ಎಂದು

ಧರ್ಮಸ್ಥಳ ಪ್ರಕರಣ : 15 ವರ್ಷದ ಬಾಲಕಿಯ ಕೊಳೆತ ಶವ ಹೂತಿದ್ದಾರೆ ಎಂದು ದೂರು Read More »

ಬಂಟ್ವಾಳ: ಗಿಫ್ಟ್‌ ಪಾರ್ಸೆಲ್‌ ನಂಬಿ 2.35 ಲ.ರೂ. ಕಳೆದುಕೊಂಡ ಮಹಿಳೆ

ಬಂಟ್ವಾಳ : ನಿಮಗೆ ಗಿಫ್ಟ್‌ ಪಾರ್ಸೆಲ್‌ ಇದೆ ಎಂದು ನಂಬಿಸಿ ಬಂಟ್ವಾಳದ ಮಹಿಳೆಯೊಬ್ಬರಿಗೆ ಸೈಬರ್‌ ಚೋರರು 2.35 ಲ.ರೂ. ವಂಚಿಸಿದ ಕುರಿತು ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳದ ಭಾರತಿ ಕೆ. ಎಂಬ ಮಹಿಳೆಗೆ ಕಳೆದ ವರ್ಷ ಡಿ.3ರಂದು ದೆಹಲಿಯ ಡಿಎಚ್‌ಎಲ್‌ ಕೊರಿಯರ್‌ ಸಂಸ್ಥೆಯಿಂದ ಎಂದು ಹೇಳಿಕೊಂಡು ವಂಚಕರು ಕರೆ ಮಾಡಿದ್ದಾರೆ. ಚಿನ್ನ, ಐಫೋನ್‌ ಮತ್ತು 49 ಲ.ರೂ. ಮೌಲ್ಯದ ಕರೆನ್ಸಿ ಪಾರ್ಸೆಲ್‌ ಇದೆ. ಅದನ್ನು ಬಿಡಿಸಿಕೊಳ್ಳಬೇಕಾದರೆ ಮುಂಗಡವಾಗಿ ತೆರಿಗೆ ಪಾವತಿಸಬೇಕೆಂದು ಎಂದು ಮಹಿಳೆಯನ್ನು ನಂಬಿಸಿದ್ದಾರೆ.

ಬಂಟ್ವಾಳ: ಗಿಫ್ಟ್‌ ಪಾರ್ಸೆಲ್‌ ನಂಬಿ 2.35 ಲ.ರೂ. ಕಳೆದುಕೊಂಡ ಮಹಿಳೆ Read More »

ಧರ್ಮಸ್ಥಳ ಪ್ರಕರಣ : ಕಳೇಬರಗಳ ಪತ್ತೆಗೆ ಜಿಪಿಆರ್‌ ಬಳಸಲು ಒತ್ತಾಯ

ಭೂಮಿಯಡಿಯಲ್ಲಿರುವ ವಸ್ತುಗಳನ್ನು ನಿಖರವಾಗಿ ಗುರುತಿಸುವ ಅತ್ಯಾಧುನಿಕ ರೇಡಾರ್‌ ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಪತ್ತೆ ಕಾರ್ಯಾಚರಣೆ ಮುಂದುವರಿಯುತ್ತಿದೆ. ಆದರೆ ಇಷ್ಟರತನಕ ನಿರ್ಣಾಯಕ ಎನ್ನಬಹುದಾದ ಯಾವುದೇ ಸಾಕ್ಷಿಗಳು ಸಿಗದಿರುವ ಹಿನ್ನೆಲೆಯಲ್ಲಿ ಗ್ರೌಂಡ್‌ ಪೆನೆಟ್ರೇಟಿಂಗ್‌ ರೇಡಾರ್‌ (ಜಿಪಿಆರ್) ಬಳಸಿ ಹೂತ ಹೆಣಗಳ ಶೋಧ ಕಾರ್ಯ ನಡೆಸಬೇಕೆಂಬ ಒತ್ತಾಯ ಬಲವಾಗುತ್ತಿದೆ. ಜಿಪಿಆರ್ ಬಳಸುವಂತೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಎಂಬವರ ತಾಯಿ ಸುಜಾತಾ

ಧರ್ಮಸ್ಥಳ ಪ್ರಕರಣ : ಕಳೇಬರಗಳ ಪತ್ತೆಗೆ ಜಿಪಿಆರ್‌ ಬಳಸಲು ಒತ್ತಾಯ Read More »

ಧರ್ಮಸ್ಥಳ ಪ್ರಕರಣಕ್ಕೆ ಇನ್ನೋರ್ವ ದೂರುದಾರ ಎಂಟ್ರಿ

ಯುವತಿಯ ಶವ ಹೂತು ಹಾಕಿದ್ದನ್ನು ನೋಡಿದ್ದೇನೆ ಎಂದ ಸ್ಥಳೀಯ ಹೋರಾಟಗಾರ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಮೃತದೇಹಗಳನ್ನು ಹೂತು ಹಾಕಿರುವ ಘಟನೆಗೆ ತನಿಖೆ ಮುಂದುವರಿದಿರುವಂತೆ ಇನ್ನೋರ್ವ ವ್ಯಕ್ತಿ ದೂರು ದಾಖಲಿಸಿದ್ದಾರೆ. ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರಾದ ಸಾಮಾಜಿಕ ಹೋರಾಟಗಾರ ಜಯಂತ್ ಟಿ ಎಂಬವರು ತಾನು ನೋಡಿದ್ದೇನೆ ಎಂದು ಹೇಳಿಕೊಂಡ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ. ಸ್ಥಳೀಯ ನಿವಾಸಿ ಜಯಂತ್ ಟಿ. ಬೆಳ್ತಂಗಡಿಯ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಶನಿವಾರ ಹಾಜರಾಗಿ, ದಶಕದ ಹಿಂದೆ ನಡೆದ ಅನುಮಾನಾಸ್ಪದ

ಧರ್ಮಸ್ಥಳ ಪ್ರಕರಣಕ್ಕೆ ಇನ್ನೋರ್ವ ದೂರುದಾರ ಎಂಟ್ರಿ Read More »

ಕಾಣಿಕೆ ಡಬ್ಬಿಯ ಹಣ ಕಳವು : ಮೂವರು ಸೆರೆ

ರಸ್ತೆ ಬದಿ ಅಳವಡಿಸಿದ್ದ ಕಾಣಿಕೆ ಡಬ್ಬಿಯ ಬೀಗ ಒಡೆದು ಹಣ ಕದ್ದ ಯುವಕರು ವಿಟ್ಲ: ಕನ್ಯಾನ ಗ್ರಾಮದ ದೇಲಂತಬೆಟ್ಟುವಿನಲ್ಲಿ ರಸ್ತೆ ಬದಿಯಲ್ಲಿದ್ದ ಎರಡು ಕಾಣಿಕೆ ಡಬ್ಬಿಗಳಲ್ಲಿದ್ದ ಹಣ ಕದ್ದ ಮೂವರನ್ನು ವಿಟ್ಲ ಪೊಲೀಸರು ಬಂದಿಸಿದ್ದಾರೆ. ವಿಟ್ಲ ಕಸಬಾ ಗ್ರಾಮದ ತ್ವಾಹಿದ್‌ (19), ಉಮ್ಮರ್‌ ಫಾರೂಕ್‌ (18) ಮತ್ತು ನಬೀಲ್‌( 18) ಆರೋಪಿಗಳು. ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ ಡಿ.ನಾರಾಯಣ ರಾವ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾರಾಯಣ ಅವರು ಅಧ್ಯಕ್ಷರಾಗಿರುವ ಧಾರ್ಮಿಕ ಕೇಂದ್ರಕ್ಕೆ

ಕಾಣಿಕೆ ಡಬ್ಬಿಯ ಹಣ ಕಳವು : ಮೂವರು ಸೆರೆ Read More »

ವಿಟ್ಲ : ಆವರಣ ಗೋಡೆಗೆ ಖಾಸಗಿ ಬಸ್‌ ಡಿಕ್ಕಿ, ಪ್ರಯಾಣಿಕರಿಗೆ ಗಾಯ

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಆವರಣ ಗೋಡೆಗೆ ಡಿಕ್ಕಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ವಿಟ್ಲದಲ್ಲಿ ಶನಿವಾರ ಸಂಜೆ ನಡೆದಿದೆ. ವಿಟ್ಲ ಕೆ.ಎಸ್.ಆರ್.ಟಿ.ಸಿ.ನಿಲ್ದಾಣದ ಬಳಿ ಖಾಸಗಿ ಬಸ್ಸಿನ ಬ್ರೇಕ್ ವೈಫಲ್ಯದಿಂದ ರಸ್ತೆ ಬದಿಯ ಆವರಣ ಗೋಡೆಗೆ ಢಿಕ್ಕಿಯಾಗಿದೆ. ಅಪಘಾತದಲ್ಲಿ ಆವರಣ ಗೋಡೆ ಕುಸಿದುಬಿದ್ದಿದ್ದು, ಬಸ್ ಮುಂಭಾಗ ನಜ್ಜುಗುಜ್ಜಾಗಿದೆ. 17ಕ್ಕೂ ಅಧಿಕ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ವಿಟ್ಲದಿಂದ ಕನ್ಯಾನಕ್ಕೆ ಬಸ್ ತೆರಳುವ ಸಂದರ್ಭ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ವಿಟ್ಲ ಎಸ್.ಐ.ರಾಮಕೃಷ್ಣ

ವಿಟ್ಲ : ಆವರಣ ಗೋಡೆಗೆ ಖಾಸಗಿ ಬಸ್‌ ಡಿಕ್ಕಿ, ಪ್ರಯಾಣಿಕರಿಗೆ ಗಾಯ Read More »

error: Content is protected !!
Scroll to Top