ಬೆಳ್ತಂಗಡಿ : ಕೆಎಸ್ಆರ್ಟಿಸಿ ಬಸ್ಸಿಗೆ ಕಲ್ಲೆಸೆತ
ಬೆಳ್ತಂಗಡಿ: ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಹಾನಿಯುಂಟುಮಾಡಿದ ಘಟನೆ ಮಂಗಳವಾರ ಸಂಭವಿಸಿದ್ದು, ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮಸ್ಥಳ ಡಿಪ್ಪೋದ ಸಂಚಾರ ನಿಯಂತ್ರಕ ಪಿ ದಾವೂದ್ ಎಂಬವರು ಬಸ್ಸಿಗೆ ಅಜ್ಞಾತ ದುಷ್ಕರ್ಮಿಗಳು ಕಲ್ಲು ಹೊಡೆದಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಕೆ.ಎ 21 ಎಫ್ 0103 ನಂಬರ್ನ ಬಸ್ಸನ್ನು ಚಾಲಕ ಧರ್ಮಸ್ಥಳದಿಂದ ಸುಬ್ರಹ್ಮಣ್ಯದ ಕಡೆಗೆ ಚಲಾಯಿಸುತ್ತಿದ್ದ ವೇಳೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ […]
ಬೆಳ್ತಂಗಡಿ : ಕೆಎಸ್ಆರ್ಟಿಸಿ ಬಸ್ಸಿಗೆ ಕಲ್ಲೆಸೆತ Read More »










