ದಕ್ಷಿಣ ಕನ್ನಡ

ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜು | ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ | ದಿನಪತ್ರಿಕೆ ಓದುವುದನ್ನು ತಪ್ಪದೇ ರೂಢಿಸಿಕೊಳ್ಳಿ : ಬಿ.ವಿ.ಸೂರ್ಯನಾರಾಯಣ

ಬೆಳ್ಳಾರೆ : ವಿದ್ಯಾರ್ಥಿ ಜೀವನದಲ್ಲಿ ಉದ್ಯೋಗಕ್ಕೆ ಪೂರಕವಾಗಿ ಸುತ್ತಮುತ್ತಲಿನ ಆಗು ಹೋಗುಗಳನ್ನು ಸದಾ ಗಮನಿಸುತ್ತಿರಬೇಕು. ಆ ಗಮನ ಹರಿಸುವಿಕೆಯ ಚಟುವಟಿಕೆಯಲ್ಲಿ ದಿನಪತ್ರಿಕೆ ಓದುವುದು ಮುಖ್ಯವಾದದು ಎಂದು ವಿಶ್ರಾಂತ ಪ್ರಾಂಶುಪಾಲ‌ ಬಿ.ವಿ.ಸೂರ್ಯನಾರಾಯಣ ಹೇಳಿದರು. ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜು ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಮೇ 24 ರಂದು ಕಾಲೇಜಿನ ಸಭಾಂಗಣದಲ್ಲಿ ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಅವರು ಉಪನ್ಯಾಸ ನೀಡಿದರು. ಉದ್ಯೋಗ ಸಂಬಂಧಿತ ಅವಕಾಶಗಳ ಬಗ್ಗೆ ದಿನಪತ್ರಿಕೆಗಳು […]

ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜು | ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ | ದಿನಪತ್ರಿಕೆ ಓದುವುದನ್ನು ತಪ್ಪದೇ ರೂಢಿಸಿಕೊಳ್ಳಿ : ಬಿ.ವಿ.ಸೂರ್ಯನಾರಾಯಣ Read More »

ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಮರ |   ಚಾಲಕನಿಗೆ ಗಾಯ

ಅನಂತಾಡಿ: ದಕ್ಷಿಣ ಕನ್ನಡದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅನೇಕ ಅವಘಡವಾಗುತ್ತಿದ್ದು, ಇದೀಗ ಅನಂತಾಡಿ ಗೋಳಿಕಟ್ಟೆಯಲ್ಲಿ ಜೋರಾದ ಗಾಳಿ, ಮಳೆಗೆ ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರ ಬಿದ್ದ ದುರ್ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ. ಆಟೋ ಚಾಲಕರಾದ ಪ್ರಕಾಶ್ ಅವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಟೋರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದೆ. ವಿಟ್ಲ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದು. ಹೆಚ್ಚಿನ ವಿವರಗಳನ್ನು ಕಲೆಹಾಕುತ್ತಿದ್ದಾರೆ.

ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಮರ |   ಚಾಲಕನಿಗೆ ಗಾಯ Read More »

ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರ  15ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ | ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಆನೆಗುಂದಿ ಸರಸ್ವತಿ ಪೀಠದ ಜಗದ್ಗುರು ಅನಂತಶ್ರೀ ವಿಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 15ನೇ ವರ್ಧಂತ್ಯುತ್ಸವದ ಸಮಾರಂಭದಲ್ಲಿ ಶಿಕ್ಷಣ,ಸಾಹಿತ್ಯ,ಸಂಶೋಧನೆ, ಪಂಚಶಿಲ್ಪಕ್ಷೇತ್ರದ ಕ್ರಿಯಾಶೀಲ ಸಾಧಕರಿಗೆ ಕಟಪಾಡಿ ಪಡುಕುತ್ಯಾರು ಗುರುಪೀಠದಲ್ಲಿ ರಾಷ್ಟ್ರೀಯ ಪ್ರಶಸ್ತಿ ಮತ್ತು ಆನೆಗುಂದಿ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆನೆಗುಂದಿ ಪ್ರತಿಷ್ಠಾನದ ಉಪಾಧ್ಯಕ್ಷ ಕೆ ಪ್ರಭಾಕರ್ ಆಚಾರ್ಯ ಕೋಟೆಕಾರು ಅಧ್ಯಕ್ಷತೆ ವಹಿಸಿದ್ದರು. ಮೂಡಬಿದ್ರೆ ಎಸ್ ಕೆ ಎಫ್ ಸಂಸ್ಥೆಯ ಜಿ ರಾಮಕೃಷ್ಣ ಆಚಾರ್, ಮೈಸೂರು ವಿ.ವಿಯ ಡಾ. ಬಿ ಶ್ರೀಕಂಠಚಾರ್, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ

ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರ  15ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ | ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ Read More »

ಯುವಕನಿಗೆ  ಜಾತಿ ನಿಂದನೆ ಜೀವ ಬೆದರಿಕೆ ಪ್ರಕರಣ | ಇಬ್ಬರು ಆರೋಪಿಗಳು ಬಂಧನ

ಬೆಳ್ತಂಗಡಿ : ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ಶಿಬಾಜೆಯಲ್ಲಿ ನಡೆದಿದೆ. ಘಟನಾ ಕುರಿತು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಬಂಧಿತ ಆರೋಪಿಗಳಾಗಿದ್ದಾರೆ. ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೇಳೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಹಲ್ಲೆಗೆ ಯತ್ನಿಸಿದ್ಧಾರೆ. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು

ಯುವಕನಿಗೆ  ಜಾತಿ ನಿಂದನೆ ಜೀವ ಬೆದರಿಕೆ ಪ್ರಕರಣ | ಇಬ್ಬರು ಆರೋಪಿಗಳು ಬಂಧನ Read More »

ಬೇಕರಿ ಮಾಲೀಕನಿಗೆ ರಿಕ್ಷಾ ಚಾಲಕನಿಂದ ಹಲ್ಲೆಗೆ ಯತ್ನ | ಠಾಣೆಗೆ ದೂರು

ತೊಕ್ಕೊಟ್ಟು:  ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನು ಬದಿಗೆ ಸರಿಸಲು ಹೇಳಿದ್ದಕ್ಕೆ ಕುಪಿತಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ತೊಕ್ಕೊಟ್ಟು ಜಂಕ್ಷನ್ ನಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ. ಮಾರುತಿ ಸ್ವೀಟ್ಸ್ ಮಾಲೀಕರಾದ ಅಶ್ವಿನ್ ಕುಮಾರ್ ಅವರು ತಮ್ಮ ಬೇಕರಿ ಮುಂದುಗಡೆಯೇ ಅಡ್ಡಲಾಗಿ ನಿಲ್ಲಿಸಿದ್ದ ಟೆಂಪೋ ರಿಕ್ಷಾ ಸ್ವಲ್ಪ ಬದಿಗೆ ಸರಿಸುವಂತೆ ಚಾಲಕ ಬಶೀರ್ ನಲ್ಲಿ

ಬೇಕರಿ ಮಾಲೀಕನಿಗೆ ರಿಕ್ಷಾ ಚಾಲಕನಿಂದ ಹಲ್ಲೆಗೆ ಯತ್ನ | ಠಾಣೆಗೆ ದೂರು Read More »

ವಿದ್ಯಾ ಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸಿದ ಬುನಾದಿ ಶಿಕ್ಷಣ ಚಿಂತನಾ ಬೈಠಕ್ ‘ ಅಂಕುರ-25 ‘ ಉದ್ಘಾಟನೆ.

ಮಾನವನ ಶರೀರವು ಪಂಚಭೂತಗಳಿಂದ ನಿರ್ಮಿತವಾಗಿದೆ.ಅದು ಪಂಚಕರ್ಮಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಶಾಲೆಯಲ್ಲಿ  ವಿದ್ಯಾರ್ಥಿಗಳ ಬೆಳವಣಿಗೆಗೆ ಬುನಾದಿ ಶಿಕ್ಷಣವನ್ನು ಸಮರ್ಪಕವಾಗಿ ಬಳಸಬೇಕು. ಅದಕ್ಕಾಗಿ ಇಂತಹ ತರಬೇತಿಯು ಅಗತ್ಯವಿದೆ. ವಿದ್ಯಾಭಾರತಿ ಕರ್ನಾಟಕ ತನ್ನ ಶೈಕ್ಷಣಿಕ ಸಂಯೋಜಿತ ಸಂಸ್ಥೆಯ ಗುರೂಜಿ ಮಾತಾಜಿಯವರಿಗೆ ಔಚಿತ್ಯ ಪೂರ್ಣವಾಗಿ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಯಿಂದ ನೀಡುವುದು ಶ್ಲಾಘನೀಯ ಎಂದು ಅಧ್ಯಕ್ಷರು ಶಾಂತಿಧಾಮ ಪೂರ್ವ ಗುರುಕುಲ ಕೋಟೇಶ್ವರದ ಕೃಷ್ಣರಾಯ ಶಾನುಭಾಗ್ ಹೇಳಿದರು. ಶಾಂತಿಧಾಮ ಪೂರ್ವ ಗುರುಕುಲ ಕೋಟೇಶ್ವರ ಸಂಸ್ಥೆಯಲ್ಲಿ ನಡೆದ ಬುನಾದಿ ಶಿಕ್ಷಣ ಚಿಂತನ ಬೈಠಕ್ ಅಂಕುರ – 25 

ವಿದ್ಯಾ ಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸಿದ ಬುನಾದಿ ಶಿಕ್ಷಣ ಚಿಂತನಾ ಬೈಠಕ್ ‘ ಅಂಕುರ-25 ‘ ಉದ್ಘಾಟನೆ. Read More »

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಶಿಕ್ಷಕ ಶ್ರೀ ದೇವಲ ನಾಯ್ಕ ರಾಷ್ಟ್ರ ಮಟ್ಟಕ್ಕೆ  ಆಯ್ಕೆ

ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೊಡ್ಡ ಮತ್ತಲಿಯ ಶಿಕ್ಷಕರಾದ ಶ್ರೀ ದೇವಲ ನಾಯ್ಕ ಆಯ್ಕೆಯಾಗಿದ್ದಾರೆ. ಶ್ರೀ ದೇವಲ ನಾಯ್ಕರು ಪಿಎಂಶ್ರೀ ವೀರಮಂಗಲದಲ್ಲಿ ಶಿಕ್ಷಕರಾಗಿ ಸೇವೆಯನ್ನು  ನಿರ್ವಸಿದ್ದರು.

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಶಿಕ್ಷಕ ಶ್ರೀ ದೇವಲ ನಾಯ್ಕ ರಾಷ್ಟ್ರ ಮಟ್ಟಕ್ಕೆ  ಆಯ್ಕೆ Read More »

ತುಳುನಾಡ ಮಾಣಿಕ್ಯ ಅರವಿಂದ್ ಬೋಳಾರ್ ಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಕಡೆಯಿಂದ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿಯ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ  ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ ಜನ ಇಲ್ಲದಿದ್ದರೆ ನಾನಿಲ್ಲ ನಗು ಇಲ್ಲದಿದ್ದರೆ ಜನರೇ ಇದ್ದಂಗೆ ಇರುವುದಿಲ್ಲ ಎಂದು ಅವರು ಮಾರ್ಮಿಕವಾಗಿ ತಿಳಿಸಿದರು. ಬೋಳಾರ್ ಅವರನ್ನು ನೋಡುವಾಗಲೇ ನಗು ಬರುತ್ತದೆ ಮತ್ತು ಡೈಲಾಗ್ ಪಂಚ್ ನಮಗೆ ಮತ್ತಷ್ಟು ಸಂತೋಷ ಕೊಡುತ್ತದೆ. ಎಂದು   ಮುಳಿಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ

ತುಳುನಾಡ ಮಾಣಿಕ್ಯ ಅರವಿಂದ್ ಬೋಳಾರ್ ಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಕಡೆಯಿಂದ ಸನ್ಮಾನ Read More »

ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಸಮುದಾಯ ಭವನ | ಸುಳ್ಯ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ ಅವರಿಂದ ಭವನ ನಿರ್ಮಾಣ ಕಾರ್ಯ ವೀಕ್ಷಣೆ

ಕಡಬ : ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಸಮುದಾಯ ಭವನಕ್ಕೆ, ಶಿಕ್ಷಣ ಕ್ರಾಂತಿಯ ಹರಿಕಾರರಾದ ದಿ. ಕುರುಂಜಿ ವೆಂಕಟರಮಣ ಗೌಡ ಅವರ ಸುಪುತ್ರರಾದ ಸುಳ್ಯ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ ಆಗಮಿಸಿ, ಸಮುದಾಯ ಭವನ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ಕೆ.ವಿ.ಜಿ ಕುಟುಂಬದ ಹೆಸರು ನಮ್ಮ ಸಮುದಾಯ ಭವನದಲ್ಲಿ ಅಚ್ಚಳಿಯದೆ ಉಳಿಯುವಂತಹ, ನಮ್ಮ  ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಬೇಡಿಕೆಯನ್ನು ನೆರೆವೇರಿಸುವ ಸಂಪೂರ್ಣ ಭರವಸೆ ಈ

ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಸಮುದಾಯ ಭವನ | ಸುಳ್ಯ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ ಅವರಿಂದ ಭವನ ನಿರ್ಮಾಣ ಕಾರ್ಯ ವೀಕ್ಷಣೆ Read More »

ಮಂಗಳೂರು ಜೈಲಿನಲ್ಲಿ ಮತ್ತೆ ಹೊಡೆದಾಟ

ಮಂಗಳೂರು: ಕೋಡಿಯಾಲ್‌ ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಇಂದು ಮಧ್ಯಾಹ್ನ ಕೈದಿಗಳ ಮಧ್ಯೆ ಮತ್ತೆ ಹೊಡೆದಾಟ ನಡೆದಿರುವ ಕುರಿತು ವರದಿಯಾಗಿದೆ. ಅಡುಗೆ ಮಾಡುತ್ತಿದ್ದ ಕೈದಿ ಅಕ್ಷಿತ್ ಎಂಬಾತನಿಗೆ ಅಬ್ದುಲ್ ರಹ್ಮಾನ್ ಯಾನೆ ಮುನ್ನಿ ಯಾನೆ ಮುನೀರ್, ಉಮರ್ ಶಿಹಾಬ್ ಮತ್ತಿತರರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಇದರಿಂದ ಕೆಲಕಾಲ ಜೈಲಿನೊಳಗೆ ಆತಂಕದ ವಾತಾವರಣ ಸೃಷ್ಟಿಯಾಯಿತು ಎಂದು ತಿಳಿದು ಬಂದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಜೈಲಿಗೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳೂರು ಜೈಲಿನಲ್ಲಿ ಮತ್ತೆ ಹೊಡೆದಾಟ Read More »

error: Content is protected !!
Scroll to Top