ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು | ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ | ದಿನಪತ್ರಿಕೆ ಓದುವುದನ್ನು ತಪ್ಪದೇ ರೂಢಿಸಿಕೊಳ್ಳಿ : ಬಿ.ವಿ.ಸೂರ್ಯನಾರಾಯಣ
ಬೆಳ್ಳಾರೆ : ವಿದ್ಯಾರ್ಥಿ ಜೀವನದಲ್ಲಿ ಉದ್ಯೋಗಕ್ಕೆ ಪೂರಕವಾಗಿ ಸುತ್ತಮುತ್ತಲಿನ ಆಗು ಹೋಗುಗಳನ್ನು ಸದಾ ಗಮನಿಸುತ್ತಿರಬೇಕು. ಆ ಗಮನ ಹರಿಸುವಿಕೆಯ ಚಟುವಟಿಕೆಯಲ್ಲಿ ದಿನಪತ್ರಿಕೆ ಓದುವುದು ಮುಖ್ಯವಾದದು ಎಂದು ವಿಶ್ರಾಂತ ಪ್ರಾಂಶುಪಾಲ ಬಿ.ವಿ.ಸೂರ್ಯನಾರಾಯಣ ಹೇಳಿದರು. ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಮೇ 24 ರಂದು ಕಾಲೇಜಿನ ಸಭಾಂಗಣದಲ್ಲಿ ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಅವರು ಉಪನ್ಯಾಸ ನೀಡಿದರು. ಉದ್ಯೋಗ ಸಂಬಂಧಿತ ಅವಕಾಶಗಳ ಬಗ್ಗೆ ದಿನಪತ್ರಿಕೆಗಳು […]