ದಕ್ಷಿಣ ಕನ್ನಡ

ವಿದೇಶದಲ್ಲಿ ಉದ್ಯೋಗ ಕೊಡುವುದಾಗಿ ನಂಬಿಸಿ ವಂಚನೆ : ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಕೋಟ್ಯಾಂತರ ವಂಚಿಸಿದ ಕುರಿತು ಮಂಗಳೂರು ಪೂರ್ವ ಠಾಣೆಯಲ್ಲಿ ಇಬ್ಬರ ಮೇಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರಿನ ಬೆಂದೂರ್ ವೆಲ್ ಎಂಬಲ್ಲಿ Hiruglim Elegant Overseas International (Opc) Private Limited ಹೆಸರಿನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ನಂಬಿಕೆ ಬರುವ ಹಾಗೇ ನಂಬಿಸಿ ಅವರಿಂದ ಲಕ್ಷಾಂತರ ಹಣವನ್ನು ಪಡೆದುಕೊಂಡು ವೀಸಾ ನೀಡದೇ ಸುಮಾರು 259 ಜನರಿಗೆ ಸುಮಾರು 4 ಕೋಟಿ 50 ಲಕ್ಷ ರೂಪಾಯಿ ವಂಚನೆ ಮಾಡಿದ ಬಗ್ಗೆ ಮಂಗಳೂರು […]

ವಿದೇಶದಲ್ಲಿ ಉದ್ಯೋಗ ಕೊಡುವುದಾಗಿ ನಂಬಿಸಿ ವಂಚನೆ : ಇಬ್ಬರು ಆರೋಪಿಗಳ ಬಂಧನ Read More »

ಮಂಗಳೂರಿನ ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 3.16 ಕೋಟಿ ರೂ. ಲೂಟಿ

ಪತಿಯ ಹೆಸರಿನಲ್ಲಿ ಸಿಮ್‌ ಖರೀದಿಸಿ ವಂಚನೆ ಎಸಗಲಾಗಿದೆ ಎಂದು ಬೆದರಿಸಿದ್ದ ವಂಚಕರು ಮಂಗಳೂರು : ಮಂಗಳೂರಿನ ಮಹಿಳೆಯೊಬ್ಬರನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಬರೋಬ್ಬರಿ 3.16 ಕೋಟಿ ರೂ. ಖಾತೆಯಿಂದ ಎಗರಿಸಿದ ಕುರಿತು ದೂರು ದಾಖಲಾಗಿದೆ. ಮಹಿಳೆಯ ಪತಿಯ ಹೆಸರಿನಲ್ಲಿ ಹೊಸ ಸಿಮ್ ಖರೀದಿಸಿ ಅದರಿಂದ ವಂಚನೆಯ ಕರೆ ಮಾಡಲಾಗಿದೆ ಮತ್ತು ಸಂಶಯಾಸ್ಪದ ಲಿಂಕ್ ಕಳುಹಿಸಲಾಗಿದೆ ಎಂದು ನಂಬಿಸಿದ ಸೈಬರ್ ವಂಚಕರು 3,16,52,142 ರೂ. ಲೂಟಿ ಮಾಡಿದ್ದಾರೆ. ಜೂನ್ 5ರಂದು ಮುಂಬೈ ಸಹಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅನುಶರ್ಮ

ಮಂಗಳೂರಿನ ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 3.16 ಕೋಟಿ ರೂ. ಲೂಟಿ Read More »

ಡಿವೈಡರ್ ಗೆ ಕಾರು ಡಿಕ್ಕಿ : ಚಾಲಕ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಪಾವೂರು ನಿವಾಸಿ ನೌಫಲ್ ಅಪಘಾತದಿಂದ ಮೃತಪಟ್ಟವರು. ನೌಫಲ್‍ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಡಿವೈಡರ್ ಗೆ ಕಾರು ಡಿಕ್ಕಿ : ಚಾಲಕ ಸ್ಥಳದಲ್ಲೇ ಮೃತ್ಯು Read More »

ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿಯ ವಿಡಿಯೋ ಪತ್ತೆ : ಕರಾವಳಿಯಲ್ಲಿ ಸಂಚಲನ

ಬಸ್‌ಗೆ ಕಲ್ಲು ತೂರಿದ ಪ್ರಕರಣದಲ್ಲಿ ಸೆರೆಯಾದ ಸಂದರ್ಭದಲ್ಲಿ ಬಯಲಾದ ಇನ್ನೊಂದು ರಹಸ್ಯ ಮಂಗಳೂರು : ಅಪಘಾತವೆಸಗಿದ ಖಾಸಗಿ ಬಸ್​ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಸೆರೆಯಾಗಿದ್ದ ಹಿಂದೂ ಮುಖಂಡ ಸಮಿತ್‌ರಾಜ್ ಧರೆಗುಡ್ಡೆಯ ಮೊಬೈಲ್‌ನಲ್ಲಿ ಕೆಲವು ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿಯ ಓರ್ವ ರಾಜಕಾರಣಿಯ ಔಿಡಿಯೋ ಇದೆ ಎಂಬ ವಿಚಾರ ಸಂಚಲನವುಂಟುಮಾಡಿದೆ. ಮೊಬೈಲ್​ನಲ್ಲಿ ಕರಾವಳಿಯ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ ಶುರುವಾಗಿದೆ. ಮೂಡುಬಿದಿರೆ ಪೊಲೀಸರ ತನಿಖೆ ವೇಳೆ

ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿಯ ವಿಡಿಯೋ ಪತ್ತೆ : ಕರಾವಳಿಯಲ್ಲಿ ಸಂಚಲನ Read More »

ಮೇಯಲು ಬಿಟ್ಟ ದನಗಳನ್ನು ಕಾರಿನಲ್ಲಿ ತುಂಬಿಸಿ ಕೊಂಡೊಯ್ದ ದುರುಳರು | ಪ್ರಕರಣ ದಾಖಲು

ಬಿ.ಸಿ.ರೋಡ್ : ಮೇಯಲು ಬಿಟ್ಟಿದ್ದ ದನಗಳನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ತುಂಬಿಸಿ ಕೊಂಡೊಯ್ದ ಕುರಿತು ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಮುಂಜೆ ಗ್ರಾಮದ ಕಲಾಯಿ ಹೌಸ್ ಎಂಬಲ್ಲಿ ನಡೆದಿದೆ. ಮಲ್ಲೂರು ಗ್ರಾಮದ ಘಟ್ಟಬೆಟ್ಡು ನಿವಾಸಿ ಜಗದೀಶ್ ಕುಲಾಲ್ ರವರಲ್ಲಿ 12 ದನಗಳಿದ್ದು ಜೂನ್ 28ರಂದು ಮೇಯಲು ಬಿಟ್ಡಿದ್ದು, ಇದರಲ್ಲಿ ಎರಡು ಗಂಡು ಕರುಗಳು ಕಾಣೆಯಾಗಿದೆ. ಈ ಬಗ್ಗೆ ಸ್ಥಳಿಯರಲ್ಲಿ ವಿಚಾರಿಸಿದ್ದು ಕಲಾಯಿ ಹೌಸ್ ಎಂಬಲ್ಲಿ ರಸ್ತೆ ಕಾಣುವಂತೆ ಸಿಸಿ

ಮೇಯಲು ಬಿಟ್ಟ ದನಗಳನ್ನು ಕಾರಿನಲ್ಲಿ ತುಂಬಿಸಿ ಕೊಂಡೊಯ್ದ ದುರುಳರು | ಪ್ರಕರಣ ದಾಖಲು Read More »

ಪಿಲಿಕುಳ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ನಿಗೂಢ ಸಾವು

ಒಂಬತ್ತು ಅಪರೂಪದ ಪ್ರಾಣಿಗಳು ಮೃತಪಟ್ಟಿರುವುದು ಬಹಿರಂಗ ಮಂಗಳೂರು: ಮಂಗಳೂರಿನ ವಾಮಂಜೂರು ಸಮೀಪ ಇರುವ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕೆಲವು ಪ್ರಾಣಿಗಳು ನಿಗೂಢವಾಗಿ ಮೃತಪಟ್ಟಿವೆ. ಕೇವಲ ಒಂದು ವಾರದಲ್ಲೇ 2 ಕೃಷ್ಣಮೃಗ, 5 ಪುನುಗು ಬೆಕ್ಕು, 1 ಬಿಳಿಗೂಬೆ ಹಾಗೂ 1 ಬರಿಂಕ ಸೇರಿದಂತೆ ಒಟ್ಟು 9 ಪ್ರಾಣಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಿಲಿಕುಳ ಜೈವಿಕ ಉದ್ಯಾನವನದೊಳಗೆ ನೀರು ನುಗ್ಗಿ, ಕಂಪೌಂಡ್ ಕುಸಿದು ಪ್ರಾಣಿಗಳಿಗೆ ತೊಂದರೆಯಾಗಿತ್ತು. ಈ ಬಗ್ಗೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಸೆಂಟ್ರಲ್

ಪಿಲಿಕುಳ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ನಿಗೂಢ ಸಾವು Read More »

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ರೆಹಮಾನ್ NIA ಬಲೆಗೆ

ಕತಾರ್‌ನಿಂದ ಕೇರಳಕ್ಕೆ ಆಗಮಿಸಿದ ಆರೋಪಿ ಈಗ NIA ಅತಿಥಿ ಮಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿದಂತೆ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು NIA ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಕೇರಳಕ್ಕೆ ಕತಾರ್‌ನಿಂದ ಆಗಮಿಸಿದ ಈತನನ್ನು ಅಧಿಕಾರಿಗಳು ಬಂಧಿಸಿರುವುದಾಗಿದೆ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 4 ಲಕ್ಷ ರೂ. ನೀಡುವುದಾಗಿಯೂ ಈ ಹಿಂದೆಯೇ ಎನ್‌ಐಎ ಘೋಷಣೆ ಮಾಡಿತ್ತು. ಆರೋಪಿ PFI ಸೂಚನೆಯಂತೆ ಪ್ರಮುಖ ದಾಳಿಕೋರರು ಮತ್ತು ಇತರ ಆರೋಪಿಗಳಿಗೆ

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ರೆಹಮಾನ್ NIA ಬಲೆಗೆ Read More »

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಶತ ಸಂಭ್ರಮ ಸ್ಮರಣ ಸಂಚಿಕೆ ಬಿಡುಗಡೆ

ಕಾಣಿಯೂರು: ಶತಮಾನ ಪೂರೈಸಿದ ಚಾರ್ವಾಕದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದ ಸಲುವಾಗಿ ಹೊರತಂದ ಸ್ಮರಣ ಸಂಚಿಕೆ ‘ ಶತ ಸಂಭ್ರಮ’ದ ಲೋಕಾರ್ಪಣೆ ಕಾರ್ಯಕ್ರಮ ಸಂಘದ ಅಧ್ಯಕ್ಷ ಗಣೇಶ್ ಕೆ. ಎಸ್. ಉದನಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಣಿಯೂರಿನ ಲಕ್ಷ್ಮೀ ನರಸಿಂಹ ಭಜನಾ ಮಂದಿರದಲ್ಲಿ ಜರುಗಿದ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಸಂಚಿಕೆ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು ಸಂಘದ ಸಾಧನೆ

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಶತ ಸಂಭ್ರಮ ಸ್ಮರಣ ಸಂಚಿಕೆ ಬಿಡುಗಡೆ Read More »

ವಿದ್ಯುತ್‌ ಅವಘಡಕ್ಕೆ ವ್ಯಕ್ತಿ ಸಾವು

 ಬೆಳ್ತಂಗಡಿ : ವಿದ್ಯುತ್‌ ತಂತಿ ಸ್ಪರ್ಶಿಸಿ  ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ವೇಣೂರು ಸಮೀಪ ನಡೆದಿದೆ.      ವೇಣೂರು ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ನಿವಾಸಿ ವೀರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.    ವಿದ್ಯುತ್‌ ಪರಿವರ್ತಕದ ಬಳಿ ತೋಟದಲ್ಲಿ ಎಲ್.ಟಿ ಲೈನ್‌ ಮೇಲೆ ತೆಂಗಿನ ಗರಿ ಬಿದ್ದು, ತಂತಿಯು ತುಂಡಾಗಿ ನೀರಿನ ಹಳ್ಳಕ್ಕೆ ಬಿದ್ದು ತಂತಿಯಲ್ಲಿ ವಿದ್ಯುತ್‌ ಸರಬರಾಜಾಗುವ ಪ್ಯೂಸ಼್ ಹೋಗಿರುವುದು ಕಂಡುಬಂದಿದೆ.  ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೀರಪ್ಪ  ಹಳ್ಳದ ನೀರಿನಲ್ಲಿ ತೇಲಿ ಹೋಗುತ್ತಿದ್ದ ತೆಂಗಿನಕಾಯಿ, ಅಡಕೆಯನ್ನು ಹೆಕ್ಕಲು

ವಿದ್ಯುತ್‌ ಅವಘಡಕ್ಕೆ ವ್ಯಕ್ತಿ ಸಾವು Read More »

ಶರಾಬಿನ ಮತ್ತಿನಲ್ಲಿ ಕೈಯಿಂದ ಗಾಜಿನ ಶೋಕೇಸ್‌ ಒಡೆದು ಹಾಕಿದವ ತೀವ್ರ ರಕ್ತಸ್ರಾವದಿಂದ ಸಾವು

ಸಹೋದರನೊಡನೆ ಜಗಳವಾಡಿ ಮನೆಯಲ್ಲಿದ್ದ ಶೋಕೇಸನ್ನು ಬರಿ ಕೈಯಿಂದ ಒಡೆದು ಹಾಕಿ ದುರಂತ ಮಂಗಳೂರು : ಶರಾಬಿನ ಮತ್ತಿನಲ್ಲಿ ಮನೆಯಲ್ಲಿದ್ದ ಗಾಜಿನ ಶೋಕೇಸ್ ಒಡೆದು ತೀವ್ರ ಗಾಯಗೊಂಡು ರಕ್ತಸ್ರಾವದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಉಳ್ಳಾಲ ಸಮೀಪದ ಮದೂರು ಸೈಟ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತನನ್ನು ಮದೂರು ಸೈಟ್ ನಿವಾಸಿ ಸತೀಶ್ ನಾಯಕ್ ಅವರ ಪುತ್ರ ನಿತೇಶ್ ನಾಯಕ್ (28) ಎಂದು ಗುರುತಿಸಲಾಗಿದೆ. ನಿತೇಶ್ ತಂದೆ ಮತ್ತು ಸಹೋದರನೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದನು. ಗುರುವಾರ ರಾತ್ರಿ ಭಾರಿ ಸಿಟ್ಟಿನಲ್ಲಿದ್ದ ನಿತೇಶ್ ಮನೆಯೊಳಗಿದ್ದ

ಶರಾಬಿನ ಮತ್ತಿನಲ್ಲಿ ಕೈಯಿಂದ ಗಾಜಿನ ಶೋಕೇಸ್‌ ಒಡೆದು ಹಾಕಿದವ ತೀವ್ರ ರಕ್ತಸ್ರಾವದಿಂದ ಸಾವು Read More »

error: Content is protected !!
Scroll to Top