ದಕ್ಷಿಣ ಕನ್ನಡ

ಉಪ್ಪಿನಂಗಡಿ : ಸರ್ಕಾರಿ ಬಸ್‌ ಚಾಲಕ, ಪ್ರಯಾಣಿಕನ ಮೇಲೆ ಹಲ್ಲೆ ಮಾಡಿದ ಇಬ್ಬರು ಯುವಕರ ಬಂಧನ

ಸೈಡ್‌ ಕೊಡಲು ಹಾರ್ನ್‌ ಹಾಕಿದ್ದಕ್ಕೆ ಚಾಲಕನ ಮೇಲೆ ಹಲ್ಲೆ ಮಾಡಿದ ಯುವಕರು ಉಪ್ಪಿನಂಗಡಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡ ಹಾಕಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ ಹಾಗೂ ಇದನ್ನು ಪ್ರಶ್ನಿಸಿದ ಪ್ರಯಾಣಿಕನ ಮೇಲೂ ಹೆಲ್ಮೆಟ್‌ನಿಂದ ಹೊಡೆದು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ಸಿನ ಚಾಲಕ ರಿಯಾಝ್ […]

ಉಪ್ಪಿನಂಗಡಿ : ಸರ್ಕಾರಿ ಬಸ್‌ ಚಾಲಕ, ಪ್ರಯಾಣಿಕನ ಮೇಲೆ ಹಲ್ಲೆ ಮಾಡಿದ ಇಬ್ಬರು ಯುವಕರ ಬಂಧನ Read More »

ಕರಾವಳಿಯಲ್ಲಿ ತೀವ್ರಗೊಂಡ ಮಳೆ : ಆರು ತಾಲೂಕುಗಳಲ್ಲಿ ಪಿಯುಸಿ ತನಕ ರಜೆ ಘೋಷಣೆ

ಬಂಟ್ವಾಳ : ಕರಾವಳಿಯಲ್ಲಿ ಮಳೆ ತೀವ್ರಗೊಂಡಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು, ಬಂಟ್ವಾಳ, ಮೂಲ್ಕಿ, ಮೂಡುಬಿದಿರೆ, ಕಡಬ, ಉಳ್ಳಾಲ ತಾಲೂಕುಗಳಲ್ಲಿ ಶಾಲಾ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜು.24ರ ಗುರುವಾರ ಬಂಟ್ವಾಳ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಮಂಗಳೂರು, ಬಂಟ್ವಾಳ, ಮೂಲ್ಕಿ, ಮೂಡುಬಿದಿರೆ ತಾಲೂಕುಗಳಲ್ಲಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.

ಕರಾವಳಿಯಲ್ಲಿ ತೀವ್ರಗೊಂಡ ಮಳೆ : ಆರು ತಾಲೂಕುಗಳಲ್ಲಿ ಪಿಯುಸಿ ತನಕ ರಜೆ ಘೋಷಣೆ Read More »

ವಿವಿ ಕುಲಪತಿಯ ವಾಟ್ಸಪ್‌ ನಂಬರನ್ನೇ ಹ್ಯಾಕ್‌ ಮಾಡಿದ ಸೈಬರ್‌ ಚೋರರು

ಲಿಂಕ್‌ ಕ್ಲಿಕ್‌ ಮಾಡಿದಾಗ ಸ್ನೇಹಿತರಿಗೆ ಹಣ ಕಳುಹಿಸಲು ಮನವಿ ಸಂದೇಶ ರವಾನೆ ಮಂಗಳೂರು: ನಗರದ ಖಾಸಗಿ ಡೀಮ್ಡ್ ಟು ಬಿ ವಿಶ್ವವಿದ್ಯಾಲಯವೊಂದರ ಕುಲಪತಿಯ ವಾಟ್ಸಪ್ ಅಕೌಂಟನ್ನೇ ಸೈಬರ್‌ ಚೋರರು ಹ್ಯಾಕ್‌ ಮಾಡಿದ ಘಟನೆ ಸಂಭವಿಸಿದೆ. ವಾಟ್ಸಪ್‌ ಹ್ಯಾಕ್‌ ಮಾಡಿ ಅವರ ಸಂಪರ್ಕದಲ್ಲಿದ್ದವರ ಮೊಬೈಲ್ ನಂಬರ್‌ಗಳಿಗೆ ಹಣಕ್ಕಾಗಿ ಸಂದೇಶ ರವಾನೆಯಾಗಿದೆ. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಕುಲಪತಿಯ ಮೊಬೈಲ್ ಫೋನ್‌ಗೆ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ಕೊರಿಯರ್ ಕಂಪನಿಯಿಂದ

ವಿವಿ ಕುಲಪತಿಯ ವಾಟ್ಸಪ್‌ ನಂಬರನ್ನೇ ಹ್ಯಾಕ್‌ ಮಾಡಿದ ಸೈಬರ್‌ ಚೋರರು Read More »

ಪುತ್ತೂರು : ಬಸ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದವ ಪೊಲೀಸ್‌ ವಶ

ಬಸ್ಸಿನ ಎಮರ್ಜೆನ್ಸಿ ಬಾಗಿಲಿನಿಂದ ಹಾರಿ ತಪ್ಪಿಸಿಕೊಳ್ಳಲು ಯತ್ನ ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿಯನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಸ್ಸಿನಲ್ಲಿ ಯುವತಿಯ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ ಘಟನೆ ಜುಲೈ 22ರಂದು ನಡೆದಿದ್ದು, ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಮಂಗಳೂರಿನ ಮಹಮ್ಮದ್ ತೌಹೀದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿ ಜುಲೈ 22ರಂದು ಕಾಲೇಜು ಬಿಟ್ಟ ಬಳಿಕ ಸಂಜೆ ಮಂಗಳೂರಿನಿಂದ

ಪುತ್ತೂರು : ಬಸ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದವ ಪೊಲೀಸ್‌ ವಶ Read More »

24 ಕಳ್ಳತನ, ಕೊಲೆಯತ್ನ ಪ್ರಕರಣಗಳ ಆರೋಪಿ ಸೆರೆ

ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದವ ಸಿಸಿಬಿ ಪೊಲೀಸರ ಬಲೆಗೆ ಮಂಗಳೂರು : 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಜನಾಡಿ ಕಲ್ಕಟ್ಟ ಬದ್ರಿಯ ನಗರದ ಮೊಹಮ್ಮದ್ ಅಬ್ದುಲ್ ಫಯಾನ್(27) ಸೆರೆಯಾದ ಆರೋಪಿ. ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ 24 ಪ್ರಕರಣಗಳಲ್ಲಿ ಭಾಗಿಯಾಗಿರುವ ಈತ ನ್ಯಾಯಾಲಯದಿಂದ

24 ಕಳ್ಳತನ, ಕೊಲೆಯತ್ನ ಪ್ರಕರಣಗಳ ಆರೋಪಿ ಸೆರೆ Read More »

ಧರ್ಮಸ್ಥಳ ಪ್ರಕರಣ : ಇಂದಿನಿಂದ ಎಸ್‌ಐಟಿ ತನಿಖೆ ಶುರು

ತನಿಖಾ ತಂಡಕ್ಕೆ ಹೆಚ್ಚುವರಿಯಾಗಿ 20 ಪೊಲೀಸ್‌ ಅಧಿಕಾರಿಗಳ ನೇಮಕ ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಡಲಾಗಿದೆ ಎಂದು ಆರೋಪಿಸಿದ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿದ ಎಸ್‌ಐಟಿ ಬುಧವಾರದಿಂದ ತನಿಖೆ ಆರಂಭಿಸಲಿದೆ. ನಾಲ್ವರು ಐಪಿಎಸ್‌ ಅಧಿಕಾರಿಗಳ ಎಸ್‌ಐಟಿ ತಂಡ ರಚಿಸಲಾಗಿದ್ದು, ಇದಕ್ಕೆ ನಿನ್ನೆ ಮತ್ತೆ 20 ಅಧಿಕಾರಿಗಳನ್ನು ನೇಮಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ವಿಶೇಷ ತನಿಖಾ ತಂಡ ಇಂದು ಧರ್ಮಸ್ಥಳಕ್ಕೆ ತೆರಳಿ ಮೊದಲು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನಾಮಿಕ ವ್ಯಕ್ತಿ ನೀಡಿದ ದೂರಿನ

ಧರ್ಮಸ್ಥಳ ಪ್ರಕರಣ : ಇಂದಿನಿಂದ ಎಸ್‌ಐಟಿ ತನಿಖೆ ಶುರು Read More »

ವಿಟ್ಲದಲ್ಲಿ ಕಾರಿಗೆ ಮಿನಿ ಟಿಪ್ಪರ್‌ ಡಿಕ್ಕಿ : ನವವಿವಾಹಿತ ಸಾವು

ಸಹೋದರಿ ಮತ್ತು ಮಗುವಿಗೆ ಗಂಭೀರ ಗಾಯ ವಿಟ್ಲ: ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಮೃತಪಟ್ಟು, ಅವರ ಸಹೋದರಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಸೋಮವಾರ ಸಂಭವಿಸಿದೆ. ಅನೀಶ್ ಅನಂತಾಡಿ (34) ಮೃತ ದುರ್ದೈವಿ. ಕಲ್ಲಡ್ಕದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಆಲ್ಟೊ ಕಾರಿಗೆ, ವಿಟ್ಲದಿಂದ ಕಲ್ಲಡ್ಕ ಕಡೆಗೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳೀಯರು

ವಿಟ್ಲದಲ್ಲಿ ಕಾರಿಗೆ ಮಿನಿ ಟಿಪ್ಪರ್‌ ಡಿಕ್ಕಿ : ನವವಿವಾಹಿತ ಸಾವು Read More »

ಬಂಟ್ವಾಳ ತಾಲೂಕು ಗೌಡ ಸಂಘದಲ್ಲಿ ಆಟಿಡೊಂಜಿ ದಿನ ಸಂಪನ್ನ

ವಿಟ್ಲ: ಬಂಟ್ವಾಳ ತಾಲೂಕಿನ ಶಾಂತಿನಗರದಲ್ಲಿ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಘಟಕಾಧ್ಯಕ್ಷೆ ಶ್ರೀಮತಿ ಅಮಿತಾಕೃಷ್ಣ ಕುಡಿಪ್ಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ 20ರಂದು ಅಕ್ಷಯ ಸಭಾಭವನದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಸಂಘದ ಎಲ್ಲಾ ವಿಭಾಗಗಳು ಸಂಯುಕ್ತವಾಗಿ ಇದನ್ನು ಆಯೋಜಿಸಿದ್ದವು. ವಿಶಿಷ್ಟ ಶೈಲಿಯ ಉದ್ಘಾಟನೆ ಪುತ್ತೂರಿನ ಗೌಡ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆಯವರು ಲೋಟಕ್ಕೆ ನಾಣ್ಯ ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದೀಪ ಪ್ರಜ್ವಲಿಸಿದ ಬಹುಮುಖ ಪ್ರತಿಭೆಯ ಉದ್ಯಮಿ, ತರಬೇತುಗಾರ್ತಿ ಲತಾ ಪ್ರಸಾದ್ ಕುಧ್ಪಾಜೆ

ಬಂಟ್ವಾಳ ತಾಲೂಕು ಗೌಡ ಸಂಘದಲ್ಲಿ ಆಟಿಡೊಂಜಿ ದಿನ ಸಂಪನ್ನ Read More »

ಬಹುಕೋಟಿ ರೂಪಾಯಿ ವಂಚಕ ರೋಶನ್‌ ಸಲ್ಡಾನನ ವಿರುದ್ಧ ಸಿಐಡಿ ತನಿಖೆ

ಮೋಸ ಹೋದ ಹಲವು ಉದ್ಯಮಿಗಳಿಂದ ದೂರು ದಾಖಲು ಮಂಗಳೂರು : ಕಂಕನಾಡಿ ಬೊಳ್ಳಗುಡ್ಡೆ ನಿವಾಸಿ ಬಹುಕೋಟಿ ರೂಪಾಯಿ ವಂಚಕ ರೋಶನ್ ಸಲ್ಡಾನನಿಂದ ವಂಚನೆಗೊಳಗಾದ ಒಬ್ಬೊಬ್ಬರೇ ಈಗ ದೂರು ನೀಡಲು ಮುಂದಾಗುತ್ತಿದ್ದಾರೆ. ಬಿಹಾರ ಮೂಲದ ಉದ್ಯಮಿಯೊಬ್ಬರಿಗೆ ಸಲ್ಡಾನ ಭೂ ಖರೀದಿಸಿಕೊಡುವುದಾಗಿ ನಂಬಿಸಿ 10 ಕೋಟಿ ರೂ. ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಸೆನ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ವಂಚನೆಯ ಮೊತ್ತ 10 ಕೋ.ರೂ. ಅಥವಾ ಅದಕ್ಕಿಂತ ಹೆಚ್ಚಿದ್ದರೆ ಸಿಐಡಿ

ಬಹುಕೋಟಿ ರೂಪಾಯಿ ವಂಚಕ ರೋಶನ್‌ ಸಲ್ಡಾನನ ವಿರುದ್ಧ ಸಿಐಡಿ ತನಿಖೆ Read More »

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ

ಮಂಗಳೂರು: ಕಳೆದ ಮೇ 27ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪಿಕಪ್‌ ಚಾಲಕ ಕೊಳತ್ತಮಜಲು ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಗಂಭೀರ ಹಲ್ಲೆ ನಡೆಸಿದ ಪ್ರಕರಣದ ಓರ್ವ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ ಸಾಹಿತ್ (24) ಬಂಧಿತ ಆರೋಪಿ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 11ಕ್ಕೆ ಏರಿದೆ. ಆರೋಪಿ ಶಾಹಿತ್ ಯಾನೆ ಸಾಹಿತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಈತನನ್ನು ಹೆಚ್ಚಿನ ತನಿಖೆಗಾಗಿ

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »

error: Content is protected !!
Scroll to Top