ದಕ್ಷಿಣ ಕನ್ನಡ

ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಸ್ಟೇಟಸ್‌ ಹಾಕಿದ್ದಕ್ಕೆ ಯುವಕ ಸೆರೆ

ಕೋಮು ಸಂಘರ್ಷ ನಿಗ್ರಹ ಪಡೆಯಿಂದ ಕಾರ್ಕಳದ ಯುವಕನ ಬಂಧನ ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ರಚಿಸಿರುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕುವವರ ಬೆನ್ನು ಬಿದ್ದಿದ್ದು, ರಕ್ತಕ್ಕೆ ರಕ್ತವೇ ಬೇಕು ಎಂದು ಸ್ಟೇಟಸ್ ಹಾಕಿದ ಕಾರ್ಕಳದ ಯುವಕನೊಬ್ಬನನ್ನು ಬಂಧಿಸಿದೆ. ಕಾರ್ಕಳ ಇರ್ವತ್ತೂರು ಗ್ರಾಮದ ಆಶಿಕ್ ಎಸ್ ಕೋಟ್ಯಾನ್​​ ಸೆರೆಯಾದ ಯುವಕ. ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ʼನಮಗೆ ಯಾವುದೇ ರೀತಿಯ ಉತ್ತರಗಳು ಬೇಡ ರಕ್ತಕ್ಕೆ ರಕ್ತವೇ ಉತ್ತರವಾಗಬೇಕು, ಜೀವಕ್ಕೆ ಜೀವವೇ ಬೇಕುʼ […]

ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಸ್ಟೇಟಸ್‌ ಹಾಕಿದ್ದಕ್ಕೆ ಯುವಕ ಸೆರೆ Read More »

ಸುಳ್ಯದ ಜನತೆಗೆ ಚಿನ್ನಾಭರಣಗಳ ಆಯ್ಕೆಗೆ ಹೊಸದೊಂದು ಮಳಿಗೆ | ‘ಸ್ವರ್ಣಂ ಜುವೆಲ್ಸ್’- ಜು.7ರಂದು ಶುಭಾರಂಭ

  ಸುಳ್ಯ: ಸುಳ್ಯದ ಜನತೆಗೆ, ಆಭರಣ ಪ್ರಿಯರಿಗೆ ಚಿನ್ನಾಭರಣಗಳ ವೈವಿಧ್ಯಮಯ ಆಯ್ಕೆಗಾಗಿ ಹೊಸದೊಂದು ಮಳಿಗೆ ‘ಸ್ವರ್ಣಂ ಜುವೆಲ್ಸ್‌’ ಶೀಘ್ರದಲ್ಲೇ ಶುಭಾರಂಭಗೊಳ್ಳಲಿದೆ. ಗ್ರಾಹಕರ ಸೇವೆಯಲ್ಲಿ, ಚಿನ್ನೋದ್ಯಮದಲ್ಲಿ 20ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿರುವವರ  ಪಾಲುದಾರಿಕೆಯೊಂದಿಗೆ ಕಾರ್ಯಾರಂಭ ಮಾಡಲಿರುವ ಸ್ವರ್ಣಂ ಜುವೆಲ್ಸ್‌, ಜುಲೈ 7ರಂದು ಸೋಮವಾರ ಸುಳ್ಯದ ಕೆ.ಎಸ್‌.ಆರ್.ಟಿ.ಸಿ ಬಸ್‌ನಿಲ್ದಾಣದ ಎದುರು ಸುಂತೋಡು ಎಂಪೋರಿಯಂ ನಲ್ಲಿ ಉದ್ಘಾಟನೆಗೊಳ್ಳಲಿದೆ. ಗ್ರಾಹಕರಿಗೆ ಸಾಕಷ್ಟು ಪಾರ್ಕಿಂಗ್ ಅವಕಾಶವೂ ಲಭ್ಯವಿದೆ. ವಿಶೇಷ ಪಾರ್ಕಿಂಗ್‌ಗಾಗಿ ಕರೆಮಾಡಿ- 7975425067. ಸುಂದರ ಸುಳ್ಯಕ್ಕೆ ಸ್ವರ್ಣಂ ಸ್ಪರ್ಶ ಎಂಬ ಘೋಷವಾಕ್ಯದೊಂದಿಗೆ ಕಾರ್ಯಾರಂಭ

ಸುಳ್ಯದ ಜನತೆಗೆ ಚಿನ್ನಾಭರಣಗಳ ಆಯ್ಕೆಗೆ ಹೊಸದೊಂದು ಮಳಿಗೆ | ‘ಸ್ವರ್ಣಂ ಜುವೆಲ್ಸ್’- ಜು.7ರಂದು ಶುಭಾರಂಭ Read More »

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರೀಯ ಧ್ವಜ ನಿರ್ಮಿಸಲು ಟೆಂಡರ್ ಪ್ರಕ್ರಿಯೆ ಪೂರ್ಣ | ಶೀಘ್ರದಲ್ಲಿ ಕೆಲಸ ಆರಂಭ

ಮಂಗಳೂರು: ಕರಾವಳಿ ನಗರಿ ಮಂಗಳೂರು ತನ್ನ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭವನ್ನು ಬಾವುಟಗುಡ್ಡದಲ್ಲಿ ಸ್ಥಾಪಿಸಲು ಸಜ್ಜಾಗಿದ್ದು, ಇದರ ಎತ್ತರ 295 ಅಡಿ (ಸರಿಸುಮಾರು 90 ಮೀಟರ್). ರಚನೆಗೆ ಸ್ಥಳವನ್ನು ಅಂತಿಮಗೊಳಿಸಲಾಗಿದೆ ಮತ್ತು ಟೆಂಡ‌ರ್ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಯೋಜನೆಯ ಕೆಲಸ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ. ಧ್ವಜಸ್ತಂಭವು ನಾಲ್ಕು ಸಿಂಹಗಳ ಲಾಂಛನ ಮತ್ತು ಅಶೋಕ ಚಕ್ರವನ್ನು ಹೊಂದಿರುವ ಪೂರ್ಣ ಪ್ರಮಾಣದ ಅಶೋಕ ಸ್ತಂಭವನ್ನು ಹೊಂದಿರುತ್ತದೆ. ಪೂರ್ಣಗೊಂಡ ನಂತರ, ಇದು ಬೆಳಗಾವಿಯಲ್ಲಿರುವ 110 ಮೀಟರ್ ಧ್ವಜಸ್ತಂಭದ ನಂತರ ಕರ್ನಾಟಕದ ಎರಡನೇ ಅತಿ

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರೀಯ ಧ್ವಜ ನಿರ್ಮಿಸಲು ಟೆಂಡರ್ ಪ್ರಕ್ರಿಯೆ ಪೂರ್ಣ | ಶೀಘ್ರದಲ್ಲಿ ಕೆಲಸ ಆರಂಭ Read More »

5.759 ಕೆಜಿ ಗಾಂಜಾದ ಜೊತೆ ಆರು ಆರೋಪಿಗಳ ಸೆರೆ

ಡ್ರಗ್ಸ್‌ ವ್ಯಸನಿಯ ತಂದೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಂಗಳೂರು: ನಗರ ಹೊರವಲಯದ ಪಡುಶೆಡ್ಡೆ ಗ್ರಾಮದ ಹಾಲಾಡಿ ಎಂಬಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸೆನ್ ಠಾಣೆಯ ಪೊಲೀಸರು ದಾಳಿ ಮಾಡಿ ಐವರು ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಇವರ ಬಂಧನಕ್ಕೆ ನೆರವಾದದ್ದು ಡ್ರಗ್ಸ್‌ ವ್ಯಸನಿಯಾಗಿದ್ದ ಯುವಕನೊಬ್ಬನ ತಂದೆ ನೀಡಿದ್ದ ದೂರು ಎನ್ನುವುದು ಗಮನಾರ್ಹ ಅಂಶ. ನಗರದ ಬಿಕರ್ನಕಟ್ಟೆಯ ಅಡುಮರೋಳಿ ನಿವಾಸಿ ತುಷಾರ್ ಸೋನು (21), ನಾಗುರಿಯ

5.759 ಕೆಜಿ ಗಾಂಜಾದ ಜೊತೆ ಆರು ಆರೋಪಿಗಳ ಸೆರೆ Read More »

ನಕಲಿ ಪ್ರಮಾಣಪತ್ರ ಸೃಷ್ಟಿಸಿ ಮಂಗಳೂರು ಮಹಾನಗರ ಪಾಲಿಕೆಗೆ ಲಕ್ಷಾಂತರ ರೂ. ವಂಚನೆ

4500ಕ್ಕೂ ಅಧಿಕ ಉದ್ದಿಮೆ ನಕಲಿ ಸರ್ಟಿಫಿಕೆಟ್‌ ಸೃಷ್ಟಿಸಿರುವ ಅನುಮಾನ ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯಲ್ಲಿ ದಿನಕ್ಕೊಂದು ಅವ್ಯವಹಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಗರಪಾಲಿಕೆ ನೀಡುವ ಪ್ರಮಾಣಪತ್ರವನ್ನೇ ನಕಲಿಯಾಗಿ ಸೃಷ್ಟಿಸಿ ತೆರಿಗೆ ವಂಚಿಸಿದ ಪ್ರಕರಣ ಬಯಲಾಗಿದ್ದು, ಇದರ ಹಿಂದೆ ಬೃಹತ್‌ ಜಾಲ ಇರುವ ಅನುಮಾನ ವ್ಯಕ್ತವಾಗಿದೆ. ನಕಲಿ ತೆರಿಗೆ ನೋಂದಣಿ ಜಾಲವೊಂದು ಇದರ ಹಿಂದೆ ಇದೆ ಎನ್ನಲಾಗಿದೆ. ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ ಮಾಡಲಾಗಿದೆ. ಮಹಾನಗರ ಪಾಲಿಕೆ ನೀಡುವ ಸರ್ಟಿಫಿಕೇಟ್​​ನ್ನೇ ವಂಚಕರು ಕಂಪ್ಯೂಟರ್ ತಂತ್ರಜ್ಞಾನ ಬಳಸಿ

ನಕಲಿ ಪ್ರಮಾಣಪತ್ರ ಸೃಷ್ಟಿಸಿ ಮಂಗಳೂರು ಮಹಾನಗರ ಪಾಲಿಕೆಗೆ ಲಕ್ಷಾಂತರ ರೂ. ವಂಚನೆ Read More »

ಎಣ್ಮೂರು ಶ್ರೀ ಸೀತಾರಾಮಾಂಜನೇಯ ಭಜನಾ ಮಂದಿರದ ವಾರ್ಷಿಕ ಹಬ್ಬ ಆಚರಣಾ ಸಮಿತಿ ರಚನೆ | ಅಧ್ಯಕ್ಷರಾಗಿ ನಾಗೇಶ್‍ ಆಳ್ವ, ಕಾರ್ಯದರ್ಶಿಯಾಗಿ ಸಚಿನ್ ಆರೆಂಬಿ ಆಯ್ಕೆ

ಎಣ್ಮೂರು: ಎಣ್ಮೂರು ಶ್ರೀ ಸೀತಾರಾಮಾಂಜನೇಯ ಭಜನಾ ಮಂದಿರದ ವಾರ್ಷಿಕ ಹಬ್ಬ ಆಚರಣಾ ಸಮಿತಿಯನ್ನು ಬುಧವಾರ ರಚಿಸಲಾಯಿತು. ಸಮಿತಿ ಅಧ್ಯಕ್ಷರಾಗಿ ನಾಗೇಶ್‍ ಆಳ್ವ, ಕಾರ್ಯದರ್ಶಿಯಾಗಿ ಸಚಿನ್‍ ಆರೆಂಬಿ ಆಯ್ಕೆಯಾದರು. ಉಳಿದಂತೆ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಭಜನಾ ಮಂದಿರ, ಆಚರಣಾ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

ಎಣ್ಮೂರು ಶ್ರೀ ಸೀತಾರಾಮಾಂಜನೇಯ ಭಜನಾ ಮಂದಿರದ ವಾರ್ಷಿಕ ಹಬ್ಬ ಆಚರಣಾ ಸಮಿತಿ ರಚನೆ | ಅಧ್ಯಕ್ಷರಾಗಿ ನಾಗೇಶ್‍ ಆಳ್ವ, ಕಾರ್ಯದರ್ಶಿಯಾಗಿ ಸಚಿನ್ ಆರೆಂಬಿ ಆಯ್ಕೆ Read More »

ಗುರುವಾಯನಕೆರೆ ಹೆದ್ದಾರಿಯಲ್ಲಿ ಮರಣ ಗುಂಡಿಗಳು | ವಾಹನ ಚಾಲಕರು ಕಂಗಾಲು  ನಿರ್ಲಕ್ಷ್ಯ ತೋರುತ್ತಿರುವ ಜನಪ್ರತಿನಿಧಿಗಳು

ಬೆಳ್ತಂಗಡಿ : ಗುರುವಾಯನಕೆರೆ ಕಾರ್ಕಳ ರಸ್ತೆಯಲ್ಲಿ ಹೊಂಡ – ಗುಂಡಿಗಳು ನಿರ್ಮಾಣಗೊಂಡಿದೆ . ಇದರಿಂದಾಗಿ ವಾಹನ ಅವಘಡಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸುವ ಪರಿಸ್ಥಿತಿ ಉಂಟಾಗಿದೆ.    ಮಳೆ ಬಂದ ಸಂದರ್ಭದಲ್ಲಿ ಹೊಂಡಗಳಲ್ಲಿ ನೀರು ತುಂಬಿದಾಗ , ಗುಂಡಿಯ ಆಳ ತಿಳಿಯದೆ ದ್ವಿಚಕ್ರ ವಾಹನಗಳನ್ನು ಒಳಗೊಂಡಂತೆ ಇತರ ಸಣ್ಣ-ಪುಟ್ಟ ವಾಹನಗಳು ಬಿದ್ದು ಸವಾರರು ಗಾಯಗೊಳ್ಳುತ್ತಿರುವುದು ದಿನನಿತ್ಯವೂ  ಸಂಭವಿಸುತ್ತಿದೆ . ಹೊಂಡ – ಗುಂಡಿಗಳ ದುರಸ್ತಿ ಕುರಿತು ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ

ಗುರುವಾಯನಕೆರೆ ಹೆದ್ದಾರಿಯಲ್ಲಿ ಮರಣ ಗುಂಡಿಗಳು | ವಾಹನ ಚಾಲಕರು ಕಂಗಾಲು  ನಿರ್ಲಕ್ಷ್ಯ ತೋರುತ್ತಿರುವ ಜನಪ್ರತಿನಿಧಿಗಳು Read More »

ಕರಾವಳಿಯ ಅಂಗನವಾಡಿಗಳಲ್ಲಿ LKG, UKG ಆರಂಭಿಸಲು ಸಿದ್ಧತೆ

ಮಂಗಳೂರು: ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಇಂಗ್ಲೀಷ್ ಶಿಕ್ಷಣ ನೀಡುವ ಸಲುವಾಗಿ ಮತ್ತು ಅಂಗನವಾಡಿ ಕೇಂದ್ರಗಳನ್ನು ಬಲಪಡಿಸುವ ಉದ್ದೇಶದೊಂದಿಗೆ ಕರಾವಳಿ ಭಾಗದಲ್ಲಿನ 110 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆ‌ಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ತಯಾರಿ ನಡೆದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯ 70 ಅಂಗನವಾಡಿಗಳು ಮತ್ತು ಉಡುಪಿ ಜಿಲ್ಲೆಗಳಿಗೆ ಸಂಬಂಧಿಸಿದ‌ 40 ಅಂಗನವಾಡಿ ಕೇಂದ್ರಗಳಲ್ಲಿ ಕೆಜಿ ತರಗತಿಗಳನ್ನು ಆರಂಭ ಮಾಡುವ ನಿಟ್ಟಿನಲ್ಲಿ ಪೂರ್ವತಯಾರಿಗಳನ್ನು ಆರಂಭ ಮಾಡಿದೆ. ಈ ಬಗ್ಗೆ ಇಲಾಖೆ ಸದ್ಯ ಮೌಖಿಕ ನಿರ್ದೇಶನ

ಕರಾವಳಿಯ ಅಂಗನವಾಡಿಗಳಲ್ಲಿ LKG, UKG ಆರಂಭಿಸಲು ಸಿದ್ಧತೆ Read More »

ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಕೊಲೆ, ಹತ್ಯಾಯತ್ನ ಪ್ರಕರಣದ ಆರೋಪಿಗಳು ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ನಂತರ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತ ಎಂಬಾತನನ್ನು ಮೂಲ್ಕಿ ಸಮೀಪ ಪಕ್ಷಕೆರೆಯಲ್ಲಿ ಬಂಧಿಸಲಾಗಿದೆ. ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತ 2020ರಲ್ಲಿ ಮುಲ್ಕಿ ಹೆದ್ದಾರಿಯ ಬಳಿ ವಿಜಯ ಸನ್ನಿಧಿ ಎದುರು ನಡೆದ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದ.

ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ Read More »

ಧರ್ಮಸ್ಥಳ : ಫೇಸ್‌ಬುಕ್‌ನಲ್ಲಿ ಅಶ್ಲೀಲ, ಪ್ರಚೋದನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ ಕೇಸ್‌

ಬೆಳ್ತಂಗಡಿ : ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅಶ್ಲೀಲ ಮತ್ತು ಪ್ರಚೋದನಕಾರಿ ಪೋಸ್ಟ್‌ ಹಾಕಿದ ಸಂಬಂಧ ಇಬ್ಬರ ವಿರುದ್‌ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಹಾಕಿದ ಆರೋಪದಲ್ಲಿ ನವೀನ್ ಗೌಡ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿಯೊಬ್ಬರು ನೀಡಿರುವ ದೂರಿನಂತೆ ಪ್ರಕರಣ‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.Naveen Gowda (https://facebook.com/naveen.gowda.938621) ಎಂಬ ಫೇಸ್‌ಬುಕ್ ಖಾತೆಯಲ್ಲಿ ಮಹೇಶ್ ಶೆಟ್ಟಿ ಎಂತವರನ್ನು ಸಾಕಿಕೊಂಡಿದ್ದಾನೆ ಎಂದು ಆರಂಭಿಸಿ

ಧರ್ಮಸ್ಥಳ : ಫೇಸ್‌ಬುಕ್‌ನಲ್ಲಿ ಅಶ್ಲೀಲ, ಪ್ರಚೋದನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ ಕೇಸ್‌ Read More »

error: Content is protected !!
Scroll to Top