ದಕ್ಷಿಣ ಕನ್ನಡ

ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆ

ಕಡಬ: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಕಡಬ ಹೊಸಮಠದಲ್ಲಿರುವ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಸಂಘದ ಮಾತೃ ಸಮಿತಿ ಅಧ್ಯಕ್ಷ ಸುರೇಶ್ ಗೌಡ ಬೈಲು ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಸಮುದಾಯ ಭವನ ಹಾಗೂ ಈ ವರ್ಷ ನಡೆದ ಕಾರ್ಯಕ್ರಮಗಳ ಲೆಕ್ಕಪತ್ರವನ್ನು ಸಭೆಯಲ್ಲಿ ಮಂಡಿಸಲಾಯಿತು. ಸಂಘದ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳುವ ಬಗ್ಗೆ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ನಾಡಪ್ರಭು ಕೆಂಪೇಗೌಡರ […]

ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆ Read More »

ಮಂಗಳೂರು: ತನ್ನದೇ ಬ್ಯಾಂಕಿನಿಂದ 6.5 ಕೆಜಿ ಚಿನ್ನ ಕದ್ದ ಮ್ಯಾನೇಜರ್‌

ಕದ್ದ ಚಿನ್ನವನ್ನು ಇನ್ನೊಂದು ಬ್ಯಾಂಕಿನಲ್ಲಿ ಅಡವಿಟ್ಟು ಸಾಲ ಪಡೆದು ವಂಚನೆ ಮಂಗಳೂರು : ಬ್ಯಾಂಕ್‌ ಮ್ಯಾನೇಜರ್‌ ಒಬ್ಬ ತನ್ನದೇ ಬ್ಯಾಂಕಿನಿಂದ 6.5 ಕೆಜಿಯಷ್ಟು ಚಿನ್ನ ಕದ್ದು ಅದನ್ನು ಇನ್ನೊಂದು ಬ್ಯಾಂಕಿನಲ್ಲಿ ಅಡವಿಟ್ಟು ಹಣ ಪಡೆದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಶಕ್ತಿನಗರ ವ್ಯವಸಾಯ ಸೇವಾ ಸಹಕಾರಿ ಸಂಘದ ಮ್ಯಾನೇಜರ್‌ ಗ್ರಾಹಕರು ತನ್ನ ಬ್ಯಾಂಕಿನಲ್ಲಿ ಅಡವಿಟ್ಟಿದ್ದ 6.5 ಕೆಜಿ ಚಿನ್ನಾಭರಣಗಳನ್ನು ಕದ್ದು, ಕೋ-ಆಪರೇಟಿವ್‌ ಸೊಸೈಟಿ ಒಂದರಲ್ಲಿ ಅಡವಿಟ್ಟು 3.5 ಕೋಟಿ ರೂ. ಸಾಲ ಪಡೆದಿದ್ದಾನೆ. ಮಂಗಳೂರಿನ ಶಕ್ತಿನಗರದ ಪದುವಾ ವ್ಯವಸಾಯ

ಮಂಗಳೂರು: ತನ್ನದೇ ಬ್ಯಾಂಕಿನಿಂದ 6.5 ಕೆಜಿ ಚಿನ್ನ ಕದ್ದ ಮ್ಯಾನೇಜರ್‌ Read More »

ಲಾರಿ-ಸ್ಕೂಟರ್ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು

ಬಂಟ್ವಾಳ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಇಂದು ನಡೆದಿದೆ. ಶಂಭೂರು ಕೊಪ್ಪಳ ನಿವಾಸಿ ಚಿದಾನಂದ( 50) ಮೃತಪಟ್ಟ ದ್ವಿಚಕ್ರ ಸವಾರ. ಚಿದಾನಂದ ಅವರು ಬಿಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಕ್ರಾಸ್ ಮಾಡುವ ವೇಳೆ ಬಿಸಿರೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಢಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಚಿದಾನಂದ ಅವರು

ಲಾರಿ-ಸ್ಕೂಟರ್ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು Read More »

ಕಲ್ಲುಗುಂಡಿಯಲ್ಲಿ ಕೆಎಸ್‍ ಆರ್ ಟಿಸಿ ಬಸ್‍ ಅಪಘಾತ : ಪ್ರಯಾಣಿಕರು ಅಪಾಯದಿಂದ ಪಾರು

ಸುಳ್ಯ: ಕೆಎಸ್‍ ಆರ್‍ ಟಿಸಿ ಬಸ್‍ ಅಪಘಾತಕ್ಕೀಡಾದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡವಾಲ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್‍ ಚಾಲಕನ ನಿಯಂತ್ರಣ ತಪ್ಪಿದ ಬಸ್‍ ರಸ್ತೆ ಬದಿಯ ಚರಂಡಿಗೆ ಇಳಿದು ಬರೆಗೆ ವಾಲಿ ನಿಂತಿದೆ. ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಲ್ಲುಗುಂಡಿಯಲ್ಲಿ ಕೆಎಸ್‍ ಆರ್ ಟಿಸಿ ಬಸ್‍ ಅಪಘಾತ : ಪ್ರಯಾಣಿಕರು ಅಪಾಯದಿಂದ ಪಾರು Read More »

ಪ್ರೀತಿಸಿ ಕೈಕೊಟ್ಟ ಪ್ರಕರಣ : ಮಗುವಿನ ಡಿಎನ್‌ಎ ಪರೀಕ್ಷೆಗೆ ಮುಂದಾದ ಪೊಲೀಸರು

ಬಲವಾದ ಪುರಾವೆ ಆಗಲಿರುವ ಡಿಎನ್‌ಎ ಟೆಸ್ಟ್‌ ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾದ ನಂತರ ಕೈಕೊಟ್ಟ ಪ್ರಕರಣದಲ್ಲಿ ಮಗುವಿನ ಡಿಎನ್‌ಎ ಪರೀಕ್ಷೆ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಪೊಲೀಸರು ಮುಂದಾಗಿದ್ದಾರೆ. ಪುತ್ತೂರು ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ. ರಾವ್‌ ಎಂಬಾತ ತನ್ನ ಶಾಲಾ ದಿನಗಳ ಸಹಪಾಠಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ದೈಹಿಕ ಸಂಬಂಧ ಬೆಳೆಸಿದ್ದು, ಇದರ ಪರಿಣಾಮವಾಗಿ ಯುವತಿ ಗರ್ಭಿಣಿಯಾಗಿ ಕೆಲದಿನಗಳ ಹಿಂದೆ ಪುತ್ತೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ

ಪ್ರೀತಿಸಿ ಕೈಕೊಟ್ಟ ಪ್ರಕರಣ : ಮಗುವಿನ ಡಿಎನ್‌ಎ ಪರೀಕ್ಷೆಗೆ ಮುಂದಾದ ಪೊಲೀಸರು Read More »

ಮಂಗಳೂರು: ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಮೂರು ಅಡಿ ನೀರಿನಲ್ಲಿ ತೇಲುತ್ತಿದ್ದ ಮೃತದೇಹ ಮಂಗಳೂರು : ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಕಟ್ಟಡದ ನೆಲಮಾಳಿಗೆಯಲ್ಲಿ ಸುಮಾರು 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಪುರುಷನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೂನ್ 28ರಂದು ಕೆಲಸಗಾರ ಕಟ್ಟಡದ ನೀರು ಸರಬರಾಜು ಸಮಸ್ಯೆಯನ್ನು ಪರಿಶೀಲಿಸಲು ಹೋಗಿದ್ದಾಗ ಶವ ನೋಡಿದ್ದಾರೆ. ನೆಲಮಾಳಿಗೆ ಭಾಗಶಃ ನೀರಿನಿಂದ ತುಂಬಿತ್ತು. ದೇಹವು ಸುಮಾರು ಮೂರು ಅಡಿ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದ್ದು, ಕೊಳೆತ ಸ್ಥಿತಿಯಲ್ಲಿತ್ತು. ಉರ್ವ ಪೊಲೀಸ್

ಮಂಗಳೂರು: ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ Read More »

ಬೀಚ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ : ಯುವಕನ ಬಂಧನ

ಇನ್‌ಸ್ಟಾಗ್ರಾಂ ಗೆಳತಿಯನ್ನು ಕರೆದುಕೊಂಡು ಬಂದು ಕಾರಿನಲ್ಲಿ ದೌರ್ಜನ್ಯ ಮಂಗಳೂರು : ಉಳ್ಳಾಲ ಸಮೀಪ ಸೋಮೇಶ್ವರ ಬೀಚ್‌ನಲ್ಲಿ ಅಪ್ರಾಪ್ತ ವಯಸ್ಸಿನ ಯುವತಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಯುವಕನ ವಿರುದ್ಧ ಪೋಕ್ಸೊ ಕೇಸ್‌ ದಾಖಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಹದಿಹರೆಯದ ಬಾಲಕಿಯನ್ನು ಸೋಮೇಶ್ವರ ಬೀಚ್ ಬಳಿ ಕರೆದುಕೊಂಡು ಬಂದ ಯುವಕ ಕಾರಿನಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಬಾಲಕಿ ನೀಡಿದ ದೂರಿನನ್ವಯ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ಅಡ್ಯಾರ್ ವಳಚ್ಚಿಲ್ ನಿವಾಸಿ ಕೆಲ್ವಿನ್ (24) ಬಂಧಿತ

ಬೀಚ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ : ಯುವಕನ ಬಂಧನ Read More »

ಮತ್ತೆ ಹೆಚ್ಚಳವಾದ ಆನ್‌ಲೈನ್‌ ವಂಚನೆ ಪ್ರಕರಣಗಳು : ಪೊಲೀಸರಿಂದ ಜಾಗೃತಿ ಅಭಿಯಾನ

ಮಂಗಳೂರು ನಗರವೊಂದರಲ್ಲೇ ಹಲವು ಲಕ್ಷ ರೂಪಾಯಿ ಪಂಗನಾಮ ಮಂಗಳೂರು : ಆನ್‌ಲೈನ್ ಮೂಲಕ ಹೂಡಿಕೆಗೆ ಪ್ರಚೋದಿಸಿ ಮೋಸ ಮಾಡುತ್ತಿರುವ ಪ್ರಕರಣಗಳು ಮತ್ತೊಮ್ಮೆ ಕಳವಳಕಾರಿಯಾಗಿ ಹೆಚ್ಚುತ್ತಿವೆ. ಕಳೆದೊಂದು ವಾರದಲ್ಲೆ ಮಂಗಳೂರು ಸೈಬರ್‌ ಠಾಣೆಯಲ್ಲೇ ಇಂಥ ಹಲವು ಪ್ರಕರಣಗಳು ದಾಖಲಾಗಿದ್ದು, ಒಂದು ಕೋಟಿಗಟ್ಟಲೆ ಮೊತ್ತ ವಂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು ಸಾರ್ವಜನಿಕ ಜಾಗೃತಿ ಅಭಿಯಾನ ಪ್ರಾರಂಭಿಸಿದ್ದು, ಜನರು ಇಂಥ ತ್ವರಿತ ಲಾಭದ ಹೂಡಿಕೆಗಳ ಬಗ್ಗೆ ಜಾಗರೂಕರಾಗಿರಬೇಕೆಂದು ಎಚ್ಚರಿಸಿದ್ದಾರೆ. ವಂಚಕರು ನಕಲಿ ಹೂಡಿಕೆ ಸೈಟ್‌ಗಳು, ಮೊಬೈಲ್ ಅಪ್ಲಿಕೇಶನ್‌ಗಳು ಮತ್ತು

ಮತ್ತೆ ಹೆಚ್ಚಳವಾದ ಆನ್‌ಲೈನ್‌ ವಂಚನೆ ಪ್ರಕರಣಗಳು : ಪೊಲೀಸರಿಂದ ಜಾಗೃತಿ ಅಭಿಯಾನ Read More »

ಹಿಂದೂ ಕಾರ್ಯಕರ್ತ ಸುಹಾಸ್ ‌ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್?

ಮಂಗಳೂರು: ಜಿಹಾದಿಗಳ ಮಚ್ಚಿನೇಟಿಗೆ ಬಲಿಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ‌ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣ ಸದ್ಯ ಎನ್‌ಐ‌ಎ ತನಿಖೆಯಲ್ಲಿದ್ದು, ಸುಹಾಸ್ ಹತ್ಯೆಗೆ ವಿದೇಶಿ ಫಂಡಿಂಗ್ ಆಗಿದೆಯೇ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಹತ್ಯೆ ಪ್ರಕರಣಕ್ಕೆ ‌ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಗಳ ಬ್ಯಾಂಕ್ ಖಾತೆಗಳ ಪರಿಶೀಲನೆ ಸಹ ನಡೆಯುತ್ತಿದೆ. 12 ಆರೋಪಿಗಳ ಬೇರೆ ಬೇರೆ ಬ್ಯಾಂಕ್ ಖಾತೆಗಳ ಪರಿಶೀಲನೆ ನಡೆಯುತ್ತಿದ್ದು, ಸ್ಥಳೀಯ ವ್ಯಕ್ತಿಗಳಿಂದ ಹಣ ಫಂಡಿಂಗ್ ಆದ ಬಗೆಗೂ ತನಿಖೆ ನಡೆಸಲಾಗುತ್ತಿದೆ. ಈ ಕೊಲೆಯಲ್ಲಿ

ಹಿಂದೂ ಕಾರ್ಯಕರ್ತ ಸುಹಾಸ್ ‌ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್? Read More »

ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ ಯಶಸ್ವಿ 6ನೇ ವರ್ಷಕ್ಕೆ ಪಾದಾರ್ಪಣೆ : ಶಾಖಾ ಕಚೇರಿಯಲ್ಲಿ ಗಣಹೋಮ, ಲಕ್ಷ್ಮೀಪೂಜೆ

ಪುತ್ತೂರು: ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ ಯಶಸ್ವಿ 6ನೇ ವರ್ಷಕ್ಕೆ ಶುಕ್ರವಾರ ಪಾದಾರ್ಪಣೆ ಮಾಡಿತು. ಕಾರ್ಯಕ್ರಮದ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಗಣಹೋಮ ಹಾಗೂ ಲಕ್ಷ್ಮೀಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ನಿರ್ದೇಶಕರಾದ ಪ್ರವೀಣ್‍ ಕುಂಟ್ಯಾನ, ಸತೀಶ್‍ ಪಾಂಬಾರು, ಶಾಖಾ ಅಧ್ಯಕ್ಷರಾದ ತೇಜಸ್ವಿನಿ ಕಟ್ಟಪುಣಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ, ಶಾಖಾ ಅಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು.

ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ ಯಶಸ್ವಿ 6ನೇ ವರ್ಷಕ್ಕೆ ಪಾದಾರ್ಪಣೆ : ಶಾಖಾ ಕಚೇರಿಯಲ್ಲಿ ಗಣಹೋಮ, ಲಕ್ಷ್ಮೀಪೂಜೆ Read More »

error: Content is protected !!
Scroll to Top