ದಕ್ಷಿಣ ಕನ್ನಡ

ತಾಯಿಯನ್ನು ಜೀವಂತ ದಹಿಸಿ ಕೊಂದ ಮಗ ಬೈಂದೂರಿನಲ್ಲಿ ಸೆರೆ | ಸೋದರತ್ತೆಯನ್ನೂ ದಹಿಸಿ ಕೊಲ್ಲಲು ಯತ್ನಿಸಿದ್ದ ಆರೋಪಿ

ಮಂಗಳೂರು : ಮಂಜೇಶ್ವರ ಸಮೀಪ ವರ್ಕಾಡಿಯಲ್ಲಿ ಹೆತ್ತ ತಾಯಿಯನ್ನು ಬೆಂಕಿಹಚ್ಚಿ ಕೊಂದ ಕಟುಕ ಪುತ್ರನನ್ನು ಪೊಲೀಸರು ಉಡುಪಿಯ ಬೈಂದೂರಿನಲ್ಲಿ ಬಂಧಿಸಿದ್ದಾರೆ. ಆರೋಪಿ ಮಗ ಮೆಲ್ವಿನ್ ಗುರುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಬಳಿಕ ಕಾಡಿನೊಳಗೆ ಎಳೆದೊಯ್ದು ಬೆಂಕಿ ಹಚ್ಚಿ ಸುಟ್ಟಾಕ್ಕಿದ್ದ. ತಾಯಿಯನ್ನು ಹತ್ಯೆ ಮಾಡಿದ ಬಳಿಕ ಆತ ಪಕ್ಕದ ಮನೆಯಲ್ಲಿದ್ದ ಅತ್ತೆಯನ್ನು ಕರೆದು ಕೊಲೆ ಮಾಡಲು ಯತ್ನಿಸಿದ್ದ. ಮೆಲ್ವಿನ್ ಮೊಂತೇರೊ ತಾಯಿಯ ವರ್ಕಾಡಿಯಲ್ಲಿ ತಾಯಿ 60 ವರ್ಷದ ಹಿಲ್ಡಾ ಜೊತೆ ಈ ವಾಸವಿದ್ದ. ತಂದೆ […]

ತಾಯಿಯನ್ನು ಜೀವಂತ ದಹಿಸಿ ಕೊಂದ ಮಗ ಬೈಂದೂರಿನಲ್ಲಿ ಸೆರೆ | ಸೋದರತ್ತೆಯನ್ನೂ ದಹಿಸಿ ಕೊಲ್ಲಲು ಯತ್ನಿಸಿದ್ದ ಆರೋಪಿ Read More »

ಖೈದಿಗಳ ನಡುವೆ ಹೊಡೆದಾಟ : ಓರ್ವ ಆಸ್ಪತ್ರೆಗೆ ದಾಖಲು

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳ ನಡುವೆ ಹೊಡೆದಾಟ ನಡೆದಿದೆ. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಪ್ರಮಾಣದಲ್ಲಿ ಗಾಯಗಳಾಗಿದ್ದು, ಆತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳ್ಳಾಲದ ರೌಡಿ ಮುಖ್ತರ್ ಮತ್ತು ಇತರ ಖೈದಿಗಳ ನಡುವೆ ಗಲಾಟೆ ನಡೆದಿದೆ. ಈ ಘಟನೆಯಲ್ಲಿ ರೌಡಿ  ಮುಖ್ತರ್ ಅಕ್ಷಯ್ ಕಲ್ಲೇಗ ಕೊಲೆ ಆರೋಪಿ ಕೇಶವ ಎಂಬಾತನ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ ಗಂಭೀರ ಗಾಯಗೊಂಡ ಕೇಶವನನ್ನು ವೆನ್ಲಾಕ್ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ಖೈದಿ ಗಾಯಾಳು ಕೇಶವ ಅಕ್ಷಯ್ ಕಲ್ಲೇಗ ಹತ್ಯೆಯ

ಖೈದಿಗಳ ನಡುವೆ ಹೊಡೆದಾಟ : ಓರ್ವ ಆಸ್ಪತ್ರೆಗೆ ದಾಖಲು Read More »

ಹೆತ್ತ ತಾಯಿಯನ್ನೇ ಬೆಂಕಿಹಚ್ಚಿ ಜೀವಂತ ದಹಿಸಿದ ಮಗ

ಮಂಜೇಶ್ವರ ಸಮೀಪ ವರ್ಕಾಡಿಯಲ್ಲಿ ಅಮಾನವೀಯ ಕೃತ್ಯ ಕಾಸರಗೋಡು: ಮಗನೇ ಹೆತ್ತ ತಾಯಿಯನ್ನು ಬೆಂಕಿ ಹಚ್ಚಿ ಜೀವಂತ ದಹಿಸಿ ಕೋಮದ ಅಮಾನವೀಯ ಘಟನೆ ಮಂಜೇಶ್ವರ ಸಮೀಪ ವರ್ಕಾಡಿ ಎಂಬಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ. ವರ್ಕಾಡಿ ನಲ್ಲಂಗಿಯ ದಿ.ಲೂಯಿಸ್ ಮೊಂತೆರೋ ಎಂಬವರ ಪತ್ನಿ ಹಿಲ್ಡಾ (60) ಕೊಲೆಗೀಡಾದವರು. ಪುತ್ರ ಮೆಲ್ವಿನ್ ಈ ಕೃತ್ಯ ಎಸಗಿದ್ದಾನೆ. ಘಟನೆಯಲ್ಲಿ ನೆರೆಮನೆಯ ಲೋಲಿಟಾ (30) ಎಂಬವರು ಗಂಭೀರ ಸುಟ್ಟ ಗಾಯ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಲಗಿದ್ದ ಮಹಿಳೆಗೆ ಬೆಂಕಿ ಹಚ್ಚಿದ್ದು, ಬಳಿಕ ತಾಯಿಗೆ ಹುಷಾರಿಲ್ಲ

ಹೆತ್ತ ತಾಯಿಯನ್ನೇ ಬೆಂಕಿಹಚ್ಚಿ ಜೀವಂತ ದಹಿಸಿದ ಮಗ Read More »

ಕರಾಳ ದಿನಗಳು ಮತ್ತೊಮ್ಮೆ ಮರುಕಳಿಸಲು ಅವಕಾಶ ನೀಡಬಾರದು : ರಾಧಾ ಮೋಹನದಾಸ್ ಅಗರ್ವಾಲ್‍ | ‘ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್- ಕರಾಳ ಇತಿಹಾಸಕ್ಕೆ 50 ವರ್ಷ ಗಳು’ ಕಾರ್ಯ ಕ್ರಮ

ಮಂಗಳೂರು: ಜಾಗೃತ ಹಾಗೂ ಸಂಘಟಿತ ಜನತೆಯೇ ಪುಜಾಪ್ರಭುತ್ವದ ನಿಜವಾದ ಶಕ್ತಿ. ನಾಗರಿಕರು ಎಚ್ಚರವಾಗಿರದಿದ್ದರೆ ದೇಶದಲ್ಲಿ ಅಳುಕಿನ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್‍ ಹೇಳಿದರು. ಅವರು ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕ ಬುಧವಾರ ಏರ್ಪಡಿಸಿದ್ದ ‘ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್- ಕರಾಳ ಇತಿಹಾಸಕ್ಕೆ 50 ವರ್ಷ ಗಳು’ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ‘ಪ್ರಭುತ್ವವನ್ನು ಪ್ರಶ್ನಿಸುವುದನ್ನು ನಿಲ್ಲಿಸಿದರೆ ದೇಶವೂ ಮತ್ತೆ ಪರಕೀಯತೆಯತ್ತ

ಕರಾಳ ದಿನಗಳು ಮತ್ತೊಮ್ಮೆ ಮರುಕಳಿಸಲು ಅವಕಾಶ ನೀಡಬಾರದು : ರಾಧಾ ಮೋಹನದಾಸ್ ಅಗರ್ವಾಲ್‍ | ‘ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್- ಕರಾಳ ಇತಿಹಾಸಕ್ಕೆ 50 ವರ್ಷ ಗಳು’ ಕಾರ್ಯ ಕ್ರಮ Read More »

ಮಣ್ಣಗುಡ್ಡೆಯಲ್ಲಿ ಮತ್ತೆ ಭೂ ಕುಸಿತ | ರಸ್ತೆ ಮೇಲೆ ಮಣ್ಣಿನ ರಾಶಿ; ಸಂಚಾರಕ್ಕೆ ತಡೆ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದ ಪರಿಣಾಮ ರಸ್ತೆಯಲ್ಲಿ ಹಲವು ವಾಹನಗಳು ಸಾಲುಗಟ್ಟಿ ನಿಂತಿದ್ದು, ಸುಗಮ ಸಂಚಾರಕ್ಕೆ ತಡೆ ಉಂಟಾಗಿದೆ. ಮಂಗಳವಾರ ರಾತ್ರಿ ಕುಸಿತ ಸಂಭವಿಸಿದ ಸ್ಥಳದ ಸಮೀಪವೇ ಮತ್ತಷ್ಟು ಭೂಕುಸಿತವಾಗಿದೆ. ಮಂಗಳವಾರ ಸಂಭವಿಸಿದ ಭೂಕುಸಿತದಿಂದ ಭಾರಿ ಪ್ರಮಾಣದ ಮಣ್ಣು ಮತ್ತು ಕಲ್ಲುಬಂಡೆಗಳು ರಸ್ತೆಗೆ ಉರುಳಿದ್ದು, ನಿನ್ನೆಯಷ್ಟೇ ಅದನ್ನು ತೆರವುಗೊಳಿಸುವ ಕಾರ್ಯಾಚರಣೆ ಪೂರ್ತಿಯಾಗಿತ್ತು. ಅದರ ಬೆನ್ನಿಗೆ ಇಂದು ಮತ್ತೆ ಕುಸಿದಿದೆ. ಇಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ

ಮಣ್ಣಗುಡ್ಡೆಯಲ್ಲಿ ಮತ್ತೆ ಭೂ ಕುಸಿತ | ರಸ್ತೆ ಮೇಲೆ ಮಣ್ಣಿನ ರಾಶಿ; ಸಂಚಾರಕ್ಕೆ ತಡೆ Read More »

ಕೆಎಸ್‍ ಆರ್ ಟಿಸಿ ಬಸ್‍ ಗಳೆರಡು ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ

ಸುಳ್ಯ: ಕೆಎಸ್‍ ಆರ್‍ ಟಿಸಿ ಬಸ್‍ ಗಳೆರಡು ಮುಖಾಮುಖಿ ಡಿಕ್ಕಿ ಹೊಡದುಕೊಂಡ ಪರಿಣಾಮ ಹಲವರು ಗಾಯಗೊಂಡ ಘಟನೆ ಬುಧವಾರ ಸಂಜೆ ಸುಳ್ಯ ತಾಲೂಕಿನ ಅರಂತೋಡು ಶಾಲಾ ಮುಂಭಾಗ ನಡೆದಿದೆ. ಮಡಿಕೇರಿಯಿಂದ ಪುತ್ತೂರು ಕಡೆ ಬರುತ್ತಿದ್ದ ಬಸ್ ಎದುರಿನಿಂದ ಬಂದ ಬಸ್‌ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಗೊಂಡ ಬಸ್ ಗಳ ಪೈಕಿ ಒಂದು ಅಶ್ವಮೇಧ ಬಸ್ ಎಂದು ಹೇಳಲಾಗಿದೆ.

ಕೆಎಸ್‍ ಆರ್ ಟಿಸಿ ಬಸ್‍ ಗಳೆರಡು ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ Read More »

ಶಿಶಿಲದಲ್ಲಿ ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನ ಜಲಾವೃತ | ಗರ್ಭಗುಡಿಗೆ ನುಗ್ಗಿದ ನೀರು

ಶಿಶಿಲ: ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನ ಜಲಾವೃತವಾಗಿದ್ದು, ಗರ್ಭಗುಡಿಗೆ ನೀರು ನುಗ್ಗಿದೆ. ಶಿಶಿಲೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದ್ದು, ಜನರಲ್ಲಿ ಭೀತಿಯನ್ನು ಉಂಟುಮಾಡಿದೆ. ಭಾರೀ ಮಳೆಯಿಂದಾಗಿ ಕಪಿಲಾ ನದಿಯಲ್ಲಿ ಉಂಟಾದ ಪ್ರವಾಹ ದೇವಸ್ಥಾನದ ಒಳಗೆ ನುಗ್ಗಿ, ಪವಿತ್ರ ಗರ್ಭಗುಡಿಗೂ ಪ್ರವೇಶಿಸಿದೆ ಎನ್ನಲಾಗಿದೆ. ದೇವಳದ ಪಕ್ಕದಲ್ಲಿರುವ ಅಂಗಡಿಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ದೇವಾಲಯದ ಸಂಪರ್ಕಮಾರ್ಗವಾಗಿರುವ ಕಿಂಡಿ ಆಣೆಕಟ್ಟಿನು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಸದ್ಯಕ್ಕೆ ತೂಗುಸೇತುವೆಯವರೆಗೂ ನೀರು ಹರಿಯುತ್ತಿದೆ. ಪ್ರವಾಹದ ವೇಗ ಹಾಗೂ

ಶಿಶಿಲದಲ್ಲಿ ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನ ಜಲಾವೃತ | ಗರ್ಭಗುಡಿಗೆ ನುಗ್ಗಿದ ನೀರು Read More »

ಸಂಪಾಜೆಯಲ್ಲಿ ಕಾರಿನ ಮೇಲೆ ಮುರಿದು ಬಿದ್ದ ಮರದ ಕೊಂಬೆ

ಸುಳ್ಯ: ಚಲಿಸುತ್ತಿದ್ದ ಕಾರೊಂದರ ಮೇಲೆ ಮರದ ಕೊಂಬೆ ಮುರಿದು ಬಿದ್ದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಮರದ ಕೊಂಬೆ ವಿನಯ್ ಎಂಬುವವರು ಮಾರುತಿ 800 ಕಾರಿನ ಮೇಲೆ ಬಿದ್ದಿದೆ. ಇದೇ ಸ್ಥಳದಿಂದ ಸ್ವಲ್ಪ ದೂರದಲ್ಲೇ ವಿದ್ಯಾರ್ಥಿಗಳು ಪ್ರತಿನಿತ್ಯ ಮುಂಜಾನೆ ಆಟೋ ಹತ್ತುತ್ತಿದ್ದು ಅಲ್ಲಿಯೂ ಮರದ ಕೊಂಬೆ ಮುರಿದು ಬಿದ್ದಿದೆ. ಅದೃಷ್ಟವಶಾತ್ ಈ ಸಮಯದಲ್ಲಿ ಅವರು ಆಟೋ ಹತ್ತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಕೊಂಬೆ ಮುರಿದ ಮರಗಳು ಖಾಸಗಿ ಜಾಗದೊಳಗಿದ್ದು, ಇದನ್ನು ತೆರವು ಮಾಡಲು ಕೆಲವು ನಿಯಮಗಳಿವೆ ಎಂದು

ಸಂಪಾಜೆಯಲ್ಲಿ ಕಾರಿನ ಮೇಲೆ ಮುರಿದು ಬಿದ್ದ ಮರದ ಕೊಂಬೆ Read More »

ವಿವಿಧ ಆ್ಯಪ್‍ ಗಳಿಂದ ಸಾಲ : ಆರ್ಥಿಕ ಸಮಸ್ಯೆಯಿಂದ ಯುವಕ ಆತ್ಮಹತ್ಯೆ

ಮಂಗಳೂರು: ವಿವಿಧ ಆ್ಯಪ್‌ ಗಳ ಸಾಲಗಳಿಂದ ಬೇಸತ್ತು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕೋಡಿಕಲ್ ನಲ್ಲಿ ನಡೆದಿದೆ. ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಉಪಹಾರ ಸೇವಿಸಿದ ನಿಖಿಲ್ ಪೂಜಾರಿ ಕೋಣೆ ಸೇರಿದ್ದ. ಸಂಜೆಯವರೆಗೆ ಮಲಗುವ ಅಭ್ಯಾಸ ರೂಢಿಸಿಕೊಂಡಿದ್ದ ಕಾರಣ ಮನೆಮಂದಿ ನಿಖಿಲ್ ಪೂಜಾರಿಯ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ ಎನ್ನಲಾಗಿದೆ. ಸಂಜೆ ಬಳಿಕ ಬಾಗಿಲು ಬಡಿದರೂ ತೆಗೆಯದ್ದರಿಂದ ಫೋನ್ ಕರೆ ಮಾಡಿದರೂ ಆತ

ವಿವಿಧ ಆ್ಯಪ್‍ ಗಳಿಂದ ಸಾಲ : ಆರ್ಥಿಕ ಸಮಸ್ಯೆಯಿಂದ ಯುವಕ ಆತ್ಮಹತ್ಯೆ Read More »

2.5 ಕೋಟಿ ರೂ. ಕಾರಿಗೆ 50 ಲ.ರೂ. ಮೌಲ್ಯ ತೋರಿಸಿ ನೋಂದಾಯಿಸಿ ತೆರಿಗೆ ವಂಚನೆ

ಮನಪಾ ಬಳಿಕ ಮಂಗಳೂರು ಆರ್‌ಟಿಒ ಕಚೇರಿಯ ಅವ್ಯವಹಾರ ಬಯಲಿಗೆ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ದಾಳಿಯಾದ ಬಳಿಕ ಅಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದು ಬುದ್ಧಿವಂತರ ಮತ್ತು ಪ್ರಜ್ಞಾವಂತರ ಜಿಲ್ಲೆ ಎಂಬ ಖ್ಯಾತಿ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಹೃದಯ ಭಾಗಕ್ಕೆ ಕಳಂಕ ಅಂಟಿಕೊಂಡಿದೆ. ಈಗ ಸಾರಿಗೆ ಕಚೇರಿಯ ಸರದಿ. ಮಂಗಳೂರಿನ ಸಾರಿಗೆ ಕಚೇರಿಯಲ್ಲಿ ವಾಹನ ನೋಂದಣಿಯಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ಹಗರಣ ಮಂಗಳೂರು ಸಾರಿಗೆ ಅಧಿಕಾರಿ

2.5 ಕೋಟಿ ರೂ. ಕಾರಿಗೆ 50 ಲ.ರೂ. ಮೌಲ್ಯ ತೋರಿಸಿ ನೋಂದಾಯಿಸಿ ತೆರಿಗೆ ವಂಚನೆ Read More »

error: Content is protected !!
Scroll to Top