ದಕ್ಷಿಣ ಕನ್ನಡ

ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಕಿಶೋರ್ ಕುಮಾರ್ ಪುತ್ತೂರು ನೆರವು |  5 ಲಕ್ಷ ರೂ. ಅನುದಾನ ಮಂಜೂರು

ಮಂಗಳೂರು: ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ ಶಾಸಕರ ಅಭಿವೃದ್ಧಿ ನಿಧಿಯ ಅನುದಾನದಿಂದ 5 ಲಕ್ಷ ಹಣವನ್ನು ಮಂಜೂರು ಮಾಡಿದ್ದಾರೆ. ಈ ಕುರಿತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿ ಮಾಡಿದ ಶಾಸಕರು, ಈ ಘಟಕದ ಪುನರ್ ನಿರ್ಮಾಣಕ್ಕೆ ಬೇಕಾದ ಎಲ್ಲಾ ಕ್ರಮಗಳನ್ನು ತಕ್ಷಣ ಕೈಗೊಳ್ಳಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ […]

ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಕಿಶೋರ್ ಕುಮಾರ್ ಪುತ್ತೂರು ನೆರವು |  5 ಲಕ್ಷ ರೂ. ಅನುದಾನ ಮಂಜೂರು Read More »

ಹೆಬ್ಬಾವು ಮಾರಾಟ ಜಾಲ ಪತ್ತೆ : ಕಾಲೇಜು ವಿದ್ಯಾರ್ಥಿ ಸೇರಿ ನಾಲ್ವರು ಸೆರೆ

ಮಂಗಳೂರು ನಗರದೊಳಗೆ ನಡೆಯುತ್ತಿತ್ತು ಪ್ರಾಣಿಗಳ ಅಕ್ರಮ ದಂಧೆ ಮಂಗಳೂರು: ಹೆಬ್ಬಾವು ಮಾರಾಟ ಜಾಲವೊಂದನ್ನು ಭೇದಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಅಪ್ರಾಪ್ತ ವಯಸ್ಸಿನ ಓರ್ವ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರಿನ ಬಡಗ ಉಳಿಪ್ಪಾಡಿ ನಿವಾಸಿ ವಿಹಾಲ್ ಎಚ್. ಶೆಟ್ಟಿ (18), ಉಳ್ಳಾಲ ಮುನ್ನೂರಿನ ಸಾಕುಪ್ರಾಣಿ ಅಂಗಡಿ ಮಾಲೀಕ ಇಬ್ರಾಹಿಂ ಶಕೀಲ್ ಇಸ್ಮಾಯಿಲ್ (35), ಉಳ್ಳಾಲ ಹರೇಕಳ ಅಂಗಡಿಯ ಉದ್ಯೋಗಿ ಮೊಹಮ್ಮದ್ ಮುಸ್ತಫಾ (22) ಮತ್ತು ಮಂಗಳೂರಿನ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿರುವ ವಿದ್ಯಾರ್ಥಿ 16 ವರ್ಷದ ಬಾಲಕ

ಹೆಬ್ಬಾವು ಮಾರಾಟ ಜಾಲ ಪತ್ತೆ : ಕಾಲೇಜು ವಿದ್ಯಾರ್ಥಿ ಸೇರಿ ನಾಲ್ವರು ಸೆರೆ Read More »

ಸವಣೂರು-ಪುಣ್ಚತ್ತಾರು ರಸ್ತೆ ಬದಿ ಗಿಡ ನೆಡುವ ಯೋಜನೆ | ವಿದ್ಯುತ್‍ ತಂತಿ ಹಾದು ಹೋಗುವ ಕೆಳಭಾಗದಲ್ಲೇ ಗಿಡ ನಾಟಿ | ಸಂಬಂಧಪಟ್ಟವರು ಪರಿಶೀಲನೆ ನಡೆಸಬೇಕೆಂದು ಸ್ಥಳೀಯರ ಆಗ್ರಹ

ಕಾಣಿಯೂರು: ಸುಬ್ರಹ್ಮಣ್ಯ-ಕಾಣಿಯೂರು ರಾಜ್ಯ ಹೆದ್ದಾರಿಯ ಸವಣೂರಿನಿಂದ ಪುಣ್ಯತ್ತಾರುವರೆಗೆ ಅರಣ್ಯ ಇಲಾಖೆಯಿಂದ ರಸ್ತೆ ಬದಿಯಲ್ಲಿ ಗಿಡ ನೆಡುವ ಯೋಜನೆ ಹಾಕಿಕೊಳ್ಳಲಾಗಿದ್ದು, ಗಿಡಗಳನ್ನು ನೆಡಲಾಗಿದೆ. ಆದರೆ ರಸ್ತೆಗೆ ಸಮೀಪ, ವಿದ್ಯುತ್ ತಂತಿ ಹಾದು ಹೋಗುವ ಜಾಗದ ಕೆಳ ಭಾಗದಲ್ಲೇ ಗಿಡಗಳನ್ನು ನೆಡಲಾಗಿದ್ದು, ಅವೈಜ್ಞಾನಿಕವಾಗಿ ಗಿಡನೆಡಲಾಗಿದೆ. ಮುಂದೆ ಗಿಡ ಬೆಳೆದು ಮರವಾದಾಗ ಅಪಾಯ ಸಂಭವ ಗ್ಯಾರಂಟಿ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದ್ದು, ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಜೊತೆಗೆ ಜೆ ಜೆ ಎಂ

ಸವಣೂರು-ಪುಣ್ಚತ್ತಾರು ರಸ್ತೆ ಬದಿ ಗಿಡ ನೆಡುವ ಯೋಜನೆ | ವಿದ್ಯುತ್‍ ತಂತಿ ಹಾದು ಹೋಗುವ ಕೆಳಭಾಗದಲ್ಲೇ ಗಿಡ ನಾಟಿ | ಸಂಬಂಧಪಟ್ಟವರು ಪರಿಶೀಲನೆ ನಡೆಸಬೇಕೆಂದು ಸ್ಥಳೀಯರ ಆಗ್ರಹ Read More »

ಕೊಕ್ಕಡ ಆನೆ ದಾಳಿಗೆ  ವ್ಯಕ್ತಿ ಮೃತ್ಯು : ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕದ ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಮನೆಗೆ ಭೇಟಿ ನೀಡಿದ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಮೃತರ ಕುಟುಂಬಕ್ಕೆ ಸಾಂತ್ವಾನ  ಹೇಳಿದರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರೊಂದಿಗೆ ಸಮಾಲೋಚಿಸಿ, ಮೃತರ ಕುಟುಂಬಕ್ಕೆ  ಗರಿಷ್ಠ ಪರಿಹಾರವನ್ನು ಒದಗಿಸುವ ಬಗ್ಗೆ  ಅರಣ್ಯ ಸಚಿವ ಈಶ್ವರ ಖಂಡ್ರೆಯವರ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು ಹಾಗೂ ಕುಟುಂಬದ ಸದಸ್ಯರೋರ್ವರಿಗೆ ಸರಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದರು. ಅರಣ್ಯ ಇಲಾಖೆಯ ವತಿಯಿಂದ ಪರಿಹಾರ ಸೌಲಭ್ಯಗಳನ್ನು ತುರ್ತಾಗಿ

ಕೊಕ್ಕಡ ಆನೆ ದಾಳಿಗೆ  ವ್ಯಕ್ತಿ ಮೃತ್ಯು : ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ಮಂಗಳೂರು : ಉದ್ಯಮಿಗಳಿಗೆ 200 ಕೋಟಿ ರೂ.ಗೂ ಅಧಿಕ ಮೊತ್ತ ವಂಚಿಸಿದಾತ ಸೆರೆ

ಬಂಗಲೆಯಲ್ಲಿದ್ದ ವಿದೇಶಿ ಯುವತಿಯೂ ಪೊಲೀಸರ ವಶ ಯಾವುದೇ ಬಾಲಿವುಡ್‌ ಸಿನೆಮಾ ಸೆಟ್‌ಗಿಂತಲೂ ಅದ್ದೂರಿಯಾಗಿದೆ ಮಂಗಳೂರಿನ ಈ ವಂಚಕನ ಬಂಗಲೆ ಮಂಗಳೂರು : ಮನೆಯೆಂದರೆ ಅದು ಮನೆಯಲ್ಲ ಭವ್ಯವಾದ ಬಂಗಲೆ. ಒಳಗಿದೆ ಯಾವುದೇ ಫೈವ್‌ಸ್ಟಾರ್‌ ಹೋಟೆಲನ್ನು ನಾಚಿಸುವಂಥ ಐಷಾರಾಮಿ ವ್ಯವಸ್ಥೆ. ಎರಡು ಮೂರು ಅಡಗುತಾಣಗಳು, ಅಲ್ಲಲ್ಲಿ ಸಿಸಿ ಕ್ಯಾಮೆರಗಳು. ರೂಮ್‌ಗಳಲ್ಲಿ ಗೋಡೆಗಳಿದ್ದರೂ ಅವುಗಳು ಕೆಲವೊಮ್ಮೆ ರಹಸ್ಯ ಕೋಣೆಗಳ ಬಾಗಿಲುಗಳೂ ಆಗುತ್ತವೆ.ಕಬೋರ್ಡ್‌ಗಳ ರೀತಿ ಕಾಣುವುದನ್ನು ತಟ್ಟಿದರೆ ಅದು ಇನ್ನೊಂದು ನಿಗೂಢ ಕೋಣೆಯತ್ತ ಸಾಗುವ ಮೆಟ್ಟಿಲುಗಳನ್ನು ತೋರಿಸುತ್ತವೆ. ಮನೆಯ ಗೇಟ್‌ ತೆರೆದುಕೊಳ್ಳುವ

ಮಂಗಳೂರು : ಉದ್ಯಮಿಗಳಿಗೆ 200 ಕೋಟಿ ರೂ.ಗೂ ಅಧಿಕ ಮೊತ್ತ ವಂಚಿಸಿದಾತ ಸೆರೆ Read More »

ಬೆಳ್ಳಂಬೆಳಗ್ಗೆ ಆನೆ ದಾಳಿ : ವ್ಯಕ್ತಿ ಮೃತ್ಯು

ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಬಳಿಯ ಮುರತ್ತಮೇಲ್‍ ಎಂಬಲ್ಲಿ ಆನೆಯೊಂದು ವ್ಯಕ್ತಿ ಮೇಲೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮುರತ್ತಮೇಲ್  ನಿವಾಸಿ ಬಾಲಕೃಷ್ಣ ಶೆಟ್ಟಿ (60) ಮೃತಪಟ್ಟವರು ಎಂದು ಗುರುತಿಸಲಾಗಿದೆ.  ಎರಡು ಆನೆಗಳು ಜತೆಯಾಗಿ ಸಾಗಿ ಬರುತ್ತಿದ್ದ ಸಂದರ್ಭ ದಾಳಿ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸೌತಡ್ಕ ದೇವಸ್ಥಾನದಿಂದ ಕೇವಲ ಒಂದು ಕಿ.ಮೀ.ನಷ್ಟು ದೂರದಲ್ಲಿ  ಈ ದುರ್ಘಟನೆ ಸಂಭವಿಸಿದೆ. ಬಾಲಕೃಷ್ಣ ಶೆಟ್ಟಿ ಅವರು ಸೌತಡ್ಕ

ಬೆಳ್ಳಂಬೆಳಗ್ಗೆ ಆನೆ ದಾಳಿ : ವ್ಯಕ್ತಿ ಮೃತ್ಯು Read More »

ಭಾರಿ ಮಳೆ : ಮಂಗಳೂರಲ್ಲಿ ಗುಡ್ಡ, ಗೋಡೆ ಕುಸಿತ

ಎರಡು ದಿನ ಸುರಿದ ಮಳೆಗೆ ನಗರದಲ್ಲಿ ಹಲವು ಅವಾಂತರ ಮಂಗಳೂರು : ಕಳೆದೆರಡು ದಿನಗಳಿಂದ ಮಂಗಳೂರು ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದ್ದು, ಮಂಗಳೂರು ನಗರದಲ್ಲೂ ಹಲವು ಅವಾಂತರಗಳು ಸಂಭವಿಸಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಕ್ಯೂಟ್ ಹೌಸ್-ಬಿಜೈ ಬಳಿ ತಡರಾತ್ರಿ ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆಗೆ ತೊಂದರೆ ಆಗಿದೆ. ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಬ್ಯಾರಿಕೇಡ್ ಅಳವಡಿಸಿ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಬಿಜೈ ಬಟ್ಟಗುಡ್ಡ, ಆರ್ಯ ಸಮಾಜ ರಸ್ತೆ, ಪಂಪ್ವೆಲ್, ಮಾಲೆಮಾರ್, ಕಾವೂರು ಉಲ್ಲಾಸ

ಭಾರಿ ಮಳೆ : ಮಂಗಳೂರಲ್ಲಿ ಗುಡ್ಡ, ಗೋಡೆ ಕುಸಿತ Read More »

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ | ವಾಹನ ಸಂಚಾರದಲ್ಲಿ ಬದಲಿ ವ್ಯವಸ್ಥೆ

ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ  ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.  ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿರುತ್ತದೆ. ಇನ್ನಷ್ಟು ಮಣ್ಣು  ಕುಸಿಯುತ್ತಿರುವುದರಿಂದ  ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ನಡೆಯಲಿದೆ. ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಬೇಕಾಗಿ ಪ್ರಕಟಣೆ ತಿಳಿಸಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ | ವಾಹನ ಸಂಚಾರದಲ್ಲಿ ಬದಲಿ ವ್ಯವಸ್ಥೆ Read More »

ಡ್ರಗ್ಸ್‌ ಮಾರಾಟ : ಎಂಟು ವಿದ್ಯಾರ್ಥಿಗಳ ಬಂಧನ

ನಗರದಲ್ಲಿ ಮಾದಕ ವಸ್ತು ಮಾರುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಗಳು ಮಂಗಳೂರು, ಜು.16: ನಗರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಎಂಟು ವಿದ್ಯಾರ್ಥಿಗಳನ್ನು ಪಾಂಡೇಶ್ವರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ರಾಹುಲ್, ಸಂಗೀತ್ ಕೃಷ್ಣ, ಸೂರಜ್, ಸಂಜಯ್, ಅಶ್ವಂತ್, ಅಬ್ದುಲ್ ಜಬ್ಬಾರ್, ರಿಚರ್ಡ್, ಅನುರಾಗ್ ಎಂದು ಗುರುತಿಸಲಾಗಿದೆ. ಆರೋಪಿಗಳು ನಗರದ ಬಂದರ್ ದಕ್ಕೆಯಲ್ಲಿ ಎಂಡಿಎಂಎ ಮಾರಾಟದಲ್ಲಿ ನಿರತರಾಗಿದ್ದಾಗ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ನಗರದ ಕಾಲೇಜೊಂದರ ವಿದ್ಯಾರ್ಥಿಗಳಾಗಿರುವ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಡ್ರಗ್ಸ್‌ ಮಾರಾಟ : ಎಂಟು ವಿದ್ಯಾರ್ಥಿಗಳ ಬಂಧನ Read More »

ಮಂಗಳೂರು : ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 61 ಲ.ರೂ. ವಂಚನೆ

ನಿಮ್ಮ ಐಡಿ ಕಾರ್ಡ್‌ ಬಳಸಿ ಡ್ರಗ್ಸ್‌ ದಂಧೆ ನಡೆಸಿದ್ದಾರೆ ಎಂದು ಬೆದರಿಕೆಯೊಡ್ಡಿ ಮೋಸ ಮಂಗಳೂರು: ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಹಂತ ಹಂತವಾಗಿ 61.15 ಲ.ರೂ. ವರ್ಗಾಯಿಸಿಕೊಂಡು ವಂಚಿಸಿರುವ ಮತ್ತೊಂದು ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಜೂ.19ರಂದು ಬೆಳಗ್ಗೆ ತನಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ತಾನು ಮುಂಬೈಯ ಕೊಲಾಬ ಪೊಲೀಸ್ ಠಾಣೆಯ ಅಧಿಕಾರಿ ಸಂದೀಪ್ ಎನ್ನುತ್ತಾ ಇಂಗ್ಲಿಷ್‌ನಲ್ಲಿ ಮಾತನಾಡಿದ. ನಿಮ್ಮ ಗುರುತಿನ ಚೀಟಿ ಬಳಸಿ ಯಾರೋ ಮಾನವ

ಮಂಗಳೂರು : ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 61 ಲ.ರೂ. ವಂಚನೆ Read More »

error: Content is protected !!
Scroll to Top