ದಕ್ಷಿಣ ಕನ್ನಡ

ತಪ್ಪು ಮಾಡಿದವರನ್ನು ‌ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ : ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಯಾರೇ ತಪ್ಪು ಮಾಡಿರಲಿ, ಅವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಹಾಸ್ ಹತ್ಯೆ ಮತ್ತು ಅಶ್ರಫ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಲಾಗಿದೆ. ಹಾಗೆಯೇ ಆರೋಪಿಗಳ ಬಂಧನವೂ ಆಗಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು NIA ತನಿಖೆಗೆ ವಹಿಸಲಾಗಿದ್ದು, ಮುಂದಿನ ತನಿಖೆ ಅವರು ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅಶ್ರಫ್ ಹತ್ಯೆಗೆ ಸಂಬಂಧಿಸಿದ ಹಾಗೆ ಈಗಿರುವ ಸಾಕ್ಷ್ಯಾಧಾರಗಳ ಪ್ರಕಾರ […]

ತಪ್ಪು ಮಾಡಿದವರನ್ನು ‌ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ : ಸುಧೀರ್ ಕುಮಾರ್ ರೆಡ್ಡಿ Read More »

ನೀಟ್‍ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣ | ಲಕ್ನೋ ಕಿಂಗ್‍ ಜಾರ್ಜ್ ಮೆಡಿಕಲ್‍ ಯುನಿವರ್ಸಿಟಿಯಲ್ಲಿ ಸೀಟು ಗಿಟ್ಟಿಸಿಕೊಂಡ ಯುವ ವೈದ್ಯ ಡಾ.ಅವಿನ್‍

ಕಡಬ: ನೀಟ್ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಕಡಬದ ಯುವ ವೈದ್ಯರೋರ್ವರು ದೇಶದ ಪ್ರತಿಷ್ಠಿತ ಲಕ್ಕೋ ಕಿಂಗ್ ಜಾರ್ಜ್ ಮೆಡಿಕಲ್‌ ಯುನಿವರ್ಸಿಟಿಯಲ್ಲಿ ಸರ್ಕಾರಿ ಕೋಟಾದಡಿ ಸೀಟು ಗಿಟ್ಟಿಸಿಕೊಂಡಿದ್ದಾರೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ದೋಣಿಮನೆ ದುಷ್ಯಂತ ಗೌಡ ಮತ್ತು ಪ್ರೇಮ ದಂಪತಿ ಪುತ್ರ ಯುವ ವೈದ್ಯ ಡಾ. ಅವಿನ್ ದೋಣಿಮನೆ, ನೀಟ್ ಪರೀಕ್ಷೆ ಬರೆದು MCh ನ್ಯೂರೋ ಸರ್ಜರಿ (Brain & Spine Surgery) ವ್ಯಾಸಂಗಕ್ಕೆ ಉಚಿತ ಸೀಟ್ ಪಡೆದುಕೊಂಡಿದ್ದಾರೆ. ತೀರಾ ಬಡ ಕುಟುಂಬದಿಂದ

ನೀಟ್‍ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣ | ಲಕ್ನೋ ಕಿಂಗ್‍ ಜಾರ್ಜ್ ಮೆಡಿಕಲ್‍ ಯುನಿವರ್ಸಿಟಿಯಲ್ಲಿ ಸೀಟು ಗಿಟ್ಟಿಸಿಕೊಂಡ ಯುವ ವೈದ್ಯ ಡಾ.ಅವಿನ್‍ Read More »

ಮಂಗಳೂರು: ಏಳು ಜಾನುವಾರುಗಳು ಅನುಮಾನಾಸ್ಪದ ಸಾವು

ವಿಷ ಹಾಕಿ ಕೊಂದಿರುವ ಶಂಕೆ ಮಂಗಳೂರು : ನಗರದ ಹೊರವಲಯ ನೀರುಮಾರ್ಗದ ಸಮೀಪ ಕೆಲರಾಯಿ ಚರ್ಚ್ ಬಳಿಯ ನಿವಾಸಿಯೊಬ್ಬರು ಸಾಕಿರುವ 7 ದನಗಳು ಸತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ಹೈನುಗಾರರಾಗಿರುವ ಜೋಸೆಫ್ ಸ್ಟ್ಯಾನಿ ಪ್ರಕಾಶ್ ಎಂಬವರ ಮನೆಯ 7 ದನಗಳು ಹತ್ತು ದಿನಗಳ ಅವಧಿಯಲ್ಲಿ ಸಾವನ್ನಪ್ಪಿವೆ. ದನಗಳಿಗೆ ಯಾರೋ ವಿಷ ಪದಾರ್ಥ ನೀಡಿ ಸಾಯಿಸಿರುವ ಬಗ್ಗೆ ಅನುಮಾನವಿದೆ. ಕರು ಇರುವ ಹಾಲು ಕರೆಯುವ, ಗರ್ಭಿಣಿ ಹಸುಗಳು, ದೊಡ್ಡ ಮತ್ತು ಮಧ್ಯಮ ಗಾತ್ರದ ಎತ್ತುಗಳು ಸೇರಿವೆ. ಜೋಸೆಫ್ ಸ್ಟ್ಯಾನಿ ಪ್ರಕಾಶ್

ಮಂಗಳೂರು: ಏಳು ಜಾನುವಾರುಗಳು ಅನುಮಾನಾಸ್ಪದ ಸಾವು Read More »

ನಿಯಂತ್ರಣ ತಪ್ಪಿ ಮಗುಚಿಬಿದ್ದ ಆಟೋ : ಸಹಸವಾರ ಮೃತ್ಯು

ಬೆಳ್ತಂಗಡಿ: ಆಟೋ ಚಾಲಕರೋರ್ವರ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಪರಿಣಾಮ  ಸಹಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಬದ್ಯಾರು ಸಮೀಪ ಭಾನುವಾರ ಸಂಜೆ ನಡೆದಿದೆ. ಕುಕ್ಕಳ, ಮಾಲಾಡಿ ಗ್ರಾಮದ ಅಣ್ಣು ಹೆಗ್ಡೆ ಅವರ ಪುತ್ರ ಚರಣ್‍ ಹೆಗ್ಡೆ (33) ಮೃತಪಟ್ಟ ಸಹಸವಾರ. ಚರಣ್‍ ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ. ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ, ಆಟೋದಲ್ಲಿ ಮೂವರು ಪ್ರಯಾಣಿಕರಿದ್ದರು

ನಿಯಂತ್ರಣ ತಪ್ಪಿ ಮಗುಚಿಬಿದ್ದ ಆಟೋ : ಸಹಸವಾರ ಮೃತ್ಯು Read More »

ಗ್ರಾಮ ಪಂಚಾಯತ್‌ ಸಭೆಯಲ್ಲಿ ತುಳುವಿಗೆ ನಿಷೇಧ ಆದೇಶ ವಾಪಸ್‌

ತುಳು ಭಾಷಿಕರ ಆಕ್ರೋಶಕ್ಕೆ ಮಣಿದು ಸುತ್ತೋಲೆ ವಾಪಸ್‌ ತೆಗೆದುಕೊಂಡ ಜಿ.ಪಂ. ಮಂಗಳೂರು: ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚಿಸುವಾಗ ತುಳು ಭಾಷೆ ಬಳಕೆ ಮಾಡಬಾರದು ಎಂದು ನೀಡಿದ್ದ ಸುತ್ತೋಲೆಯನ್ನು ತುಳುವರ ಆಕ್ರೋಶಕ್ಕೆ ಮಣಿದು ಜಿಲ್ಲಾ ಪಂಚಾಯತ್‌ ವಾಪಾಸು ತೆಗೆದುಕೊಂಡಿದೆ. ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆಯಲ್ಲಿ ಚರ್ಚೆ ಮಾಡಬಾರದು. ಕನ್ನಡ ಭಾಷೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿ ಜಿಲ್ಲಾ ಪಂಚಾಯತ್‌ ಹೊರಡಿಸಿದ ಸುತ್ತೋಲೆಗೆ ತುಳುವರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಸಂಸದರಾದ

ಗ್ರಾಮ ಪಂಚಾಯತ್‌ ಸಭೆಯಲ್ಲಿ ತುಳುವಿಗೆ ನಿಷೇಧ ಆದೇಶ ವಾಪಸ್‌ Read More »

ಸೌಜನ್ಯ ಹೆಸರಿನಲ್ಲಿ ಫೇಸ್ ಬುಕ್‍ ಖಾತೆ | ಲಕ್ಷಾಂತರ ವಂಚನೆ

ಮಂಗಳೂರು: ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಸ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್‌ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ರಾಜೇಶ್ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್‌ಬುಕ್ ಮೂಲಕ ಪರಿಚಯವಾಗಿದ್ದಾಳೆ. ಸೌಜನ್ಯ ಹೆಲ್ತ್‌ ಲೈನ್ ಹೆಸರಿನಲ್ಲಿ ವಂಚನೆಗೊಳಗಾದವರಿಗೆ ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ

ಸೌಜನ್ಯ ಹೆಸರಿನಲ್ಲಿ ಫೇಸ್ ಬುಕ್‍ ಖಾತೆ | ಲಕ್ಷಾಂತರ ವಂಚನೆ Read More »

ನಾಳೆ (ಜೂ.22) : ಪುಣ್ಚಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

ಕಡಬ: ತಾಲೂಕಿನ ಪುಣ್ಚಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾ ಶತಮಾನೋತ್ಸವ ಸಮಿತಿ ನೇತೃತ್ವದಲ್ಲಿ ಸುಳ್ಯ ಕೆವಿಜಿ ದಂತ ಕಾಲೇಜು ಹಾಗೂ ಆಸ್ಪತ್ರೆ ಸಹಯೋಗದಲ್ಲಿ, ಪುಣ್ಚಪ್ಪಾಡಿ ಸಮರ್ಥ ಜನಸೇವಾ ಟ್ರಸ್ಟ್‍, ಸವಣೂರು ಸೇವಾ ಭಾರತಿ ಸಹಕಾರದೊಂದಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ಜೂ.22 (ನಾಳೆ) ಭಾನುವಾರ ಪುಣ್ಚಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆ ತನಕ ನಡೆಯುವ ಶಿಬಿರದಲ್ಲಿ ದಂತ

ನಾಳೆ (ಜೂ.22) : ಪುಣ್ಚಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ Read More »

ದ.ಕ.ಜಿಲ್ಲೆಯ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತುಳು ಭಾಷೆ ಬಳಕೆ ಮಾಡುವಂತಿಲ್ಲ | ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ನಿರ್ದೇಶನ ನೀಡಲು ಸರಕಾರದಿಂದ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ನಡೆಯುವ  ಸಾಮಾನ್ಯ ಸಭೆಗಳಲ್ಲಿ ಚರ್ಚೆಗೆ ತುಳು ಭಾಷೆ ಬಳಸದಂತೆ ಸೂಚನೆ ನೀಡಲಾಗಿದ್ದು, ಪರಿಣಾಮ ಇದೀಗ ತುಳು ಭಾಷಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತುಳು ಭಾಷೆ ಬಳಕೆ ಮಾಡದಂತೆ ಮತ್ತು ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ನಿರ್ದೇಶನ ನೀಡಲು ಉಲ್ಲೇಖ (1)ರಂತೆ ಮನವಿ ಸಲ್ಲಿಸಿರುತ್ತಾರೆ. ಸದ್ದಿ_ಉಲ್ಲೇಖಿತ ಮನವಿಯನ್ನು ಈ ಪತ್ರದೊಂದಿಗೆ ಲಗತ್ತಿಸುತ್ತಾ, ಮನವಿಯ ಕುರಿತು ನಿಯಮಾನುಸಾರ

ದ.ಕ.ಜಿಲ್ಲೆಯ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತುಳು ಭಾಷೆ ಬಳಕೆ ಮಾಡುವಂತಿಲ್ಲ | ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ನಿರ್ದೇಶನ ನೀಡಲು ಸರಕಾರದಿಂದ ಸೂಚನೆ Read More »

ಮಂಗಳೂರು – ಬೆಂಗಳೂರು ನಡುವಿನ ರೈಲ್ವೆ ಹಳಿ ಮೇಲೆ ಬಿದ್ದ ಬಂಡೆ ತೆರವು | ರೈಲು ಸಂಚಾರ ಪುನರಾರಂಭ

ಸಕಲೇಶಪುರ: ಬೆಂಗಳೂರು – ಮಂಗಳೂರು ನಡುವಿನ ರೈಲು ಹಳಿಯ ಮೇಲೆ ಬಿದ್ದ ಮೂರು ಬಂಡೆಗಳನ್ನು ತೆರವು ಮಾಡಲಾಗಿದ್ದು, ರೈಲು ಸಂಚಾರ ಪುನರಾರಂಭವಾಗಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಗುಡ್ಡ ಕುಸಿತದ ಕಾರಣಕ್ಕೆ ಈ ಘಟನೆ ಸಂಭವಿಸಿದೆ ಎಂದು ಭಾವಿಸಲಾಗಿತ್ತಾದರೂ ಆ ಬಳಿಕ ರೈಲ್ವೆ ವ್ಯಾಗನ್‌ನಲ್ಲಿ ಸಾಗಿಸುತ್ತಿದ್ದ ಬಂಡೆಗಳು ಉರುಳಿ ಬಿದ್ದು ಈ ಘಟನೆ ನಡೆದಿರುವುದು ತಿಳಿದು ಬಂದಿದ್ದಾಗಿಯೂ ಇಲಾಖೆ ಹೇಳಿದೆ. ಇಂದು (ಜೂ. 21) ಬೆಳಗ್ಗೆ ಸುಮಾರು 4 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದ್ದು,

ಮಂಗಳೂರು – ಬೆಂಗಳೂರು ನಡುವಿನ ರೈಲ್ವೆ ಹಳಿ ಮೇಲೆ ಬಿದ್ದ ಬಂಡೆ ತೆರವು | ರೈಲು ಸಂಚಾರ ಪುನರಾರಂಭ Read More »

ನಿವೃತ್ತ ಮುಖ್ಯ ಗುರು ಕುಶಾಲಪ್ಪ ಬರೆಮೇಲು ಅವರಿಗೆ ನ್ಯೂಸ್ ಪುತ್ತೂರು ವತಿಯಿಂದ ಅಭಿನಂದನೆ

ಪುತ್ತೂರು: ಕುದ್ಮಾರು ಸ. ಹಿ. ಪ್ರಾ. ಶಾಲಾ ಮುಖ್ಯಗುರುಗಳಾಗಿದ್ದು ವಯೋನಿವೃತ್ತಿ ಹೊಂದಿದ ಬರೆಮೇಲು ಕುಶಾಲಪ್ಪರಿಗೆ ನ್ಯೂಸ್ ಪುತ್ತೂರು ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ನ್ಯೂಸ್ ಪುತ್ತೂರು ಇದರ ಅಧ್ಯಕ್ಷ ಸೀತಾರಾಮ ಕೇವಳ ಮತ್ತು ನಿರ್ದೇಶಕ ನಾಗೇಶ್ ಕೆಡೆಂಜಿಯವರು ಶಾಲು ಅರ್ಪಿಸಿ ಹೂ ಗುಚ್ಛ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕುಶಾಲಪ್ಪರ ಪತ್ನಿ, ಬೊಬ್ಬೇಕೇರಿ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಗೀತಾ ಕುಮಾರಿ ಡಿ. ವೇದಿಕೆಯಲ್ಲಿದ್ದರು. ರಾಕೇಶ್ ರೈ ಕೆಡೆಂಜಿಯವರು ಶಾಲು ಹೊದಿಸಿ ಸನ್ಮಾನಿಸಿದರು.  ಕುದ್ಮಾರು ಶಾಲಾ ಮುಖ್ಯೋಪಾಧ್ಯಾಯಿನಿ

ನಿವೃತ್ತ ಮುಖ್ಯ ಗುರು ಕುಶಾಲಪ್ಪ ಬರೆಮೇಲು ಅವರಿಗೆ ನ್ಯೂಸ್ ಪುತ್ತೂರು ವತಿಯಿಂದ ಅಭಿನಂದನೆ Read More »

error: Content is protected !!
Scroll to Top