ದಕ್ಷಿಣ ಕನ್ನಡ

ಮಂಗಳೂರು: ಹೃದಯಾಘಾತದಿಂದ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

ಮಂಗಳೂರು : ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್‌ನ ಕೃಷ್ಣಾಪುರ ಹಿಲ್‌ಸೈಡ್ ಬಳಿ ಸಂಭವಿಸಿದೆ.ಮೃತರನ್ನು ಹಿಲ್‌ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಅವರು ಸುರತ್ಕಲ್‌ನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು. ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಫ್ತಾಬ್ ಮನೆಯಲ್ಲಿ ಸ್ನಾನಕ್ಕೆ ಹೋಗುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅಸ್ಗರ್ ಅಲಿ ಅವರ ನಾಲ್ಕು ಮಕ್ಕಳಲ್ಲಿ ಅಫ್ತಾಬ್ ಏಕೈಕ ಪುತ್ರ. ಅವರ ಮೂವರು ಸಹೋದರಿಯರಿಗೆ […]

ಮಂಗಳೂರು: ಹೃದಯಾಘಾತದಿಂದ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು Read More »

ದ.ಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ)ಸಮಿತಿ ಸದಸ್ಯರಾಗಿ ಪೂರ್ಣಿಮಾ ಅಪ್ಪಯ್ಯ ಸೂಂತೋಡು

ಸುಳ್ಯ: ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ)ಯ ಸದಸ್ಯರಾಗಿ ಉಬರಡ್ಕ ಮಿತ್ತೂರು ಗ್ರಾ.ಪಂ ಅಧ್ಯಕ್ಷೆ ಪೂರ್ಣಿಮಾ ಅಪ್ಪಯ್ಯ ಸೂಂತೋಡು ನೇಮಕಗೊಂಡಿದ್ದಾರೆ. ಉಬರಡ್ಕ ಮಿತ್ತೂರು ಗ್ರಾ.ಪಂ.ನ ಅಧ್ಯಕ್ಷೆಯಾಗಿ ಕಳೆದ 2 ವರ್ಷದಿಂದ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಇವರು ಅಪ್ಪಯ್ಯ ಸೂಂತೋಡುರವರ ಪತ್ನಿ. ಶ್ರೀ ಶಾರದಾ ಮಹಿಳಾ ಕಾಲೇಜಿನ ಹಳೆ ವಿದ್ಯಾರ್ಥಿನಿ ಸುಳ್ಯದ ಶ್ರೀ ಶಾರದಾ ಮಹಿಳಾ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿದ ಇವರು ಉತ್ತಮ ಕಲಾವಿದೆಯೂ ಆಗಿದ್ದರು. ಸಂಸದರು

ದ.ಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ)ಸಮಿತಿ ಸದಸ್ಯರಾಗಿ ಪೂರ್ಣಿಮಾ ಅಪ್ಪಯ್ಯ ಸೂಂತೋಡು Read More »

ಕುಡುಪು ಗುಂಪು ಹತ್ಯೆ ಪ್ರಕರಣ : ಆಶ್ರಫ್‌ ಕುಟುಂಬಸ್ಥರಿಗೆ ಪರಿಹಾರ ವಿತರಣೆ

ಸಚಿವ ಜಮೀರ್‌ 10 ಲ.ರೂ. ; ಸ್ಪೀಕರ್‌ ಯು.ಟಿ.ಖಾದರ್‌ 5 ಲ.ರೂ. ವೈಯಕ್ತಿಕ ನೆಲೆಯಲ್ಲಿ ಕೊಡುಗೆ ಮಂಗಳೂರು: ನಗರದ ಕುಡುಪು ಸಮೀಪ ಮೈದಾನದಲ್ಲಿ ನಡೆದಿದ್ದ ಗುಂಪು ಹತ್ಯೆಯಲ್ಲಿ ಸಾವನ್ನಪ್ಪಿದ ಕೇರಳದ ವಯನಾಡಿನ ಅಶ್ರಫ್ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಧನ ವಿತರಿಸಿದೆ. ನಿನ್ನೆ ರಾಜ್ಯ ಕಾಂಗ್ರೆಸ್ ನಿಯೋಗ ಆಶ್ರಫ್‌ ಕುಟುಂಬಸ್ಥರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದು, ಈ ಸಂದರ್ಭದಲ್ಲಿ ಪರಿಹಾರದ ಚೆಕ್‌ ಹಸ್ತಾಂತರಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಕೆ.ಸಿ.ವೇಣುಗೋಪಾಲ್ ಕೋರಿಕೆಯಂತೆ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಬೆಂಗಳೂರು ನಿವಾಸದಲ್ಲಿ

ಕುಡುಪು ಗುಂಪು ಹತ್ಯೆ ಪ್ರಕರಣ : ಆಶ್ರಫ್‌ ಕುಟುಂಬಸ್ಥರಿಗೆ ಪರಿಹಾರ ವಿತರಣೆ Read More »

ಯುವತಿಗೆ ಹಲ್ಲೆ ಮಾಡಿ ಆಕೆಯ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಯುವಕ

ಬಂಟ್ವಾಳ: ಯುವತಿಗೆ ಹಲ್ಲೆ ಮಾಡಿದ ಯುವಕನೊಬ್ಬ ಆಕೆಯ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಸುಜೀರಿನಲ್ಲಿ ‌ನಡೆದಿದೆ. ಗ್ಯಾರೇಜಿನಲ್ಲಿ ಕೆಲಸ‌ ಮಾಡುತ್ತಿದ್ದ ಕೊಡ್ಮಣ್ ನಿವಾಸಿ ಸುಧೀರ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ಹಲ್ಲೆಗೊಳಗಾದ ಯುವತಿ ತುಂಬೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಯುವತಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಈ ಘಟನೆ ನಡೆದಿರುವ ಸಾಧ್ಯತೆ ಇದೆ. ಈ ಘಟನೆಗೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವತಿಗೆ ಹಲ್ಲೆ ಮಾಡಿ ಆಕೆಯ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಯುವಕ Read More »

ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು: ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಮೈಸೂರಿನಲ್ಲಿ ಮಂಗಳೂರು ನಗರದ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಧ್ರುವ ಡಿ. ಶೆಟ್ಟಿ ಎಂದು ಗುರುತಿಸಲಾಗಿದ್ದು, ಈತ ಹಾಸನದ ಸಕಲೇಶಪುರದವನು ಎಂದು ತಿಳಿದು ಬಂದಿದೆ. ಈತನ ಬಗ್ಗೆ ಮಾದಕ ವಸ್ತು ಪೂರೈಕೆ ಆರೋಪದಲ್ಲಿ ಜುಲೈ 2 ರಂದು ಪ್ರಕರಣ ದಾಖಲಾಗಿತ್ತು. ಈಗಾಗಲೇ ಐವರು ಆರೋಪಿಗಳನ್ನು ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಬಂಧಿಸಲಾಗಿದ್ದು, ಇವರೆಲ್ಲರಿಗೂ ಧ್ರುವ ಡ್ರಗ್ಸ್ ಪೂರೈಕೆ ಮಾಡುತ್ತಿದ್ದನು ಎಂಬುದಾಗಿ ಮೂಲಗಳು ತಿಳಿಸಿವೆ. ಬಂಧಿತನಿಂದ ಮೊಬೈಲ್ ಫೋನ್,

ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿ ಪೊಲೀಸ್ ವಶಕ್ಕೆ Read More »

ವಿದೇಶದಲ್ಲಿ ಉದ್ಯೋಗ ಕೊಡುವುದಾಗಿ ನಂಬಿಸಿ ವಂಚನೆ : ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಕೋಟ್ಯಾಂತರ ವಂಚಿಸಿದ ಕುರಿತು ಮಂಗಳೂರು ಪೂರ್ವ ಠಾಣೆಯಲ್ಲಿ ಇಬ್ಬರ ಮೇಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರಿನ ಬೆಂದೂರ್ ವೆಲ್ ಎಂಬಲ್ಲಿ Hiruglim Elegant Overseas International (Opc) Private Limited ಹೆಸರಿನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ನಂಬಿಕೆ ಬರುವ ಹಾಗೇ ನಂಬಿಸಿ ಅವರಿಂದ ಲಕ್ಷಾಂತರ ಹಣವನ್ನು ಪಡೆದುಕೊಂಡು ವೀಸಾ ನೀಡದೇ ಸುಮಾರು 259 ಜನರಿಗೆ ಸುಮಾರು 4 ಕೋಟಿ 50 ಲಕ್ಷ ರೂಪಾಯಿ ವಂಚನೆ ಮಾಡಿದ ಬಗ್ಗೆ ಮಂಗಳೂರು

ವಿದೇಶದಲ್ಲಿ ಉದ್ಯೋಗ ಕೊಡುವುದಾಗಿ ನಂಬಿಸಿ ವಂಚನೆ : ಇಬ್ಬರು ಆರೋಪಿಗಳ ಬಂಧನ Read More »

ಮಂಗಳೂರಿನ ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 3.16 ಕೋಟಿ ರೂ. ಲೂಟಿ

ಪತಿಯ ಹೆಸರಿನಲ್ಲಿ ಸಿಮ್‌ ಖರೀದಿಸಿ ವಂಚನೆ ಎಸಗಲಾಗಿದೆ ಎಂದು ಬೆದರಿಸಿದ್ದ ವಂಚಕರು ಮಂಗಳೂರು : ಮಂಗಳೂರಿನ ಮಹಿಳೆಯೊಬ್ಬರನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಬರೋಬ್ಬರಿ 3.16 ಕೋಟಿ ರೂ. ಖಾತೆಯಿಂದ ಎಗರಿಸಿದ ಕುರಿತು ದೂರು ದಾಖಲಾಗಿದೆ. ಮಹಿಳೆಯ ಪತಿಯ ಹೆಸರಿನಲ್ಲಿ ಹೊಸ ಸಿಮ್ ಖರೀದಿಸಿ ಅದರಿಂದ ವಂಚನೆಯ ಕರೆ ಮಾಡಲಾಗಿದೆ ಮತ್ತು ಸಂಶಯಾಸ್ಪದ ಲಿಂಕ್ ಕಳುಹಿಸಲಾಗಿದೆ ಎಂದು ನಂಬಿಸಿದ ಸೈಬರ್ ವಂಚಕರು 3,16,52,142 ರೂ. ಲೂಟಿ ಮಾಡಿದ್ದಾರೆ. ಜೂನ್ 5ರಂದು ಮುಂಬೈ ಸಹಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅನುಶರ್ಮ

ಮಂಗಳೂರಿನ ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 3.16 ಕೋಟಿ ರೂ. ಲೂಟಿ Read More »

ಡಿವೈಡರ್ ಗೆ ಕಾರು ಡಿಕ್ಕಿ : ಚಾಲಕ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಪಾವೂರು ನಿವಾಸಿ ನೌಫಲ್ ಅಪಘಾತದಿಂದ ಮೃತಪಟ್ಟವರು. ನೌಫಲ್‍ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಡಿವೈಡರ್ ಗೆ ಕಾರು ಡಿಕ್ಕಿ : ಚಾಲಕ ಸ್ಥಳದಲ್ಲೇ ಮೃತ್ಯು Read More »

ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿಯ ವಿಡಿಯೋ ಪತ್ತೆ : ಕರಾವಳಿಯಲ್ಲಿ ಸಂಚಲನ

ಬಸ್‌ಗೆ ಕಲ್ಲು ತೂರಿದ ಪ್ರಕರಣದಲ್ಲಿ ಸೆರೆಯಾದ ಸಂದರ್ಭದಲ್ಲಿ ಬಯಲಾದ ಇನ್ನೊಂದು ರಹಸ್ಯ ಮಂಗಳೂರು : ಅಪಘಾತವೆಸಗಿದ ಖಾಸಗಿ ಬಸ್​ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಸೆರೆಯಾಗಿದ್ದ ಹಿಂದೂ ಮುಖಂಡ ಸಮಿತ್‌ರಾಜ್ ಧರೆಗುಡ್ಡೆಯ ಮೊಬೈಲ್‌ನಲ್ಲಿ ಕೆಲವು ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿಯ ಓರ್ವ ರಾಜಕಾರಣಿಯ ಔಿಡಿಯೋ ಇದೆ ಎಂಬ ವಿಚಾರ ಸಂಚಲನವುಂಟುಮಾಡಿದೆ. ಮೊಬೈಲ್​ನಲ್ಲಿ ಕರಾವಳಿಯ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ ಶುರುವಾಗಿದೆ. ಮೂಡುಬಿದಿರೆ ಪೊಲೀಸರ ತನಿಖೆ ವೇಳೆ

ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿಯ ವಿಡಿಯೋ ಪತ್ತೆ : ಕರಾವಳಿಯಲ್ಲಿ ಸಂಚಲನ Read More »

ಮೇಯಲು ಬಿಟ್ಟ ದನಗಳನ್ನು ಕಾರಿನಲ್ಲಿ ತುಂಬಿಸಿ ಕೊಂಡೊಯ್ದ ದುರುಳರು | ಪ್ರಕರಣ ದಾಖಲು

ಬಿ.ಸಿ.ರೋಡ್ : ಮೇಯಲು ಬಿಟ್ಟಿದ್ದ ದನಗಳನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ತುಂಬಿಸಿ ಕೊಂಡೊಯ್ದ ಕುರಿತು ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಮುಂಜೆ ಗ್ರಾಮದ ಕಲಾಯಿ ಹೌಸ್ ಎಂಬಲ್ಲಿ ನಡೆದಿದೆ. ಮಲ್ಲೂರು ಗ್ರಾಮದ ಘಟ್ಟಬೆಟ್ಡು ನಿವಾಸಿ ಜಗದೀಶ್ ಕುಲಾಲ್ ರವರಲ್ಲಿ 12 ದನಗಳಿದ್ದು ಜೂನ್ 28ರಂದು ಮೇಯಲು ಬಿಟ್ಡಿದ್ದು, ಇದರಲ್ಲಿ ಎರಡು ಗಂಡು ಕರುಗಳು ಕಾಣೆಯಾಗಿದೆ. ಈ ಬಗ್ಗೆ ಸ್ಥಳಿಯರಲ್ಲಿ ವಿಚಾರಿಸಿದ್ದು ಕಲಾಯಿ ಹೌಸ್ ಎಂಬಲ್ಲಿ ರಸ್ತೆ ಕಾಣುವಂತೆ ಸಿಸಿ

ಮೇಯಲು ಬಿಟ್ಟ ದನಗಳನ್ನು ಕಾರಿನಲ್ಲಿ ತುಂಬಿಸಿ ಕೊಂಡೊಯ್ದ ದುರುಳರು | ಪ್ರಕರಣ ದಾಖಲು Read More »

error: Content is protected !!
Scroll to Top