ದಕ್ಷಿಣ ಕನ್ನಡ

ಬಂಟ್ವಾಳ : ಚಲಿಸುತ್ತಿದ್ದ ರಿಕ್ಷಾ ಬೆಂಕಿಗಾಹುತಿ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ರಿಕ್ಷಾ ಬೆಂಕಿಗಾಹುತಿಯಾದ ಘಟನೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ಶುಕ್ರವಾರ ನಡೆದಿದೆ. ಬಿ.ಸಿ.ರೋಡು – ಧರ್ಮಸ್ಥಳ ರಸ್ತೆಯ ಮೂರ್ಜೆ ವಿಶಾಲನಗರ ಎಂಬಲ್ಲಿ ಈ ಘಟನೆ ನಡೆದಿದೆ. ಬಾಂಬಿಲ ನಿವಾಸಿ ರೇವಣ್ಣ ಅವರ ಗ್ಯಾಸ್ ಸಂಪರ್ಕ ಹೊಂದಿದ ರಿಕ್ಷಾದಲ್ಲಿ ಗ್ಯಾಸ್ ಖಾಲಿಯಾಗಿದೆ ಎಂಬ ಕಾರಣಕ್ಕಾಗಿ ಪೆಟ್ರೋಲ್ ತುಂಬಿಸಲು ಹೋಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಗ್ಯಾಸ್ ಸೋರಿಕೆಯ ರೀತಿಯಲ್ಲಿ ವಾಸನೆ ಬರುತ್ತಿದೆ ಎಂದು ಚಾಲಕ ರೇವಣ್ಣ […]

ಬಂಟ್ವಾಳ : ಚಲಿಸುತ್ತಿದ್ದ ರಿಕ್ಷಾ ಬೆಂಕಿಗಾಹುತಿ Read More »

ಬಂಟ್ವಾಳ : ಮೆಹಂದಿ ಕಾರ್ಯಕ್ರಮದಲ್ಲಿ ನಿರೂಪಕ ಕುಸಿದು ಬಿದ್ದು ಸಾವು

ಬಂಟ್ವಾಳ : ಯುವ ನಿರೂಪಕನೋರ್ವ ಮದುವೆಯ ಮೆಹಂದಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿಥ್ ( 32) ಮೃತಪಟ್ಟ ಯುವಕ. ನಾಯಿಲದ ಸಂಬಂಧಿಕರ ಮನೆಯಲ್ಲಿ ಮದರಂಗಿ ಕಾರ್ಯಕ್ರಮದ ನಿರೂಪಣೆಗಾಗಿ ವೇದಿಕೆ ಹತ್ತಿ ಕಾರ್ಯಕ್ರಮ ಪ್ರಾರಂಭಿಸುತ್ತಿದ್ದಂತೆ ಹಠಾತ್ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅವರು ಮೃತಪಟ್ಟ ಬಗ್ಗೆ ವೈದ್ಯರು

ಬಂಟ್ವಾಳ : ಮೆಹಂದಿ ಕಾರ್ಯಕ್ರಮದಲ್ಲಿ ನಿರೂಪಕ ಕುಸಿದು ಬಿದ್ದು ಸಾವು Read More »

ಮಂಗಳೂರು: ಪೋಕ್ಸೊ ಕೇಸ್‌ ಅಪರಾಧಿಗೆ 20 ವರ್ಷ ಜೈಲು

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣ ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಅಪರಾಧಿ ಗದಗ ತಾಲೂಕಿನ ಹೊಳೆಮುನ್ನೂರು ನಿವಾಸಿ ಮಹೇಶ ಮಾದರ (20) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್ ಸಿ-2 (ಪೊಕ್ಸೊ) ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರ ಹೊರವಲಯದಲ್ಲಿ ಬಾಡಿಗೆ ಮನೆಯಲ್ಲಿ ತಂದೆ ತಾಯಿಯೊಂದಿಗೆ ವಾಸವಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಹೋಮ್ ನರ್ಸ್ ಕೆಲಸ

ಮಂಗಳೂರು: ಪೋಕ್ಸೊ ಕೇಸ್‌ ಅಪರಾಧಿಗೆ 20 ವರ್ಷ ಜೈಲು Read More »

ಕೇರಳದ ಹೋಟೆಲ್‌ ಮಾಲಕನ ಹತ್ಯೆ : ಬೆಳ್ತಂಗಡಿಯ ಯುವಕ ಸೆರೆ

ಕೂಪನ್‌ಗಾಗಿ ನಡೆದ ಜಗಳದಲ್ಲಿ ಹತ್ಯೆ ಬೆಳ್ತಂಗಡಿ: ತಾನು ಕೆಲಸ ಮಾಡುತ್ತಿದ್ದ ಕೇರಳದ ಹೋಟೆಲ್‌ನ ಮಾಲಕನನ್ನೇ ಏ.6ರಂದು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಪೆರ್ದಾಡಿ ನಿವಾಸಿ ಉಮರಬ್ಬ ಎಂಬವರ ಪುತ್ರ ಇರ್ಷಾದ್ (32) ಎಂಬಾತನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕೇರಳದ ಚಡಯಮಂಗಳ- ಕುರಿಯೋಡು ಸ್ವೈಸಿ ಎಂಬ ಹೆಸರಿನ ಹೊಟೇಲ್ ಉದ್ಯಮ ನಡೆಸುತ್ತಿದ್ದ ಮಾಲೀಕ ಶಕೀ‌ರ್ ಹುಸೈನ್ ಎಂಬವರನ್ನು ಇರ್ಷಾದ್ ಕೊಲೆ ಮಾಡಿದ್ದಾನೆ. ಬಿರಿಯಾಣಿ ಪಾಕ ತಜ್ಞನಾಗಿದ್ದ ಬೆಳ್ತಂಗಡಿಯ ಇರ್ಷಾದ್ ತಾನು

ಕೇರಳದ ಹೋಟೆಲ್‌ ಮಾಲಕನ ಹತ್ಯೆ : ಬೆಳ್ತಂಗಡಿಯ ಯುವಕ ಸೆರೆ Read More »

ಇಬ್ಬರು ಕ್ರಿಮಿನಲ್‌ಗಳ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ

ವಿದೇಶಗಳಲ್ಲಿ ತಲೆಮರೆಸಿಕೊಂಡಿರುವ ಪಾತಕಿಗಳು ಮಂಗಳೂರು: ನಾನಾ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಇಂಟರ್‌ಪೋಲ್ ಮೂಲಕ ಪೊಲೀಸ್ ಇಲಾಖೆ ರೆಡ್‌ಕಾರ್ನರ್ ನೋಟಿಸ್ ಜಾರಿಗೊಳಿಸಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಸುಲೈಮಾನ್ ಯಾನೆ ಶಮೀರ್ (38) ಮತ್ತು ಶಂಶುದ್ದೀನ್ (36) ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. 2017ರಲ್ಲಿ ಕುಶಾಲನಗರದ ಸುಲೈಮಾನ್ ಯಾನೆ ಶಮೀರ್ ನಗರದ ಲೇಡಿಹಿಲ್ ಬಳಿ ಉರ್ವ ಠಾಣೆಯಲ್ಲಿ ಆಗ ಎಎಸ್ಸೈ ಆಗಿದ್ದ ಐತಪ್ಪ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿ

ಇಬ್ಬರು ಕ್ರಿಮಿನಲ್‌ಗಳ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ Read More »

ಸುಳ್ಯ: ರಸ್ತೆ ಬದಿ ತ್ಯಾಜ್ಯ ಎಸೆದವರ ವಿರುದ್ಧ ಕೇಸ್‌

ಬೆಂಗಮಲೆಯಲ್ಲಿ ರಸ್ತೆಯುದ್ಧಕ್ಕೂ ತ್ಯಾಜ್ಯ ರಾಶಿ ಮಂಗಳೂರು : ಸುಳ್ಯ ತಾಲೂಕಿನ ಐವರ್ನಾಡು ಗ್ರಾಪಂ ವ್ಯಾಪ್ತಿಯ ಬೆಳ್ಳಾರೆ-ಸುಳ್ಯ ರಸ್ತೆಯ ಬೆಂಗಮಲೆ ಎಂಬಲ್ಲಿ ರಸ್ತೆಯ ಬದಿ ತ್ಯಾಜ್ಯ ಎಸೆದಿರುವ ಅಂಗಡಿ ಮಾಲಕರ ಮೇಲೆ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬೇಂಗಮಲೆಯ 3 ಕಡೆಗಳಲ್ಲಿ ತ್ಯಾಜ್ಯದ ಚೀಲಗಳನ್ನು ಎಸೆದಿರುವುದು ಕಂಡು ಬಂದಿದೆ. ತೆರೆದು ಪರಿಶೀಲಿಸಿದಾಗ ಎಲ್ಲ ಮೂರೂ ತ್ಯಾಜ್ಯದ ಚೀಲಗಳಲ್ಲಿ ಸುಳ್ಯ ಗಾಂಧಿನಗರದ ಅಯೋಧ್ಯಾ ಮೆನ್ಸ್‌ಡ್ರೆಸ್ ಸ್ಪೋರ್ಟ್ಸ್‌ ಜೆರ್ಸಿ ಶಾಪ್ ಎಂಬ ವಸ್ತ್ರ ಮಳಿಗೆಗೆ ಸೇರಿದ ತ್ಯಾಜ್ಯಗಳಿರುವುದು ಕಂಡುಬಂದಿದೆ. ಚೀಲಗಳಲ್ಲಿ

ಸುಳ್ಯ: ರಸ್ತೆ ಬದಿ ತ್ಯಾಜ್ಯ ಎಸೆದವರ ವಿರುದ್ಧ ಕೇಸ್‌ Read More »

ವಿದ್ಯಾರ್ಥಿಗಳ ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರು : ಐವರು ಸೆರೆ

ಬಾಡಿಗೆ ರೂಮ್‌ನಲ್ಲಿದ್ದುಕೊಂಡು ಡ್ರಗ್ಸ್‌ ದಂಧೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮಂಗಳೂರು: ಶೈಕ್ಷಣಿಕ ನಗರಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ನಡೆಯುತ್ತಿದ್ದ ಮಾದಕ ವಸ್ತು ಜಾಲದ ವಿರುದ್ಧ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಮಾದಕ ವಸ್ತು ಮಾರಾಟ ಜಾಲದಲ್ಲಿ ತೊಡಗಿದ್ದ ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಇವರಿಂದ ಹಲವು ಮಾಹಿತಿಗಳು ಲಭ್ಯವಾಗಿವೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ವಿದ್ಯಾರ್ಥಿಯ ಪೋಷಕರೊಬ್ಬರು ತನ್ನ ಮಗನ ಬಳಿ ಸಣ್ಣ ಪ್ಯಾಕೆಟ್ ಗಾಂಜಾ ಸಿಕ್ಕಿದೆ ಎಂದು ಮಾಹಿತಿ ಪೊಲೀಸರಿಗೆ ಕೊಟ್ಟಿದ್ದರು. ಇವರಿಗೆ

ವಿದ್ಯಾರ್ಥಿಗಳ ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರು : ಐವರು ಸೆರೆ Read More »

ರೌಡಿಶೀಟರ್‌ ಆರಿಫ್‌ ಕೊಲೆ ಪ್ರಕರಣ : 7 ಆರೋಪಿಗಳ ಬಂಧನ

ಮಾ.27ರಂದು ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಕೊಲೆಯಾಗಿದ್ದ ಆರಿಫ್‌ ಮಂಗಳೂರು: ಕಿನ್ಯ ಅಜ್ಜಿನಡ್ಕ ನಿವಾಸಿ ರೌಡಿಶೀಟರ್ ಆರಿಫ್ ಕೊಲೆ ಪ್ರಕರಣದ ಏಳು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಲ್ಲೆಯಲ್ಲಿ ನೇರವಾಗಿ ಭಾಗಿಯಾಗಿದ್ದ ರಿಫಾತ್, ಜುಟ್ಟು ಅಶ್ಫಾಕ್, ಖಲೀಲ್, ಶಾಕಿರ್, ಇರ್ಫಾನ್ ಮತ್ತು ರಿಜ್ವಾನ್ ಕೊಲೆಕೃತ್ಯಕ್ಕೆ ಸಹಕರಿಸಿದ ಇರ್ಷಾದ್ ಎಂದು ಗುರುತಿಸಲಾಗಿದೆ. ಮಾರ್ಚ್ 27ರ ನಸುಕಿನ ಹೊತ್ತು ಆರಿಫ್ ತನ್ನ ಬೈಕ್‌ನಲ್ಲಿ ಬಂದರ್ ಮೀನು ಮಾರುಕಟ್ಟೆಯ ಕಡೆಗೆ ಪ್ರಯಾಣಿಸುತ್ತಿದ್ದಾಗ ತೊಕ್ಕೊಟ್ಟು ಫ್ಲೈಓವರ್ ತಲುಪುತ್ತಿದ್ದಂತೆ ಹಿಂಬಾಲಿಸಿಕೊಂಡು ಬಂದ ಇನ್ನೊವಾ

ರೌಡಿಶೀಟರ್‌ ಆರಿಫ್‌ ಕೊಲೆ ಪ್ರಕರಣ : 7 ಆರೋಪಿಗಳ ಬಂಧನ Read More »

ಸಹಾಯಕ ಔಷಧ ನಿಯಂತ್ರಕನ ಬಳಿ 3.37 ಕೋಟಿ ರೂ. ಅಕ್ರಮ ಸಂಪತ್ತು

ಲೋಕಾಯುಕ್ತ ದಾಳಿಯಲ್ಲಿ ಪತ್ತೆಯಾಯಿತು ಅಪಾರ ಪ್ರಮಾಣದ ಆಸ್ತಿ ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್‌ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ. ಪೊಲೀಸ್‌ ನಿರೀಕ್ಷಕ ಚಂದ್ರಶೇಖರ್‌ ಕೆ.ಎನ್‌ ನೀಡಿದ ಸೋರ್ಸ್‌ ವರದಿ ಆಧರಿಸಿ ಏಪ್ರಿಲ್‌ 8ರಂದು ಮಂಗೂರು ಲೋಕಾಯುಕ್ತ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಲೋಕಾಯುಕ್ತ ಎಸ್ಪಿ ಬಿ.ಪಿ ದಿನೇಶ್‌ ಕುಮಾರ್‌ ಮಾರ್ಗದರ್ಶದಲ್ಲಿ ಡಿವೈಎಸ್ಪಿಗಳಾದ ಡಾ.ಗಾನ ಪಿ.ಕುಮಾರ್‌, ಸುರೇಶ್‌ ಕುಮಾರ್‌ ಮತ್ತು ತಂಡದ 9

ಸಹಾಯಕ ಔಷಧ ನಿಯಂತ್ರಕನ ಬಳಿ 3.37 ಕೋಟಿ ರೂ. ಅಕ್ರಮ ಸಂಪತ್ತು Read More »

ಬೆಳ್ತಂಗಡಿ : ಮನೆಯಿಂದ 19 ಲ.ರೂ. ಚಿನ್ನಾಭರಣ, ನಗದು ಕಳವು

ಮನೆಯವರು ಜಾತ್ರೆಗೆ ಹೋದಾಗ ಹೊಂಚು ಹಾಕಿ ಕಳ್ಳತನ ಬೆಳ್ತಂಗಡಿ : ಮಚ್ಚಿನ ಗ್ರಾಮದಲ್ಲಿ ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ಸುಮಾರು 13 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 6 ಲಕ್ಷ ನಗದು ಹಣ ಕಳ್ಳತನ ಮಾಡಿರುವ ಘಟನೆ ನಡೆದಿದ್ದು ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಚ್ಚಿನ ಗ್ರಾಮದ ಬಳ್ಳಮಂಜ ಹೊಸಮನೆ ನಿವಾಸಿ ಡಿ. ಮುರಳಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಏ.5ರಂದು ಬಳ್ಳಮಂಜ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಜಾತ್ರಾ ಕಾರ್ಯಕ್ರಮಕ್ಕೆ ಮನೆಯವರೆಲ್ಲರೂ ಮನೆಗೆ ಬೀಗ ಹಾಕಿ ತೆರಳಿದ್ದರು.

ಬೆಳ್ತಂಗಡಿ : ಮನೆಯಿಂದ 19 ಲ.ರೂ. ಚಿನ್ನಾಭರಣ, ನಗದು ಕಳವು Read More »

error: Content is protected !!
Scroll to Top