ದಕ್ಷಿಣ ಕನ್ನಡ

ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ಪ್ರಕರಣ ಸಿಐಡಿಗೆ ವರ್ಗಾವಣೆ

ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಆದೇಶಿಸಿದ ಸರ್ಕಾರ ಮಂಗಳೂರು : ಮೂಡುಬಿದಿರೆಯ ಅಮಾನತಿನಲ್ಲಿರುವ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೇಶ್‌ಪಿ.ಜಿ.ಯ ಹೊಸ ಹೊಸ ಪ್ರಕರಣಗಳು ಬಯಲಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸೋಮವಾರ ಆದೇಶ ಹೊರಡಿಸಿದೆ. ಸರ್ಕಾರ ಆದೇಶ ಹೊರಬಿದ್ದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ. 2018ರಲ್ಲಿ ವೇಣೂರು ಠಾಣೆಯಲ್ಲಿ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಅಕ್ಕನ ವಿರುದ್ಧ ತಂಗಿ ದೂರು ನೀಡಿದ್ದರು. ಆ ಮಹಿಳೆ […]

ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ಪ್ರಕರಣ ಸಿಐಡಿಗೆ ವರ್ಗಾವಣೆ Read More »

ಆಟೋ – ಬಸ್ಸಿನ ನಡುವೆ ಅಪಘಾತ

ಬೆಳ್ತಂಗಡಿ: ಚಾರ್ಮಾಡಿ ರಸ್ತೆಯಲ್ಲಿ ಆಟೋ ಮತ್ತು ಬಸ್ಸು ಗುದ್ದಿದ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ನಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಆಟೋ – ಬಸ್ಸಿನ ನಡುವೆ ಅಪಘಾತ Read More »

ಶ್ರೀಮತಿ ಲೇಖಲತಾ ದಿನೇಶ್ ಮೆದು ಅವರಿಗೆ ಚಿನ್ನದ ಪದಕ

ಸವಣೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗುಮಾಸ್ತೆಯಾಗಿರುವ ಶ್ರೀಮತಿ ಲೇಖಲತಾ ದಿನೇಶ್ ಮೆದು ಅವರು ಇತ್ತೀಚೆಗೆ ಕೃಷಿ ವಿಸ್ತರಣಾ ಸೇವೆಯ ಡಿಪ್ಲೊಮಾ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಚಿನ್ನದ ಪದಕ ಗಳಿಸಿಕೊಂಡಿದ್ದಾರೆ. ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್, ಕೃಷಿ ವಿಜ್ಞಾನ ಕೇಂದ್ರ (ದ.ಕ.) ಮಂಗಳೂರು ಸಮೇತಿ (ದಕ್ಷಿಣ) ಕೃಷಿ ವಿಶ್ವವಿದ್ಯಾಲಯ ಜಿಕೆವಿಕೆ ಬೆಂಗಳೂರು, ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆ ಹೈದರಾಬಾದ್ ಮತ್ತು ಕೃಷಿ ಇಲಾಖೆ ದಕ್ಷಿಣ ಕನ್ನಡ

ಶ್ರೀಮತಿ ಲೇಖಲತಾ ದಿನೇಶ್ ಮೆದು ಅವರಿಗೆ ಚಿನ್ನದ ಪದಕ Read More »

ಜೇಬಿನಲ್ಲೇ ಸ್ಫೋಟಿಸಿದ ಮೊಬೈಲ್‌ : ಯುವಕನಿಗೆ ಗಾಯ

ಸುಳ್ಯ: ಮೊಬೈಲ್‌ ಫೋನ್‌ ಜೇಬಿನಲ್ಲೇ ಸ್ಫೋಟಿಸಿದ ಪರಿಣಾಮ ಯುವಕ ಗಾಯಗೊಂಡ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ಸುಳ್ಯದ ಕಲ್ಮಕಾರಿನ ಗುರುಪ್ರಸಾದ್ ನಿಡುಬೆ ಗಾಯಗೊಂಡವರು. ಗುರುಪ್ರಸಾದ್ ಒಂದು ವರ್ಷ ಹಿಂದೆ ಖರೀದಿಸಿದ್ದ ಮೊಬೈಲನ್ನು ತನ್ನ ಪ್ಯಾಂಟ್‌ನ ಜೇಬಿನೊಳಗೆ ಹಾಕಿಕೊಂಡಿದ್ದರು. ಈ ವೇಳೆ ಮೊಬೈಲ್‌ ಸ್ಫೋಟಗೊಂಡಿದೆ. ಪ್ಯಾಂಟ್‌ ಜೇಬಿನೊಳಗಿದ್ದ ಕಾರಣ ತೊಡೆಯ ಚರ್ಮ ಬೆಂದು ಹೋಗಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.

ಜೇಬಿನಲ್ಲೇ ಸ್ಫೋಟಿಸಿದ ಮೊಬೈಲ್‌ : ಯುವಕನಿಗೆ ಗಾಯ Read More »

ಅತ್ಯಾಚಾರ ದೂರು ದಾಖಲಿಸಿದ ಶಿಕ್ಷಕಿಗೆ ಬೆದರಿಕೆ?

ಇನ್‌ಸ್ಪೆಕ್ಟರ್‌ ಸಂದೇಶ್‌ ಪರವಾಗಿ ಮಹಿಳೆಯರಿಬ್ಬರಿಂದ ಬೆದರಿಕೆ ಎಂದು ಆರೋಪ ಮಂಗಳೂರು: ಅಮಾನತಿನಲ್ಲಿರುವ ಮೂಡುಬಿದಿರೆ ಇನ್‌ಸ್ಪೆಕ್ಟರ್​​​ ಸಂದೇಶ್ ವಿರುದ್ಧ ಬೆಳ್ತಂಗಡಿ ತಾಲೂಕಿನ ವೇಣೂರು ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಿಸಿದ್ದ ಸಂತ್ರಸ್ತ ಶಿಕ್ಷಕಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಪ್ರಕರಣ ಬಯಲಾಗುತ್ತಲೇ ಸಂತ್ರಸ್ತೆಗೆ ಮಾ.19ರಂದು ಸ್ಮಿತಾ ಮತ್ತು ಸುನೀತಾ ಲೋಬೊ ಎಂಬಿಬ್ಬರು ಮಹಿಳೆಯರ ಮೂಲಕ ಸಂದೇಶ್​​ ಬೆದರಿಕೆ ಹಾಕಿರುವುದಾಗಿ ದೂರಲಾಗಿದೆ. ಇಬ್ಬರು ಮಹಿಳೆಯರನ್ನು ಸಂತ್ರಸ್ತೆ ಶಿಕ್ಷಕಿಯ ಮನೆಗೆ ಕಳುಹಿಸಿ ಇಲ್ಲಿಯವರೆಗೂ ನಡೆದ ವಿಚಾರಗಳ ಬಗ್ಗೆ ಬಾಯಿ ಬಿಡಬಾರದು. ಬಾಯಿ

ಅತ್ಯಾಚಾರ ದೂರು ದಾಖಲಿಸಿದ ಶಿಕ್ಷಕಿಗೆ ಬೆದರಿಕೆ? Read More »

ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ವಿರುದ್ಧ ಅತ್ಯಾಚಾರ ದೂರು ದಾಖಲು

ವೇಣೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ಶಿಕ್ಷಕಿ ಮಂಗಳೂರು : ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಅಸಭ್ಯ ವರ್ತನೆಯ ಕಾರಣಕ್ಕೆ ಅಮಾನತುಗೊಂಡಿರುವ ಮೂಡುಬಿದಿರೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ.ವಿರುದ್ಧ ಬೆಳ್ತಂಗಡಿಯ ವೇಣೂರು ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಶಿಕ್ಷಕಿಯೊಬ್ಬರು ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ದೂರು ನೀಡಿದ್ದಾರೆ. ಶಿಕ್ಷಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು ಸಂದೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಗಂಡಂದಿರ ಮೇಲೆ ಕೇಸ್ ಹಾಕಿ ಅವರ

ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ವಿರುದ್ಧ ಅತ್ಯಾಚಾರ ದೂರು ದಾಖಲು Read More »

ಮಂಗಳೂರಿಗೆ ಆಗಮಿಸಿದ 86 ಸಾವಿರ ಮೆಟ್ರಿಕ್‌ ಟನ್‌ ತೈಲ ತುಂಬಿರುವ ಹಡಗು

ಚೀನಾಕ್ಕೆಂದು ಹೊರಟಿದ್ದ ಬೃಹತ್‌ ತೈಲ ಟ್ಯಾಂಕರ್‌ ಭಾರತಕ್ಕೆ ಯು ಟರ್ನ್‌ ಮಂಗಳೂರು: ಚೀನಾಕ್ಕೆ ಹೊರಟಿದ್ದ ರಷ್ಯಾದ ತೈಲ ತುಂಬಿದ ಟ್ಯಾಂಕರ್ ಹಡಗು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಮಹತ್ವದ ಬೆಳವಣಿಗೆಯಿಂದ ಯುಟರ್ನ್ ಹೊಡೆದು ಶನಿವಾರ ಮಂಗಳೂರಿಗೆ ಆಗಮಿಸಿದೆ. ರಷ್ಯಾದ ಅಕ್ವಾ ಟೈಟಾನ್‌ ಹಡಗು ಸುಮಾರು 86 ಸಾವಿರ ಮೆಟ್ರಿಕ್ ಟನ್ ತೈಲ ಹೊತ್ತು ಮಂಗಳೂರಿಗೆ ಆಗಮಿಸಿದೆ. ಚೀನಾಕ್ಕೆ ಹೊರಟ ಈ ಹಡಗಿಗೆ ಜನವರಿಯಲ್ಲಿ ತೈಲ ತುಂಬಲಾಗಿದ್ದು, ಮಾರ್ಚ್ ಮಧ್ಯದಲ್ಲಿ ಆಗ್ನೇಯ ಏಷ್ಯಾದಲ್ಲಿ ಸಂಚರಿಸುತ್ತಿತ್ತು. ಈ ಸಂದರ್ಭ ಚೀನಾದ ರಿಝಾವೊ

ಮಂಗಳೂರಿಗೆ ಆಗಮಿಸಿದ 86 ಸಾವಿರ ಮೆಟ್ರಿಕ್‌ ಟನ್‌ ತೈಲ ತುಂಬಿರುವ ಹಡಗು Read More »

ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

10ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್‌ ಮಂಗಳೂರು: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದೇರಳಕಟ್ಟೆ ಸಮೀಪ ಮದನಿನಗರದ ಕೆ2 ಅಪಾರ್ಟ್‌ಮೆಂಟ್ ನಿವಾಸಿ ಫರಾಜ್ ಅಲಿಯಾಸ್‌ ಮೊಹಮ್ಮದ್ ಫರಾಜ್ (32) ಬಂಧಿತ ಆರೋಪಿ. ಆರೋಪಿಯ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಹಾಗೂ ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ

ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಇನ್‌ಸ್ಪೆಕ್ಟರ್‌ ಸಂದೇಶ್‌ ಮೊಬೈಲ್‌, ಬ್ಯಾಂಕ್‌ ಸ್ಟೇಟ್‌ಮೆಂಟ್‌ ಪರಿಶೀಲಿಸಿ : ಸಂತ್ರಸ್ತ ಮಹಿಳೆ ಒತ್ತಾಯ

ಮಂಗಳೂರು: ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಅವರು ನನಗೆ, ನನ್ನ ಅಕ್ಕನ ಮಗ ಹಾಗೂ ನನ್ನ ಮಗನಿಗೆ ಮಾನಸಿಕ ಹಿಂಸೆ, ಜೀವಹಾನಿ ಬೆದರಿಕೆ, ಮಾನಹಾನಿ ಹಾಗೂ ಲೈಂಗಿಕ ನೀಡಿದ್ದಾರೆ. ಸದ್ಯ ಅಮಾನತ್ತಿನಲ್ಲಿರುವ ಇನ್‌ಸ್ಪೆಕ್ಟರ್ ಸಂದೇಶ್ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಕಾರ್ಕಳದ ಸುಮತಿ ನಾಯಕ್ ಒತ್ತಾಯಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹೋದರಿ ಪ್ರಫುಲ್ಲ ಅವರ ಸಹಕಾರದಿಂದ ನಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಇನ್‌ಸ್ಪೆಕ್ಟರ್‌ ಸಂದೇಶ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಅವರ ಮೊಬೈಲ್‌,

ಇನ್‌ಸ್ಪೆಕ್ಟರ್‌ ಸಂದೇಶ್‌ ಮೊಬೈಲ್‌, ಬ್ಯಾಂಕ್‌ ಸ್ಟೇಟ್‌ಮೆಂಟ್‌ ಪರಿಶೀಲಿಸಿ : ಸಂತ್ರಸ್ತ ಮಹಿಳೆ ಒತ್ತಾಯ Read More »

ಹಿರಿಯ ಯಕ್ಷಗಾನ ಕಲಾವಿದ ಸೂರಿ ಕುಮೇರು ಗೋವಿಂದ ಭಟ್ಟರು ಇನ್ನಿಲ್ಲ

ಸುದೀರ್ಘ ಕಾಲ ಧರ್ಮಸ್ಥಳ ಮೇಳದಲ್ಲಿದ್ದ ಸವ್ಯಸಾಚಿ ಕಲಾವಿದ ಮಂಗಳೂರು : ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ, ಏಳು ದಶಕಗಳ ಕಾಲ ರಂಗಸ್ಥಳವನ್ನೇ ಉಸಿರಾಗಿಸಿಕೊಂಡಿದ್ದ ಅದ್ವಿತೀಯ ವೇಷಧಾರಿ ಸೂರಿಕುಮೇರು ಕೆ. ಗೋವಿಂದ ಭಟ್ (90) ಅವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಯಲಕ್ಷಗಾನದಿಂದ ನೇಪಥ್ಯಕ್ಕೆ ಸರಿದ ಬಳಿಕ ಹೆಚ್ಚಾಗಿ ತೀರ್ಥಹಳ್ಳಿಯಲ್ಲಿರುವ ಮಗನ ಮನೆಯಲ್ಲಿ ಇರುತ್ತಿದ್ದರು. ಇತ್ತೀಚೆಗಷ್ಟೆ ವಯೋಸಹಜ ಅನಾರೋಗ್ಯಕ್ಕೀಡಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಶುಕ್ರವಾರ ರಾತ್ರೊ 9.10ರ ಸುಮಾರಿಗೆ ತೀರ್ಥಹಳ್ಳಿಯಲ್ಲಿರುವ ಪುತ್ರನ ಮನೆಯಲ್ಲಿ ನಿಧನರಾಗಿದ್ದಾರೆ. ಅರ ಪತ್ನಿ

ಹಿರಿಯ ಯಕ್ಷಗಾನ ಕಲಾವಿದ ಸೂರಿ ಕುಮೇರು ಗೋವಿಂದ ಭಟ್ಟರು ಇನ್ನಿಲ್ಲ Read More »

error: Content is protected !!
Scroll to Top