ದಕ್ಷಿಣ ಕನ್ನಡ

ಕುತ್ತಾರ್‌ : 12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು

ಬಟ್ಟೆ ಒಣಗಲು ಹಾಕುವಾಗ ಆಯತಪ್ಪಿ ಬಿದ್ದ ವೈದ್ಯ ದಂಪತಿಯ ಪುತ್ರಿ ಮಂಗಳೂರು: ಬಾಲಕಿ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ತೊಕ್ಕೊಟ್ಟು ಸಮೀಪ ಕುತ್ತಾರ್‌ನಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಯೆನೆಪೋಯ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ.ಮುಮ್ತಾಜ್‌ ಅಹ್ಮದ್‌ ಮತ್ತು ಡಾ.ಕಮ್ರಾಜ್‌ ದಂಪತಿಯ ಪುತ್ರಿ 15ರ ಹರೆಯದ ಹಿಬಾ ಐಮನ್‌ ಸಾವಿಗೀಡಾಗಿರುವ ಬಾಲಕಿ ಕುತ್ತಾರ್‌ನಲ್ಲಿರುವ ಸಿಲಿಕೋನಿಯಾ ಎಂಬ ಬಹುಮಹಡಿ ವಸತಿ ಸಂಕೀರ್ಣದ ಫ್ಲ್ಯಾಟ್‌ನಲ್ಲಿ ಈ ವೈದ್ಯ ದಂಪತಿ ವಾಸವಾಗಿದ್ದರು. ಇದೇ ಕಟ್ಟಡದಿಂದದ ಬಾಲಕಿ ಬಿದ್ದಿದ್ದಾಳೆ. 18 ಮಹಡಿಗಳ ಬೃಹತ್‌ […]

ಕುತ್ತಾರ್‌ : 12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು Read More »

ಮಹಿಳೆಗೆ ಕಿರುಕುಳ : ಆರೋಪಿ ಬಂಧನ

ಬಂಟ್ವಾಳ: ಪತಿಯ ಜತೆ ಪ್ರಯಾಣಿಸುತ್ತಿದ್ದ ಮಹಿಳೆಗೆ ಆರೋಪಿಯೋರ್ವ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ದೈಹಿಕ ಕಿರುಕುಳ ನೀಡಿದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್‌ನಲ್ಲಿ ನಡೆದಿದೆ. ಅಬೂಬಕ್ಕರ್ ಎಂಬಾತ ಮಹಿಳೆಗೆ ಕಿರುಕುಳ ನೀಡಿದ ಆರೋಪಿ. ಉಜಿರೆಯಿಂದ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದ ಮಹಿಳೆಯ ಜತೆ ಆತ ಅಸಭ್ಯವಾಗಿ ವರ್ತಿಸಿದಲ್ಲದೇ ದೈಹಿಕ ಕಿರುಕುಳ ನೀಡಿದ್ದಾನೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಹಿಳೆಗೆ ಕಿರುಕುಳ : ಆರೋಪಿ ಬಂಧನ Read More »

ಕೋಮು ನಿಗ್ರಹ ಪಡೆ ನಾಳೆ ಉದ್ಘಾಟನೆ

ಸುಧೀರ್‌ ಕುಮಾರ್‌ ರೆಡ್ಡಿ ಮುಖ್ಯಸ್ಥ; ಮಂಗಳೂರಲ್ಲಿ ಕೇಂದ್ರ ಕಚೇರಿ ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಪದೇಪದೆ ಸಂಭವಿಸುತ್ತಿರುವ ಕೋಮು ಗಲಭೆಗಳನ್ನು ನಿಗ್ರಹಿಸುವ ಸಲುವಾಗಿ ಸರ್ಕಾರ ರಚಿಸಿರುವ ವಿಶೇಷ ಕೋಮು ನಿಗ್ರಹ ಪಡೆಯ ಉದ್ಘಾಟನೆ ನಾಳೆ ನೆರವೇರಲಿದೆ. ಗೃಹ ಸಚಿವ ಜಿ.ಪರಮೇಶ್ವರ್‌ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಭಾಗವಹಿಸಲಿದ್ದಾರೆ. ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರ್ಕಾರ ಈ ವಿಶೇಷ ಪಡೆಯನ್ನು ರಚಿಸಿದೆ. ವಿಶೇಷ ಕಾರ್ಯಪಡೆ ಘಟಕಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ

ಕೋಮು ನಿಗ್ರಹ ಪಡೆ ನಾಳೆ ಉದ್ಘಾಟನೆ Read More »

ದ.ಕ. ಜಿ;ಲ್ಲೆಯಲ್ಲಿ ಆರೆಂಜ್‍ ಅಲರ್ಟ್ ಘೋಷಣೆ | ಇಂದು ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆಯನ್ನು ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ದ.ಕ. ಜಿ;ಲ್ಲೆಯಲ್ಲಿ ಆರೆಂಜ್‍ ಅಲರ್ಟ್ ಘೋಷಣೆ | ಇಂದು ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »

ಬಾವಿಯಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ  ಪತ್ತೆ

ಸುಳ್ಯ: ಸುಳ್ಯ ತಾಲೂಕಿನ ಬೊಮ್ಮಾರಿನ ಬಾವಿಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ನಡೆದಿದೆ. ಮರ್ಕಂಜದ ಬೊಮ್ಮಾರು ನಿವಾಸಿ ಶೀನ ಪೂಜಾರಿ (65) ಅವರ ಶವ ಕೊಳೆತ ಸ್ಥಿತಿಯಲ್ಲಿ  ಪತ್ತೆಯಾಗಿದೆ. ಕೆಲವು ವರ್ಷಗಳಿಂದ ಒಂಟಿಯಾಗಿ ವಾಸಿಸುತ್ತಿದ್ದ ಅವರು ಕಳೆದ ಏಳೆಂಟು ದಿನಗಳಿಂದ ಕಾಣಿಸುತ್ತಿರಲಿಲ್ಲ. ಸೋಮವಾರ ಪರಿಸರದಲ್ಲಿ ಕೊಳೆತ ವಾಸನೆ ಬರುತ್ತಿದ್ದುದರಿಂದ ಹುಡುಕಾಡಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಶೀನ ಅವರು ಕೆಲವು ವರ್ಷಗಳ ಹಿಂದೆ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೊಳಗಾಗಿ ಜೈಲುವಾಸ ಅನುಭವಿಸಿ ಬಂದಿದ್ದರು. ಪತ್ನಿಯನ್ನು

ಬಾವಿಯಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ  ಪತ್ತೆ Read More »

ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ : ಮಾಜಿ ಶಾಸಕ ಮೊಯ್ದೀನ್‍ ಬಾವಾ ಸಹಿತ ಸಹಚರರ ವಿರುದ್ಧ ಪ್ರಕರಣ ದಾಖಲು

ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಮಾಜಿ ಶಾಸಕ ಮೊಯ್ದೀನ್‍ ಬಾವಾ ಹಾಗೂ ಸಹಚರರ ವಿರುದ್ಧ ಪ್ರಕರಣ ದಾಖಲಾಗಿದೆ. ಜೂಊ.9  ರಂದು ರಾತ್ರಿ ಮಾಜಿ ಶಾಸಕರಾದ ಮೊಯಿದ್ದೀನ್ ಬಾವಾ ರವರು ಮತ್ತು ಅವರ ಇಬ್ಬರು ಸಹಚರರೊಂದಿಗೆ ಕಾಮಗಾರಿಯ ಬಿಲ್ಲನ್ನು ಮಂಜೂರು ಮಾಡುವ ವಿಷಯದ ಕುರಿತು ಎನ್.ಎಂ.ಪಿ.ಎ ಕಛೇರಿಯ ಡೆಪ್ಯೂಟಿ ಚೇರ್ಪಸ್ರನ್ ರವರ ಕಛೇರಿಗೆ ನುಗ್ಗಿ 15 ನಿಮಿಷ ಕಾಲ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅವರನ್ನು ಕಛೇರಿಯಿಂದ ಹೊರಗೆ ಹೋಗಲು ಅವಕಾಶ ನೀಡದೇ, ಅವರನ್ನು ತಡೆದು ನಿಲ್ಲಿಸಿದ

ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ : ಮಾಜಿ ಶಾಸಕ ಮೊಯ್ದೀನ್‍ ಬಾವಾ ಸಹಿತ ಸಹಚರರ ವಿರುದ್ಧ ಪ್ರಕರಣ ದಾಖಲು Read More »

ಅಕ್ರಮ ಕೋಳಿ ಅಂಕ ಅಡ್ಡೆಗೆ ದಾಳಿ : ಮೂವರ ಬಂಧನ, ಸೊತ್ತುಗಳು ವಶಕ್ಕೆ

ಕಡಬ: ಅಕ್ರಮ ಕೋಳೀ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದುಕೊಂಡ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿ ನಡೆದಿದೆ. ಕಡಬ ನಿವಾಸಿಗಳಾದ ರಾಧಾಕೃಷ್ಣ (52) ಮೋಹನ್ ದಾಸ್ (48) ವೆಂಕಟರಮಣ (30) ಬಂಧಿತರು. ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ, ಕಡಬ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕರಾದ ಅಭಿನಂದನ್ ಮತ್ತು ಸಿಬ್ಬಂದಿಗಳೊಂದಿಗೆ ಧಾಳಿ ನಡೆಸಿದ್ದಾರೆ.

ಅಕ್ರಮ ಕೋಳಿ ಅಂಕ ಅಡ್ಡೆಗೆ ದಾಳಿ : ಮೂವರ ಬಂಧನ, ಸೊತ್ತುಗಳು ವಶಕ್ಕೆ Read More »

ನಾಳೆ (ಜೂ.11) : ಸವಣೂರು ಯುವಕ ಮಂಡಲ ಸಭಾಭವನದಲ್ಲಿ ಜನಸಂಪರ್ಕ ಸಭೆ

ಬೆಳ್ಳಾರೆ: ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ಜನಸಂಪರ್ಕ ಸಭೆ ನಾಳೆ (ಜೂ.11) ಬೆಳಿಗ್ಗೆ ನಡೆಯಲಿದೆ. ಸವಣೂರು ಯುವಕ ಮಂಡಲ ಸಭಾಭವನದಲ್ಲಿ ಪುತ್ತೂರು ಉಪವಿಭಾಗದ DYSP ಯವರ ಉಪಸ್ಥಿತಿಯಲ್ಲಿ ಬೆಳಿಗ್ಗೆ 11.30 ಕ್ಕೆ ಜನಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ. ಸವಣೂರಿನ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸುವಂತೆ ಬೆಳ್ಳಾರೆ ಠಾಣಾ ಪೊಲೀಸ್‍ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಜೂ.11) : ಸವಣೂರು ಯುವಕ ಮಂಡಲ ಸಭಾಭವನದಲ್ಲಿ ಜನಸಂಪರ್ಕ ಸಭೆ Read More »

ಅಡಿಕೆ ವ್ಯಾಪಾರಿಯಿಂದ ಕೋಟ್ಯಾಂತರ ರೂಪಾಯಿ ವಂಚನೆ | ಠಾಣೆ ಮೆಟ್ಟಿಲೇರಿದ ಕೃಷಿಕರು

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ನಗರ ಪೋಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ. ಇಂದು ಸುಮಾರು 50 ಕ್ಕೂ ಅಧಿಕ ಕೃಷಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಯ ಮುಂದೆ ಜಮಾಯಿಸಿದ್ದು, ವಂಚನೆಗೆ ಒಳಗಾದ ಕೃಷಿಕರು ಹಣ ನೀಡದೆ ವಂಚಿಸಿದ ವ್ಯಕ್ತಿಯ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ. ಸ್ಥಳೀಯ ಕೃಷಿಕ ಮಹಿಳೆಯೊಬ್ಬರು ತಮ್ಮ ಬ್ಯಾಂಕ್ ಸಾಲದ ಮೊತ್ತ ಪಾವತಿಯ ಹಿನ್ನಲೆಯಲ್ಲಿ ವ್ಯಾಪಾರಿಯ ಬಳಿ ಹಣಕ್ಕಾಗಿ ಹೋದಾಗ ಆತ ಪರಾರಿಯಾಗಿರುವುದು

ಅಡಿಕೆ ವ್ಯಾಪಾರಿಯಿಂದ ಕೋಟ್ಯಾಂತರ ರೂಪಾಯಿ ವಂಚನೆ | ಠಾಣೆ ಮೆಟ್ಟಿಲೇರಿದ ಕೃಷಿಕರು Read More »

ಪೆಟ್ರೋಲ್‍ ಸುರಿದು ಕೊಲೆಗೆ ಯತ್ನ | ಗಾಯಾಳು ಆಸ್ಪತ್ರೆಯಲ್ಲಿ ಮೃತ್ಯು

ಕಡಬ: ತಮ್ಮನೇ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅಣ್ಣ ಚಿಕಿತ್ಸೆ ಫಲಿಸದೆ ಸೋಮವಾರ  ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಂಗಳೂರು-ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪದ ಕೋರಿಯರ್ ರೈಲು ಟ್ರ್ಯಾಕ್ ಸಮೀಪ ಜೂ.8 ರಂದು ಈ ಘಟನೆ ನಡೆದಿತ್ತು. ತಮ್ಮನ್ನೇ ತನ್ನ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಕೊಲೆ ಯತ್ನಿಸಿದ್ದ. ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹನುಮಪ್ಪ (42) ಚಿಕಿತ್ಸೆ ಫಲಿಸದೆ ಸೋಮವಾರ ಮೃತಪಟ್ಟಿದ್ದಾರೆ. ಸಾವಿನ ಬಳಿಕ ಪೊಲೀಸರು

ಪೆಟ್ರೋಲ್‍ ಸುರಿದು ಕೊಲೆಗೆ ಯತ್ನ | ಗಾಯಾಳು ಆಸ್ಪತ್ರೆಯಲ್ಲಿ ಮೃತ್ಯು Read More »

error: Content is protected !!
Scroll to Top