ದಕ್ಷಿಣ ಕನ್ನಡ

ಕೆಎಸ್‍ ಆರ್ ಟಿಸಿ ಬಸ್‍ ಗಳೆರಡು ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ

ಸುಳ್ಯ: ಕೆಎಸ್‍ ಆರ್‍ ಟಿಸಿ ಬಸ್‍ ಗಳೆರಡು ಮುಖಾಮುಖಿ ಡಿಕ್ಕಿ ಹೊಡದುಕೊಂಡ ಪರಿಣಾಮ ಹಲವರು ಗಾಯಗೊಂಡ ಘಟನೆ ಬುಧವಾರ ಸಂಜೆ ಸುಳ್ಯ ತಾಲೂಕಿನ ಅರಂತೋಡು ಶಾಲಾ ಮುಂಭಾಗ ನಡೆದಿದೆ. ಮಡಿಕೇರಿಯಿಂದ ಪುತ್ತೂರು ಕಡೆ ಬರುತ್ತಿದ್ದ ಬಸ್ ಎದುರಿನಿಂದ ಬಂದ ಬಸ್‌ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಗೊಂಡ ಬಸ್ ಗಳ ಪೈಕಿ ಒಂದು ಅಶ್ವಮೇಧ ಬಸ್ ಎಂದು ಹೇಳಲಾಗಿದೆ.

ಕೆಎಸ್‍ ಆರ್ ಟಿಸಿ ಬಸ್‍ ಗಳೆರಡು ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ Read More »

ಶಿಶಿಲದಲ್ಲಿ ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನ ಜಲಾವೃತ | ಗರ್ಭಗುಡಿಗೆ ನುಗ್ಗಿದ ನೀರು

ಶಿಶಿಲ: ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನ ಜಲಾವೃತವಾಗಿದ್ದು, ಗರ್ಭಗುಡಿಗೆ ನೀರು ನುಗ್ಗಿದೆ. ಶಿಶಿಲೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದ್ದು, ಜನರಲ್ಲಿ ಭೀತಿಯನ್ನು ಉಂಟುಮಾಡಿದೆ. ಭಾರೀ ಮಳೆಯಿಂದಾಗಿ ಕಪಿಲಾ ನದಿಯಲ್ಲಿ ಉಂಟಾದ ಪ್ರವಾಹ ದೇವಸ್ಥಾನದ ಒಳಗೆ ನುಗ್ಗಿ, ಪವಿತ್ರ ಗರ್ಭಗುಡಿಗೂ ಪ್ರವೇಶಿಸಿದೆ ಎನ್ನಲಾಗಿದೆ. ದೇವಳದ ಪಕ್ಕದಲ್ಲಿರುವ ಅಂಗಡಿಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ದೇವಾಲಯದ ಸಂಪರ್ಕಮಾರ್ಗವಾಗಿರುವ ಕಿಂಡಿ ಆಣೆಕಟ್ಟಿನು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಸದ್ಯಕ್ಕೆ ತೂಗುಸೇತುವೆಯವರೆಗೂ ನೀರು ಹರಿಯುತ್ತಿದೆ. ಪ್ರವಾಹದ ವೇಗ ಹಾಗೂ

ಶಿಶಿಲದಲ್ಲಿ ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನ ಜಲಾವೃತ | ಗರ್ಭಗುಡಿಗೆ ನುಗ್ಗಿದ ನೀರು Read More »

ಸಂಪಾಜೆಯಲ್ಲಿ ಕಾರಿನ ಮೇಲೆ ಮುರಿದು ಬಿದ್ದ ಮರದ ಕೊಂಬೆ

ಸುಳ್ಯ: ಚಲಿಸುತ್ತಿದ್ದ ಕಾರೊಂದರ ಮೇಲೆ ಮರದ ಕೊಂಬೆ ಮುರಿದು ಬಿದ್ದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಮರದ ಕೊಂಬೆ ವಿನಯ್ ಎಂಬುವವರು ಮಾರುತಿ 800 ಕಾರಿನ ಮೇಲೆ ಬಿದ್ದಿದೆ. ಇದೇ ಸ್ಥಳದಿಂದ ಸ್ವಲ್ಪ ದೂರದಲ್ಲೇ ವಿದ್ಯಾರ್ಥಿಗಳು ಪ್ರತಿನಿತ್ಯ ಮುಂಜಾನೆ ಆಟೋ ಹತ್ತುತ್ತಿದ್ದು ಅಲ್ಲಿಯೂ ಮರದ ಕೊಂಬೆ ಮುರಿದು ಬಿದ್ದಿದೆ. ಅದೃಷ್ಟವಶಾತ್ ಈ ಸಮಯದಲ್ಲಿ ಅವರು ಆಟೋ ಹತ್ತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಕೊಂಬೆ ಮುರಿದ ಮರಗಳು ಖಾಸಗಿ ಜಾಗದೊಳಗಿದ್ದು, ಇದನ್ನು ತೆರವು ಮಾಡಲು ಕೆಲವು ನಿಯಮಗಳಿವೆ ಎಂದು

ಸಂಪಾಜೆಯಲ್ಲಿ ಕಾರಿನ ಮೇಲೆ ಮುರಿದು ಬಿದ್ದ ಮರದ ಕೊಂಬೆ Read More »

ವಿವಿಧ ಆ್ಯಪ್‍ ಗಳಿಂದ ಸಾಲ : ಆರ್ಥಿಕ ಸಮಸ್ಯೆಯಿಂದ ಯುವಕ ಆತ್ಮಹತ್ಯೆ

ಮಂಗಳೂರು: ವಿವಿಧ ಆ್ಯಪ್‌ ಗಳ ಸಾಲಗಳಿಂದ ಬೇಸತ್ತು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕೋಡಿಕಲ್ ನಲ್ಲಿ ನಡೆದಿದೆ. ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಉಪಹಾರ ಸೇವಿಸಿದ ನಿಖಿಲ್ ಪೂಜಾರಿ ಕೋಣೆ ಸೇರಿದ್ದ. ಸಂಜೆಯವರೆಗೆ ಮಲಗುವ ಅಭ್ಯಾಸ ರೂಢಿಸಿಕೊಂಡಿದ್ದ ಕಾರಣ ಮನೆಮಂದಿ ನಿಖಿಲ್ ಪೂಜಾರಿಯ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ ಎನ್ನಲಾಗಿದೆ. ಸಂಜೆ ಬಳಿಕ ಬಾಗಿಲು ಬಡಿದರೂ ತೆಗೆಯದ್ದರಿಂದ ಫೋನ್ ಕರೆ ಮಾಡಿದರೂ ಆತ

ವಿವಿಧ ಆ್ಯಪ್‍ ಗಳಿಂದ ಸಾಲ : ಆರ್ಥಿಕ ಸಮಸ್ಯೆಯಿಂದ ಯುವಕ ಆತ್ಮಹತ್ಯೆ Read More »

2.5 ಕೋಟಿ ರೂ. ಕಾರಿಗೆ 50 ಲ.ರೂ. ಮೌಲ್ಯ ತೋರಿಸಿ ನೋಂದಾಯಿಸಿ ತೆರಿಗೆ ವಂಚನೆ

ಮನಪಾ ಬಳಿಕ ಮಂಗಳೂರು ಆರ್‌ಟಿಒ ಕಚೇರಿಯ ಅವ್ಯವಹಾರ ಬಯಲಿಗೆ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ದಾಳಿಯಾದ ಬಳಿಕ ಅಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದು ಬುದ್ಧಿವಂತರ ಮತ್ತು ಪ್ರಜ್ಞಾವಂತರ ಜಿಲ್ಲೆ ಎಂಬ ಖ್ಯಾತಿ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಹೃದಯ ಭಾಗಕ್ಕೆ ಕಳಂಕ ಅಂಟಿಕೊಂಡಿದೆ. ಈಗ ಸಾರಿಗೆ ಕಚೇರಿಯ ಸರದಿ. ಮಂಗಳೂರಿನ ಸಾರಿಗೆ ಕಚೇರಿಯಲ್ಲಿ ವಾಹನ ನೋಂದಣಿಯಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ಹಗರಣ ಮಂಗಳೂರು ಸಾರಿಗೆ ಅಧಿಕಾರಿ

2.5 ಕೋಟಿ ರೂ. ಕಾರಿಗೆ 50 ಲ.ರೂ. ಮೌಲ್ಯ ತೋರಿಸಿ ನೋಂದಾಯಿಸಿ ತೆರಿಗೆ ವಂಚನೆ Read More »

ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ: ಉಜಿರೆ ಪೇಟೆಯಲ್ಲಿ ಮಂಗಳವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಜಿರೆ ಪೇಟೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಗ್ರಾಮಪಂಚಾಯಿತಿ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಮಾರು 45 ರಿಂದ 50ವರ್ಷ ಪ್ರಾಯದ ವ್ಯಕ್ತಿಯ ಮೃತದೇಹ ಇದಾಗಿದ್ದು ಎಡ ಕೈಯಲ್ಲಿ G MAHESH ಎಂದೂ ಬಲ ಕೈಯಲ್ಲಿ ABGTK ಎಂಬ ಹಚ್ಚೆ ಬರೆಯಲಾಗಿದೆ. ಮೃತದೇಹವನ್ನು ವೆನಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರ ವಾರಿಸುದಾರರು ಯಾರಾದರೂ ಇದ್ದಲ್ಲಿ ಬೆಳ್ತಂಗಡಿ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »

ಜೂನ್‍ 30 : ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿರುವ ಹರೀಶ್ ರೈ ಅವರು ಜೂ 30  ರಂದು ವಯೋನಿವೃತ್ತಿ ಹೊಂದುತ್ತಿದ್ದಾರೆ. ಭಾರತೀಯ ಭೂಸೇನೆಯಲ್ಲಿ ಪ್ರಾಧ್ಯಾಪಕರಾಗಿ ಸೇವೆಗೆ ಸೇರಿದ ಇವರು ಅಸ್ಸಾಂ, ಜಬಲ್ಪುರ್, ಪಠಾಣ್ ಕೋಟ್, ಪಚ್ಮುರಿ, ಬೆಂಗಳೂರು ಮೊದಲಾದ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದು  ರಕ್ಷಕ್ ಮತ್ತು ಕಾರ್ಗಿಲ್ ಯುದ್ಧವು ಸೇರಿ ಹಲವು ಸೇನಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದು 2009ರಲ್ಲಿ ನಿವೃತ್ತಿ ಹೊಂದಿದ್ದಾರೆ. ಬಳಿಕ ಉಜಿರೆಯ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿ,ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 

ಜೂನ್‍ 30 : ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ Read More »

ಉಪ್ಪಿನಂಗಡಿ: ಮಣ್ಣಗುಂಡಿಯಲ್ಲಿ ಗುಡ್ಡ ಜರಿದು ಹೆದ್ದಾರಿಗೆ ಬಿದ್ದ ಮಣ್ಣು ರಾಶಿ

ಹಲವು ತಾಸು ವಾಹನ ಸಂಚಾರ ವ್ಯತ್ಯಯ ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ನಿನ್ನೆ ಸಂಜೆ ಗುಡ್ಡ ಜರಿದು ಭಾರಿ ಪ್ರಮಾಣದಲ್ಲಿ ಕಲ್ಲು-ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ವ್ಯತ್ಯಯವಾಗಿತ್ತು. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್‍ನಿಂದ ಅಡ್ಡಹೊಳೆ ತನಕ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಮಣ್ಣಗುಂಡಿಯಲ್ಲಿ ರಸ್ತೆ ನಿರ್ಮಾಣ ಸಂದರ್ಭ ಗುಡ್ಡ ಅಗೆಯಲಾಗಿದೆ. ಇಲ್ಲಿ ನೇರವಾಗಿ ಗುಡ್ಡ ಅಗೆದಿರುವುದರಿಂದ ಕೆಲ ದಿನಗಳಿಂದ ಮಣ್ಣು ಜರಿಯುತ್ತಿದ್ದು ಒಂದು

ಉಪ್ಪಿನಂಗಡಿ: ಮಣ್ಣಗುಂಡಿಯಲ್ಲಿ ಗುಡ್ಡ ಜರಿದು ಹೆದ್ದಾರಿಗೆ ಬಿದ್ದ ಮಣ್ಣು ರಾಶಿ Read More »

ನಾಳೆ (ಜು.25) : ಮಂಗಳೂರಿನಲ್ಲಿ  ಬಿಜೆಪಿ ವತಿಯಿಂದ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‍ 50 ವರ್ಷದ ಕರಾಳ ಇತಿಹಾಸ

ಮಂಗಳೂರು: ದ.ಕ.ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ  ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‍ 50 ವರ್ಷದ ಕರಾಳ ಇತಿಹಾಸ ಮಂಗಳೂರು ಕದ್ರಿ ದೇವಸ್ಥಾನದ ಗೋರಕ್ಷಕನಾಥ ಸಭಾಭವನದಲ್ಲಿ ಜು.25 (ನಾಳೆ) ನಡೆಯಲಿದೆ. ಬೆಳಿಗ್ಗೆ 10.30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್‍ ಅಗರ್ವಾಲ್‍ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿಧಾನ ಪರಿಷತ್‍ ಸದಸ್ಯ ಕಿಶೋರ್ ಕುಮಾರ್‍ ಪುತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಜು.25) : ಮಂಗಳೂರಿನಲ್ಲಿ  ಬಿಜೆಪಿ ವತಿಯಿಂದ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‍ 50 ವರ್ಷದ ಕರಾಳ ಇತಿಹಾಸ Read More »

ಶಿವರಾಜ್‍ ಮತ್ತಿಲ್ಲ ಆತ್ಮಹತ್ಯೆ

ಬೆಳ್ತಂಗಡಿ : ಉಜಿರೆ, ಧರ್ಮಸ್ಥಳ ಭಾಗದಲ್ಲಿ ಸದಾ ತನ್ನ ಬೈಕ್ ನಲ್ಲಿ ನಾಯಿಯೊಂದನ್ನು ಕೂರಿಸಿಕೊಂಡು ಸಂಚರಿಸುತ್ತಿದ್ದ ಶಿವರಾಜ್ ಮತ್ತಿಲ್ಲ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದಲ್ಲಿ ಟೋಯಿಂಗ್ ವಾಹನ, ಕೃಷಿ, ಕೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಶಿವರಾಜ್ ಅವರಿಗೆ ತನ್ನ ಪ್ರೀತಿಯ ಶ್ವಾನವೇ ಎಲ್ಲಾ. ಬೆಳಗ್ಗೆ ಹಾಗೂ ಸಂಜೆ ಎರಡು ಹೊತ್ತು ತನ್ನ ಪ್ರೀತಿಯ ನಾಯಿಯೊಂದಿಗೆ ನಗರವನ್ನು ಒಂದೆರಡು ರೌಂಡ್ ಹಾಕಿಲ್ಲ ಎಂದರೆ ಸಮಾಧಾನ ಇರುತ್ತಿರಲಿಲ್ಲ. ಅಷ್ಟೇ ಅಲ್ಲದೆ ನಾಯಿಯೊಂದಿಗೆ ಬೈಕ್ ನಲ್ಲಿ ಸಂಚರಿಸುತ್ತಿದ್ದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ

ಶಿವರಾಜ್‍ ಮತ್ತಿಲ್ಲ ಆತ್ಮಹತ್ಯೆ Read More »

error: Content is protected !!
Scroll to Top