ದಕ್ಷಿಣ ಕನ್ನಡ

ಸಿದ್ದರಾಮಯ್ಯ, ಖಾದರ್‌ ವಿರುದ್ಧ ಅವಹೇಳನಕಾರಿ ಸಂದೇಶ : ಕೇಸ್‌ ದಾಖಲು

ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಸಂದೇಶ ಹಂಚಿಕೆ ಮಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್‌ ಯು.ಟಿ. ಖಾದರ್‌ ಮತ್ತು ಕಾಂಗ್ರೆಸ್‌ ಪಕ್ಷದ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್‌ ಮಾಡಿದ ಕುರಿತು ಮಂಗಳೂರು ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ. ‘ಪಿರ್ಸ ಎಪ್ಪೊಲುಂ ಇಕ್ಕಟ್ಟ್’ ಎಂಬ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಪೊಲೀಸರ ವಿರುದ್ಧ ಅವಹೇಳನಕಾರಿಯಾಗಿ ಸಂದೇಶಗಳನ್ನು ಹರಿಯಬಿಡಲಾಗಿತ್ತು. ಈ ಗ್ರೂಪ್‌ನಲ್ಲಿ ಅಶ್ರಫ್ ಕಿನಾರ ಕುದ್ರೋಳಿ ಎಂಬ ಹೆಸರಿನ ವ್ಯಕ್ತಿ […]

ಸಿದ್ದರಾಮಯ್ಯ, ಖಾದರ್‌ ವಿರುದ್ಧ ಅವಹೇಳನಕಾರಿ ಸಂದೇಶ : ಕೇಸ್‌ ದಾಖಲು Read More »

ಮಹಿಳೆಯ ಮಾನಭಂಗಕ್ಕೆ ಯತ್ನ : ಆರೋಪಿ ಬಂಧನ

ಧರ್ಮಸ್ಥಳ: ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಹಿಂಬಾಲಿಸಿಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿದ ಘಟನೆ ಕಲ್ಮಂಜ ನೀರಚಿಲುಮೆ ರಸ್ತೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹುಕ್ಕೋಟ್ಟು ರಸ್ತೆಯಲ್ಲಿ ಮಹಿಳೆಯೊಬ್ಬರು ಜೂ.6ರಂದು ಸಂಜೆ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಯುವಕನೊಬ್ಬ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಈ ಬಗ್ಗೆ ನೊಂದ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಧರ್ಮಸ್ಥಳ ಪೊಲೀಸರು BNS74,78(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿ ಇಂದು ಬೆಳ್ತಂಗಡಿ

ಮಹಿಳೆಯ ಮಾನಭಂಗಕ್ಕೆ ಯತ್ನ : ಆರೋಪಿ ಬಂಧನ Read More »

ಕಣಚೂರು ಆಸ್ಪತ್ರೆಗೆ ಹುಸಿ ಬಾಂಬ್‍ ಕರೆ | ಆರೋಪಿ ವಿದ್ಯಾರ್ಥಿನಿ ಬಂಧನ

ಮಂಗಳೂರು: ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲ ಪೊಲೀಸ್ ಠಾಣಾ ಸರಹದ್ದಿನ ದೇರಳಕಟ್ಟೆ ನಾಟೆಕಲ್ ರೋಡ್‌ ಕಣಚೂರು ಆಸ್ಪತ್ರೆಗೆ ಅನಾಮಧೇಯ ವ್ಯಕ್ತಿಯು ಕರೆ ಮಾಡಿ, ಆಸ್ಪತ್ರೆಗೆ ಬಾಂಬ್ ಇರಿಸಲಾಗಿದೆ, 11-00 ಗಂಟೆಯೊಳಗಾಗಿ ಆಸ್ಪತ್ರೆಯನ್ನು ಖಾಲಿ ಮಾಡಬೇಕೆಂದು 5 ಬಾರಿ ಕರೆ ಮಾಡಿ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಆರೋಪಿ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಬೆದರಿಕೆಯ ಕರೆ ಬಂದ ಹಿನ್ನಲೆಯಲ್ಲಿ ಪೊಲೀಸರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ, ಬಾಂಬ್ ನಿಷ್ಕ್ರಿಯ ತಂಡ ಹಾಗೂ

ಕಣಚೂರು ಆಸ್ಪತ್ರೆಗೆ ಹುಸಿ ಬಾಂಬ್‍ ಕರೆ | ಆರೋಪಿ ವಿದ್ಯಾರ್ಥಿನಿ ಬಂಧನ Read More »

ಕೆಎಸ್‍ ಆರ್ ಟಿಸಿ ಬಸ್‍ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು

ಫರಂಗಿಪೇಟೆ: ಬಸ್ ಡಿಕ್ಕಿಯಾಗಿ ಆಟೋ ಚಾಲಕನೊರ್ವ ಸಾವನ್ನಪ್ಪಿರುವ ಘಟನೆ ಹತ್ತನೇ ಮೈಲ್ ಕಲ್ಲು ಎಂಬಲ್ಲಿ ನಡೆದಿದೆ. ಅಮೆಮ್ಮಾರ್ ನಿವಾಸಿ ಝಾಹಿದ್ (28) ಮೃತಪಟ್ಟವರು. ಮಕ್ಕಳನ್ನು ರಸ್ತೆ ದಾಟಿಸಿ ಹಿಂದಿರುಗುವಾಗ ಮಂಗಳೂರಿನಿಂದ ಬರುತ್ತಿದ್ದ ಕೆಎಸ್  ಆರ್ ಟಿಸಿ ಬಸ್ ಡಿಕ್ಕಿಯಾಗಿ ಝಾಹಿದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕೆಎಸ್‍ ಆರ್ ಟಿಸಿ ಬಸ್‍ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು Read More »

ಕರಾವಳಿಯಲ್ಲಿ ಇಂದು ಬಕ್ರೀದ್‌ ಆಚರಣೆ

ವಿಶೇಷ ಪ್ರಾರ್ಥನೆ, ಹೊಸ ಉಡುಪು ಧರಿಸಿ ಸಂಭ್ರಮ ಮಂಗಳೂರು: ದ.ಕ.ಜಿಲ್ಲೆಯಲ್ಲಿ ಇಂದು ಬಕ್ರೀದ್‌ ಹಬ್ಬ ಆಚರಿಸಲಾಗುತ್ತದೆ. ಮುಂಜಾನೆಯಿಂದಲೇ ಮುಸ್ಲಿಮರು ಈದುಲ್ ಅಝ್‌ಹಾ (ಬಕ್ರೀದ್) ಸಡಗರದಲ್ಲಿದ್ದಾರೆ. ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂತು. ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಹೊಸ ಬಟ್ಟೆಬರೆ ಧರಿಸಿ, ಅತ್ತರ್ ಹಚ್ಚಿ, ನಾನಾ ಬಗೆಯ ತಿಂಡಿ-ತಿನಿಸು

ಕರಾವಳಿಯಲ್ಲಿ ಇಂದು ಬಕ್ರೀದ್‌ ಆಚರಣೆ Read More »

ಇಂದಿನಿಂದ ಗಡಾಯಿಕಲ್ಲು ಚಾರಣ ಮಾಡಬಹುದು

ಪ್ರವಾಸಿ ತಾಣಗಳ ಪ್ರವೇಶಕ್ಕಿದ್ದ ನಿರ್ಬಂಧ ತೆರವು ಬೆಳ್ತಂಗಡಿ : ಗಡಾಯಿಕಲ್ಲು, ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಜೂ.7ರಿಂದ ಎಂದಿನಂತೆ ಪ್ರವೇಶ ನೀಡಲು ಅನುಮತಿ ನೀಡಲಾಗಿದೆ. ಈ ಕುರಿತು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಅನುಮತಿ ನೀಡಿದೆ. ಮೇ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದ ಕಾರಣ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿತ್ತು. ನದಿ ಹಳ್ಳಗಳು ಉಕ್ಕಿ ಹರಿದು ಒಳ ಹರಿವು ಜಾಸ್ತಿ ಇದ್ದುದರಿಂದ ಪ್ರವಾಸಿಗರ ಚಾರಣಕ್ಕೆ ಮೇ 31ರಂದು ಮುಂದಿನ

ಇಂದಿನಿಂದ ಗಡಾಯಿಕಲ್ಲು ಚಾರಣ ಮಾಡಬಹುದು Read More »

ಪೂಜೆ ವೇಳೆ ಉಟ್ಟ ಬಟ್ಟೆಗೆ ಬೆಂಕಿ ತಗುಲಿ ವೃದ್ಧೆ ಮೃತ್ಯು

ಮಂಗಳೂರು: ಪೂಜೆ ಮಾಡುತ್ತಿದ್ದ ವೇಳೆ ಬಟ್ಟೆಗೆ ಬೆಂಕಿ ತಗುಲಿ ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ನಗರದ ಮೇರಿಹಿಲ್ ಸಮೀಪದ ಗುರುನಗರ ನಿವಾಸಿ ಸರೋಜಿನಿ (64) ಮೃತಪಟ್ಟವರು.  ಅವರನ್ನು ರಕ್ಷಿಸಲು ಮುಂದಾದ ಪುತ್ರ ಅಕ್ಷಯ್ (20)ಗೆ ಸುಟ್ಟ ಗಾಯವಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಸರೋಜಿನಿಯ ಬಟ್ಟೆಗೆ ಬೆಂಕಿ ತಗುಲಿತ್ತು. ಈ ವೇಳೆ ಪುತ್ರ ಆಕೆಯನ್ನು ರಕ್ಷಿಸಲು ಮುಂದಾಗಿದ್ದು, ಆತನಿಗೂ ಬೆಂಕಿಯಿಂದ ಸುಟ್ಟಗಾಯವಾಗಿತ್ತು. ವಿಷಯ ತಿಳಿದ

ಪೂಜೆ ವೇಳೆ ಉಟ್ಟ ಬಟ್ಟೆಗೆ ಬೆಂಕಿ ತಗುಲಿ ವೃದ್ಧೆ ಮೃತ್ಯು Read More »

ಹಾವು ಕಡಿದು ಯುವಕ ಮೃತ್ಯು

ಬಂಟ್ವಾಳ: ಹಾವು ಕಡಿದು ಯುವಕನೊಬ್ಬ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ದಿವಂಗತ ಇಸ್ಮಾಯಿಲ್ ಎಂಬುವವರ ಪುತ್ರ ಅಶ್ರಫ್ (28) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಇವರು  ಪಾಂಡವರಕಲ್ಲಿನ ಮನೆಯೊಂದರಲ್ಲಿ ಮಧ್ಯಾಹ್ನದ ಸಮಯ ಅಡಿಕೆ ಸುಲಿಯುತ್ತಿದ್ದ ಸಂದರ್ಭ ಕಾಲಿನ ಬೆರಳಿಗೆ ಹಾವು ಕಚ್ಚಿತ್ತು ಎನ್ನಲಾಗಿದೆ. ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.  ಇವರಿಗೆ

ಹಾವು ಕಡಿದು ಯುವಕ ಮೃತ್ಯು Read More »

ದಾರಿ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು

ಉಪ್ಪಿನಂಗಡಿ: ಬೈಕ್ ನಲ್ಲಿ ಬಂದ ಸವಾರರಿಬ್ಬರು  ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯ ಕುತ್ತಿಗೆಯಲ್ಲಿ ಇದ್ದ ಚಿನ್ನದ ಸರವನ್ನು ಎರಗಿಸಿ ಪರಾರಿಯಾದ ಘಟನೆ  ನಿನ್ನೆ ನೆಲ್ಯಾಡಿ ಗ್ರಾಮದ ಪಡುಬೆಟ್ಟುವಿನಲ್ಲಿ ನಡೆದಿದೆ.  ಪಡುಬೆಟ್ಟುವಿನ ಅಲೀಮಮ್ಮ (65) ಎಂಬವರ 10 ಪವನ್ ಚಿನ್ನವನ್ನು ಕಳ್ಳರು ಎಗರಿಸಿದ್ದಾರೆ. ತನ್ನ ಮನೆಗೆ ಕೆಲಸಕ್ಕೆ ಬರುವಾತ ಅನಾರೋಗ್ಯದ ಕಾರಣದಿಂದ ಕೆಲಸಕ್ಕೆ ಬಾರದಿದ್ದಾಗ ಅವರ ಆರೋಗ್ಯ ವಿಚಾರಿಸಲು ಅಲೀಮಮ್ಮ ಅವರು ಮುದರ ಅವರ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕೊಂದರಲ್ಲಿ ಬಂದ ಇಬ್ಬರು ಬೈಕ್‌ ನಿಲ್ಲಿಸಿ ಅಲೀಮಮ್ಮ

ದಾರಿ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು Read More »

ಬಜರಂಗ ದಳ ಮುಖಂಡ ಭರತ್‌ ಕುಮ್ಡೇಲು ಮನೆ ಶೋಧ

ರಾತ್ರಿ ಸರ್ಚ್‌ ವಾರಂಟ್‌ನೊಂದಿಗೆ ಹೋಗಿ ಪರಿಶೀಲನೆ ಮಂಗಳೂರು: ಪದೇ ಪದೆ ಸಂಭವಿಸಿದ ಹತ್ಯೆಗಳಿಂದ ಪ್ರಕ್ಷುಬ್ದಗೊಂಡಿರುವ ದಕ್ಷಿಣ ಕನ್ನಡದಲ್ಲಿ ಪೊಲೀಸರ ಕಾರ್ಯಾಚರಣೆಗಳು ತೀವ್ರಗೊಂಡಿದೆ. ಹಿಂದೂ ಕಾರ್ಯಕರ್ತರನ್ನು ಮತ್ತು ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಆರೋಪದ ಬೆನ್ನಲ್ಲೇ ಪೊಲೀಸರು ಬುಧವಾರ ರಾತ್ರಿ ಬಜರಂಗದಳದ ಮುಖಂಡ ಭರತ್‌ ಕುಮ್ಡೇಲು ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಬಂಟ್ವಾಳದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಭರತ್ ಕುಮ್ಡೇಲು ಮನೆ ಶೋಧಿಸಿದ್ದಾರೆ ಎನ್ನಲಾಗಿದೆ. ಮನೆ ಬಾಗಿಲು ಒಡೆದು

ಬಜರಂಗ ದಳ ಮುಖಂಡ ಭರತ್‌ ಕುಮ್ಡೇಲು ಮನೆ ಶೋಧ Read More »

error: Content is protected !!
Scroll to Top