ದಕ್ಷಿಣ ಕನ್ನಡ

ಮಾಣಿ ಹೈಸ್ಕೂಲ್ ಬಳಿ ಗುಡ್ಡ ಕುಸಿತ

ವಿಟ್ಲ: ಅಡ್ಡಹೋಳೆ- ಬಿ ಸಿ.‌ರೋಡ್ ರಾಷ್ಟ್ರೀಯ ಹೆದ್ದಾರಿಯ  ಅಂಡರ್ ಪಾಸ್ ರಸ್ತೆ ಸಂಚಾರಕ್ಕೆ ಮುಕ್ತಗೊಂಡ ಬೆನ್ನಲ್ಲೇ ಮಾಣಿ ಹೈಸ್ಕೂಲ್ ಬಳಿ ಸರ್ವಿಸ್ ರಸ್ತೆಗೆ ಗೋಡೆ ಕುಸಿದ ಪರಿಣಾಮ ಮಣ್ಣು ರಸ್ತೆಗೆ ಬಿದ್ದಿದೆ. ಈ ಭಾಗದಲ್ಲಿ ತಡೆಗೋಡೆ ನಿರ್ಮಿಸದೇ ಇದ್ದದ್ದರಿಂದ ನಿರಂತರ ಸುರಿಯುತ್ತಿರುವ ಮಳೆಗೆ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬಿದ್ದಿದೆ. ಸರಿಯಾಗಿ ಕಾಮಗಾರಿ ನಿರ್ವಹಿಸದೇ ಇದ್ದುದರಿಂದ ಅಲ್ಲಲ್ಲಿ ಈ ರೀತಿಯ ತೊಂದರೆಗಳು ಉಂಟಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ‌.

ಮಾಣಿ ಹೈಸ್ಕೂಲ್ ಬಳಿ ಗುಡ್ಡ ಕುಸಿತ Read More »

ಲಾರಿ ಪಲ್ಟಿ : ಕಾರ್ಮಿಕ ಮೃತ್ಯು

ಬಂಟ್ವಾಳ : ಲಾರಿ ಪಲ್ಟಿಯಾಗಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಇಂದು ಬೆಳಗ್ಗೆ ನಡೆದಿದೆ. ಘಟನೆಯಿಂದಾಗಿ ಜಾರ್ಖಾಂಡ್‌ ಮೂಲದ ನಿರ್ಮಲಾ ಅನ್ಸ್ತಾ ಮೃತಪಟ್ಟ ಕಾರ್ಮಿಕ ಎನ್ನಲಾಗಿದೆ. ಲಾರಿ ಚಾಲಕ ಸುಜಿತ್, ಕ್ಲೀನರ್ ಸಿಮೋಹನ್ ಮುರ್ಮ ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಅಕ್ಕಿ ಲೋಡ್ ನ ಲಾರಿ ಬಂಟ್ವಾಳದ ಎಸ್‌ವಿ.ಎಸ್.ಕಾಲೇಜು ಬಳಿ ಬರುವಾಗ ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಉಡುಪಿಯಿಂದ ಅಕ್ಕಿ ಲೋಡ್ ಮಾಡಿಕೊಂಡು ಮೂಡಬಿದಿರೆಯಾಗಿ ಬಂಟ್ವಾಳಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ.ಲಾರಿಯ ಹಿಂಭಾಗದಲ್ಲಿ ಅಕ್ಕಿ

ಲಾರಿ ಪಲ್ಟಿ : ಕಾರ್ಮಿಕ ಮೃತ್ಯು Read More »

ಮನೆ ಮೇಲೆ ಬಿದ್ದ ಧರೆ | ಅವಶೇಷದಡಿ ಸಿಲುಕಿದ ತಾಯಿ, ಮಗು

ಉಳ್ಳಾಲ: ಮಳೆಯಾರ್ಭಟಕ್ಕೆ  ದ.ಕ ಜಿಲ್ಲೆ.ಯ ಜನರಲ್ಲಿ ಆತಂಕ ಹೆಚಾಗುತ್ತಿದ್ದು, ಇದೀಗ  ಉಳ್ಳಾಲದ ಮಂಜನಾಡಿ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದ ಪರಿಣಾಮ ಮಹಿಳೆ ಮತ್ತು ಮಗು ಅಸುನೀಗಿದ್ದಾರೆ. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ತಾಯಿ ಮತ್ತು ಒಂದು ಮಗು ಅವಶೇಷದಡಿ ಸಿಲುಕಿದ್ದಾರೆ. ಮಂಜನಾಡಿ ಗ್ರಾಮದ ಉರುಮನೆ ಮದಪಾಡಿಯಲ್ಲಿ ಘಟನೆ ನಡೆದಿದ್ದು, ತೋಟದ ನಡುವಿರುವ ಮನೆಯ ಮೇಲೆ ಬೃಹತ್ ಮರ ಸಹಿತ ಸುಮಾರು 30 ಅಡಿ ದರೆ ಕುಸಿದು ಬಿದ್ದಿದೆ. ಶುಕ್ರವಾರ ಮುಂಜಾನೆ ಸುಮಾರು

ಮನೆ ಮೇಲೆ ಬಿದ್ದ ಧರೆ | ಅವಶೇಷದಡಿ ಸಿಲುಕಿದ ತಾಯಿ, ಮಗು Read More »

ಲಾರಿಗೆ ಡಿಕ್ಕಿ ಹೊಡೆದ ಬೈಕ್ | ಯುವಕ ಮೃತ್ತು

ವಿಟ್ಲ: ಲಾರಿಯ ಹಿಂಬದಿಗೆ ಬೈಕ್‍ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳಪದವುನಲ್ಲಿ ನಡೆದಿದೆ. ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಯ್ಸ್ ಮಣ್ಣು ಸಾಗಾಟ ಮಾಡುತ್ತಿದ್ದ ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಯಿತು.  ಆದರೆ ಇರ್ಫಾನ್ (19) ಚಿಕಿತ್ಸೆ

ಲಾರಿಗೆ ಡಿಕ್ಕಿ ಹೊಡೆದ ಬೈಕ್ | ಯುವಕ ಮೃತ್ತು Read More »

ಭಾರಿ ಮಳೆ : ದ.ಕ., ಉಡುಪಿ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ

ಶಾಲಾರಂಭದ ಮೊದಲ ದಿನವೇ ರಜೆ ಮಂಗಳೂರು: ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿನ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ಇಂದು ರಜೆ ಸಾರಲಾಗಿದೆ. ಎಲ್ಲ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ (ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆ) ಇಂದು ರಜೆ ಘೋಷಿಸಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದರಿಂದ ಬೇಸಿಗೆ ರಜೆ ಮುಗಿದು ಇಂದಿನಿಂದ ಪುನರಾರಂಭಗೊಳ್ಳಬೇಕಿದ್ದ ಶಾಲೆಗಳು ನಾಳೆ ತೆರೆಯಲಿವೆ. ಎಸ್ .ಎಸ್. ಎಲ್ .ಸಿ ಪೂರಕ ಪರೀಕ್ಷೆ ಎಂದಿನಂತೆ ನಡೆಯಲಿದೆ.

ಭಾರಿ ಮಳೆ : ದ.ಕ., ಉಡುಪಿ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ Read More »

ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಜೈಷ್ ಎ ಮೊಹಮ್ಮದ್ ಹೆಸರಿನಲ್ಲಿ ಬೆದರಿಕೆ ಸಂದೇಶ

ನಿನ್ನ ಸ್ನೇಹಿತನ ಕೈ ಕಾಲು ಕಡಿಯುತ್ತೇವೆ, ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್​​ನಲ್ಲಿ ನೇತು ಹಾಕುತ್ತೇವೆ ಎಂದು ಧಮ್ಕಿ ಮಂಗಳೂರು: ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಎಂಬವರಿಗೆ ಪಾಕಿಸ್ತಾನದ ಜೈಷ್ ಎ ಮೊಹಮ್ಮದ್ ಸಂಘಟನೆಯ ಹೆಸರಿನಲ್ಲಿ ಜೀವ ಬೆದರಿಕೆ ಸಂದೇಶ ಬಂದಿದೆ. ನಿನ್ನ ಸ್ನೇಹಿತನ ಕೈ ಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್​​ನಲ್ಲಿ ನೇತು ಹಾಕುತ್ತೇವೆ. ನಾವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ.

ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಜೈಷ್ ಎ ಮೊಹಮ್ಮದ್ ಹೆಸರಿನಲ್ಲಿ ಬೆದರಿಕೆ ಸಂದೇಶ Read More »

ದಕ್ಷಿಣ ಕನ್ನಡ ಜಿಲ್ಲೆಗೆ ಎಸ್ಪಿಯಾಗಿ ಅರುಣ್‍ ಕುಮಾರ್ ಎಂಟ್ರಿ | ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದು,  ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನರ್ ಅಗರ್’ವಾಲ್ ವರ್ಗಾವಣೆಗೊಂಡಿದ್ದಾರೆ. 2017ರಲ್ಲಿ ದ .ಕ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಮತ್ತೆ ಮಂಗಳೂರು ಕಮೀಷನರ್ ಆಗಿ ಬರುತ್ತಿದ್ದಾರೆ.  ಉಡುಪಿಯ ಎಸ್ಪಿಯಾಗಿರುವ ಅರುಣ್ ಕುಮಾರ್ ಅವರು ದ. ಕ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ. ಸುಧೀರ್ ಕುಮಾರ್ ರೆಡ್ಡಿ. ದ.ಕ ಎಸ್ಪಿಯಾಗಿದ್ದ ಸಂದರ್ಭ ಅವರ ಕಾರ್ಯವೈಖರಿಯೇ ಇದಕ್ಕೆ ಕಾರಣ. ಹಲವು ಕಾರ್ಯಾಚರಣೆಗಳ ಮೂಲಕ ಮನೆಮಾತಾಗಿದ್ದರು. ದ.ಕ.ದಿಂದ ಬೆಳಗಾವಿಗೆ ಎಸ್ಪಿಯಾಗಿ ತೆರಳಿದ

ದಕ್ಷಿಣ ಕನ್ನಡ ಜಿಲ್ಲೆಗೆ ಎಸ್ಪಿಯಾಗಿ ಅರುಣ್‍ ಕುಮಾರ್ ಎಂಟ್ರಿ | ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ Read More »

ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗೋಪಾಲಕೃಷ್ಣ ಗೌಡ ಆರೇಲ್ತಡಿ ನಿಧನ

 ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ, ಮಾಜಿ ಉಪಾಧ್ಯಕ್ಷ ಗೋಪಾಲಕೃಷ್ಣ ಗೌಡ ಆರೇಲ್ತಡಿ ಇಂದು (ಗುರುವಾರ) ಸಂಜೆ ಆರೇಲ್ತಡಿಯ ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಸವಣೂರು ಆರೇಲ್ತಡಿ ಒಕ್ಕೂಟದ ಪ್ರಸ್ತುತ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಆರೇಲ್ತಡಿ ಇರ್ವೆರು ಉಳ್ಳಾಕುಲು ಕೆಡೆಂಜೋಡಿತ್ತಾಯ ಪರಿವಾರ ದೈವಗಳ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ, ಬ್ರಹ್ಮ ಕಲಶ ಸಮಿತಿಗಳಲ್ಲಿ ಸಕ್ರೀಯವಾಗಿ ದುಡಿದಿದ್ದರು. ಪ್ರಗತಿಪರ ಕೃಷಿಕರಾಗಿ, ಹೈನುಗಾರರಾಗಿ ಗುರುತಿಸಿಕೊಂಡಿದ್ದರು

ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗೋಪಾಲಕೃಷ್ಣ ಗೌಡ ಆರೇಲ್ತಡಿ ನಿಧನ Read More »

ವಿವಾಹಿತೆ ಪ್ರಿಯಕರನೊಂದಿಗೆ ಆತ್ಮಹತ್ಯೆಗೆ ಶರಣು

ಮೂಡುಬಿದಿರೆ : ಮರಕಡ ಬಳಿ ಇಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಡಗ ಮಿಜಾರಿನ ನಮೀಕ್ಷಾ ಶೆಟ್ಟಿ (29) ಹಾಗೂ ಆಕೆಯ ಪ್ರಿಯಕರನಾದ ಚಾಲಕ ವೃತ್ತಿಯ ನಿನ್ನೋಡಿಯ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ. ವಿವಾಹಿತೆ ನಮೀಕ್ಷಾ ಎಂಬವರಿಗೆ ಇಬ್ಬರು ಗಂಡುಮಕ್ಕಳ ಇದ್ದು, ಗಂಡ ಸತೀಶ್ ಪುಣೆಯಲ್ಲಿ ಉದ್ಯೋಗದಲ್ಲಿದ್ದಾರೆ. ನಮೀಕ್ಷಾನ ಪ್ರಿಯಕ ಪ್ರಶಾಂತ್ ಮೂಲತಃ ಬಾಗಲಕೋಟೆಯ ನಿವಾಸಿ. ಆತನಿಗೂ ಮದುವೆಯಾಗಿದೆ ಎಂದು ತಿಳಿದು ಬಂದಿದೆ. ಇನ್‌ಸ್ಟಾಗ್ರಾಂ ಮೂಲಕ ಇವರಿಬ್ಬರ ಪರಿಚಯವಾಗಿ ಅದು ಪ್ರೇಮಸಂಬಂಧಕ್ಕೆ ತಿರುಗಿದೆ.

ವಿವಾಹಿತೆ ಪ್ರಿಯಕರನೊಂದಿಗೆ ಆತ್ಮಹತ್ಯೆಗೆ ಶರಣು Read More »

ಆಕಾಶವಾಣಿ ಕೇಂದ್ರದ  ಸೂರ್ಯನಾರಾಯಣ ಭಟ್ಟರಿಗೆ ಸನ್ಮಾನ

ಮೇ ತಿಂಗಳ ಅಂತ್ಯದಲ್ಲಿ ನಿವೃತ್ತರಾಗಲಿರುವ ಮಂಗಳೂರು ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಪಿ. ಎಸ್ ಸೂರ್ಯನಾರಾಯಣ ಭಟ್ ಇವರನ್ನು ಶ್ರೀಮದವೂರ ವಿಘ್ನೇಶ ಕಲಾ ಸಂಘ ಗೇರುಕಟ್ಟೆ ವತಿಯಿಂದ ಆಕಾಶವಾಣಿ ಕೇಂದ್ರದಲ್ಲಿ  ಸನ್ಮಾನಿಸಲಾಯಿತು.  ಕ್ರಿಯಾಶೀಲ ವ್ಯಕ್ತಿತ್ವದ ಸೂರ್ಯನಾರಾಯಣ ಭಟ್ಟರು ಕಾವ್ಯಯಾನ, ಕಥಾಮೃತ, ಕೃಷಿರಂಗ, ತುಳು- ಕನ್ನಡ ಸಂದರ್ಶನ, ಯಕ್ಷ ಸಿರಿ, ಯಕ್ಷಗಾನ ತಾಳಮದ್ದಳೆ ಸಂಯೋಜನೆಯ ಮೂಲಕ ಬಾನುಲಿ ಕಾರ್ಯಕ್ರಮಗಳ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ವಿಘ್ನೇಶ ಕಲಾ ಸಂಘದ ಅಧ್ಯಕ್ಷ   ಪ್ರೊ. ಮಧೂರು ಮೋಹನ ಕಲ್ಲೂರಾಯ ತಿಳಿಸಿದರು.  ಈ

ಆಕಾಶವಾಣಿ ಕೇಂದ್ರದ  ಸೂರ್ಯನಾರಾಯಣ ಭಟ್ಟರಿಗೆ ಸನ್ಮಾನ Read More »

error: Content is protected !!
Scroll to Top