ದಕ್ಷಿಣ ಕನ್ನಡ

ವಿದ್ಯಾರ್ಥಿಗಳ ಹಾಸ್ಟೆಲ್‌ ಕಟ್ಟಡದಲ್ಲಿ ಬೆಂಕಿ ಅವಘಡ

ಮಂಗಳೂರು ವಿವಿಯ ಎನ್‌ಆರ್‌ಐ ವಿದ್ಯಾರ್ಥಿಗಳಿದ್ದ ಹಾಸ್ಟೆಲ್‌ ಮಂಗಳೂರು: ದೇರಳಕಟ್ಟೆಯಲ್ಲಿ ಎನ್‌ಆರ್‌ಐ ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ದೇರಳಕಟ್ಟೆ ಜಂಕ್ಷನ್‌ನಲ್ಲಿರುವ ವೆಂಕಟ್ ರೆಸಿಡೆನ್ಸಿಯ ಜನರೇಟರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೇಲಿನ ಎರಡು ಮಹಡಿಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಲಿಯುವ ಎನ್‌ಆರ್‌ಐ ವಿದ್ಯಾರ್ಥಿಗಳಿದ್ದು, ಎಲ್ಲರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ. ಕಟ್ಟಡದ ಟಾಪ್ ಫ್ಲೋರ್‌ನಲ್ಲಿ ಸಭಾಂಗಣವಿದ್ದು, ಅಲ್ಲಿ ಯಾವುದೇ ಕಾರ್ಯಕ್ರಮಗಳಿರಲಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯವನ್ನು […]

ವಿದ್ಯಾರ್ಥಿಗಳ ಹಾಸ್ಟೆಲ್‌ ಕಟ್ಟಡದಲ್ಲಿ ಬೆಂಕಿ ಅವಘಡ Read More »

ಭಾರೀ ಮಳೆ ಹಿನ್ನಲೆ : ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ತನಕ ಇಂದು ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವರೆಗೆ ಇಂದು (ಜೂ.16) ಸೋಮವಾರ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್‍ಘೋಷಣೆಯಾಗಿದೆ. ದ.ಕ. ಜಿಳ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಭಾರೀ ಮಳೆ ಹಿನ್ನಲೆ : ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ತನಕ ಇಂದು ರಜೆ ಘೋಷಣೆ Read More »

ಭಾರೀ ಮಳೆ ಹಿನ್ನಲೆ : ದ.ಕ.ಜಿಲ್ಲೆಯ 5 ತಾಲೂಕುಗಳ ಶಾಲೆಗಳಿಗೆ ನಾ:ಳೆ (ಜೂ.16) ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್‍ ಘೋಷಣೆಯಾಗಿದ್ದು, ದ.ಕ. ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆಗಳಿಗೆ ನಾಳೆ(ಜೂ.16) ರಜೆ ಘೋಷಿಸಲಾಗಿದೆ. ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ ಮತ್ತು ಮೂಲ್ಕಿ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗೀ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಭಾರೀ ಮಳೆ ಹಿನ್ನಲೆ : ದ.ಕ.ಜಿಲ್ಲೆಯ 5 ತಾಲೂಕುಗಳ ಶಾಲೆಗಳಿಗೆ ನಾ:ಳೆ (ಜೂ.16) ರಜೆ ಘೋಷಣೆ Read More »

ಲಾಡ್ಜಿನಲ್ಲಿ ವೈಶ್ಯವಾಟಿಕೆ | ಪೊಲೀಸರಿಂದ ದಾಳಿ : ಇಬ್ಬರ ಬಂಧನ

ಬೆಳ್ತಂಗಡಿ : ಉಜಿರೆಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್‍ ಸ್ಪೆಕ್ಟರ್ ಸುಬ್ಬಾಪುರ್ ಮಠ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಶನಿವಾರ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ಸಂದರ್ಭ ಉಜಿರೆಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದ್ದು. ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಲಾಡ್ಜ್ ನ ಮ್ಯಾನೇಜರ್ ಬೆಳ್ತಂಗಡಿ ತಾಲೂಕಿನ ಸಾವ್ಯ ಗ್ರಾಮದ ಬಾರೆಗುಡ್ಡೆ ಸತೀಶ್ ಪೂಜಾರಿ (49) ಮತ್ತು

ಲಾಡ್ಜಿನಲ್ಲಿ ವೈಶ್ಯವಾಟಿಕೆ | ಪೊಲೀಸರಿಂದ ದಾಳಿ : ಇಬ್ಬರ ಬಂಧನ Read More »

ಮಂಗಳೂರು : ಕುಸಿದು ಬಿದ್ದ ಆಸ್ಪತ್ರೆಯ ಗೋಡೆ

ಒಂದೇ ಕುಟುಂಬದ ಆರು ಮಂದಿ ಅದೃಷ್ಟವಶಾತ್‌ ಪಾರು ಮಂಗಳೂರು : ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿನ್ನೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಂಗಳೂರಿನಲ್ಲಿ ಭಾರಿ ಮಳೆಗೆ ಜಲ ಸ್ಫೋಟಗೊಂಡು ಖಾಸಗಿ ಆಸ್ಪತ್ರೆಯ ಗೋಡೆ ಕುಸಿದು ಬಿದ್ದಿದ್ದು, ಭಾರಿ ಅವಘಡವೊಂದು ಸ್ವಲ್ಪದರಲ್ಲೇ ತಪ್ಪಿದೆ. ಕುಟುಂಬವೊಂದು ಅದೃಷ್ಟವಶಾತ್‌ ಪಾರಾಗಿದೆ. ಕಂಕನಾಡಿ ಬಳಿಯ ಸುವರ್ಣ ಲೇನ್‌ನಲ್ಲಿ ಭಾರಿ ಅವಘಡ ಸಂಭವಿಸಿದೆ. ಧಾರಾಕಾರ ಮಳೆಗೆ ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ.

ಮಂಗಳೂರು : ಕುಸಿದು ಬಿದ್ದ ಆಸ್ಪತ್ರೆಯ ಗೋಡೆ Read More »

ಮಂಗಳೂರು : ಅವಾಂತರ ಸೃಷ್ಟಿಸಿದ ಮಳೆ; ಕೆತ್ತಿಕಲ್‌ನಲ್ಲಿ ಗುಡ್ಡ ಕುಸಿತ

ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಒಂದು ಬದಿ ಸಂಚಾರ ಸ್ಥಗಿತ ಮಂಗಳೂರು : ಕರಾವಳಿಯಾದ್ಯಾಂತ ನಿನ್ನೆ ಮಧ್ಯಾಹ್ನದ ಬಳಿಕ ಭಾರಿ ಮಳೆಯಾಗುತ್ತಿದ್ದು, ಮಂಗಳೂರು ನಗರದಲ್ಲಿ ಕೃತಕ ನೆರೆ ನೀರು ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಪಂಪ್‌ವೆಲ್‌ನಲ್ಲಿ ಆಳೆತ್ತರಕ್ಕೆ ನೀರು ನಿಂತು ವಾಹನ ಸವಾರರು ಮತ್ತು ಪಾದಚಾರಿಗಳು ಪರದಾಡಬೇಕಾಯಿತು. ಸುಮಾರು ಒಂದೂವರೆ ತಾಸು ರಿಕ್ಷಾ ಮತ್ತಿತರ ವಾಹನಗಳ ಸಂಚಾರವನ್ನು ಸ್ಥಗಿತವಾಗಿತ್ತು. ಹಲವೆಡೆ ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅಪಾರ ನಷ್ಟ ಸಂಭವಿಸಿದೆ. ಮಂಗಳೂರು‌ ಹೊರವಲಯದ ವಾಮಂಜೂರು ಬಳಿಯ ಮಂಗಳೂರು-ಮೂಡಬಿದ್ರೆ-ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ

ಮಂಗಳೂರು : ಅವಾಂತರ ಸೃಷ್ಟಿಸಿದ ಮಳೆ; ಕೆತ್ತಿಕಲ್‌ನಲ್ಲಿ ಗುಡ್ಡ ಕುಸಿತ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ಕೊಡುಗೆ | ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ.ಕೆ.ವಿ ರೇಣುಕಾಪ್ರಸಾದ್ ಮತ್ತು ಕುಟುಂಬದವರು ಬೆಳ್ಳಿ ರಥವನ್ನು ಕೊಡುಗೆಯಾಗಿ ನೀಡಲಿದ್ದು, ಇದರ ಪೂರ್ವಭಾವಿಯಾಗಿ ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ ಶನಿವಾರ (ಇಂದು) ನಡೆಯಿತು. ದೇವಾಲಯದಲ್ಲಿ ಶಾಸ್ರೋಕ್ತ ವಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥನೆ ಮಾಡಿದ ಬಳಿಕ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರು, ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಆಯ್ಯಪ್ಪ ಸುತಗುಂಡಿ ಮತ್ತಿತರರು ಅನುಮತಿ ಪತ್ರವನ್ನು ಹಸ್ತಾಂತರಿಸಿದರು. ನಂತರ ವೀಳ ನೀಡಿಕೆ ನಡೆಯಿತು. ಈ ಸಂದರ್ಭದಲ್ಲಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ಕೊಡುಗೆ | ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ Read More »

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ತನಿಖೆ ಕೈಗೆತ್ತಿಕೊಂಡ ಎನ್‍ ಐಎ ತಂಡ ಮಂಗಳೂರಿಗೆ

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಎನ್‌ಐಎ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ಎನ್‌ಐಎ ತಂಡ ನಡೆಸುತ್ತಿದೆ. ಅದರಂತೆ ಇಂದು ಬೆಂಗಳೂರಿನಿಂದ ಆಗಮಿಸಿದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿವೆ.

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ತನಿಖೆ ಕೈಗೆತ್ತಿಕೊಂಡ ಎನ್‍ ಐಎ ತಂಡ ಮಂಗಳೂರಿಗೆ Read More »

ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕ ಮೃತ್ಯು

ಮಂಗಳೂರು: ನಗರದ ಯೆಯ್ಯಾಡಿಯ ಬಾ‌ರ್ ಒಂದರಲ್ಲಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ (32) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜೂ,6 ರಂದು ಎರಡು ಗುಂಪುಗಳ ಮಧ್ಯೆ ಜಗಳ ಉಂಟಾಗಿ ವೇಳೆಗೆ ಚೂರಿ ಇರಿತವಾಗಿತ್ತು. ಆರೋಪಿಗಳು ಮೃತಪಟ್ಟ ಯುವಕ ಕೌಶಿಕ್ ಪರಿಚಿತರೇ ಆಗಿದ್ದರು. ಒಂದು ತಿಂಗಳ ಹಿಂದೆ ಇವರ ನಡುವೆ ಯಾವುದೋ ಕಾರಣಕ್ಕೆ ಮಾತಿನ ಚಕಮಕಿ ನಡೆದಿತ್ತು. ಇದೇ ವಿಚಾರದಲ್ಲಿ ಜೂನ್ 6ರಂದು ಯೆಯ್ಯಾಡಿಯ ಬಾರ್‌ನಲ್ಲಿದ್ದಾಗ ಪರಸ್ಪರ ಬೈದಾಡಿಕೊಂಡಿದ್ದರು. ಇದೇ ವೇಳೆ ಬಿಜೈ ನಿವಾಸಿಗಳಾದ ಬ್ರಿಜೇಶ್ ಮತ್ತು ಗಣೇಶ್

ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕ ಮೃತ್ಯು Read More »

ಮಂಗಳೂರು: ಅಂಗಡಿಯಲ್ಲಿ ಬೆಂಕಿ ಅವಘಡ

ಎರಡು ಅಂಗಡಿ, ಒಂದು ವಾಹನ ನಾಶ ಮಂಗಳೂರು : ಹಂಪನಕಟ್ಟೆಯ ಯೂನಿವರ್ಸಿಟಿ ಕಾಲೇಜ್ ಮುಂಭಾಗ ಗುಜರಿ ಅಂಗಡಿಯಲ್ಲಿ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಅದರ ಪಕ್ಕದಲ್ಲಿರುವ ವಸ್ತ್ರ ಮಳಿಗೆಗೂ ಬೆಂಕಿ ವ್ಯಾಪಿಸಿದೆ. ಎರಡು ಅಂಗಡಿ ಮತ್ತು ಒಂದು ಗೂಡ್ಸ್‌ ವಾಹನ ಬೆಂಕಿಯಿಂದ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಸೊತ್ತುಗಳಿಗೆ ಹಾನಿಯಾಗಿದೆ. ಪಾಂಡೇಶ್ವರ ಅಗ್ನಿಶಾಮಕ ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಂಕಿ ಆರಿಸಲು ಹರಸಾಹಸ ಪಡಬೇಕಾಯಿತು.

ಮಂಗಳೂರು: ಅಂಗಡಿಯಲ್ಲಿ ಬೆಂಕಿ ಅವಘಡ Read More »

error: Content is protected !!
Scroll to Top