ದಕ್ಷಿಣ ಕನ್ನಡ

ಕಾರು -ಮಿನಿ ಟೆಂಪೋ ಡಿಕ್ಕಿ  

ಕಡಬ: ಕಾರು ಮತ್ತು ಮಿನಿ ಟೆಂಪೋ ನಡುವೆ ಅಪಘಾತವಾದ  ಘಟನೆ ಕುದ್ಮಾರು ಆಲಂಕಾರು ರಸ್ತೆಯ ಶಾಂತಿಮೊಗರಿನಲ್ಲಿ ನಡೆದಿದೆ. ಕುದ್ಮಾರು ಕಡೆಗೆ ಬರುತ್ತಿದ್ದ ಕಾರು ಹಾಗೂ  ಅಲಂಕಾರು ಕಡೆಗೆ ಹೋಗುತ್ತಿದ್ದ ಬೇಕರಿ ಉತ್ಪನ್ನಗಳ ಲೈನ್ ಸೇಲ್‌ನ ಮಿನಿ ಟೆಂಪೋ ನಡುವೆ ಅಪಘಾತ ಉಂಟಾಗಿದೆ. ಅಪಘಾತದ ರಭಸಕ್ಕೆ ಟೆಂಪೋ ಪಲ್ಟಿಯಾಗಿದ್ದು, ಅದರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಕಾರು -ಮಿನಿ ಟೆಂಪೋ ಡಿಕ್ಕಿ   Read More »

ಸರಣಿ ಕೊಲೆ, ಹಿಂಸಾಚಾರಕ್ಕೆ ಉನ್ನತ ಪೊಲೀಸ್‌ ಅಧಿಕಾರಿಗಳ ತಲೆದಂಡ?

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್‌ ವ್ಯವಸ್ಥೆಗೆ ಆಮೂಲಾಗ್ರ ಬದಲಾವಣೆ ತರಲು ಚರ್ಚೆ ಬೆಂಗಳೂರು : ಮಂಗಳವಾರ ಬಂಟ್ವಾಳದಲ್ಲಿ ನಡೆದ ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ನಡೆದಿರುವ ಮೂರು ಕೊಲೆಗಳು ಹಾಗೂ ಆಗಾಗ ಸಂಭವಿಸುತ್ತಿರುವ ಕೋಮು ಹಿಂಸಾಚಾರ ಸಂಬಂಧಿ ಘಟನೆಗಳನ್ನು ತಡೆಯಲು ವಿಫಲವಾಗಿರುವ ಪೊಲೀಸ್‌ ಇಲಾಖೆಯ ವಿರುದ್ಧ ಭಾರಿ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೆಲವು ಉನ್ನತ ಅಧಿಕಾರಿಗಳ ತಲೆದಂಡವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು

ಸರಣಿ ಕೊಲೆ, ಹಿಂಸಾಚಾರಕ್ಕೆ ಉನ್ನತ ಪೊಲೀಸ್‌ ಅಧಿಕಾರಿಗಳ ತಲೆದಂಡ? Read More »

ಅಬ್ದುಲ್‌ ರಹಿಮಾನ್‌ ಹತ್ಯೆಗೆ ಆಕ್ರೋಶ : ಕಾಂಗ್ರೆಸ್‌ಗೆ ಮುಸ್ಲಿಮ್‌ ಮುಖಂಡರ ರಾಜೀನಾಮೆ

ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆಗೆ ಆಕ್ಷೇಪ ಮಂಗಳೂರು: ಬಂಟ್ವಾಳದ ಅಬ್ದುಲ್‌ ರಹಿಮಾನ್‌ ಹತ್ಯೆಯ ಬಳಿಕ ಕಾಂಗ್ರೆಸ್‌ನ ಮೇಲೆ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಹಲವು ನಾಯಕರು ಪಕ್ಷದಲ್ಲಿರುವ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ ಸರ್ಕಾರ ಕೋಮು ಹಿಂಸಾಚಾರ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪೋಸ್ಟ್‌ಗಳಿಗೆ ಮುಸ್ಲಿಮ್ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಅಬ್ದುಲ್‌ ರಹಿಮಾನ್‌ ಶವವನ್ನು ಆಸ್ಪತ್ರೆಗೆ ತಂದಾಗ ಅಲ್ಲಿ ಜಮಾಯಿಸಿದ್ದ ಮುಸ್ಲಿಮರು ತಮ್ಮ ಸಮುದಾಯದ ನಾಯಕರನ್ನು ತರಾಟೆಗೆ

ಅಬ್ದುಲ್‌ ರಹಿಮಾನ್‌ ಹತ್ಯೆಗೆ ಆಕ್ರೋಶ : ಕಾಂಗ್ರೆಸ್‌ಗೆ ಮುಸ್ಲಿಮ್‌ ಮುಖಂಡರ ರಾಜೀನಾಮೆ Read More »

ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ,  ಕಲ್ಲಡ್ಕ ಫೈಓವರ್ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ

ಮಂಗಳೂರು : ನಿರೀಕ್ಷೆಗಿಂತ ಮೊದಲೇ ಮಳೆಗಾಲ ಪ್ರಾರಂಭವಾಗಿದ್ದು, ಮಳೆಯಿಂದಾಗಿ ಸಾಕಷ್ಟು ದುರಂತಗಳು ನಡೆದಿದೆ. ಹೀಗಾಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್ ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಪ್ರೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಮುಂಗಾರು ಚುರುಕುಗೊಂಡಿರುವ ಕಾರಣ ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ರಸ್ತೆ

ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ,  ಕಲ್ಲಡ್ಕ ಫೈಓವರ್ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ Read More »

ಅಬ್ದುಲ್‌ ರಹಿಮಾನ್‌ ಹತ್ಯೆ : 15 ಮಂದಿಯ ವಿರುದ್ಧ ಪ್ರಕರಣ ದಾಖಲು

ಕೊಲೆ ಮಾಡಿದವರಲ್ಲಿ ಸ್ಥಳೀಯ ಇಬ್ಬರು ಪರಿಚಯಸ್ಥರು ಎಂದು ಮಾಹಿತಿ ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದರ್ ಶಾಫಿ ಎಂಬವರ ಮೇಲಿನ ಕೊಲೆಯತ್ನ ಪ್ರಕರಣ‌ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ‌ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಹಿಮಾನ್ ಅವರ‌ ಕೊಲೆ ಮತ್ತು ಕಲಂದರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ದೀಪಕ್ ಮತ್ತು

ಅಬ್ದುಲ್‌ ರಹಿಮಾನ್‌ ಹತ್ಯೆ : 15 ಮಂದಿಯ ವಿರುದ್ಧ ಪ್ರಕರಣ ದಾಖಲು Read More »

ಮಂಗಳೂರು : ಹುಟ್ಟೂರು ಕೊಳತ್ತಮಜಲ್‌ಗೆ ಅಬ್ದುಲ್‌ ರಹಿಮಾನ್‌ ಮೃತದೇಹ ರವಾನೆ

ಸರಣಿ ಹತ್ಯೆಗಳಿಂದ ಕರಾವಳಿಯಲ್ಲಿ ಆತಂಕದ ವಾತಾವರಣ- ಮೇ 30ರವರೆಗೆ ನಿಷೇಧಾಜ್ಞೆ ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಬಂಟ್ವಾಳ ಸಮೀಪ ಮುಸ್ಲಿಂ ಯುವಕನನ್ನು ಬರ್ಬರವಾಗಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಕರಾವಳಿಯಲ್ಲಿ ಮತ್ತೆ ಆತಂಕದ ವಾತಾವರಣ ಉಂಟು ಮಾಡಿದೆ. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಮುಸ್ಲಿಮರು ಒತ್ತಾಯಿಸಿ ರಾತ್ರಿಯಿಡೀ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ಉದವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಮೇ 30ರ ಸಂಜೆ 6ಗಂಟೆವರೆಗೂ ಮಂಗಳೂರು ಕಮೀಷನರೇಟ್ ಹಾಗೂ ಮಂಗಳೂರು ಪೊಲೀಸ್‌ ವ್ಯಾಪ್ತಿಯಡಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದ್ದು ಹೆಚ್ಚುವರಿ ಪೊಲೀಸರನ್ನು

ಮಂಗಳೂರು : ಹುಟ್ಟೂರು ಕೊಳತ್ತಮಜಲ್‌ಗೆ ಅಬ್ದುಲ್‌ ರಹಿಮಾನ್‌ ಮೃತದೇಹ ರವಾನೆ Read More »

ಹಿಂದೂ ಮುಖಂಡ ಶರಣ್‍ ಪಂಪ್‍ ವೆಲ್‍ ಪೊಲೀಸರ ವಶಕ್ಕೆ | ರಾತ್ರಿಯೇ ಜಾಮೀನು ಮಂಜೂರು

ಮಂಗಳೂರು: ಸುಹಾನ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ಬಂದ್ ಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್‍ ಮುಖಂಡ ಶರಣ್ ಪಂಪ್‌ ವೆಲ್ ಅವರನ್ನು ಮಂಗಳವಾರ ರಾತ್ರಿ ಬಂಧಿಸಿದ್ದಾರೆ. ಕದ್ರಿ ಠಾಣೆ ಪೊಲೀಸರು ಶರಣ್ ಪಂಪ್‌ ವೆಲ್ ಅವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ರಾತ್ರಿಯೇ ಶರಣ್‍ ಪಂಪ್‍ವೆಲ್‍ ಗೆ ಜಾಮೀನು ನೀಡಲಾಗಿದೆ ಎಂದು ತಿಳಿದು ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ. ಠಾಣೆಗೆ ಡಿಸಿಪಿ ರವಿಶಂಕರ್ ಭೇಟಿ ನೀಡಿದರು. ನಿಷೇಧಾಜ್ಞೆ

ಹಿಂದೂ ಮುಖಂಡ ಶರಣ್‍ ಪಂಪ್‍ ವೆಲ್‍ ಪೊಲೀಸರ ವಶಕ್ಕೆ | ರಾತ್ರಿಯೇ ಜಾಮೀನು ಮಂಜೂರು Read More »

ಇರಾಕೋಡಿಯಲ್ಲಿ ಪಿಕಪ್ ಚಾಲಕನ ಬರ್ಬರ ಹತ್ಯೆ | ಮರಳು ಅನ್‍ ಲೋಡ್ ಮಾಡುತ್ತಿದ್ದ ವೇಳೆ ಘಟನೆ

ಬಂಟ್ವಾಳ: ಪಿಕಪ್ ಚಾಲಕರೊಬ್ಬರನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ. ಕೊಳತ್ತಮಜಲು ನಿವಾಸಿ ರಹೀಮ್ ಎಂಬಾತ ಹತ್ಯೆಗೀಡಾದವರು. ರಹೀಮ್‍ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ರಹೀಮ್ ಜೊತೆ ಇನ್ನೊರ್ವ ಸ್ಥಳದಲ್ಲಿದ್ದು,  ಆತನಿಗೂ ಕಡಿಯಲಾಗಿದೆ. ಆತನಿಗೆ ಕೈಗೆ ಗಾಯ ವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು

ಇರಾಕೋಡಿಯಲ್ಲಿ ಪಿಕಪ್ ಚಾಲಕನ ಬರ್ಬರ ಹತ್ಯೆ | ಮರಳು ಅನ್‍ ಲೋಡ್ ಮಾಡುತ್ತಿದ್ದ ವೇಳೆ ಘಟನೆ Read More »

ಹಾಲಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆ

ಬಿಜೆಪಿ ಹೈಕಮಾಂಡ್ ಹಾಲಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡಿದ್ದು, ಈ ಮೂಲಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ತಕ್ಷಣದಿಂದಲೇ ಜಾರಿಯಾಗುವಂತೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ ಇಬ್ಬರು ಶಾಸಕರಿಗೆ ನೋಟಿಸ್ ನೀಡಿತ್ತು. ಆ ನೋಟಿಸ್‌ಗೆ ಮೇ

ಹಾಲಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆ Read More »

ವಿದ್ಯುತ್‍ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಚಾಲಕ ಮೃತ್ಯು

ಬಂಟ್ವಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‍ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಭಂಡಾರಕೊಟ್ಟಿಗೆ ನಿವಾಸಿ ಜಯಂತ್ ಗೌಡ ಮೃತಪಟ್ಟ ಚಾಲಕ. ತುಂಬೆಯ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್‌ ಸಿಬ್ಬಂದಿಯಾಗಿದ್ದ ಜಯಂತ್ ಗೌಡ  ಕಾರಿನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ವಿದ್ಯುತ್‍ ಕಂಬಕ್ಕೆ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡು ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾರು  ಸಂಪೂರ್ಣ ನುಜ್ಜು ಗುಜ್ಜಾಗಿದ್ದು ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿದ್ಯುತ್‍ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಚಾಲಕ ಮೃತ್ಯು Read More »

error: Content is protected !!
Scroll to Top