ಮನರಂಜನೆ

ಪುಷ್ಪ ಚಿತ್ರದ ಚಿತ್ರದ ಹೀರೊ ಅಲ್ಲು ಅರ್ಜುನ್‌ ಬಂಧನ

ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿ ಬೆಡ್‌ರೂಮ್‌ನಿಂದಲೇ ಎತ್ತಾಕಿಕೊಂಡು ಹೋದ ಪೊಲೀಸರು ಹೈದರಾಬಾದ್‌ : ಪುಷ್ಪ-2 ಸಿನೆಮಾದ ಪ್ರಿಂಇಯರ್‌ ಶೋ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದ ಹೀರೊ ಅಲ್ಲು ಅರ್ಜುನ್ ಅವರನ್ನು ತೆಲಂಗಾಣದ ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂಭವಿಸಿದ ನೂಕುನುಗ್ಗಲು ಮತ್ತು ಕಾಲ್ತುಳಿತದಲ್ಲಿ ಓರ್ವ ಮಹಿಳೆ ಸಾವಿಗೀಡಾಗಿ ಅವರ […]

ಪುಷ್ಪ ಚಿತ್ರದ ಚಿತ್ರದ ಹೀರೊ ಅಲ್ಲು ಅರ್ಜುನ್‌ ಬಂಧನ Read More »

ಆಳ್ವಾಸ್‌ ವಿರಾಸತ್: ರಂಗೇರಿಸಿದ ನೃತ್ಯ, ಕಸರತ್ತಿನ ಗಮ್ಮತ್ತು

ಜಾನಪದ-ಶಾಸ್ತ್ರೀಯದ ಸ್ಪಂದನ, ಸಾಹಸ-ಹೆಜ್ಜೆಗಳ ಸಮ್ಮಿಲನ ವಿದ್ಯಾಗಿರಿ (ಮೂಡುಬಿದಿರೆ): ಪಂಡಿತ್ ಎಂ.ವೆಂಕಟೇಶ್ ಕುಮಾರ್ ಅವರ ಭಕ್ತಿಗಾನ ಸುಧೆಯಲ್ಲಿ ಮಿಂದ ಪ್ರೇಕ್ಷಕರನ್ನು ನರ್ತನ ಲೋಕಕ್ಕೆ ಕೊಂಡೊಯ್ದದ್ದು ಗುಜರಾತ್‌ನ ರಂಗ್ ಮಲಹರ್ ದಿ ಫೋಕ್ ಆರ್ಟ್ಸ್ ತಂಡದ ವೈವಿಧ್ಯಮಯ ಗುಜರಾತಿ ಜಾನಪದ ನೃತ್ಯ ಪ್ರದರ್ಶನ. ಉತ್ತರದ ಹಿಂದೂಸ್ಥಾನಿಗೆ ಶ್ರೋತೃಗಳಾಗಿದ್ದ ವಿರಾಸತ್ ಪ್ರೇಕ್ಷಕರು ಪಶ್ಚಿಮದ ಜಾನಪದಕ್ಕೆ ವೀಕ್ಷಕರಾದರು. ದೇಶದ ಪಶ್ಚಿಮ ತೀರದ ಗುಜರಾತ್‌ನಲ್ಲಿ ನವರಾತ್ರಿಯ ಸಂದರ್ಭದಲ್ಲಿ ದೇವಿ ಆರಾಧನೆ ಮಾಡುತ್ತಾ ನರ್ತಿಸುವ ಜಾನಪದ ನೃತ್ಯವೇ ಗರ್ಭಾ. ಗುಜರಾತ್‌ನ ರಂಗ್ ಮಲಹರ್ ತಂಡ ಸದಸ್ಯರು

ಆಳ್ವಾಸ್‌ ವಿರಾಸತ್: ರಂಗೇರಿಸಿದ ನೃತ್ಯ, ಕಸರತ್ತಿನ ಗಮ್ಮತ್ತು Read More »

ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ ಆಳ್ವಾಸ್ ವಿರಾಸತ್-2024 ಪ್ರಶಸ್ತಿ ಪ್ರದಾನ

ವಿದ್ಯಾಗಿರಿ (ಮೂಡುಬಿದಿರೆ): ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 30ನೇ ವರ್ಷದ ಆಳ್ವಾಸ್ ವಿರಾಸತ್‌ನಲ್ಲಿ ಬುಧವಾರ ಸಂಜೆ ಪ್ರತಿಷ್ಠಿತ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿಯನ್ನು ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಪ್ರದಾನಿಸಲಾಯಿತು. ಬಡವರು, ದೀನದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಈ ಪ್ರಶಸ್ತಿ ಅರ್ಪಣೆ ಎಂದು ಪಂಡಿತ್ ವೆಂಕಟೇಶ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದ ಬಳಿಕ ಭಾವುಕರಾಗಿ ನುಡಿದರು. ಶಿಸ್ತು, ಸಂಯಮ, ಸಮಯ

ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ ಆಳ್ವಾಸ್ ವಿರಾಸತ್-2024 ಪ್ರಶಸ್ತಿ ಪ್ರದಾನ Read More »

ವಿರಾಸತ್‌ ಭವ್ಯ ಮೆರವಣಿಗೆ : ಧರೆಗಿಳಿದು ಬಂದ ಕಲಾಲೋಕ

ದೇಶ-ವಿದೇಶಗಳ ಅದ್ಭುತ ಕಲಾಪರಂಪರೆ ಮೂಡುಬಿದಿರೆಯಲ್ಲಿ ಅನಾವರಣ ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಮೊದಲ ದಿನವಾದ ಮಂಗಳವಾರ ಉದ್ಘಾಟನೆಯ ಬಳಿಕ ನಡೆದ ದೇಶ-ವಿದೇಶಗಳ ಅದ್ಭುತ ಕಲಾಪರಂಪರೆಯನ್ನು ಧರೆಗಿಳಿಸಿ ಸಾರ್ಥಕವಾಯಿತು. ಶ್ರದ್ಧೆ-ಭಕ್ತಿಯ ನಾಡು-ನುಡಿಯ ಕಲಾ ವೈಶಿಷ್ಟ್ಯತೆಯ ಸಾಂಸ್ಕೃತಿಕ ವೈಭವ, ಭಾರತದ ಭವ್ಯ ಸಂಸ್ಕೃತಿಯ ಕಲಾರೂಪವೇ ಧರೆಗಿಳಿದು ಬಂದಂತೆ ಭಾಸವಾಯಿತು. ಉತ್ತರ ಭಾರತದಿಂದ ಹಿಡಿದು ದಕ್ಷಿಣದ ತುತ್ತತುದಿವರೆಗಿನ ವೈವಿಧ್ಯ ಕಲಾಪ್ರಕಾರಗಳು ಮಾತ್ರವಲ್ಲದೆ ಶ್ರೀಲಂಕಾ ಸೇರಿದಂತೆ ನೆರೆಹೊರೆ ರಾಷ್ಟ್ರಗಳ ಸಂಸ್ಕೃತಿ ಶ್ರೀಮಂತಿಕೆಗೆ ಆಳ್ವಾಸ್ ಆವರಣ ಸಾಕ್ಷಿಯಾಯಿತು.

ವಿರಾಸತ್‌ ಭವ್ಯ ಮೆರವಣಿಗೆ : ಧರೆಗಿಳಿದು ಬಂದ ಕಲಾಲೋಕ Read More »

ಬನ್ನೆಂಗಳದ ಸಮೃದ್ಧಿ ನಿವಾಸದಲ್ಲಿ ಭಾನುಮತಿ ಕಲ್ಯಾಣ ತಾಳಮದ್ದಳೆ

ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸುವರ್ಣ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 56ನೇ ತಾಳಮದ್ಧಳೆ ಭಾನುಮತಿ ಕಲ್ಯಾಣ  ಬನ್ನೆಂಗಳ ಸಮೃದ್ಧಿ ನಿವಾಸದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಸುರೇಶ್ ರಾವ್. ಬಿ,ನಿತೀಶ್ ಕುಮಾರ್. ವೈ, ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ್, ಗುಡ್ಡಪ್ಪ ಬಲ್ಯ (ಬಾಹ್ಲಿಕ ರಾಜ ), ಶ್ಶ್ರುತಿ  ವಿಸ್ಮಿತ್ (ವನಚರರು, ಮಂತ್ರಿ

ಬನ್ನೆಂಗಳದ ಸಮೃದ್ಧಿ ನಿವಾಸದಲ್ಲಿ ಭಾನುಮತಿ ಕಲ್ಯಾಣ ತಾಳಮದ್ದಳೆ Read More »

ಪುಷ್ಪ-2 ಸಿನೆಮಾ ನೋಡುವಾಗ ಅಭಿಮಾನಿಗಳ ನೂಕುನುಗ್ಗಲು : ಕಾಲ್ತುಳಿತಕ್ಕೆ ಮಹಿಳೆ ಬಲಿ

ಮಗನ ಸ್ಥಿತಿ ಚಿಂತಾಜನಕ; ಅನೇಕ ಮಂದಿಗೆ ಗಾಯ ಹೈದರಾಬಾದ್:‌ ಸ್ಟಾರ್‌ ನಟ ಅಲ್ಲು ಅರ್ಜುನ್‌ ಅಭಿನಯದ ಪುಷ್ಪ 2 ಸಿನೆಮಾದ ಪ್ರೀಮಿಯರ್‌ ಶೋ ವೇಳೆ ಜನರ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.ಹೈದರಾಬಾದ್‌ನ ಆರ್‌ಟಿಸಿ ಕ್ರಾಸ್‌ರೋಡ್ಸ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಿನ್ನೆ ರಾತ್ರಿ ಈ ದುರಂತ ಸಂಭವಿಸಿದೆ. ಮೃತ ಮಹಿಳೆಯನ್ನು ದಿಲ್‌ಸುಖ್‌ನಗರದ ರೇವತಿ ಎಂದು ಗುರುತಿಸಲಾಗಿದೆ. ಪತಿ ಭಾಸ್ಕರ್ ಮತ್ತು ಇಬ್ಬರು ಮಕ್ಕಳೊಂದಿಗೆ ಸಿನೆಮಾಕ್ಕೆ ಬಂದಿದ್ದರು.ರಾತ್ರಿ 10.30ರ ಸುಮಾರಿಗೆ ಥಿಯೇಟರ್‌ನಲ್ಲಿ ಪ್ರೇಕ್ಷಕರು ಕಿಕ್ಕಿರಿದು ಸೇರಿದ್ದರು.

ಪುಷ್ಪ-2 ಸಿನೆಮಾ ನೋಡುವಾಗ ಅಭಿಮಾನಿಗಳ ನೂಕುನುಗ್ಗಲು : ಕಾಲ್ತುಳಿತಕ್ಕೆ ಮಹಿಳೆ ಬಲಿ Read More »

ಕೋಟಿಗಟ್ಟಲೆ ರೂಪಾಯಿ ವಂಚನೆ : ತುಳುಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌

ಬಂಟ್ವಾಳದ ಉದ್ಯಮಿಗೆ ಕೋಟಿಗಳ ವ್ಯವಹಾರದ ಕಥೆ ಹೇಳಿ ವಂಚನೆ ಬೆಂಗಳೂರು: ತುಳು-ಕನ್ನಡ ಚಿತ್ರ ನಿರ್ಮಾಪಕ ಅರುಣ್‌ ರೈ ವಿರುದ್ಧ ಕೋಟಿಗಟ್ಟಲೆ ರೂಪಾಯಿ ವಂಚನೆ ಕೇಸ್‌ ದಾಖಲಾಗಿದೆ. ರಾಷ್ಟ್ರಪ್ರಶಸ್ತಿ ವಿಜೇತ ತುಳುಚಿತ್ರ ಜೀಟಿಗೆ ಸಹಿತ ತುಳು ಮತ್ತು ಕನ್ನಡದಲ್ಲಿ ಕೆಲವು ಚಿತ್ರಗಳನ್ನು ನಿರ್ಮಿಸಿರುವ ಅರುಣ್‌ ರೈ ಬಂಟ್ವಾಳದ ಉದ್ಯಮಿಯೊಬ್ಬರನ್ನು ಕೋಟಿ ಕೋಟಿಗಳ ಲೆಕ್ಕದಲ್ಲಿ ವ್ಯವಹಾರದ ಕಥೆ ಹೇಳಿ ವಂಚಿಸಿದ್ದಾರೆ ಎನ್ನಲಾಗಿದೆ.ಅರುಣ್ ರೈ ವಿರುದ್ಧ ಬೆಂಗಳೂರಿನ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕನ್ನಡದ ವೀರಕಂಬಳ ಸಿನಿಮಾವನ್ನು ಸಹ

ಕೋಟಿಗಟ್ಟಲೆ ರೂಪಾಯಿ ವಂಚನೆ : ತುಳುಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌ Read More »

ಧರ್ಮಸ್ಥಳ ವಸ್ತು ಪ್ರದರ್ಶನ ಮಂಟಪದಲ್ಲಿ ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ತಾಳಮದ್ದಳೆ

ಪುತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ರಾಜ್ಯಮಟ್ಟದ  ವಸ್ತು ಪ್ರದರ್ಶನ ಮಂಟಪದಲ್ಲಿ ಪುತ್ತೂರು  ಬೊಳುವಾರು  ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವಿಂಶತಿ ಸಂಭ್ರಮದ 15ನೇ ಸರಣಿ  ತಾಳಮದ್ದಳೆ “ಶರಸೇತುಬಂಧ ಜರಗಿತು. ಭಾಗವತರಾಗಿ ಮುರಳೀಕೃಷ್ಣ ಶಾಸ್ತ್ರಿ ತೆಂಕಬೈಲು, ಚೆಂಡೆ, ಮದ್ದಲೆಗಳಲ್ಲಿ ಪಿ.ಟಿ. ಜಯರಾಮ್ ಭಟ್, ಪಿ.ಜಿ.ಜಗನ್ನಿವಾಸ ರಾವ್, ಮುಮ್ಮೇಳದಲ್ಲಿ ಶುಭಾ ಅಡಿಗ (ಹನೂಮಂತ), ಪ್ರೇಮಲತಾರಾವ್ (ಶ್ರೀ ರಾಮ), ಕಿಶೋರಿ ದುಗ್ಗಪ್ಪ ನಡುಗಲ್ಲು (ಅರ್ಜುನ),  ಹರಿಣಾಕ್ಷಿ .ಜೆ.ಶೆಟ್ಟಿ (ವೃದ್ಧ ಬ್ರಾಹ್ಮಣ) ಭಾಗವಹಿಸಿದ್ದರು. ಸಂಘದ ನಿರ್ದೇಶಕ ಭಾಸ್ಕರ

ಧರ್ಮಸ್ಥಳ ವಸ್ತು ಪ್ರದರ್ಶನ ಮಂಟಪದಲ್ಲಿ ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ತಾಳಮದ್ದಳೆ Read More »

ನ.28 ರಿಂದ 30 : ಪುತ್ತೂರಿನಲ್ಲಿ ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ

ಪುತ್ತೂರು: ಸಂಸಾರ ಜೋಡುಮಾರ್ಗ, ರೋಟರಿ ಪುತ್ತೂರು ಎಲೈಟ್ ಹಾಗೂ ನಿರತ ನಿರಂತ ಬಹುವಚನಂ ಆಶ್ರಯದಲ್ಲಿ ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ ನ.28 ರಿಂದ 30 ರ ವರೆಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಯ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ. ನ.28 ರ ಗುರುವಾರ ಸಂಜೆ  ಸಾಗರದ  ಕಿನ್ನರ ಮೇಳ ತುಮರಿ ತಂಡದಿಂದ “ಇರುವೆ ಪುರಾಣ” ನಾಟಕ ಪ್ರದರ್ಶಗೊಳ್ಳಲಿದೆ.  ನ.29 ರ ಶುಕ್ರವಾರ ರಂಗಾಯಣ ಕಲಾವಿದ ರಾಕೇಶ್ ಆಚಾರ್ಯ ನಿರ್ದೇಶನದಲ್ಲಿ ವೀರಮಂಗಲ ಪಿಎಂ ಶ್ರೀ ಸರ್ಕಾರಿ ಹಿ.ಪ್ರಾ. ಶಾಲಾ ಮಕ್ಕಳಿಂದ “ರಂಗಗೀತೆಗಳ

ನ.28 ರಿಂದ 30 : ಪುತ್ತೂರಿನಲ್ಲಿ ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ Read More »

ಕಾಳಿಕಾಂಬ ಯಕ್ಷಗಾನ  ಕಲಾಸೇವಾ ಸಂಘದಿಂದ ಮಹಾಭಾರತ ಸರಣಿ ತಾಳಮದ್ದಳೆ

ಹಾಸ್ಯಗಾರ ದಿ.ಬಂಟ್ವಾಳ ಜಯರಾಮ ಆಚಾರ್ಯರಿಗೆ ಶ್ರದ್ಧಾಂಜಲಿ  ಅರ್ಪಣೆ ಸುಳ್ಯ : ಹಾಸ್ಯಗಾರ ಬಂಟ್ವಾಳ ಜಯರಾಮ ಆಚಾರ್ಯರು ತೆಂಕುತಿಟ್ಟಿನ ಹಾಸ್ಯಗಾರರಲ್ಲಿ ಅನನ್ಯ ಸ್ಥಾನವನ್ನು ಪಡೆದ ಕಲಾವಿದರಾಗಿದ್ದು ಯಕ್ಷಗಾನದಲ್ಲಿ ಹಾಸ್ಯ ಪಾತ್ರಗಳನ್ನು ಮಾದರಿಯಾಗಿ ರೂಪಿಸಿದವರು. ಈ ಪರಂಪರೆಯನ್ನು ಮುಂದುವರಿಸುವ ಹಾಸ್ಯ ಕಲಾವಿದರು ಯಕ್ಷರಂಗದಲ್ಲಿ ಮೂಡಿ ಬರಬೇಕೆಂದು  ಜಯರಾಮ ಆಚಾರ್ಯರ ಮೂರು ದಶಕಗಳ ಒಡನಾಡಿ ಕಲಾವಿದ ಪಾತಾಳ ಅಂಬಾಪ್ರಸಾದ್ ತಿಳಿಸಿದರು.  ಕೊಂಬೋಟು ಕುಟುಂಬಸ್ಥರ ತರವಾಡು ಮನೆ ಉಬರಡ್ಕ ಸುಳ್ಯ ಇಲ್ಲಿ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ಜರಗಿದ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ

ಕಾಳಿಕಾಂಬ ಯಕ್ಷಗಾನ  ಕಲಾಸೇವಾ ಸಂಘದಿಂದ ಮಹಾಭಾರತ ಸರಣಿ ತಾಳಮದ್ದಳೆ Read More »

error: Content is protected !!
Scroll to Top