ಮನರಂಜನೆ

ಅ.17 : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪ್ರಸ್ತುತಪಡಿಸುವ “ನೃತ್ಯೋತ್ಕ್ರಮಣ-2024” | ಯುಗಳ ನೃತ್ಯ- ಕಲಾದೀಪ ನೃತ್ಯ ದಂಪತಿ ವಿದ್ವಾನ್ ದೀಪಕ್ ಕುಮಾರ್ ಹಾಗೂ ವಿದುಷಿ ಪ್ರೀತಿಕಲಾ ಅವರಿಂದ ನೃತ್ಯ ಪ್ರದರ್ಶನ

ಪುತ್ತೂರು: ನಗರದ ದರ್ಬೆಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪ್ರಸ್ತುತಪಡಿಸುವ “ನೃತ್ಯೋತ್ಕ್ರಮಣ-2024” ಅ.17 ಗುರುವಾರ ಸಂಜೆ 5.30 ರಿಂದ ಪುತ್ತೂರು ಪುರಭವನದಲ್ಲಿ ನಡೆಯಲಿದೆ ಎಂದು ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯಗುರು ವಿದ್ವಾನ್ ದೀಪಕ್ ಕುಮಾರ್ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ವಿವರ ನೀಡಿ, ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ಶಾಂತಲಾ ನಾಟ್ಯ ಪ್ರಶಸ್ತಿ ಪುರಸ್ಕೃತರಾದ ಗುರು ಶ್ರೀ ಉಳ್ಳಾಲ ಮೋಹನ್ ಕುಮಾರ್ ದೀಪ ಪ್ರಜ್ವಲನೆ ಮಾಡುವರು. ಮುಖ್ಯ ಅತಿಥಿಯಾಗಿ ಮೂಡಬಿದ್ರೆ ಆಳ್ವಾಸ್ […]

ಅ.17 : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪ್ರಸ್ತುತಪಡಿಸುವ “ನೃತ್ಯೋತ್ಕ್ರಮಣ-2024” | ಯುಗಳ ನೃತ್ಯ- ಕಲಾದೀಪ ನೃತ್ಯ ದಂಪತಿ ವಿದ್ವಾನ್ ದೀಪಕ್ ಕುಮಾರ್ ಹಾಗೂ ವಿದುಷಿ ಪ್ರೀತಿಕಲಾ ಅವರಿಂದ ನೃತ್ಯ ಪ್ರದರ್ಶನ Read More »

ನಾಳೆ (ಅ.11) : ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ಳಾರೆ ಡ್ಯಾನ್ಸ್ & ಬೀಟ್ಸ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ

ಬೆಳ್ಳಾರೆ: ವಿಶ್ವ ವಿಖ್ಯಾತ ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳ್ಳಾರೆ ಜೀವನ್ ಸಾರಥ್ಯದ ಡ್ಯಾನ್ಸ್ & ಬೀಟ್ಸ್ ತಂಡ ಆಯ್ಕೆಯಾಗಿದೆ. ಡ್ಯಾನ್ಸ್ & ಬೀಟ್ಸ್ ಬೆಳ್ಳಾರೆ, ಪಂಜ, ಕೈಕಂಬ, ಸುಬ್ರಹ್ಮಣ್ಯ ವಿದ್ಯಾರ್ಥಿಗಳ ತಂಡವನ್ನೊಳಗೊಂಡಿದೆ. ಅ.11 ರಂದು ದಸರಾ ಮೈಸೂರು ಜಗನ್ ಮೋಹನ ಅರಮನೆಯ ಸಾಂಸ್ಕೃತಿಕ ವೇದಿಕೆಯಲ್ಲಿ ನೃತ್ಯ ಸಂಭ್ರಮದ ಕಾರ್ಯಕ್ರಮದಲ್ಲಿ ತಮ್ಮ ಡ್ಯಾನ್ಸ್ ಪ್ರದರ್ಶನ ನೀಡಲಿದ್ದಾರೆ.

ನಾಳೆ (ಅ.11) : ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ಳಾರೆ ಡ್ಯಾನ್ಸ್ & ಬೀಟ್ಸ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ Read More »

“ಯಕ್ಷವಾಹಿನಿ” ಸಾಂಸ್ಕೃತಿಕ ವಿಸ್ತರಣೆ ಕಾರ್ಯಕ್ರಮ | ಯಕ್ಷಕಲಾ ಕೇಂದ್ರ ಮತ್ತು ಎನ್ಎಸ್‍ಕಿಲ್ಲೆ ಪ್ರತಿಷ್ಠಾನ ತಿಳುವಳಿಕೆ ಜ್ಞಾಪಕ ಪತ್ರದ ಒಡಂಬಡಿಕೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರ “ಯಕ್ಷ ಕಲಾಕೇಂದ್ರ” ಮತ್ತು ದೇಶಭಕ್ತ ಎನ್ಎಸ್ ಕಿಲ್ಲೆ ಪ್ರತಿಷ್ಠಾನದ ಸಹಯೋಗದಲ್ಲಿ ಮೋಕ್ಷ ಸಂಗ್ರಾಮ ಯಕ್ಷಗಾನ ಪ್ರದರ್ಶನ ಕೆದಂಬಾಡಿ ಸನ್ಯಾಸಿಗುಡ್ಡೆಯ ಸದ್ಗುರು ಗೋಪಾಲ ನಾಯರ್ಸ್‍ಸಭಾಭವನದಲ್ಲಿ ಇತ್ತೀಚೆಗೆ ಸಂಪನ್ನಗೊಂಡಿತು. ಯಕ್ಷಕಲಾ ಕೇಂದ್ರ ಮತ್ತು ಎನ್ಎಸ್‍ಕಿಲ್ಲೆ ಪ್ರತಿಷ್ಠಾನ ತಿಳುವಳಿಕೆ ಜ್ಞಾಪಕ ಪತ್ರದ ಒಡಂಬಡಿಕೆಯಂತೆ ಸಾಂಸ್ಕೃತಿಕ ವಿಸ್ತರಣೆ ಕಾರ್ಯಕ್ರಮ, ದತ್ತುಗ್ರಾಮ ಕೆದಂಬಾಡಿಯಲ್ಲಿ ವೈಭವದಿಂದ ಜರಗಿತು. ಮೋಕ್ಷ ಸಂಗ್ರಾಮ ಯಕ್ಷಗಾನ ಪ್ರಸಂಗವನ್ನುಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಮತ್ತು ಸಂಪನ್ಮೂಲ

“ಯಕ್ಷವಾಹಿನಿ” ಸಾಂಸ್ಕೃತಿಕ ವಿಸ್ತರಣೆ ಕಾರ್ಯಕ್ರಮ | ಯಕ್ಷಕಲಾ ಕೇಂದ್ರ ಮತ್ತು ಎನ್ಎಸ್‍ಕಿಲ್ಲೆ ಪ್ರತಿಷ್ಠಾನ ತಿಳುವಳಿಕೆ ಜ್ಞಾಪಕ ಪತ್ರದ ಒಡಂಬಡಿಕೆ Read More »

ಪಿಲಿಗೊಬ್ಬು ಕೇವಲ ಸ್ಪರ್ಧೆ ಅಲ್ಲ. ಅದು ಜನರಲ್ಲಿ ಭಾವನೆ, ನಂಬಿಕೆಯನ್ನು ಜೋಡಿಸಿದೆ : ನಳಿನ್ ಕುಮಾರ್ ಕಟೀಲ್‍ |ವಿಜಯ ಸಾಮ್ರಾಟ್ ವತಿಯಿಂದ ‘ಪಿಲಿಗೊಬ್ಬು ಸೀಸನ್-2’ ಕಾರ್ಯಕ್ರಮಕ್ಕೆ ಚಾಲನೆ

ಪುತ್ತೂರು: ಜಿಲ್ಲೆಯಲ್ಲಿ ಸಂಚಲನ ಮೂಡಿಸಿರುವ ಪುತ್ತೂರು ವಿಜಯ ಸಾಮ್ರಾಟ್ ವತಿಯಿಂದ ನಡೆಯುವ ಪುತ್ತೂರುದ ಪಿಲಿಗೊಬ್ಬು-ಸೀಸನ್ 2 ಕಾರ್ಯಕ್ರಮಕ್ಕೆ ಭಾನುವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವೈಭವದ ಚಾಲನೆ ನೀಡಲಾಯಿತು. ಪಿಲಿಗೊಬ್ಬು ಸಭಾ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಸಾಂಸ್ಕೃತಿಕ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಏಕೈಕ ಜಿಲ್ಲೆ ಇದ್ದರೆ ಅದು ತುಳುನಾಡು. ತುಳುನಾಡಿನ ಜನ ಕಲೆ, ಕ್ರೀಡೆ, ಕೃಷಿ, ಯಕ್ಷಗಾನದಲ್ಲಿ ದೇವರನ್ನು ಕಂಡವರು.

ಪಿಲಿಗೊಬ್ಬು ಕೇವಲ ಸ್ಪರ್ಧೆ ಅಲ್ಲ. ಅದು ಜನರಲ್ಲಿ ಭಾವನೆ, ನಂಬಿಕೆಯನ್ನು ಜೋಡಿಸಿದೆ : ನಳಿನ್ ಕುಮಾರ್ ಕಟೀಲ್‍ |ವಿಜಯ ಸಾಮ್ರಾಟ್ ವತಿಯಿಂದ ‘ಪಿಲಿಗೊಬ್ಬು ಸೀಸನ್-2’ ಕಾರ್ಯಕ್ರಮಕ್ಕೆ ಚಾಲನೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರಾಕ್ಕೆ ಆಯ್ಕೆ

ಸುಬ್ರಹ್ಮಣ್ಯ: ಮೈಸೂರಿನಲ್ಲಿ ನಾಡ ಹಬ್ಬದ ಪ್ರಯುಕ್ತ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಎಸ್ಎಸ್ ಕಾಲೇಜಿನ ಸಾಂಸ್ಕೃತಿಕ ತಂಡ ಯುವದಸರಾಕ್ಕೆ ಆಯ್ಕೆಯಾಗಿದೆ.. ದಕ್ಷಿಣ ಕನ್ನಡದ ಶಾಸ್ತ್ರೀಯ ನೃತ್ಯಗಳನ್ನು ಪ್ರಸ್ತುತ ಪಡಿಸಿದ ತಂಡ ತೀರ್ಪುಗಾರರ ಮೆಚ್ಚುಗೆ ಪಡೆದು ಆಯ್ಕೆಯಾಗಿದೆ. ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ. ಅವರ ನೇತೃತ್ವದಲ್ಲಿ, ಸಾಂಸ್ಕೃತಿಕ ತಂಡದ ಸಂಯೋಜಕ ಡಾ. ವಿನ್ಯಾಸ್ ಹೊಸೊಳಿಕೆ ಮತ್ತು ರಾಜಕೀಯ ಶಾಸ್ತ್ರದ ಮುಖ್ಯಸ್ಥೆ ಸ್ವಾತಿ ಅವರ ಮಾರ್ಗದರ್ಶನದಲ್ಲಿ  ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದೆ. ನೃತ್ಯ ಸಂಯೋಜನೆಯನ್ನು ಪ್ರಮೋದ್ ರೈ, ಮತ್ತು

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರಾಕ್ಕೆ ಆಯ್ಕೆ Read More »

ಅ.5-6 : ಪುತ್ತೂರುದ ಪಿಲಿಗೊಬ್ಬು,  ಫುಡ್ ಪೆಸ್ಟ್ – ಸೀಸನ್ -2 | ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿವೇಷ ತಂಡಗಳು ಭಾಗಿ | ಸ್ಯಾಂಡಲ್ ವುಡ್ ನಟ-ನಟಿಯರ ಮೆರುಗು

ಪುತ್ತೂರು: ‘ ಹುಲಿವೇಷ ಕುಣಿತ’ ತುಳು ನಾಡಿನ ಛಾಪಿನ ಹಿನ್ನೆಲೆ ಇರುವ ಜನಪದ ಕಲೆ. ಈ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಿಲಿಗೊಬ್ಬು ಹಾಗೂ ಪುತ್ತೂರು ಫುಡ್ ಫೆಸ್ಟ್ ಅ.5 ಶನಿವಾರ ಹಾಗೂ ಅ.6 ಭಾನುವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಯೋಜಿಸಲಾಗಿದೆ ಎಂದು ಪುತ್ತೂರು ವಿಜಯ ಸಾಮ್ರಾಟ್ ನ, ಪಿಲಿಗೊಬ್ಬು ಸಾರಥಿ ಸಹಜ್ ರೈ ಬಳಜ್ಜ ಹೇಳಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪಿಲಿ ಗೊಬ್ಬು ಕಾರ್ಯಕ್ರಮದ ಉದ್ಘಾಟನೆ ಅ.6 ಭಾನುವಾರ ಬೆಳಿಗ್ಗೆ

ಅ.5-6 : ಪುತ್ತೂರುದ ಪಿಲಿಗೊಬ್ಬು,  ಫುಡ್ ಪೆಸ್ಟ್ – ಸೀಸನ್ -2 | ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿವೇಷ ತಂಡಗಳು ಭಾಗಿ | ಸ್ಯಾಂಡಲ್ ವುಡ್ ನಟ-ನಟಿಯರ ಮೆರುಗು Read More »

ಚೈತ್ರಾರನ್ನು ಬಿಗ್‌ಬಾಸ್‌ನಿಂದ ಹೊರಗೆ ಕಳುಹಿಸಿ, ಇಲ್ಲದಿದ್ದರೆ…

ಕೇಸ್‌ಗಳಿರುವ ಕಳಂಕಿತರಿಂದ ಸಮಾಜಕ್ಕೆ ತಪ್ಪು ಸಂದೇಶ ಎಂದು ವಾರ್ನಿಂಗ್‌ ಬೆಂಗಳೂರು : ಈ ಸಲದ ಬಿಗ್‌ಬಾಸ್‌ ರಿಯಾಲಿಟಿ ಶೋ ಸ್ಪರ್ಧಿಗಳ ಪೈಕಿ ಹೆಚ್ಚು ಸುದ್ದಿಯಾಗುತ್ತಿರುವುದು ಚೈತ್ರಾ ಕುಂದಾಪುರ. ಎಲ್ಲರ ಗಮನ ಈಕೆಯ ಮೇಲಿದೆ. ಬಿಗ್‌ಬಾಸ್ 11 ಆರಂಭವಾಗಿ ಮೂರು ದಿನಗಳಾಗಿದ್ದು, ಈ ಬಾರಿ 17 ಸ್ಪರ್ಧಿಗಳು ಬಿಗ್ ಬಾಸ್ ಮನೆ ತಲುಪಿದ್ದಾರೆ. ಈಗ ಚೈತ್ರಾಗೆ ಕಾನೂನು ಸಂಕಷ್ಟ ಎದುರಾಗಿದೆ. ಚೈತ್ರಾ ಕುಂದಾಪುರ ಅವರನ್ನು ಬಿಗ್‌ಬಾಸ್‌ ಮನೆಯಿಂದ ಹೊರಗೆ ಕಳುಹಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿ ವಕೀಲರೊಬ್ಬರು ನೋಟಿಸ್‌

ಚೈತ್ರಾರನ್ನು ಬಿಗ್‌ಬಾಸ್‌ನಿಂದ ಹೊರಗೆ ಕಳುಹಿಸಿ, ಇಲ್ಲದಿದ್ದರೆ… Read More »

ಬಿಗ್‍ ಬಾಸ್ ಸೀಸನ್-11 ಕ್ಕೆ ಪುತ್ತೂರಿನ ಯೂಟ್ಯೂಬರ್ ಧನರಾಜ್ ಆಚಾರ್ ಪ್ರವೇಶ !

ಪುತ್ತೂರು: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್ 11 ರಲ್ಲಿ ಸ್ಪರ್ಧಿಯಾಗಿ ಪುತ್ತೂರಿನ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್ ಭಾಗವಹಿಸಲಿದ್ದಾರೆ ಎಂದು ಮಾಹಿತಿ ಲಭಿಸಿದೆ. ಇವರು 1ನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆ ಪ್ರವೇಶಸಿಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಧನರಾಜ್ ಅವರು ತಮ್ಮ ಕಾಮಿಡಿ ವಿಡಿಯೋಗಳಿಂದ ಜನರ ಮನಗೆದ್ದಿದ್ದಾರೆ. ಕಾಮಿಡಿ ಜತೆಗೆ ಸಂದೇಶ ನೀಡುವುದು ಅವರ ರೀಲ್ಸ್ ನ ಪ್ಲಸ್ ಪಾಯಿಂಟ್. ಬಿಗ್ ಬಾಸ್ ಕಾರ್ಯಕ್ರಮವನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ನಡೆಸಿಕೊಡಲಿದ್ದಾರೆ.

ಬಿಗ್‍ ಬಾಸ್ ಸೀಸನ್-11 ಕ್ಕೆ ಪುತ್ತೂರಿನ ಯೂಟ್ಯೂಬರ್ ಧನರಾಜ್ ಆಚಾರ್ ಪ್ರವೇಶ ! Read More »

ಬಿಗ್‌ಬಾಸ್‌ ಮನೆಗೆ ಚೈತ್ರಾ ಕುಂದಾಪುರ ಎಂಟ್ರಿ

ಬೆಂಗಳೂರು : ಕಲರ್ಸ್‌ ಟಿವಿಯಲ್ಲಿ ಪ್ರಸಾರವಾಗುವ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ನ ಸ್ಪರ್ಧಿಯಾಗಿ ಚೈತ್ರಾ ಕುಂದಾಪುರ ಆಯ್ಕೆಯಾಗಿದ್ದಾರೆ.ನಟ ಸುದೀಪ್‌ ನಿರೂಪಿಸುವ ಬಿಗ್‌ಬಾಸ್‌ನ ಮೊದಲ ಸ್ಪರ್ಧಿಯಾಗಿ ಗೌತಮಿ ಜಾದವ್ ಆಯ್ಕೆಯಾದರೆ 3ನೇ ಸ್ಪರ್ಧಿಯಾಗಿ ಚೈತ್ರಾ ಕುಂದಾಪುರ ಎಂಟ್ರಿ ಕೊಟ್ಟಿದ್ದಾರೆ.ಮೂಲತಃ ಪತ್ರಕರ್ತೆಯಾಗಿರುವ ಚೈತ್ರಾ ಕುಂದಾಪುರ ಬಳಿಕ ಪ್ರಖರ ವಾಗ್ಮಿಯಾಗಿ ಬದಲಾಗಿದ್ದರು. ಹಿಂದೂ ಭಾಷಣಕಾರರಾಗಿ ನಾಡಿನಾದ್ಯಂತ ಸಾಕಷ್ಟು ವೇದಿಕೆ ಕಾರ್ಯಕ್ರಮಗಳನ್ನು ನೀಡಿದ್ದ ಚೈತ್ರಾ ವಂಚನೆ ಕೇಸೊಂದರಲ್ಲಿ ಸಿಲುಕಿದ ಬಳಿಕ ತುಸು ಸಮಯ ನೇಪಥ್ಯಕ್ಕೆ ಸರಿದಿದ್ದರು. ಈ ಪ್ರಕರಣದಲ್ಲಿ ಸೆರೆಯಾಗಿ ಕೆಲ ಸಮಯ

ಬಿಗ್‌ಬಾಸ್‌ ಮನೆಗೆ ಚೈತ್ರಾ ಕುಂದಾಪುರ ಎಂಟ್ರಿ Read More »

ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ನಿಂದ ಪುತ್ತೂರ್ದ ಪಿಲಿಗೊಬ್ಬ, ಫುಡ್ ಫೆಸ್ಟ್ -2024 : ಚಪ್ಪರ ಮುಹೂರ್ತ

ಪುತ್ತೂರು : ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮದ ಅಂಗವಾಗಿ ಚಪ್ಪರ ಮುಹೂರ್ತ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಬುಧವಾರ ನಡೆಯಿತು. ದೇವಾಲಯದ ಅರ್ಚಕ ಉದಯಕೃಷ್ಣ ಭಟ್ ಚಪ್ಪರ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಜಯಸಾಮ್ರಾಟ್ ಸಂಸ್ಥೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಪಿಲಿಗೊಬ್ಬು ಸಮಿತಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು, ಸಂಚಾಲಕ ನಾಗರಾಜ್ ನಡುವಡ್ಡ, ಉಪಾಧ್ಯಕ್ಷ ಶಂಕರ್

ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ನಿಂದ ಪುತ್ತೂರ್ದ ಪಿಲಿಗೊಬ್ಬ, ಫುಡ್ ಫೆಸ್ಟ್ -2024 : ಚಪ್ಪರ ಮುಹೂರ್ತ Read More »

error: Content is protected !!
Scroll to Top