ಯಕ್ಷರಂಗದ ದಿಗ್ಗಜ ಡಾ.ಶ್ರೀಧರ ಭಂಡಾರಿ ಅವರ 2ನೆ ವರ್ಷದ ಅನುಸ್ಮರಣಾ ಕಾರ್ಯಕ್ರಮ | ಯಕ್ಷದೇಗುಲ ಪ್ರಶಸ್ತಿ ಪ್ರದಾನ | ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ
ಪುತ್ತೂರು : ಯಕ್ಷಗಾನ ಅಕಾಡೆಮಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಯಕ್ಷರಂಗದ ದಿಗ್ಗಜ ಪುತ್ತೂರು ಡಾ.ಶ್ರೀಧರ್ ಭಂಡಾರಿ ಅವರ 2ನೇ ವರ್ಷದ ಅನುಸ್ಮರಣಾ ಕಾರ್ಯಕ್ರಮ ಹಾಗೂ ಡಾ.ಶ್ರೀಧರ ಭಂಡಾರಿ “ಯಕ್ಷದೇಗುಲ” ಪ್ರಶಸ್ತಿ ಪ್ರದಾನ, ಯಕ್ಷ ರಕ್ಷಾ ನಿಧಿ ವಿತರಣೆ ಭಾನುವಾರ ಸಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಿತು. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ನೀಡಿ, ಶ್ರೀಧರ ಭಂಡಾರಿಯವರ ನೆನಪುಗಳು ಇನ್ನೂ ಹಸಿರಾಗಿರುವುದಕ್ಕೆ ಅವರು ಯಕ್ಷಗಾನ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ, ಪಡೆದ ಸಾಧನೆ […]