ಮನರಂಜನೆ

ಸೆ.28-29: ಪುತ್ತೂರಿನಲ್ಲಿ ಪಿಲಿಗೊಬ್ಬು, ಫುಡ್ ಫೆಸ್ಟ್ ಸಂಭ್ರಮ

ಸಿನಿಮಾ ನಟ-ನಟಿಯರಿಂದ ಕಾರ್ಯಕ್ರಮಕ್ಕೆ ಮೆರುಗು ಪುತ್ತೂರು: ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದು ಸಮಾಜಮುಖಿ ಸೇವೆ ಮಾಡುತ್ತಿರುವ ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸೆ.27ರಂದು ಫುಡ್ ಫೆಸ್ಟ್‌ಗೆ ಚಾಲನೆ ನೀಡಲಾಗುವುದು. ಪತ್ರಿಕಾಗೋಷ್ಟಿಯಲ್ಲಿ ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಇದರ ಸ್ಥಾಪಕ ಅಧ್ಯಕ್ಷರೂ ಮತ್ತು ಪುತ್ತೂರು ಪಿಲಿಗೊಬ್ಬು ಸಮಿತಿಯ ಗೌರವಾಧ್ಯಕ್ಷರಾಗಿರುವ ಸಹಜ್ ರೈ ಬಳಜ್ಜ ಅವರು ಮಾತನಾಡಿ, ಕಳೆದ ಎರಡು ವರ್ಷದಿಂದ […]

ಸೆ.28-29: ಪುತ್ತೂರಿನಲ್ಲಿ ಪಿಲಿಗೊಬ್ಬು, ಫುಡ್ ಫೆಸ್ಟ್ ಸಂಭ್ರಮ Read More »

ಪರಿಪೂರ್ಣ ನಟನಿಗೆ ಫಾಲ್ಕೆ ಪ್ರಶಸ್ತಿ ಗರಿ : ಪ್ರಧಾನಿ ಮೋದಿ ಅಭಿನಂದನೆ

ಮಂಗಳವಾರ ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ನವದೆಹಲಿ : ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್ ಲಾಲ್‌ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಸೆ.23ರಂದು ನಡೆಯಲಿರುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋಹನ್ ಲಾಲ್‌ಗೆ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಘೋಷಿಸಿದೆ. ಮಲಯಾಳಂ ಸ್ಟಾರ್ ನಟ ಮೋಹನ್ ಲಾಲ್, ಮಲಯಾಳಂ ಮಾತ್ರವಲ್ಲದೆ ಭಾರತದ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಪರಿಪೂರ್ಣ ನಟನಿಗೆ ಫಾಲ್ಕೆ ಪ್ರಶಸ್ತಿ ಗರಿ : ಪ್ರಧಾನಿ ಮೋದಿ ಅಭಿನಂದನೆ Read More »

ಬಾಲಿವುಡ್‌ ನಟಿ ದಿಶಾ ಪಟಾನಿ ಮನೆಗೆ ಗುಂಡು ಹಾರಾಟ

ಬೈಕ್‌ನಲ್ಲಿ ಬಂದು 4 ಸುತ್ತು ಗುಂಡು ಹಾರಿಸಿ ಪಲಾಯನ ಮಾಡಿರುವ ದುಷ್ಕರ್ಮಿಗಳು ಮುಂಬಯಿ : ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆಯ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಬೆಳಗಿನ ಜಾವ ಉತ್ತರ ಪ್ರದೇಶದ ಬರೇಲಿಯಲ್ಲಿರುವ ಮನೆ ಮುಂದೆ 3.30ರ ಸುಮಾರಿಗೆ, ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ದಿಶಾ ಪಟಾನಿ ಅವರ ಮನೆಯ ಮೇಲೆ ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಈ ಘಟನೆಯು ಪ್ರದೇಶದಲ್ಲಿ ಕೋಲಾಹಲ ಸೃಷ್ಟಿಸಿದ್ದು ಮಾಹಿತಿ ಪಡೆದ

ಬಾಲಿವುಡ್‌ ನಟಿ ದಿಶಾ ಪಟಾನಿ ಮನೆಗೆ ಗುಂಡು ಹಾರಾಟ Read More »

ಮಲ್ಲಿಗೆ ಮುಡಿದದ್ದಕ್ಕೆ 1 ಲ.ರೂ. ದಂಡ ತೆತ್ತ ನಟಿ!

ಸಿಡ್ನಿ: ದಕ್ಷಿಣ ಭಾರತದ ಜನಪ್ರಿಯ ನಟಿ ನವ್ಯಾ ನಾಯರ್‌ ಮಲ್ಲಿಗೆ ಮುಡಿದ ಕಾರಣಕ್ಕೆ 1 ಲಕ್ಷ ರೂ.ಗೂ ಅಧಿಕ ಮೊತ್ತವನ್ನು ದಂಡದ ರೂಪದಲ್ಲಿ ತೆರಬೇಕಾಗಿ ಬಂದಿದೆ. ಆದರೆ ದಂಡ ಹಾಕಿರುವುದು ಭಾರತದಲ್ಲಿ ಅಲ್ಲ, ಬದಲಾಗಿದೆ ಆಸ್ಟ್ರೇಲಿಯಲ್ಲಿ. ಇತ್ತೀಚೆಗೆ ಆಸ್ಟ್ರೇಲಿಯದ ಮಲಯಾಳಂ ಸಂಘಟನೆಯವರು ಏರ್ಪಡಿಸಿದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ನವ್ಯಾ ನಾಯರ್‌ ಹೋಗಿದ್ದರು. ಮೆಲ್ಬೋರ್ನ್ ಏರ್‌ಪೋರ್ಟ್‌ಗೆ ಬಂದಿಳಿದ ನಟಿ ನವ್ಯಾ ನಾಯರ್‌ಗೆ ಅಲ್ಲಿನ ಅಧಿಕಾರಿಗಳು 1.14 ಲ.ರೂ. ದಂಡ ಹಾಕಿದ್ದಾರೆ. ಕೇರಳದ ಕೊಚ್ಚಿಯಿಂದ ನಟಿ ನವ್ಯಾ ನಾಯರ್ ಓಣಂ

ಮಲ್ಲಿಗೆ ಮುಡಿದದ್ದಕ್ಕೆ 1 ಲ.ರೂ. ದಂಡ ತೆತ್ತ ನಟಿ! Read More »

ಸೆ. 7: ಬೆಂಗಳೂರಿನಲ್ಲಿ ಡ್ಯಾನ್ಸ್ ಅಂಡ್ ಬೀಟ್ಸ್ ನೃತ್ಯ ಸಂಸ್ಥೆಯ ನೃತ್ಯ ಪ್ರದರ್ಶನ

ಪುತ್ತೂರು: ಸೆ. 7 ರಂದು ಜೀವನ್ ಟಿ. ಎನ್. ಬೆಳ್ಳಾರೆ ನಿರ್ದೇಶನದ ಡ್ಯಾನ್ಸ್ ಅಂಡ್ ಬೀಟ್ಸ್ ನೃತ್ಯ ಸಂಸ್ಥೆಯ ನೃತ್ಯ ಪ್ರದರ್ಶನ ವಿಜಯನಗರ ಬಂಟರ ಸಂಘದ ಆವರಣದಲ್ಲಿ ನಡೆಯಲಿದೆ. ಬೆಳ್ಳಾರೆ, ಪಂಜ, ಸುಬ್ರಹ್ಮಣ್ಯ ಮತ್ತು ಕೈಕಂಬ ಶಾಖೆಗಳ ಸುಮಾರು 60 ಗ್ರಾಮೀಣ ಪ್ರದೇಶದ ನೃತ್ಯ ಪಟುಗಳು ಸೆಪ್ಟೆಂಬರ್ 7 ಆದಿತ್ಯವಾರದಂದು ತುಳುನಾಡ ಜವನೆರ್ ಬೆಂಗಳೂರು (ರಿ) ರವರು ಸಂಘಟಿಸಿರುವ ಅಷ್ಟೆಮಿದ ಐಸಿರ ಎಂಬ ಕಾರ್ಯಕ್ರಮದಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯ ತನಕ ತುಳುವ ಸಿರಿ ಶೀರ್ಷಿಕೆಯಲ್ಲಿ

ಸೆ. 7: ಬೆಂಗಳೂರಿನಲ್ಲಿ ಡ್ಯಾನ್ಸ್ ಅಂಡ್ ಬೀಟ್ಸ್ ನೃತ್ಯ ಸಂಸ್ಥೆಯ ನೃತ್ಯ ಪ್ರದರ್ಶನ Read More »

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ

ಕೊಡಗು ಮೂಲದ ರೋಷನ್ ಜೊತೆ ನೆರವೇರಿದ ವಿವಾಹ ಬೆಂಗಳೂರು : ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಮಂಗಳೂರು ಮೂಲದ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಕಿರುತೆರೆಯಲ್ಲಿ ಆಕರ್ಷಕ ನಿರೂಪಣೆಯಿಂದ ಜನಪ್ರಿಯತೆ ಗಳಿಸಿರುಜವ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10.56ರ ಶುಭ ಮೂಹೂರ್ತದಲ್ಲಿ ಅನುಶ್ರಿ ಹಾಗೂ ರೋಷನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಕಗ್ಗಲಿಪುರ ಬಳಿಯ ಹೊರವಲಯದ ರೆಸಾರ್ಟ್‌ನಲ್ಲಿ ಮದುವೆ ನೆರವೇರಿದ್ದು, ಕಿರುತೆರೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ Read More »

ಶಾರುಕ್‌ ಖಾನ್‌, ದೀಪಿಕಾ ಪಡುಕೋಣೆ ವಿರುದ್ಧ ವಂಚನೆ ದೂರು

ಹೇಗೆಲ್ಲ ಮೋಸ ಮಾಡುತ್ತಾರೆ ಈ ತಾರೆಯರು ಗೊತ್ತಾ? ನವದೆಹಲಿ: ಬಾಲಿವುಡ್‌ನ ಜನಪ್ರಿಯ ತಾರೆಯರಾದ ಶಾರುಕ್‌ ಖಾನ್‌ ಮತ್ತು ದೀಪಿಕಾ ಪಡುಕೋಣೆ ವಿರುದ್ಧ ವಂಚನೆ ದೂರು ದಾಖಲಾಗಿದೆ. ಉತ್ಪಾದನಾ ದೋಷಗಳನ್ನು ಹೊಂದಿರುವ ಹ್ಯುಂಡೈ ಕಾರು ಖರೀದಿಸಿದ್ದ ರಾಜಸ್ಥಾನದ ಭರತ್‌ಪುರದ ವ್ಯಕ್ತಿಯೊಬ್ಬರು ಆ ಕಾರಿನ ರಾಯಭಾರಿಗಳಾಗಿದ್ದ ಬಾಲಿವುಡ್ ನಟರಾದ ಶಾರುಕ್‌ ಖಾನ್ ಹಾಗೂ ದೀಪಿಕಾ ಪಡುಕೋಣೆ ಸೇರಿದಂತೆ ಒಟ್ಟು ಆರು ಮಂದಿಯ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ರಾಜಸ್ಥಾನದ ಭರತ್‌ಪುರ ನಿವಾಸಿ ಕೀರ್ತಿ ಸಿಂಗ್ ದೂರು ದಾಖಲಿಸಿದವರು. ಹ್ಯುಂಡೈ ಕಾರನ್ನು

ಶಾರುಕ್‌ ಖಾನ್‌, ದೀಪಿಕಾ ಪಡುಕೋಣೆ ವಿರುದ್ಧ ವಂಚನೆ ದೂರು Read More »

ದರ್ಶನ್‌, ಪವಿತ್ರಾ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌

ಆರೋಪಿ ಎಷ್ಟೇ ದೊಡ್ಡವನಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ ಎಂದ ಕೋರ್ಟ್‌ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಮಾಡಿ ತೀರ್ಪತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್​ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಈ ಕೊಲೆ

ದರ್ಶನ್‌, ಪವಿತ್ರಾ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌ Read More »

ನಟ ಧ್ರುವ ಸರ್ಜಾ ವಿರುದ್ಧ 3.15 ಕೋ. ರೂ. ವಂಚನೆ ಆರೋಪ

ನಿರ್ಮಾಪಕರಿಂದ ಮುಂಬೈಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಬೆಂಗಳೂರು: ಕನ್ನಡ ನಟ ಧ್ರುವ ಸರ್ಜಾ ವಿರುದ್ಧ ಜಗ್ಗು ದಾದ ಸಿನಿಮಾದ ನಿರ್ದೇಶಕ ಹಾಗೂ ನಿರ್ಮಾಪಕ ರಾಘವೇಂದ್ರ ಹೆಗ್ಡೆ 9.58 ಕೋ. ರೂ. ವಂಚಿಸಿದ ಕುರಿತು ದೂರು ನೀಡಿದ್ದಾರೆ. ಮುಂಬೈಯ ಅಂಬೋಲಿ ಪೊಲೀಸ್​ ಠಾಣೆಯಲ್ಲಿ ರಾಘವೇಂದ್ರ ಹೆಗ್ಡೆ ದೂರು ದಾಖಲಿಸಿದ್ದಾರೆ. 3.15 ಕೋಟಿ ರೂಪಾಯಿ ವಂಚನೆ ಕೇಸ್ ಇದಾಗಿದ್ದು, ಬಡ್ಡಿ ಸೇರಿ ಆ ಹಣ ಈಗ 9 ಕೋಟಿ ರೂಪಾಯಿ ಆಗಿದೆ ಎಂದು ನಿರ್ಮಾಪಕ ಆರೋಪಿಸಿದ್ದಾರೆ. 2016ರಲ್ಲಿ ನನ್ನ

ನಟ ಧ್ರುವ ಸರ್ಜಾ ವಿರುದ್ಧ 3.15 ಕೋ. ರೂ. ವಂಚನೆ ಆರೋಪ Read More »

ಮೋಕೆದ ತಿರ್ಲ್ ಕಿರುಚಿತ್ರ ಬಿಡುಗಡೆ

ಬೆಳ್ತಂಗಡಿ : ವಾಗೀಶ್ ವಿ ತುಂಬೆತ್ತಡ್ಕ ನಿರ್ಮಾಣ ದ , ನಿರಂಜನ್ ಗೌಡ ಗುರುವಾಯನಕೆರೆ ಕಥೆ – ಚಿತ್ರಕಥೆ – ಸಂಭಾಷಣೆ – ಸಾಹಿತ್ಯ – ನಿರ್ದೇಶನ, ಭರತ್ ರಾಜ್ ಬಿ ಕುಲಾಲ್ ಇವರ ಛಾಯಾಗ್ರಹಣ ಹಾಗೂ ಹಲವಾರು ಕಲಾವಿದರಿಂದ ಮೂಡಿಬಂದ ಮೋಕೆದ ತಿರ್ಲ್ ಕಿರುಚಿತ್ರ 27 ಅದಿತ್ಯವಾರ ಬಿಡುಗಡೆಯಾಯಿತು. ಮೋಕೆದ ತಿರ್ಲ್ ಕಿರು ಚಿತ್ರವನ್ನು ಕಿರಣ್ ಚಂದ್ರ ಡಿ ಪುಷ್ಪಗಿರಿ ಬಿಡುಗಡೆಗೊಳಿಸಿದರು. ಈ ಸಂದರ್ಭ ಮೋಕೆದ ತಿರ್ಲ್ ತಂಡವನ್ನು ಸನ್ಮಾನಿಸಿ ಯುವ ಕಲಾವಿದರನ್ನು ಹರಸಿ ಶುಭಹಾರೈಸಿದರು.

ಮೋಕೆದ ತಿರ್ಲ್ ಕಿರುಚಿತ್ರ ಬಿಡುಗಡೆ Read More »

error: Content is protected !!
Scroll to Top