ಮನರಂಜನೆ

ಜ.4 : ಮನಜನ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಗನ್ ಹಾಗೂ ಸುಫಿ ಹಾಡುಗಳ ಮನಜನ ಸಂಗೀತ ಹಬ್ಬ ‘ಅಸೀಮ’

ಪುತ್ತೂರು : ಮನಜನ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಗನ್ ಹಾಗೂ ಸುಫಿ ಹಾಡುಗಳ ಮನಜನ ಸಂಗೀತ ಹಬ್ಬ ‘ಅಸೀಮ’ ಜ.4 ರಂದು ಮಂಜಲ್ಪಡ್ಪು ಸುದಾನ ಶಾಲಾ ಗ್ರೌಂಡ್‍ನಲ್ಲಿ ನಡೆಯಲಿದೆ ಎಂದು ಮನಜನ ಟ್ರಸ್ಟ್ ನ ಮೆನೆಜಿಂಗ್ ಟ್ರಸ್ಟಿ ಸೌಮ್ಯ ಭಟ್‍ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮನಸ್ಸಿನ ಆರೋಗ್ಯ, ನಾವು ಎದುರಿಸುವ ಮಾನಸಿಕ ಖಾಯಿಲೆ, ತೊಂದರೆ, ಸವಾಲುಗಳನ್ನು ಪರಿಹರಿಸುವ ಹಾಗೂ ನಿಭಾಯಿಸುವ ರೀತಿಗಳು ಮುಂತಾದ ವಿಚಾರಗಳ ಕುರಿತು ಅರಿವು ಮೂಡಿಸುವುದು ನಮ್ಮ ಆಶಯವಾಗಿದ್ದು, ಈಗಾಗಲೇ ಟ್ರಸ್ಟ್ […]

ಜ.4 : ಮನಜನ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಗನ್ ಹಾಗೂ ಸುಫಿ ಹಾಡುಗಳ ಮನಜನ ಸಂಗೀತ ಹಬ್ಬ ‘ಅಸೀಮ’ Read More »

ಆಸ್ಕರ್‌ ಅವಾರ್ಡ್‌ ರೇಸ್‌ನಿಂದ ಲಾಪತಾ ಲೇಡೀಸ್‌ ಹೊರಕ್ಕೆ

ಅಂತಿಮ ಸುತ್ತಿಗೆ ಆಯ್ಕೆಯಾಗದ ಭಾರತದ ಚಿತ್ರ ಹೊಸದಿಲ್ಲಿ: ಲಾಪತಾ ಲೇಡೀಸ್ ಸಿನಿಮಾ ಓಸ್ಕರ್ ರೇಸ್‌ನಿಂದ ಹೊರಬಿದ್ದಿದೆ. ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್ ವರ್ಗದಲ್ಲಿ ಲಾಪತಾ ಲೇಡೀಸ್ ಸಿನಿಮಾ 97ನೇ ಅಕಾಡೆಮಿ ಅವಾರ್ಡ್ಸ್‌ಗೆ ಭಾರತದಿಂದ ಅಧಿಕೃತವಾಗಿ ಪ್ರವೇಶ ಪಡೆದಿತ್ತು. ಕಿರಣ್ ರಾವ್ ನಿರ್ದೇಶಿಸಿರುವ ಈ ಸಿನಿಮಾ, 15 ಫೀಚರ್ ಫಿಲ್ಮ್‌ಗಳ ಪಟ್ಟಿಗೆ ಆಯ್ಕೆಯಾಗಿತ್ತು. ಆದರೆ ಈಗ ಅಂತಿಮವಾಗಿ 5 ಸಿನಿಮಾಗಳು ಆಯ್ಕೆಯಾಗಿವೆ ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್& ಸೈನ್ಸಸ್ ಘೋಷಿಸಿದೆ. ಬ್ರಿಟಿಷ್-ಭಾರತೀಯ ಚಲನಚಿತ್ರ ನಿರ್ಮಾಪಕಿ ಸಂಧ್ಯಾ ಸೂರಿಯವರ

ಆಸ್ಕರ್‌ ಅವಾರ್ಡ್‌ ರೇಸ್‌ನಿಂದ ಲಾಪತಾ ಲೇಡೀಸ್‌ ಹೊರಕ್ಕೆ Read More »

ಮುಂಜಾನೆ ಜೈಲಿನಿಂದ ಬಿಡುಗಡೆಯಾದ ಅಲ್ಲು ಅರ್ಜುನ್‌

ತೆಲಂಗಾಣ ಸರಕಾರದ ಮೇಲೆ ತಿರುಗಿದ ಅಭಿಮಾನಿಗಳ ಆಕ್ರೋಶ ಹೈದರಾಬಾದ್‌ : ಪುಷ್ಪ-2 ಸೂಪರ್‌ ಹಿಟ್‌ ಚಿತ್ರದ ಪ್ರೀಮಿಯರ್‌ ಶೋ ವೇಳೆ ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಮಧ್ಯಾಹ್ನ ಬಂಧನಕ್ಕೊಳಗಾಗಿದ್ದ ಜನಪ್ರಿಯ ಹೀರೊ ಅಲ್ಲು ಅರ್ಜುನ್‌ ಒಂದು ರಾತ್ರಿಯನ್ನಿಡೀ ಜೈಲಿನಲ್ಲಿ ಕಳೆದು ಇಂದು ಮುಂಜಾನೆ ಬಿಡುಗಡೆಯಾಗಿದ್ದಾರೆ. ಕೆಳಹಂತದ ಕೋರ್ಟ್​ ಅವರಿಗೆ 14 ದಿನ ನ್ಯಾಯಂಗ ಬಂಧನ ವಿಧಿಸಿದರೂ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಆದರೆ ಕೋರ್ಟ್ ತೀರ್ಪಿನ ಪ್ರತಿ ಜೈಲು

ಮುಂಜಾನೆ ಜೈಲಿನಿಂದ ಬಿಡುಗಡೆಯಾದ ಅಲ್ಲು ಅರ್ಜುನ್‌ Read More »

ಪುಷ್ಪ ಚಿತ್ರದ ಚಿತ್ರದ ಹೀರೊ ಅಲ್ಲು ಅರ್ಜುನ್‌ ಬಂಧನ

ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿ ಬೆಡ್‌ರೂಮ್‌ನಿಂದಲೇ ಎತ್ತಾಕಿಕೊಂಡು ಹೋದ ಪೊಲೀಸರು ಹೈದರಾಬಾದ್‌ : ಪುಷ್ಪ-2 ಸಿನೆಮಾದ ಪ್ರಿಂಇಯರ್‌ ಶೋ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದ ಹೀರೊ ಅಲ್ಲು ಅರ್ಜುನ್ ಅವರನ್ನು ತೆಲಂಗಾಣದ ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂಭವಿಸಿದ ನೂಕುನುಗ್ಗಲು ಮತ್ತು ಕಾಲ್ತುಳಿತದಲ್ಲಿ ಓರ್ವ ಮಹಿಳೆ ಸಾವಿಗೀಡಾಗಿ ಅವರ

ಪುಷ್ಪ ಚಿತ್ರದ ಚಿತ್ರದ ಹೀರೊ ಅಲ್ಲು ಅರ್ಜುನ್‌ ಬಂಧನ Read More »

ಆಳ್ವಾಸ್‌ ವಿರಾಸತ್: ರಂಗೇರಿಸಿದ ನೃತ್ಯ, ಕಸರತ್ತಿನ ಗಮ್ಮತ್ತು

ಜಾನಪದ-ಶಾಸ್ತ್ರೀಯದ ಸ್ಪಂದನ, ಸಾಹಸ-ಹೆಜ್ಜೆಗಳ ಸಮ್ಮಿಲನ ವಿದ್ಯಾಗಿರಿ (ಮೂಡುಬಿದಿರೆ): ಪಂಡಿತ್ ಎಂ.ವೆಂಕಟೇಶ್ ಕುಮಾರ್ ಅವರ ಭಕ್ತಿಗಾನ ಸುಧೆಯಲ್ಲಿ ಮಿಂದ ಪ್ರೇಕ್ಷಕರನ್ನು ನರ್ತನ ಲೋಕಕ್ಕೆ ಕೊಂಡೊಯ್ದದ್ದು ಗುಜರಾತ್‌ನ ರಂಗ್ ಮಲಹರ್ ದಿ ಫೋಕ್ ಆರ್ಟ್ಸ್ ತಂಡದ ವೈವಿಧ್ಯಮಯ ಗುಜರಾತಿ ಜಾನಪದ ನೃತ್ಯ ಪ್ರದರ್ಶನ. ಉತ್ತರದ ಹಿಂದೂಸ್ಥಾನಿಗೆ ಶ್ರೋತೃಗಳಾಗಿದ್ದ ವಿರಾಸತ್ ಪ್ರೇಕ್ಷಕರು ಪಶ್ಚಿಮದ ಜಾನಪದಕ್ಕೆ ವೀಕ್ಷಕರಾದರು. ದೇಶದ ಪಶ್ಚಿಮ ತೀರದ ಗುಜರಾತ್‌ನಲ್ಲಿ ನವರಾತ್ರಿಯ ಸಂದರ್ಭದಲ್ಲಿ ದೇವಿ ಆರಾಧನೆ ಮಾಡುತ್ತಾ ನರ್ತಿಸುವ ಜಾನಪದ ನೃತ್ಯವೇ ಗರ್ಭಾ. ಗುಜರಾತ್‌ನ ರಂಗ್ ಮಲಹರ್ ತಂಡ ಸದಸ್ಯರು

ಆಳ್ವಾಸ್‌ ವಿರಾಸತ್: ರಂಗೇರಿಸಿದ ನೃತ್ಯ, ಕಸರತ್ತಿನ ಗಮ್ಮತ್ತು Read More »

ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ ಆಳ್ವಾಸ್ ವಿರಾಸತ್-2024 ಪ್ರಶಸ್ತಿ ಪ್ರದಾನ

ವಿದ್ಯಾಗಿರಿ (ಮೂಡುಬಿದಿರೆ): ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 30ನೇ ವರ್ಷದ ಆಳ್ವಾಸ್ ವಿರಾಸತ್‌ನಲ್ಲಿ ಬುಧವಾರ ಸಂಜೆ ಪ್ರತಿಷ್ಠಿತ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿಯನ್ನು ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಪ್ರದಾನಿಸಲಾಯಿತು. ಬಡವರು, ದೀನದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಈ ಪ್ರಶಸ್ತಿ ಅರ್ಪಣೆ ಎಂದು ಪಂಡಿತ್ ವೆಂಕಟೇಶ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದ ಬಳಿಕ ಭಾವುಕರಾಗಿ ನುಡಿದರು. ಶಿಸ್ತು, ಸಂಯಮ, ಸಮಯ

ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ ಆಳ್ವಾಸ್ ವಿರಾಸತ್-2024 ಪ್ರಶಸ್ತಿ ಪ್ರದಾನ Read More »

ವಿರಾಸತ್‌ ಭವ್ಯ ಮೆರವಣಿಗೆ : ಧರೆಗಿಳಿದು ಬಂದ ಕಲಾಲೋಕ

ದೇಶ-ವಿದೇಶಗಳ ಅದ್ಭುತ ಕಲಾಪರಂಪರೆ ಮೂಡುಬಿದಿರೆಯಲ್ಲಿ ಅನಾವರಣ ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಮೊದಲ ದಿನವಾದ ಮಂಗಳವಾರ ಉದ್ಘಾಟನೆಯ ಬಳಿಕ ನಡೆದ ದೇಶ-ವಿದೇಶಗಳ ಅದ್ಭುತ ಕಲಾಪರಂಪರೆಯನ್ನು ಧರೆಗಿಳಿಸಿ ಸಾರ್ಥಕವಾಯಿತು. ಶ್ರದ್ಧೆ-ಭಕ್ತಿಯ ನಾಡು-ನುಡಿಯ ಕಲಾ ವೈಶಿಷ್ಟ್ಯತೆಯ ಸಾಂಸ್ಕೃತಿಕ ವೈಭವ, ಭಾರತದ ಭವ್ಯ ಸಂಸ್ಕೃತಿಯ ಕಲಾರೂಪವೇ ಧರೆಗಿಳಿದು ಬಂದಂತೆ ಭಾಸವಾಯಿತು. ಉತ್ತರ ಭಾರತದಿಂದ ಹಿಡಿದು ದಕ್ಷಿಣದ ತುತ್ತತುದಿವರೆಗಿನ ವೈವಿಧ್ಯ ಕಲಾಪ್ರಕಾರಗಳು ಮಾತ್ರವಲ್ಲದೆ ಶ್ರೀಲಂಕಾ ಸೇರಿದಂತೆ ನೆರೆಹೊರೆ ರಾಷ್ಟ್ರಗಳ ಸಂಸ್ಕೃತಿ ಶ್ರೀಮಂತಿಕೆಗೆ ಆಳ್ವಾಸ್ ಆವರಣ ಸಾಕ್ಷಿಯಾಯಿತು.

ವಿರಾಸತ್‌ ಭವ್ಯ ಮೆರವಣಿಗೆ : ಧರೆಗಿಳಿದು ಬಂದ ಕಲಾಲೋಕ Read More »

ಬನ್ನೆಂಗಳದ ಸಮೃದ್ಧಿ ನಿವಾಸದಲ್ಲಿ ಭಾನುಮತಿ ಕಲ್ಯಾಣ ತಾಳಮದ್ದಳೆ

ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸುವರ್ಣ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 56ನೇ ತಾಳಮದ್ಧಳೆ ಭಾನುಮತಿ ಕಲ್ಯಾಣ  ಬನ್ನೆಂಗಳ ಸಮೃದ್ಧಿ ನಿವಾಸದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಸುರೇಶ್ ರಾವ್. ಬಿ,ನಿತೀಶ್ ಕುಮಾರ್. ವೈ, ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ್, ಗುಡ್ಡಪ್ಪ ಬಲ್ಯ (ಬಾಹ್ಲಿಕ ರಾಜ ), ಶ್ಶ್ರುತಿ  ವಿಸ್ಮಿತ್ (ವನಚರರು, ಮಂತ್ರಿ

ಬನ್ನೆಂಗಳದ ಸಮೃದ್ಧಿ ನಿವಾಸದಲ್ಲಿ ಭಾನುಮತಿ ಕಲ್ಯಾಣ ತಾಳಮದ್ದಳೆ Read More »

ಪುಷ್ಪ-2 ಸಿನೆಮಾ ನೋಡುವಾಗ ಅಭಿಮಾನಿಗಳ ನೂಕುನುಗ್ಗಲು : ಕಾಲ್ತುಳಿತಕ್ಕೆ ಮಹಿಳೆ ಬಲಿ

ಮಗನ ಸ್ಥಿತಿ ಚಿಂತಾಜನಕ; ಅನೇಕ ಮಂದಿಗೆ ಗಾಯ ಹೈದರಾಬಾದ್:‌ ಸ್ಟಾರ್‌ ನಟ ಅಲ್ಲು ಅರ್ಜುನ್‌ ಅಭಿನಯದ ಪುಷ್ಪ 2 ಸಿನೆಮಾದ ಪ್ರೀಮಿಯರ್‌ ಶೋ ವೇಳೆ ಜನರ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.ಹೈದರಾಬಾದ್‌ನ ಆರ್‌ಟಿಸಿ ಕ್ರಾಸ್‌ರೋಡ್ಸ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಿನ್ನೆ ರಾತ್ರಿ ಈ ದುರಂತ ಸಂಭವಿಸಿದೆ. ಮೃತ ಮಹಿಳೆಯನ್ನು ದಿಲ್‌ಸುಖ್‌ನಗರದ ರೇವತಿ ಎಂದು ಗುರುತಿಸಲಾಗಿದೆ. ಪತಿ ಭಾಸ್ಕರ್ ಮತ್ತು ಇಬ್ಬರು ಮಕ್ಕಳೊಂದಿಗೆ ಸಿನೆಮಾಕ್ಕೆ ಬಂದಿದ್ದರು.ರಾತ್ರಿ 10.30ರ ಸುಮಾರಿಗೆ ಥಿಯೇಟರ್‌ನಲ್ಲಿ ಪ್ರೇಕ್ಷಕರು ಕಿಕ್ಕಿರಿದು ಸೇರಿದ್ದರು.

ಪುಷ್ಪ-2 ಸಿನೆಮಾ ನೋಡುವಾಗ ಅಭಿಮಾನಿಗಳ ನೂಕುನುಗ್ಗಲು : ಕಾಲ್ತುಳಿತಕ್ಕೆ ಮಹಿಳೆ ಬಲಿ Read More »

ಕೋಟಿಗಟ್ಟಲೆ ರೂಪಾಯಿ ವಂಚನೆ : ತುಳುಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌

ಬಂಟ್ವಾಳದ ಉದ್ಯಮಿಗೆ ಕೋಟಿಗಳ ವ್ಯವಹಾರದ ಕಥೆ ಹೇಳಿ ವಂಚನೆ ಬೆಂಗಳೂರು: ತುಳು-ಕನ್ನಡ ಚಿತ್ರ ನಿರ್ಮಾಪಕ ಅರುಣ್‌ ರೈ ವಿರುದ್ಧ ಕೋಟಿಗಟ್ಟಲೆ ರೂಪಾಯಿ ವಂಚನೆ ಕೇಸ್‌ ದಾಖಲಾಗಿದೆ. ರಾಷ್ಟ್ರಪ್ರಶಸ್ತಿ ವಿಜೇತ ತುಳುಚಿತ್ರ ಜೀಟಿಗೆ ಸಹಿತ ತುಳು ಮತ್ತು ಕನ್ನಡದಲ್ಲಿ ಕೆಲವು ಚಿತ್ರಗಳನ್ನು ನಿರ್ಮಿಸಿರುವ ಅರುಣ್‌ ರೈ ಬಂಟ್ವಾಳದ ಉದ್ಯಮಿಯೊಬ್ಬರನ್ನು ಕೋಟಿ ಕೋಟಿಗಳ ಲೆಕ್ಕದಲ್ಲಿ ವ್ಯವಹಾರದ ಕಥೆ ಹೇಳಿ ವಂಚಿಸಿದ್ದಾರೆ ಎನ್ನಲಾಗಿದೆ.ಅರುಣ್ ರೈ ವಿರುದ್ಧ ಬೆಂಗಳೂರಿನ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕನ್ನಡದ ವೀರಕಂಬಳ ಸಿನಿಮಾವನ್ನು ಸಹ

ಕೋಟಿಗಟ್ಟಲೆ ರೂಪಾಯಿ ವಂಚನೆ : ತುಳುಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌ Read More »

error: Content is protected !!
Scroll to Top