ವಿದೇಶ

ಲಂಡನ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ

ಗಾಂಧಿ ಜಯಂತಿಗೆ ಎರಡು ದಿನ ಮೊದಲು ನಡೆದ ಕೃತ್ಯಕ್ಕೆ ಭಾರತ ಖಂಡನೆ ಲಂಡನ್ : ಗಾಂಧಿ ಜಯಂತಿಗೆ ಕೇವಲ ಎರಡು ದಿನಗಳ ಮೊದಲು ಲಂಡನ್ ವಿಶ್ವವಿದ್ಯಾಲಯದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ. ಭಾರತದ ಹೈಕಮಿಷನ್ ಈ ಘಟನೆಯನ್ನು ಬಲವಾಗಿ ಖಂಡಿಸಿದ್ದು, ಇದನ್ನು ನಾಚಿಕೆಗೇಡಿನ ಕೃತ್ಯ ಮತ್ತು ಅಹಿಂಸೆಯ ಪರಂಪರೆಯ ಮೇಲಿನ ದಾಳಿ ಎಂದು ಕರೆದಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಧ್ಯಾನಸ್ಥ ಭಂಗಿಯಲ್ಲಿ […]

ಲಂಡನ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ Read More »

ಟ್ರೋಫಿ ಜೊತೆ ಹೋಟೆಲ್‌ಗೆ ಹೋದ ಪಾಕ್‌ ಕ್ರಿಕೆಟ್‌ ಮಂಡಳಿಯ ಅಧ್ಯಕ್ಷ : ಸೋಷಿಯಲ್‌ ಮೀಡಿಯಾದಲ್ಲಿ ಹಿಗ್ಗಾಮುಗ್ಗಾ ಟ್ರೋಲ್‌

ಸೋತ ದುಃಖ, ಅವಮಾನದಿಂದ ಕಂಗೆಟ್ಟು ಹೋಗಿರುವ ಪಾಕಿಸ್ತಾನೀಯರು ದುಬೈ: ಏಷ್ಯಾ ಕಪ್ 2025ರ ಅತ್ಯಂತ ರೋಚಕ ಫೈನಲ್ ಪಂದ್ಯದಲ್ಲಿ ಭಾನುವಾರ ಭಾರತ ತಂಡ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಮಣಿಸಿ ಚಾಂಪಿಯನ್ ಪಟ್ಟಕ್ಕೇರಿದೆ. ಆದರೆ ಈ ಐತಿಹಾಸಿಕ ಗೆಲುವಿನ ನಂತರ ನಡೆದಿದ್ದು ಮಾತ್ರ ಭಾರಿ ನಾಟಕೀಯ ಬೆಳವಣಿಗೆ. ಭಾರತೀಯ ತಂಡವು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷರೂ ಆಗಿರುವ ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿ ಅವರ ಕೈಯಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಕಾರಣ ಅವರು ಟ್ರೋಫಿ ಮತ್ತು ವಿಜೇತರ

ಟ್ರೋಫಿ ಜೊತೆ ಹೋಟೆಲ್‌ಗೆ ಹೋದ ಪಾಕ್‌ ಕ್ರಿಕೆಟ್‌ ಮಂಡಳಿಯ ಅಧ್ಯಕ್ಷ : ಸೋಷಿಯಲ್‌ ಮೀಡಿಯಾದಲ್ಲಿ ಹಿಗ್ಗಾಮುಗ್ಗಾ ಟ್ರೋಲ್‌ Read More »

ಏಷ್ಯಾಕಪ್‌ ಫೈನಲ್‌ : ಚಾಂಪಿಯನ್‌ ಆದರೂ ಟ್ರೋಫಿ ಇಲ್ಲದೆ ಸಂಭ್ರಮಿಸಿದ ಟೀಂ ಇಂಡಿಯಾ

ದುಬೈಯಲ್ಲಿ ಭಾರತಕ್ಕೆ ತಿಲಕ್‌ ವರ್ಮಾ ಸಿಂದೂರ ತಿಲಕ – ಮಣ್ಣು ಮುಕ್ಕಿದ ಪಾಕ್‌ ದುಬೈ : ಭಾನುವಾರ ರಾತ್ರಿ ದುಬೈಯಲ್ಲಿ ನಡೆದ ರಣರೋಚಕ ಏಷ್ಯಾಕಪ್‌ ಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿದು ಟೀಮ್ ಇಂಡಿಯಾ 9ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಚಾಂಪಿಯನ್ ಆದರೂ ಭಾರತ ತಂಡ ಏಷ್ಯಾಕಪ್ ಟ್ರೋಫಿ ಸ್ವೀಕರಿಸಿಲ್ಲ. ಈ ಬಾರಿ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿಯದೆ ಟೀಮ್ ಇಂಡಿಯಾ ಸಂಭ್ರಮಿಸಿದೆ. ಇದಕ್ಕೆ ಮುಖ್ಯ ಕಾರಣ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಪಾಕಿಸ್ತಾನದವರಾಗಿರುವುದು. ಈ ಮೂಲಕ

ಏಷ್ಯಾಕಪ್‌ ಫೈನಲ್‌ : ಚಾಂಪಿಯನ್‌ ಆದರೂ ಟ್ರೋಫಿ ಇಲ್ಲದೆ ಸಂಭ್ರಮಿಸಿದ ಟೀಂ ಇಂಡಿಯಾ Read More »

ಏಷ್ಯಾಕಪ್‌ : ಇಂದು ಭಾರತ-ಪಾಕಿಸ್ತಾನ ರಣರೋಚಕ ಫೈನಲ್‌

ಗೆಲ್ಲಲೇ ಬೇಕಾದ ಒತ್ತಡದಲ್ಲಿ ಉಭಯ ತಂಡಗಳು ದುಬೈ : ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಏಷ್ಯಾಕಪ್‌ ಪಂದ್ಯಾವಳಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಅಂತಿಮ ಪಂದ್ಯ ನಡೆಯುತ್ತಿರುವುದು ಇದೇ ಮೊದಲು. ಈ ಟೂರ್ನಿಯಲ್ಲಿ ಈಗಾಗಲೇ ಎರಡು ಬಾರಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿರುವ ಟೀಂ ಇಂಡಿಯಾ ಮೂರನೇ ಮುಖಾಮುಖಿಯಲ್ಲೂ ಗೆಲುವು ಸಾಧಿಸುವ ವಿಶ್ವಾಸ ಹೊಂದಿದೆ. ಬೇರೆ ಕಾರಣಗಳಿಗೂ ಭಾರತ ಮತ್ತು

ಏಷ್ಯಾಕಪ್‌ : ಇಂದು ಭಾರತ-ಪಾಕಿಸ್ತಾನ ರಣರೋಚಕ ಫೈನಲ್‌ Read More »

ಭಯೋತ್ಪಾದನೆಯನ್ನು ವೈಭವೀಕರಿಸುತ್ತಿರುವ ಪಾಕಿಸ್ತಾನ : ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು

ಪಾಕಿಸ್ತಾನದ ಹಸಿ ಸುಳ್ಳುಗಳಿಗೆ ಜಾಡಿಸಿದ ಭಾರತದ ರಾಜತಾಂತ್ರಿಕ ಅಧಿಕಾರಿ ವಿಶ್ವಸಂಸ್ಥೆ : ಪಾಕಿಸ್ತಾನ ಭಯೋತ್ಪಾದನೆಯನ್ನು ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಹರಡುತ್ತಿದೆ ಎಂದು ಭಾರತ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನಕ್ಕೆ ಬಲವಾದ ತಿರುಗೇಟು ನೀಡಿದೆ. ಭಾರತದ ರಾಜತಾಂತ್ರಿಕ ಅಧಿಕಾರಿ ಪೆಟಲ್ ಗೆಹ್ಲೋಟ್ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು, ಪಾಕಿಸ್ತಾನ ಭಯೋತ್ಪಾದನೆಯನ್ನು ವೈಭವೀಕರಿಸುತ್ತಿದೆ. ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಬಿತ್ತರಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು. ಶೆಹಬಾಜ್‌ ಷರೀಫ್‌ ಭಾಷಣದ ನಂತರ ಪ್ರತ್ಯುತ್ತರ ನೀಡುವ ಹಕ್ಕು ಚಲಾಯಿಸುತ್ತಾ ಗೆಹ್ಲೋಟ್

ಭಯೋತ್ಪಾದನೆಯನ್ನು ವೈಭವೀಕರಿಸುತ್ತಿರುವ ಪಾಕಿಸ್ತಾನ : ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು Read More »

ಏಷ್ಯಾಕಪ್‌ : ಭಾರತ-ಶ್ರೀಲಂಕಾ ಸೂಪರ್‌ ಓವರ್‌ ರೋಮಾಂಚನ

ಗೆದ್ದು ಅಜೇಯವಾಗಿ ಫೈನಲ್‌ ಪ್ರವೇಶಿಸಿ ಬೀಗಿದ ಭಾರತ ದುಬೈ: ಭಾರತ ಮತ್ತು ಶ್ರೀಲಂಕಾ ನಡುವೆ ಶುಕ್ರವಾರ ರಾತ್ರಿ ನಡೆದ ಏಷ್ಯಾಕಪ್‌ ಸೂಪರ್‌ 4 ಪಂದ್ಯ ಸೂಪರ್‌ ಓವರ್‌ ತನಕ ಸಾಗಿ ರೋಚಕತೆ ಸೃಷ್ಟಿಸಿತು. ಸೂಪರ್‌ ಓವರ್‌ನಲ್ಲಿ ಶ್ರೀಲಂಕಾವನ್ನು ಮಣಿಸಿ ಭಾರತ ಅಜೇಯವಾಗಿ ಫೈನಲ್‌ ಪ್ರವೇಶಿಸಿದೆ. ಇದರೊಂದಿಗೆ ಭಾನುವಾರ ನಡೆಯುವ ಫೈನಲ್‌ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್‌ ಮುಖಾಮುಖಿಯಾಗಲಿದೆ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲದ ಪಂದ್ಯದಲ್ಲಿ ಪಾತುಮ್ ನಿಸ್ಸಂಕ ಅವರ ಸ್ಫೋಟಕ ಶತಕ, ಕುಸಾಲ್ ಪೆರೆರಾ ಅವರ

ಏಷ್ಯಾಕಪ್‌ : ಭಾರತ-ಶ್ರೀಲಂಕಾ ಸೂಪರ್‌ ಓವರ್‌ ರೋಮಾಂಚನ Read More »

ಭಾರತದ ಮೇಲೆ ಟ್ರಂಪ್‌ ಇನ್ನೊಂದು ಸುಂಕ ಪ್ರಹಾರ

ಬ್ರಾಂಡೆಡ್ ಮತ್ತು ಪೇಟೆಂಟ್ ಪಡೆದ ಔಷಧಗಳ ಮೇಲೆ ಶೇ.100 ಸುಂಕ ವಾಷಿಂಗ್ಟನ್ : ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತೊಂದು ಸುಂಕ ದಾಳಿ ನಡೆಸಿದ್ದಾರೆ. ಅಮೆರಿಕಕ್ಕೆ ಪ್ರವೇಶಿಸುವ ಭಾರತದ ಎಲ್ಲ ಬ್ರಾಂಡೆಡ್ ಮತ್ತು ಪೇಟೆಂಟ್ ಪಡೆದ ಔಷಧಗಳು ಶೇ.100 ಸುಂಕಕ್ಕೆ ಒಳಪಡುತ್ತವೆ ಎಂದು ಟ್ರಂಪ್ ಘೋಷಿಸಿದ್ದಾರೆ. ಈ ಸುಂಕ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ಆದರೆ ಔಷಧ ಕಂಪನಿಗಳು ಅಮೆರಿಕದಲ್ಲಿ ಔಷಧ ಉತ್ಪಾದನಾ ಘಟಕ ಸ್ಥಾಪಿಸಿದರೆ ಸುಂಕ ಅನ್ವಯಿಸುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಟ್ರಂಪ್

ಭಾರತದ ಮೇಲೆ ಟ್ರಂಪ್‌ ಇನ್ನೊಂದು ಸುಂಕ ಪ್ರಹಾರ Read More »

ಏಷ್ಯಾಕಪ್‌ : ಭಾನುವಾರ ನಡೆಯಲಿದೆ ಭಾರತ-ಪಾಕಿಸ್ತಾನ ನಡುವೆ ಹೈ ವೋಲ್ಟೇಜ್‌ ಫೈನಲ್‌

ಬದ್ಧ ಎದುರಾಳಿಗಳ ಇನ್ನೊಂದು ಮುಖಾಮುಖಿಯತ್ತ ಎಲ್ಲರ ಚಿತ್ತ ದುಬೈ: ಮುಂದಿನ ಭಾನುವಾರ ಇನ್ನೊಮ್ಮೆ ಭಾರತ ಮತ್ತು ಪಾಕಿಸ್ತಾನದ ನಡುವೆ ಇನ್ನೊಂದು ಹೈವೋಲ್ಟೇಜ್‌ ಪಂದ್ಯ ನಡೆಯಲು ವೇದಿಕೆ ಸಿದ್ಧವಾಗಿದೆ. ನಿರ್ಣಾಯಕ ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ ಪಾಕಿಸ್ತಾನ 11 ರನ್‌ಗಳ ಸೋಲುಣಿಸಿ ಏಷ್ಯಾಕಪ್ ಫೈನಲ್ ಪ್ರವೇಶಿಸಿದೆ. ಹೀಗಾಗಿ ಭಾನುವಾರ ಭಾರತ ಮತ್ತು ಪಾಕಿಸ್ತಾನ ನಡುವೆ ಫೈನಲ್‌ ನಡೆಯುವುದು ಪಕ್ಕಾ ಆಗಿದೆ. ಇದೇ ಮೊದಲ ಬಾರಿಗೆ ಏಷ್ಯಾ ಕಪ್‌ ಟೂರ್ನಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಫೈನಲ್‌

ಏಷ್ಯಾಕಪ್‌ : ಭಾನುವಾರ ನಡೆಯಲಿದೆ ಭಾರತ-ಪಾಕಿಸ್ತಾನ ನಡುವೆ ಹೈ ವೋಲ್ಟೇಜ್‌ ಫೈನಲ್‌ Read More »

ಹ್ಯಾಂಡ್‌ಶೇಕ್‌ ನೀಡದೆ ಮತ್ತೊಮ್ಮೆ ಪಾಕಿಸ್ತಾನ ತಂಡವನ್ನು ಅವಮಾನಿಸಿದ ಭಾರತ

ಹೈ ವೋಲ್ಟೇಜ್‌ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಬಗ್ಗುಬಡಿದು ಬೀಗಿದ ಟೀಮ್‌ ಇಂಡಿಯಾ ದುಬೈ: ಏಷ್ಯಾಕಪ್​ ಟೂರ್ನಿಯ ಭಾನುವಾರ ರಾತ್ರಿ ನಡೆದ 14ನೇ ಪಂದ್ಯದಲ್ಲೂ ಪಾಕಿಸ್ತಾನ ತಂಡಕ್ಕೆ ಭಾರತ ಅವಮಾನ ಮಾಡಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಟಾಸ್ ವೇಳೆ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಅವರನ್ನು ಮತ್ತೊಮ್ಮೆ ಹ್ಯಾಂಡ್‌ಶೇಕ್ ನೀಡದೆ ನಿರ್ಲಕ್ಷಿಸಿ ಅವಮಾನಿಸಿದ್ದಾರೆ. ಸೆಪ್ಟೆಂಬರ್ 14ರಂದು ನಡೆದ ಪಂದ್ಯದ ವೇಳೆ ಭಾರತ ತಂಡದ

ಹ್ಯಾಂಡ್‌ಶೇಕ್‌ ನೀಡದೆ ಮತ್ತೊಮ್ಮೆ ಪಾಕಿಸ್ತಾನ ತಂಡವನ್ನು ಅವಮಾನಿಸಿದ ಭಾರತ Read More »

ಹೊಸ ಎಚ್‌-1ಬಿ ವೀಸಾಗೆ ಮಾತ್ರ 1 ಲಕ್ಷ ಡಾಲರ್‌ ಶುಲ್ಕ

ಭಾರಿ ಆತಂಕ ಸೃಷ್ಟಿಯಾದ ಬಳಿಕ ನಿಯಮ ತುಸು ಸಡಿಲಿಸಿದ ಟ್ರಂಪ್‌ ವಾಷಿಂಗ್ಟನ್‌: ಅಮೆರಿಕ ಎಚ್‌-1ಬಿ ವೀಸಾಗೆ 1 ಲಕ್ಷ ಡಾಲರ್‌ ಶುಲ್ಕ ವಿಧಿಸಲು ತೀರ್ಮಾನಿಸಿರುವುದು ಭಾರತದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಈ ವಿಸಾದಡಿ ಅಮೆರಿಕದಲ್ಲಿರುವ ಲಕ್ಷಾಂತರ ಭಾರತೀಯರು ದುಬಾರಿ ಶುಲ್ಕ ತೆರಲಾಗದೆ ನೌಕರಿ ಬಿಟ್ಟು ಭಾರತಕ್ಕೆ ಬರುವ ಸ್ಥಿತಿ ನಿರ್ಮಾಣವಾಗಲಿದೆ ಎನ್ನಲಾಗಿತ್ತು. ಆದರೆ ವಿಸಾ ವಿಚಾರದಲ್ಲಿ ತುಸು ಮೆತ್ತಗಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೊಸ ವಿಸಾ ಅರ್ಜಿದಾರರಿಗೆ ಮಾತ್ರ 1 ಲಕ್ಷ ಡಾಲರ್‌ (ಸುಮಾರು 88

ಹೊಸ ಎಚ್‌-1ಬಿ ವೀಸಾಗೆ ಮಾತ್ರ 1 ಲಕ್ಷ ಡಾಲರ್‌ ಶುಲ್ಕ Read More »

error: Content is protected !!
Scroll to Top