ವಿದೇಶ

ರಷ್ಯಾ ಡ್ರೋನ್‌ ದಾಳಿ : ಮುಳುಗಿದ ಉಕ್ರೇನ್‌ನ ಅತಿದೊಡ್ಡ ಸಮರ ನೌಕೆ

ತೀವ್ರಗೊಂಡ ರಷ್ಯಾ-ಉಕ್ರೇನ್‌ ಯುದ್ಧ ಮಾಸ್ಕೊ: ಕಳೆದ ಸುಮಾರು ಮೂರು ವರ್ಷಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್‌ ಯುದ್ಧ ಮತ್ತೆ ತೀವ್ರ ಸ್ವರೂಪ ತಾಳಿದ್ದು, ನಿನ್ನೆ ರಾತ್ರಿ ರಷ್ಯಾ ಡ್ರೋನ್‌ ದಾಳಿ ಮಾಡಿ ಉಕ್ರೇನ್‌ನ ನೌಕಾಪಡೆಯ ಪ್ರಮುಖ ಯುದ್ಧನೌಕೆಯೊಂದನ್ನು ಮುಳುಗಿಸಿದೆ. ಉಕ್ರೇನ್‌ನ ಗಸ್ತು ಹಡಗನ್ನು ರಷ್ಯಾ ಡ್ರೋನ್‌ ದಾಳಿ ನಡೆಸಿ ಮುಳುಗಿದೆ ಎಂದು ವರದಿಯಾಗಿದೆ. ಉಕ್ರೇನ್‌ ದೊಡ್ಡ ಗಸ್ತು ಹಡಗು ಸಿಮ್ಫೆರೊಪೋಲ್ ಡ್ಯಾನ್ಯೂಬ್ ನದಿಯಲ್ಲಿ ಸಂಚರಿಸುತ್ತಿದ್ದಾಗ ದಾಳಿ ನಡೆಸಲಾಗಿದೆ ಎಂದು ರಷ್ಯಾ ಹೇಳಿದೆ. ರೇಡಿಯೋ, ಎಲೆಕ್ಟ್ರಾನಿಕ್, ರಾಡಾರ್‌ಗಳನ್ನು ಈ ಹಡಗು ಹೊಂದಿತ್ತು. […]

ರಷ್ಯಾ ಡ್ರೋನ್‌ ದಾಳಿ : ಮುಳುಗಿದ ಉಕ್ರೇನ್‌ನ ಅತಿದೊಡ್ಡ ಸಮರ ನೌಕೆ Read More »

ಮುಂದಿನ ತಿಂಗಳು ಸಂಭವಿಸಲಿದೆ ಎರಡು ಗ್ರಹಣ

ಸೆ.7ಕ್ಕೆ ಚಂದ್ರ ಗ್ರಹಣ; ಸೆ.21ಕ್ಕೆ ಸೂರ್ಯ ಗ್ರಹಣ ಬೆಂಗಳೂರು : ಸೆಪ್ಟೆಂಬರ್ ತಿಂಗಳು ಖಗೋಳ ವಿಜ್ಞಾನ ಆಸಕ್ತರಿಗೆ ಬಹಳ ವಿಶೇಷವಾಗಿರಲಿದೆ. ಒಂದೇ ತಿಂಗಳಲ್ಲಿ ಎರಡು ದೊಡ್ಡ ಗ್ರಹಣಗಳು ಸಂಭವಿಸಲಿವೆ. ಸೆಪ್ಟೆಂಬರ್ 7ರಂದು ಚಂದ್ರ ಗ್ರಹಣ ಮತ್ತು ಸೆಪ್ಟೆಂಬರ್ 21ರಂದು ಸೂರ್ಯ ಗ್ರಹಣ ಸಂಭವಿಸಲಿದೆ. ಸೆ. 7ರಂದು ಸಂಭವಿಸಲಿರುವ ಚಂದ್ರ ಗ್ರಹಣ ಭಾರತದಲ್ಲಿ ಗೋಚರಿಸಲಿದೆ. 2025ರ ಎರಡನೇ ಸೂರ್ಯ ಗ್ರಹಣ ಸೆಪ್ಟೆಂಬರ್ 21ರ ರಾತ್ರಿ 11 ಗಂಟೆಗೆ ಪ್ರಾರಂಭವಾಗಿ ಸೆಪ್ಟೆಂಬರ್ 22ರ ಬೆಳಗ್ಗೆ 3.24ಕ್ಕೆ ಕೊನೆಗೊಳ್ಳುತ್ತದೆ. ಇದು ಭಾಗಶಃ

ಮುಂದಿನ ತಿಂಗಳು ಸಂಭವಿಸಲಿದೆ ಎರಡು ಗ್ರಹಣ Read More »

ಭಾರತದ ಅಭಿವೃದ್ಧಿಯನ್ನು ಅಮೆರಿಕಾಗೆ ‌ಸಹಿಸಲು ಆಗುತ್ತಿಲ್ಲ: ರಾಜನಾಥ್ ಸಿಂಗ್ ಟಾಂಗ್

ನವದೆಹಲಿ: ಭಾರತದ ಆರ್ಥಿಕ ಅಭಿವೃದ್ಧಿ ಕ್ರಿಯಾತ್ಮಕ ಮತ್ತು ವೇಗವಾದ ಬೆಳವಣಿಗೆ ಕಾಣುತ್ತಿದೆ. ಈ ಅಂಶ ಜಗತ್ತಿನ ಬಾಸ್ ಎಂದು ಕರೆಸಿಕೊಳ್ಳುವ ದೊಡ್ಡಣ್ಣನಿಗೆ ಸಹಿಸುವುದಕ್ಕೆ ‌ಸಾಧ್ಯವಾಗುತ್ತಿಲ್ಲ ಎಂದು ಅಮೆರಿಕಾ ವಿರುದ್ಧ ರಕ್ಷಣಾ ಸಚಿವ ರಾಜ ನಾಥ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಭಾರತದ ಮೇಲೆ ಸುಂಕ ಯುದ್ಧ ಹೇರಿದ ಅಮೆರಿಕಾ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ ‌ನಡೆಸಿದ ಅವರು, ಭಾರತದ ಆರ್ಥಿಕ‌ ಬೆಳವಣಿಗೆಯ ವೇಗ ಗಮನಿಸಿದರೆ ಜಗತ್ತಿನ ಮಹಾಶಕ್ತಿಯಾಗಿ ಹೊಮ್ಮುವುದನ್ನು ತಡೆಯಲು ಯಾವ ಜಾಗತಿಕ ಶಕ್ತಿಗೂ ‌ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಭಾರತದ ಅಭಿವೃದ್ಧಿಯನ್ನು ಅಮೆರಿಕಾಗೆ ‌ಸಹಿಸಲು ಆಗುತ್ತಿಲ್ಲ: ರಾಜನಾಥ್ ಸಿಂಗ್ ಟಾಂಗ್ Read More »

ಇಸ್ರೇಲ್‌ ಕ್ಷಿಪಣಿ ದಾಳಿಯಲ್ಲಿ ಅಲ್‌ ಜಜೀರಾದ ಐವರು ಪತ್ರಕರ್ತರು ಸಾವು

ಪತ್ರಕರ್ತರ ಸೋಗಿನಲ್ಲಿದ್ದ ಹಮಾಸ್‌ ಉಗ್ರರು ಎಂದು ದಾಳೀಗೆ ವಿವರಣೆ ನೀಡಿದ ಇಸ್ರೇಲ್‌ ಟೆಲ್‌ ಅವೀವ್‌ : ಗಾಜಾ ನಗರದ ಮೇಲೆ ಇಸ್ರೇಲ್ ಭಾನುವಾರ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಅಲ್‌ ಜಜೀರಾ ಸುದ್ದಿ ವಾಹಿನಿಯ ಒಬ್ಬ ಪ್ರಮುಖ ವರದಿಗಾರ ಸೇರಿದಂತೆ ಇಬ್ಬರು ವರದಿಗಾರರು ಮತ್ತು ಮೂವರು ಕ್ಯಾಮೆರಾಮೆನ್‌ಗಳು ಸಾವನ್ನಪ್ಪಿದ್ದಾರೆ. ಗಾಜಾ ನಗರದಲ್ಲಿ ಪತ್ರಕರ್ತರಿಗೆ ವಸತಿ ಕಲ್ಪಿಸಲಾಗಿದ್ದ ಟೆಂಟ್ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ಪರಿಣಾಮ ಅಲ್ ಜಜೀರಾದ ಪತ್ರಕರ್ತ ಅನಾಸ್ ಅಲ್-ಶರೀಫ್ ಜೊತೆಗೆ ನಾಲ್ವರು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆಂದು ವರದಿಗಳು

ಇಸ್ರೇಲ್‌ ಕ್ಷಿಪಣಿ ದಾಳಿಯಲ್ಲಿ ಅಲ್‌ ಜಜೀರಾದ ಐವರು ಪತ್ರಕರ್ತರು ಸಾವು Read More »

ಟ್ರಂಪ್‌ ಸುಂಕ ಡಬ್ಬಲ್‌

ಭಾರತದ ಮೇಲೆ ಮತ್ತೆ ಶೇ.25 ಸುಂಖ ವಿಧಿಸಿದ ಅಮೆರಿಕ ಅಧ್ಯಕ್ಷ ನವದೆಹಲಿ : ರಷ್ಯಾದಿಂದ ತೈಲ ಖರೀದಿಸುತ್ತಿರುವುದರ ವಿರುದ್ದ ಭಾರತದ ಮೇಲೆ ಕೆಂಡ ಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತಕ್ಕೆ ಮತ್ತೆ ಶೇ.25 ವ್ಯಾಪಾರ ಸುಂಕ ವಿಧಿಸಿದ್ದಾರೆ. ಇದರೊಂದಿಗೆ ಭಾರತದ ಮೇಲೆ ಟ್ರಂಪ್‌ ಶುಲ್ಕ ಶೇ.50ಕ್ಕೇರಿದಂತಾಗಿದೆ.ಮಂಗಳವಾರವಷ್ಟೇ 24 ಗಂಟೆಯೊಳಗೆ ಭಾರತದ ಮೇಲಿನ ಸುಂಕವನ್ನು ಗಣನೀಯವಾಗಿ ಹೆಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ ಟ್ರಂಪ್‌ ಹೇಳಿದಂತೆ ಮಾಡಿ ಭಾರತದ ಮೇಲೆ ಹೆಚ್ಚುವರಿಯಾಗಿ ಶೇ.25ರಷ್ಟು ಸುಂಕ ವಿಧಿಸಿದ್ದಾರೆ. ಈ ಮೂಲಕ

ಟ್ರಂಪ್‌ ಸುಂಕ ಡಬ್ಬಲ್‌ Read More »

ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 68 ಮಂದಿ ಸಾವು

74 ಮಂದಿ ನಾಪತ್ತೆ, 10 ಜನರ ರಕ್ಷಣೆ ಸನಾ: ಯೆಮೆನ್ ಕರಾವಳಿಯಲ್ಲಿ ಭಾನುವಾರ 154 ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 68 ಜನರು ಮೃತಪಟ್ಟಿದ್ದಾರೆ. 74 ಮಂದಿ ನಾಪತ್ತೆಯಾಗಿದ್ದು, 10 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಈಗಲೂ ನಡೆಯುತ್ತಿದೆ. ರಕ್ಷಿಸಲ್ಪಟ್ಟ 10 ಜನರಲ್ಲಿ ಒಂಬತ್ತು ಮಂದಿ ಇಥಿಯೋಪಿಯನ್ ಪ್ರಜೆಗಳು ಮತ್ತು ಒಬ್ಬರು ಯೆಮೆನ್ ಪ್ರಜೆ ಸೇರಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪ್ರಾಂತ್ಯದ ಆರೋಗ್ಯ ಅಧಿಕಾರಿ ಅಬ್ದುಲ್ ಖಾದಿರ್ ಬಜಮೀಲ್ ಹೇಳಿದ್ದಾರೆ. ರಕ್ಷಣಾ ತಂಡಗಳು ನಾಪತ್ತೆಯಾದವರಿಗಾಗಿ ಹುಡುಕಾಟ

ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 68 ಮಂದಿ ಸಾವು Read More »

ಜಗತ್ತಿನ ಅತಿ ದುಬಾರಿ ಉಪಗ್ರಹ ನಿಸಾರ್‌ ಇಂದು ಉಡಾವಣೆ

ಭಾರತ-ಅಮೆರಿಕ ಸಹಭಾಗಿತ್ವದಲ್ಲಿ 13 ಸಾವಿರ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಸೆಟಲೈಟ್‌ ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೊ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಯಾಗಲಿದೆ. ʻನಿಸಾರ್ʼ ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 5.40ಕ್ಕೆ ಇಸ್ರೋದ GSLV-F16 ರಾಕೆಟ್‌ ಬೆನ್ನೇರಿ ಬಾಹ್ಯಾಕಾಶಕ್ಕೆ ತೆರಳಲಿದೆ. ಈ ಉಪಗ್ರಹವು ಶ್ರೀಹರಿಕೋಟದಿಂದ ಉಡಾವಣೆ ಆಗುತ್ತಿರುವ 102ನೇ ಉಪಗ್ರಹವಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪ

ಜಗತ್ತಿನ ಅತಿ ದುಬಾರಿ ಉಪಗ್ರಹ ನಿಸಾರ್‌ ಇಂದು ಉಡಾವಣೆ Read More »

ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ : ಹಲವು ದೇಶಗಳಿಗೆ ಸುನಾಮಿ ಎಚ್ಚರಿಕೆ

ಜಪಾನ್‌ ಕರಾವಳಿ ತೀರಕ್ಕೆ ಅಪ್ಪಳಿಸಿದ 3 ಮೀಟರ್‌ ಎತ್ತರ ಅಲೆಗಳು ಮಾಸ್ಕೊ: ರಷ್ಯಾದ ಕರಾವಳಿ ಪ್ರದೇಶದಲ್ಲಿ ಇಂದು ನಸುಕಿನ ಹೊತ್ತು 8.8 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದ್ದು, ಇದರ ಪರಿಣಾಮವಾಗಿ ಅಮೆರಿಕದ ಅಲಾಸ್ಕಾದ ಭಾಗಗಳು, ಜಪಾನ್‌ ಹಾಗೂ ಶಾಂತಸಾಗರದ ದಡದಲ್ಲಿರುವ ಇತರ ದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ರಷ್ಯಾದ ಪೂರ್ವ ಕಮ್ಚಟ್ಕಾ ದ್ವೀಪದ ಪೆನಿನ್ಸುಲಾದಲ್ಲಿರುವ ಪೆಟ್ರೋಪಾವ್ಲೋವ್ಸಕ್‌ನಿಂದ ಸುಮಾರು 136 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ. 19 ಕಿಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದ್ದು, 4 ಮೀಟರ್

ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ : ಹಲವು ದೇಶಗಳಿಗೆ ಸುನಾಮಿ ಎಚ್ಚರಿಕೆ Read More »

ನಿಮಿಷಾ ಪ್ರಿಯಾ ಮರಣ ದಂಡನೆ ಶಾಶ್ವತವಾಗಿ ರದ್ದು

ಕೊನೆಗೂ ಸಾವಿನ ದವಡೆಯಿಂದ ಪಾರಾದ ಕೇರಳದ ನರ್ಸ್‌ ತಿರುವನಂತಪುರ: ಕೇರಳದ ನರ್ಸ್‌ ನಿಮಿಷಾ ಪ್ರಿಯಾಗೆ ಕೊಲೆ ಪ್ರಕರಣವೊಂದರಲ್ಲಿ ವಿಧಿಸಿದ್ದ ಮರಣ ದಂಡನೆಯನ್ನು ಯೆಮೆನ್‌ ಸರ್ಕಾರ ಸಂಪೂರ್ಣವಾಗಿ ರದ್ದುಪಡಿಸಿದೆ. ಯೆಮೆನ್‌ ಅಧಿಕಾರಿಗಳು ಮರಣ ದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದ್ದಾರೆ ಎಂದು ಗ್ರ್ಯಾಂಡ್‌ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕ್ಕರ್‌ ಮುಸ್ಲಿಯಾರ್‌ ಅವರ ಕಚೇರಿ ಪ್ರಕಟಣೆ ತಿಳಿಸಿದೆ. ಯೆಮೆನ್‌ನ ವ್ಯವಹಾರ ಪಾಲುದಾರನನ್ನು ನಿದ್ದೆಯ ಓವರ್‌ಡೋಸ್‌ ಇಂಜೆಕ್ಷನ್‌ ಚುಚ್ಚಿ ಕೊಲೆ ಮಾಡಿದ ಅಪರಾಧಕ್ಕೆ ನಿಮಿಷಾ ಪ್ರಿಯಾಗೆ ಯೆಮೆನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಪಾಲುದಾರನನ್ನು ಕೊಂದು ಶವವನ್ನು

ನಿಮಿಷಾ ಪ್ರಿಯಾ ಮರಣ ದಂಡನೆ ಶಾಶ್ವತವಾಗಿ ರದ್ದು Read More »

ಶಿವನ ಒಂದು ದೇವಾಲಯಕ್ಕಾಗಿ ಥಾಯ್ಲೆಂಡ್‌-ಕಾಂಬೋಡಿಯ ಮಧ್ಯೆ ಯುದ್ಧ

ಗಡಿಯಲ್ಲಿರುವ ಪುರಾತನ ದೇಗುಲ ಯಾರಿಗೆ ಸೇರಿದ್ದು ಎನ್ನುವುದೇ ವಿವಾದ ಬ್ಯಾಂಕಾಕ್‌: ಒಂದೆಡೆ ರಷ್ಯಾ ಮತ್ತು ಉಕ್ರೇನ್‌ ವರ್ಷಾನುಗಟ್ಟಲೆ ಕಾದಾಡುತ್ತಿವೆ, ಇನ್ನೊಂದೆಡೆ ಇಸ್ರೇಲ್‌ ತನ್ನ ಶತ್ರು ದೇಶಗಳ ಮೇಲೆಲ್ಲ ದಾಳಿ ಮಾಡುತ್ತಿದೆ. ಇದರ ನಡುವೆ ಇಷ್ಟರತನಕ ತಣ್ಣಗೆ ತಮ್ಮ ಪಾಡಿಗೆ ತಾವಿದ್ದ ಥಾಯ್ಲೆಂಡ್ ಮತ್ತು ಕಾಂಬೋಡಿಯ ಮಧ್ಯೆ ಯುದ್ಧ ಶುರುವಾಗಿದೆ. ಎರಡೂ ದೇಶಗಳು ಕ್ಷಿಪಣಿ, ಡ್ರೋನ್‌ ಹಾರಿಸಿಕೊಂಡಿವೆ. ಈಗಾಗಲೇ 13 ಮಂದಿ ಈ ಯುದ್ಧಕ್ಕೆ ಬಲಿಯಾಗಿದ್ದಾರೆ. ಈ ಎರಡು ದೇಶಗಳ ನಡುವೆ ಯುದ್ಧ ನಡೆಯುತ್ತಿರುವುದು ಒಂದು ಪುರಾತನ ಶಿವ

ಶಿವನ ಒಂದು ದೇವಾಲಯಕ್ಕಾಗಿ ಥಾಯ್ಲೆಂಡ್‌-ಕಾಂಬೋಡಿಯ ಮಧ್ಯೆ ಯುದ್ಧ Read More »

error: Content is protected !!
Scroll to Top