ವಿದೇಶ

ಮೋದಿಗೆ ಬೇಡಿ ಹಾಕುವೆ ಎಂದ ಪಾಕ್ ಸೈನ್ಯಾಧಿಕಾರಿಯ ಬಾಯಿಗೆ ಬೀಗ ಜಡಿದ ನೆಟ್ಟಿಗರು!

ಭಾರತ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ನಾಲಿಗೆ ಹರಿಬಿಟ್ಟು ಮಂದಿಯ ಮುಂದೆ ಚಪ್ಪಾಳೆ ಗಿಟ್ಟಿಸಿಕೊಂಡ ಪಾಕಿಸ್ತಾನದ ಸೇನಾಧಿಕಾರಿಯೊಬ್ಬ ಆನ್‌ಲೈನ್‌ನಲ್ಲಿ ಭರ್ಜರಿ ಟ್ರೋಲ್‌ ಆಗುತ್ತಿದ್ದಾನೆ. ಪಾಕಿಸ್ತಾನದ ರಾಜಕಾರಣಿಗಳು ಹಾಗೂ ಕ್ರಿಕೆಟಿಗರು ಭಾರತದ ವಿರುದ್ಧ ಅಬ್ಬರದ ಹೇಳಿಕೆಗಳನ್ನು ನೀಡುವುದು ಸಾಮಾನ್ಯ. ಕಡೆಗೆ ತಮ್ಮ ನಾಲಿಗೆ ತಾವೇ ಕಚ್ಚಿಕೊಳ್ಳುವುದೂ ಸಾಮಾನ್ಯ. ಇದೂ ಕೂಡ ಅಂಥದೇ ಘಟನೆ. ಪಾಕಿಸ್ತಾನ ಸೇನೆಯ ಹಿರಿಯ ಅಧಿಕಾರಿಯೊಬ್ಬ ಒಂದಷ್ಟು ಜನರ ಗುಂಪಿನ ನಡುವೆ “ಭಾರತವನ್ನು ವಶಪಡಿಸಿಕೊಳ್ಳುತ್ತೇವೆ, ಪ್ರಧಾನಿ ನರೇಂದ್ರ ಮೋದಿಯನ್ನು ಬಂಧಿಸುತ್ತೇವೆ ಎಂದೆಲ್ಲಾ ಹೇಳಿದ್ದಾನೆ. […]

ಮೋದಿಗೆ ಬೇಡಿ ಹಾಕುವೆ ಎಂದ ಪಾಕ್ ಸೈನ್ಯಾಧಿಕಾರಿಯ ಬಾಯಿಗೆ ಬೀಗ ಜಡಿದ ನೆಟ್ಟಿಗರು! Read More »

ಹೆಚ್ಚುತ್ತಿದೆ ಭಾರತ – ಪಾಕ್ ಪ್ರೇಮ ಪ್ರಸಂಗ!! | ಕೋಲ್ಕತಾ ನಿವಾಸಿಯನ್ನು ವರಿಸಲು ಬಂದ ಕರಾಚಿಯ ಜವೇರಿಯಾ!

ಚಂಡೀಗಢ: ಭಾರತ-ಪಾಕಿಸ್ಥಾನಗಳ ನಡುವಿನ ಪ್ರೇಮಪ್ರಸಂಗಗಳು ಹೆಚ್ಚುತ್ತಿವೆ. ಕೆಲವು ತಿಂಗಳ ಹಿಂದೆ ಪಾಕಿಸ್ಥಾನಿ ಸೀಮಾ ಹೈದರ್‌ ಭಾರತಕ್ಕೆ ಆಗಮಿಸಿ, ಸಚಿನ್‌ ಮೀನಾರನ್ನು ವಿವಾಹವಾಗಿದ್ದಾರೆ. ಅದರ ಬೆನ್ನಲ್ಲೇ ರಾಜಸ್ಥಾನದ ಅಂಜು ಎಂಬಾಕೆ ಪಾಕಿಸ್ಥಾನಕ್ಕೆ ತೆರಳಿದ್ದರು. ಇದೀಗ ಕರಾಚಿಯ ಜವೇರಿಯಾ ಖಾನುಮ್‌ ವಾಘಾ-ಅಟ್ಟಾರಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಮಂಗಳವಾರ ಭಾರತಕ್ಕೆ ಆಗಮಿಸಿದ್ದಾರೆ. ಅವರ ಉದ್ದೇಶ ಕೋಲ್ಕತಾದಲ್ಲಿರುವ ತಮ್ಮ ಪ್ರಿಯಕರ ಸಮೀರ್‌ ಖಾನ್‌ರನ್ನು ವಿವಾಹವಾಗುವುದು. ಜವೇರಿಯಾರನ್ನು ಅಮೃತಸರ ಜಿಲ್ಲೆಯ ಅಟ್ಟಾರಿಯಲ್ಲಿ ವರನ ಕಡೆಯವರು ಆತ್ಮೀಯವಾಗಿ ಬರಮಾಡಿಕೊಂಡರು. ಮುಂದಿನ ವರ್ಷ ಜನವರಿಯಲ್ಲಿ ಸಮೀರ್‌ ಖಾನ್‌ರೊಂದಿಗೆ

ಹೆಚ್ಚುತ್ತಿದೆ ಭಾರತ – ಪಾಕ್ ಪ್ರೇಮ ಪ್ರಸಂಗ!! | ಕೋಲ್ಕತಾ ನಿವಾಸಿಯನ್ನು ವರಿಸಲು ಬಂದ ಕರಾಚಿಯ ಜವೇರಿಯಾ! Read More »

ಗಾಜಾಗೆ ವಿಶ್ವಸಂಸ್ಥೆಯಿಂದ ರಾಕೆಟ್ ಪೂರೈಕೆ!!! | ಪರಿಹಾರದ ಬಾಕ್ಸ್’ನಲ್ಲಿ ಅಡಗಿಸಿಟ್ಟಿದ್ದ ರಾಕೆಟ್ ಪತ್ತೆ!!

ಗಾಜಾ: ಗಾಜಾಗೆ ವಿಶ್ವಸಂಸ್ಥೆಯ ಪರಿಹಾರ ಕಾರ್ಯಕ್ರಮ ಏಜೆನ್ಸಿಯಿಂದ ಪೂರೈಕೆಯಾಗುತ್ತಿದ್ದ ಬಾಕ್ಸ್ ಗಳಲ್ಲಿ ರಾಕೆಟ್ ಗಳನ್ನು ಅಡಗಿಸಿ ಇಡಲಾಗಿತ್ತು ಎಂದು ಇಸ್ರೇಲಿ ರಕ್ಷಣಾ ಪಡೆಗಳು (ಐಡಿಎಫ್) ಆರೋಪಿಸಿದೆ. ತನ್ನ 261ನೇ ಬ್ರಿಗೇಡ್‌ನ ಯುದ್ಧ ತಂಡದ 7007ನೇ ಬೆಟಾಲಿಯನ್‌ನ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ, ಡಜನ್‌ಗಟ್ಟಲೆ ರಾಕೆಟ್‌ಗಳನ್ನು UNRWA (ಗಾಜಾದಲ್ಲಿ ಯುಎನ್ ರಿಲೀಫ್ ವರ್ಕರ್ಸ್ ಏಜೆನ್ಸಿ) ಪೆಟ್ಟಿಗೆಗಳ ಅಡಿಯಲ್ಲಿ ಪತ್ತೆ ಮಾಡಿದೆ. ಪೆಟ್ಟಿಗೆಗಳ ಅಡಿಯಲ್ಲಿ ಸುಮಾರು 30 ಗ್ರಾಡ್ ಕ್ಷಿಪಣಿಗಳು (ರಷ್ಯನ್ ನಿರ್ಮಿತ ಸ್ವಯಂ ಚಾಲಿತ 122 ಎಂಎಂ ಮಲ್ಟಿಪಲ್ ರಾಕೆಟ್ ಲಾಂಚರ್)

ಗಾಜಾಗೆ ವಿಶ್ವಸಂಸ್ಥೆಯಿಂದ ರಾಕೆಟ್ ಪೂರೈಕೆ!!! | ಪರಿಹಾರದ ಬಾಕ್ಸ್’ನಲ್ಲಿ ಅಡಗಿಸಿಟ್ಟಿದ್ದ ರಾಕೆಟ್ ಪತ್ತೆ!! Read More »

ಲಂಡನ್: ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ಥೇಮ್ಸ್ ನದಿಯಲ್ಲಿ ಪತ್ತೆ!

ಲಂಡನ್: ಕಳೆದ ತಿಂಗಳು ನಾಪತ್ತೆಯಾಗಿದ್ದ ಭಾರತ ಮೂಲದ 23 ವರ್ಷದ ವಿದ್ಯಾರ್ಥಿಯ ಮೃತದೇಹ ಇಲ್ಲಿನ ಥೇಮ್ಸ್ ನದಿಯಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಮಿತ್ಕುಮಾರ್ ಪಟೇಲ್ ಎಂದು ಗುರುತಿಸಲಾಗಿದ್ದು, ಸೆಪ್ಟೆಂಬರ್‌ನಲ್ಲಿ ಉನ್ನತ ವ್ಯಾಸಂಗಕ್ಕಾಗಿ ಲಂಡನ್‌ಗೆ ಬಂದಿದ್ದರು. ನವೆಂಬರ್ 17ರಿಂದ ಆತ ಕಾಣೆಯಾಗಿದ್ದ. ಪೂರ್ವ ಲಂಡನ್‌ನ ಕ್ಯಾನರಿ ವಾರ್ಫ್ ಪ್ರದೇಶದ ಬಳಿಯ ಥೇಮ್ಸ್ ನದಿಯಲ್ಲಿ ಪತ್ತೆಯಾದ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಸಾವು ಸಂಶಯಾಸ್ಪದವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮೆಲ್ಲರಿಗೂ ದುಃಖವಾಯಿತು. ಆದ್ದರಿಂದ, ನಾವು ಅವರ ಕುಟುಂಬಕ್ಕೆ ಸಹಾಯ ಮಾಡಲು ಮತ್ತು

ಲಂಡನ್: ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ಥೇಮ್ಸ್ ನದಿಯಲ್ಲಿ ಪತ್ತೆ! Read More »

ಗಾಜಾದಲ್ಲಿ ಸಾಮೂಹಿಕ ಅಂತ್ಯಕ್ರಿಯೆ!! | ಮೃತಪಟ್ಟವರಲ್ಲಿ 5850 ಮಕ್ಕಳು!!

ಗಾಜಾ: ಅಕ್ಟೋಬರ್ 7ರಿಂದ ನಡೆಯುತ್ತಿರುವ ಇಸ್ರೇಲಿ ಆಕ್ರಮಣದಿಂದ ಗಾಜಾದಲ್ಲಿ ಮೃತಪಟ್ಟವರ ಸಂಖ್ಯೆ 14,854 ಕ್ಕೆ ಏರಿದೆ. ಇದರಲ್ಲಿ 5,850 ಮಕ್ಕಳು ಸೇರಿದ್ದಾರೆ ಎಂದು ಗಾಜಾಪಟ್ಟಿಯಲ್ಲಿರುವ ಹಮಾಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿದೆ. ದಾಳಿಯಲ್ಲಿ ಮೃತಪಟ್ಟವರನ್ನು ಸಾಮೂಹಿಕವಾಗಿ ಅಂತ್ಯಕ್ರಿಯೆ ಮಾಡಲಾಗುತ್ತಿದೆ.  ಇಸ್ರೇಲ್‌ ನಡೆಸುತ್ತಿರುವ ವಾಯು ಮತ್ತು ಭೂ ದಾಳಿಯಿಂದಾಗಿ ಪ್ರಸ್ತುತ ಅಂಕಿಅಂಶಗಳನ್ನು ಪಡೆಯುವುದು ಸವಾಲಿನ ಕೆಲಸವಾಗಿದೆ. ರಮಲ್ಲಾದಲ್ಲಿರುವ ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯ ಸೋಮವಾರ 12,700 ಮಂಗಳವಾರ 13,000ಕ್ಕೂ ಹೆಚ್ಚು ಸಾವು ನೋವುಗಳನ್ನು ವರದಿ ಮಾಡಿತ್ತು. ಗಾಜಾ ಪಟ್ಟಿಯ ಮೂಲಗಳಿಂದ ಡೇಟಾವನ್ನು

ಗಾಜಾದಲ್ಲಿ ಸಾಮೂಹಿಕ ಅಂತ್ಯಕ್ರಿಯೆ!! | ಮೃತಪಟ್ಟವರಲ್ಲಿ 5850 ಮಕ್ಕಳು!! Read More »

ಅಫ್ಘಾನಿನ ದೆಹಲಿ ರಾಯಭಾರ ಕಚೇರಿ ಶಾಶ್ವತ ಬಂದ್: ಗೊಂದಲದಿಂದ ಕೂಡಿದ ಹೇಳಿಕೆ!

ನವದೆಹಲಿ: ತಾಲಿಬಾನ್ ಆಡಳಿತವಿರುವ ಅಫಘಾನಿಸ್ತಾನವು ಭಾರತದಲ್ಲಿರುವ ರಾಯಭಾರ ಕಚೇರಿಯ ಕಾರ್ಯಾಚರಣೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದೆ. ಸೆಪ್ಟೆಂಬರ್‌ 30ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ರಾಯಭಾರ ಕಚೇರಿಯನ್ನು ಈಗ ಶಾಶ್ವತವಾಗಿ ಸ್ಥಗಿತಗೊಳಿಸಿದೆ. ಈ ನಡುವೆ ತಾಲಿಬಾನ್ ನೀಡಿರುವ ಆರೋಪಗಳು, ಅದರ ದ್ವಂದ್ವ ನಿಲುವನ್ನು ಸೂಚಿಸುವಂತಿದೆ. ಮೊದಲು “ಸಾಕಷ್ಟು ಸಿಬ್ಬಂದಿ ಕೊರತೆ ಇದೆ. ಅಲ್ಲದೇ, ರಾಯಭಾರ ಕಚೇರಿ ನಿರ್ವಹಣೆಗೆ ಸಾಕಷ್ಟು ದುಡ್ಡಿಲ್ಲ” ಎಂದು ಹೇಳಿತ್ತು. ಆದರೆ ಈಗ “ಭಾರತ ಸರ್ಕಾರದಿಂದ ಎದುರಾಗುತ್ತಿರುವ ಸವಾಲುಗಳಿಂದಾಗಿ ಸ್ಥಗಿತಗೊಳಿಸಲಾಗುತ್ತಿದೆ” ಎಂದು ಆರೋಪಿಸಿದೆ. ಇದು ಈಗ ಚರ್ಚೆಗೆ ಕಾರಣವಾಗಿದೆ. ಅಫಘಾನಿಸ್ತಾನವು

ಅಫ್ಘಾನಿನ ದೆಹಲಿ ರಾಯಭಾರ ಕಚೇರಿ ಶಾಶ್ವತ ಬಂದ್: ಗೊಂದಲದಿಂದ ಕೂಡಿದ ಹೇಳಿಕೆ! Read More »

ಕೋವಿಡ್ ನಿಯಮ ಕೈಬಿಟ್ಟ ಚೀನಾದಲ್ಲಿ ಹೊಸ ಮಾದರಿ ಜ್ವರ ಪತ್ತೆ!!

ಬೀಜಿಂಗ್: ಚೀನಾದಲ್ಲಿ ಹಲವಾರು ಮಂದಿಗೆ, ಹೆಚ್ಚಾಗಿ ಮಕ್ಕಳಲ್ಲಿ ನಿಗೂಢ ನ್ಯುಮೋನಿಯಾ ಮಾದರಿಯ ಸಮಸ್ಯೆ ಉಂಟಾಗಿರುವುದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಈಗಾಗಲೇ ಚೀನಾದಿಂದ ಈ ಸಂದೇಹಾಸ್ಪದ ಆರೋಗ್ಯ ಸಮಸ್ಯೆಯ ಬಗ್ಗೆ ವರದಿಯನ್ನು ಕೇಳಿದೆ. ವರದಿಗಳ ಪ್ರಕಾರ ಚೀನಾದ ಆಸ್ಪತ್ರೆಗಳು ಶ್ವಾಸಕೋಶದ ಸೋಂಕು ಸಂಬಂಧಿ ಸಮಸ್ಯೆ ಎದುರಿಸುತಿರುವ ಮಕ್ಕಳಿಂದ ತುಂಬಿ ತುಳುಕುತ್ತಿದೆ. ನವೆಂಬರ್‌ 12ರಂದು ನ್ಯಾಷನಲ್‌ ಹೆಲ್ತ್‌ ಕಮಿಷನ್‌ ಅಧಿಕಾರಿಗಳು ಚೀನಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಆರೋಗ್ಯ ಸಮಸ್ಯೆಗೆ ದೇಶದಲ್ಲಿ ಕೋವಿಡ್‌ ನಿರ್ಬಂಧಗಳನ್ನು ಕೈಬಿಟ್ಟರುವುದೇ ಕಾರಣ

ಕೋವಿಡ್ ನಿಯಮ ಕೈಬಿಟ್ಟ ಚೀನಾದಲ್ಲಿ ಹೊಸ ಮಾದರಿ ಜ್ವರ ಪತ್ತೆ!! Read More »

50 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಒಪ್ಪಿಗೆ, 4 ದಿನ ಕದನ ವಿರಾಮ!

ಟೆಲ್‌ ಅವಿವ್‌: ಹಮಾಸ್ ವಶದಲ್ಲಿರುವ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಒಪ್ಪಿಗೆ ನೀಡಿದ್ದು, ಇದಕ್ಕೆ ಪ್ರತಿಯಾಗಿ ಗಾಜಾದಲ್ಲಿ 4 ದಿನಗಳ ಕದನ ವಿರಾಮವನ್ನು ಇಸ್ರೇಲ್‌ ಅನುಮೋದಿಸಿದೆ. ಮಾತುಕತೆಯ ಮಧ್ಯಸ್ಥಿಕೆ ವಹಿಸಿರುವ ಕತಾರ್‌ ಮತ್ತು ಅಮೆರಿಕದ ಅಧಿಕಾರಿಗಳು, ಇಸ್ರೇಲ್ ಮತ್ತು ಹಮಾಸ್‌ ಒಪ್ಪಂದವು ಸನ್ನಿಹಿತವಾಗಿದೆ ಎಂದು ಕೆಲ ದಿನಗಳಿಂದ ಹೇಳುತ್ತಿದ್ದರು. ಈಗ ಅದು ನಿಜವಾಗಿದೆ. ನಾಲ್ಕು ದಿನಗಳಲ್ಲಿ 50 ಮಹಿಳೆಯರು ಮತ್ತು ಮಕ್ಕಳನ್ನು ಬಿಡುಗಡೆ ಮಾಡಲಾಗುತ್ತದೆ. ಈ ಸಮಯದಲ್ಲಿ ಯುದ್ಧ ವಿರಾಮ ನೀಡಲಾಗುವುದು ಎಂದು

50 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಒಪ್ಪಿಗೆ, 4 ದಿನ ಕದನ ವಿರಾಮ! Read More »

ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕ ಸಂಘಟನೆ: ಇಸ್ರೇಲ್‌ ಘೋಷಣೆ

ಮುಂಬೈ ಭಯೋತ್ಪಾದಕ ದಾಳಿ(26/11)ಯ 15ನೇ ವರ್ಷಾಚರಣೆಗೂ ಮುನ್ನವೇ ಮಹತ್ವದ ಬೆಳವಣಿಗೆ ಎಂಬಂತೆ ಪಾಕಿಸ್ತಾನ ಮೂಲದ ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕ ಸಂಘಟನೆ ಎಂದು ಇಸ್ರೇಲ್ ಅಧಿಕೃತವಾಗಿ ಘೋಷಿಸಿದೆ ಎಂದು ವರದಿಯಾಗಿದೆ. ಇದೊಂದು ಮಾರಣಾಂತಿಕ ಹಾಗೂ ಖಂಡನಾರ್ಹ ಭಯೋತ್ಪಾದಕ ಸಂಘಟನೆಯಾಗಿದೆ ಎಂದು ತಿಳಿಸಿರುವ ಇಸ್ರೇಲ್‌, ಲಷ್ಕರ್‌ ಇ ತೊಯ್ಬಾ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಆದರೆ ಈ ಬಗ್ಗೆ ಭಾರತದಿಂದ ಯಾವುದೇ ಮನವಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದೆ. ಭಾರತ ಸರ್ಕಾರ ಯಾವುದೇ ವಿನಂತಿ ಮಾಡದಿದ್ದರೂ

ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕ ಸಂಘಟನೆ: ಇಸ್ರೇಲ್‌ ಘೋಷಣೆ Read More »

ವಿದೇಶದಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಬಿಡುಗಡೆ; ಇಂದು ಮಂಗಳೂರಿಗೆ!

ಕಡಬ: ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ಇಂದು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು ಗಂಟೆ ವೇಳೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ

ವಿದೇಶದಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಬಿಡುಗಡೆ; ಇಂದು ಮಂಗಳೂರಿಗೆ! Read More »

error: Content is protected !!
Scroll to Top