ವಿದೇಶ

ಅಮೇರಿಕ ಅಧ್ಯಕ್ಷ ಸ್ಥಾನ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದ ಘಟನೆ ಪೆನ್ಸಿಲ್ವೇನಿಯಾದಲ್ಲಿ ನಡೆದಿದೆ. ಗುಂಡಿನ ದಾಳಿಯಿಂದಾಗಿ ಟ್ರಂಪ್ ಬಲ ಕಿವಿಗೆ ಗಾಯವಾಗಿದೆ. ಟ್ರಂಪ್‌ ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಕೂಡಲೇ ಭದ್ರತಾ ಸಿಬ್ಬಂದಿ ಶೂಟರ್ ಸೇರಿದಂತೆ ಇಬ್ಬರನ್ನು ಗುಂಡಿಕ್ಕಿ ಸಾಯಿಸಿದ್ದಾರೆ. ಗುಂಡಿನ ದಾಳಿಯ ಬಳಿಕ ಟ್ರಂಪ್ ಮುಖ ರಕ್ತಸಿಕ್ತವಾಗಿತ್ತು. ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಟ್ರಂಪ್‌ ವೇದಿಕೆಯಲ್ಲಿ ಮಾತನಾಡುತ್ತಿದ್ದಾಗ ಗುಂಡಿನ ಸದ್ದು ಕೇಳಿಸಿದೆ. […]

ಅಮೇರಿಕ ಅಧ್ಯಕ್ಷ ಸ್ಥಾನ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಮೇಲೆ ಗುಂಡಿನ ದಾಳಿ Read More »

ಭೂಕುಸಿತದಿಂದ ನೇಪಾಳದಲ್ಲಿ 7 ಭಾರತೀಯರು ನಾಪತ್ತೆ | ಜೀವ ಉಳಿಸಿಕೊಳ್ಳಲು ಬಸ್ಸಿನಿಂದ ಹಾರಿದ ಮೂವರು

ನೇಪಾಳ: ಭಾರೀ ಭೂಕುಸಿತದ ಸಂದರ್ಭದಲ್ಲಿ ಎರಡು ಬಸ್ಸುಗಳು ತ್ರಿಶೂಲಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿ, ಏಳು ಮಂದಿ ಭಾರತೀಯರು ಸೇರಿದಂತೆ 65 ಮಂದಿ ನಾಪತ್ತೆಯಾದ ಘಟನೆ ನೇಪಾಳದ ಚಿತ್ವಾನ್‌ ಎಂಬ ಪ್ರದೇಶದಲ್ಲಿ ನಡೆದಿದೆ. ಏಂಜೆಲ್ ಬಸ್ ಮತ್ತು ಗಣಪತಿ ಡಿಲಕ್ಸ್ ಬಸ್‌ಗಳು ಗೌರ್ ಮಾರ್ಗವಾಗಿ ಕಲ್ಮಂಡುವಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೆಳಿಗ್ಗೆ 3.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ನಾರಾಯಣಘಾಟ್- ಮುಗ್ಗಿಂಗ್ ರಸ್ತೆಯ ಸಿಮಾಲ್‌ಲಾಲ್ ಪ್ರದೇಶದಲ್ಲಿ ತುಂಬಿ ಹರಿಯುತ್ತಿದ್ದ ನದಿಗೆ ಭೂಕುಸಿತದಿಂದಾಗಿ ಪ್ರಯಾಣಿಕರು ತಳ್ಳಲ್ಪಟ್ಟರು ಎನ್ನಲಾಗಿದೆ. ಈ ಪೈಕಿ ಏಳು

ಭೂಕುಸಿತದಿಂದ ನೇಪಾಳದಲ್ಲಿ 7 ಭಾರತೀಯರು ನಾಪತ್ತೆ | ಜೀವ ಉಳಿಸಿಕೊಳ್ಳಲು ಬಸ್ಸಿನಿಂದ ಹಾರಿದ ಮೂವರು Read More »

ಹಳಿ ದಾಟುತ್ತಿದ್ದ ಆನೆಗೆ ರೈಲು ಡಿಕ್ಕಿ | ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣಬಿಟ್ಟ ಆನೆ

ಅಸ್ಸಾಂ: ಹಳಿ ದಾಟುತ್ತಿದ್ದ ಆನೆಯೊಂದಕ್ಕೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಅಸ್ಸಾಂನ ಮೊರಿಗಾಂವ್ ಜಿಲ್ಲೆಯ ಜಾಗಿರೋಡ್ ರೈಲು ನಿಲ್ದಾಣದ ಸಮೀಪದಲ್ಲಿ ನಡೆದಿದೆ. ಆನೆಗೆ ರೈಲು ಡಿಕ್ಕಿಯಾದ ಪರಿಣಾಮ 2 ಕಾಲು ಕಳೆದುಕೊಂಡ ಆನೆ ತೆವಳುತ್ತಾ ಸಾಗಿ ಪ್ರಾಣಬಿಟ್ಟಿದೆ. ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ವೇಗವಾಗಿ ತೆರಳುತ್ತಿದ್ದ ವೇಳೆ ಎರಡು ಆನೆಗಳು ಹಳಿ ದಾಟುತ್ತಿತ್ತು. ಒಂದು ಆನೆ ಕೂದಲೆಳೆಯುವ ಅಂತರದಲ್ಲಿ ಹಳಿ ದಾಟಿದರೆ ಅದರ ಹಿಂದಿದ್ದ ಈ ಆನೆಗೆ ರೈಲು ಡಿಕ್ಕಿಯಾಗಿದೆ. ರೈಲು ಡಿಕ್ಕಿಯಾದ ಪರಿಣಾಮ ಆನೆ ಗಂಭೀರವಾಗಿ ಗಾಯಗೊಂಡಿದೆ.

ಹಳಿ ದಾಟುತ್ತಿದ್ದ ಆನೆಗೆ ರೈಲು ಡಿಕ್ಕಿ | ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣಬಿಟ್ಟ ಆನೆ Read More »

6 ದಿನ ಸೋಶಿಯಲ್ ಮೀಡಿಯಾ ನಿಷೇಧ

ಪಾಕಿಸ್ತಾನ: 6 ದಿನಗಳ ಕಾಲ ವ್ಯಾಟ್ಸ್‌ಆ್ಯಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್ ಸೇರಿದಂತೆ ಎಲ್ಲಾ ಸೋಶಿಯಲ್ ಮೀಡಿಯಾ ಬಳಕೆಯನ್ನು ನಿಷೇಧಿಸಲಾಗಿದೆ. ಕಳೆದ ನಾಲ್ಕು ತಿಂಗಳಿಂದ ಎಕ್ಸ್ ನಿಷೇಧಿಸಿರುವ ಪಾಕಿಸ್ತಾನ ಇದೀಗ ಫೇಸ್‌ಬುಕ್, ವ್ಯಾಟ್ಸಾಪ್, ಇನ್‌ಸ್ಟಾಗ್ರಾಂ, ಟಿಕ್‌ಟಾಕ್, ಯೂಟ್ಯೂಬ್ ಸೇರಿದಂತೆ ಎಲ್ಲಾ ಸೋಶಿಯಲ್ ಮೀಡಿಯಾ ಮುಂದಿನ 6 ದಿನ ಸಂಪೂರ್ಣ ಬಂದ್ ಮಾಡಲಾಗಿದೆ. ಜುಲೈ 13ರಿಂದ 18ರ ವರೆಗೆ ಪಾಕಿಸ್ತಾನದಲ್ಲಿ ಸೋಶಿಯಲ್ ಮೀಡಿಯಾಗೆ ನಿರ್ಬಂಧ ವಿಧಿಸಲಾಗಿದೆ. ರಂಜಾನ್‌ ತಿಂಗಳಲ್ಲಿ ದ್ವೇಷಕಾರ ಮಾಹಿತಿಗಳು, ವಿಡಿಯೋ, ಫೋಟೋಗಳು, ಸಂದೇಶ ಹರಡದಂತೆ ತಡೆಯಲು ಪಾಕಿಸ್ತಾನ

6 ದಿನ ಸೋಶಿಯಲ್ ಮೀಡಿಯಾ ನಿಷೇಧ Read More »

ವಿಶ್ವಸುಂದರಿ ಪಟ್ಟ ಪಡೆದ ಕನ್ನಡತಿ | ಅಮೇರಿಕಾದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಶೃತಿ ಹೆಗಡೆ

ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ವಿಜೇತರಾಗಿದ್ದಾರೆ. ಮುಂಡಿಗೆಸರ ಅಷ್ಟೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ, ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ಚರ್ಮ ರೋಗ ತಜ್ಞೆಯಾಗಿ ಎಂ.ಡಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ವೈದ್ಯೆಯಾಗಿದ್ದರು ಈಕೆ ಭರತನಾಟ್ಯ ಕಲಾವಿದೆಯಾಗಿ, ದುಬೈ, ಮಾಲ್ಮೀಮ್ಸ್, ಭೂತಾನ್ ಸೇರಿದಂತೆ ಅನೇಕ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಈಗಾಗಲೇ ಕೆಲವು ಕನ್ನಡ ಧಾರಾವಾಹಿ, ಕನ್ನಡ

ವಿಶ್ವಸುಂದರಿ ಪಟ್ಟ ಪಡೆದ ಕನ್ನಡತಿ | ಅಮೇರಿಕಾದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಶೃತಿ ಹೆಗಡೆ Read More »

ಮೂಲ ಸೌಕರ್ಯ ಕೊರತೆ, ವಿಪರೀತ‌ ಸೆಖೆ  l  1300 ಹಜ್ ಯಾತ್ರಿಕರು ಮೃತ್ಯು

ಸೌದಿ ಅರೇಬಿಯಾ: ತೀವ್ರವಾದ ತಾಪಮಾನದ ಕಾರಣ 1,300 ಕ್ಕೂ ಹೆಚ್ಚು ಹಜ್ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹೆಚ್ಚಿನವರು ಅಧಿಕೃತ ಪರವಾನಗಿಗಳನ್ನು ಹೊಂದಿರಲಿಲ್ಲ ಎಂದು ಸೌದಿ ಅರೇಬಿಯಾ ಭಾನುವಾರ ಹೇಳಿದೆ. ಪ್ರತಿ ವರ್ಷದಂತೆ ಈ ವರ್ಷವೂ ಅಮೆರಿಕ, ಇಂಡೋನೇಷ್ಯಾ, ಭಾರತ ಸೇರಿದಂತೆ 10ಕ್ಕೂ ಹೆಚ್ಚು ರಾಷ್ಟ್ರಗಳಿಂದ ಸುಮಾರು 16 ಲಕ್ಷ ಯಾತ್ರಿಕರು ಹಜ್ ಯಾತ್ರೆಗೈದಿದ್ದರು. ಮಿತಿಮೀರಿದ ತಾಪಮಾನ ಏರಿಕೆಯಿಂದ 1,301 ಮಂದಿ ಯಾತ್ರಿಕರು ಮೃತಪಟ್ಟಿದ್ದಾರೆ. ಸುಮಾರು 3000 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರ ಪೈಕಿ ಶೇ.83 ಮಂದಿ

ಮೂಲ ಸೌಕರ್ಯ ಕೊರತೆ, ವಿಪರೀತ‌ ಸೆಖೆ  l  1300 ಹಜ್ ಯಾತ್ರಿಕರು ಮೃತ್ಯು Read More »

ಇಂದು ಜಗತ್ತು ನೋಡಲಿದೆ ಸ್ಟ್ರಾಬೆರಿ ಬಣ್ಣದ ಚಂದ್ರನನ್ನು | ಇಂದು ವಿಶ್ವದ ಅತ್ಯಂತ ವಿಶೇಷ ದಿನ

ಜೂನ್ 21 ವಿಶ್ವದ ಅತ್ಯಂತ ವಿಶೇಷ ದಿನವೆಂದು ಈಗಾಗಲೇ ಸಾಬೀತಾಗಿದೆ. ಇದಕ್ಕೆ ರಾತ್ರಿ ವೇಳೆ ಆಕಾಶದಲ್ಲಿ ಅಪರೂಪದ ದೃಶ್ಯ ಗೋಚರಿಸುವುದೇ ಕಾರಣವಾಗಿದೆ. ಅದರಂತೆ ಇಂದು ಚಂದ್ರ ಸ್ಟ್ರಾಬೆರಿ ಬಣ್ಣದಲ್ಲಿ ಕಾಣಿಸಿಕೊಳ್ಳಲಿದ್ದಾನೆ. ಜ್ಯೋತಿಷ್ಯ ಮತ್ತು ಖಗೋಳಶಾಸ್ತ್ರದ ಪ್ರಕಾರ ಈ ದಿನಾಂಕದಂದು ಹಗಲು ದೀರ್ಘವಾಗಿರುತ್ತದೆ. ಈ ದಿನ ಜಗತ್ತು ರಾತ್ರಿ ಆಕಾಶದಲ್ಲಿ ಸ್ಟ್ರಾಬೆರಿ ಚಂದ್ರನನ್ನ ನೋಡುತ್ತದೆ. ಚಂದ್ರನು ತಿಳಿ ಗುಲಾಬಿ ಬಣ್ಣದಲ್ಲಿರುತ್ತಾನೆ ಮತ್ತು ಈ ದಿನದಂದು ಯುರೋಪ್ ಮತ್ತು ಅಮೇರಿಕಾದಲ್ಲಿ ಬೇಸಿಗೆ ಕಾಲ ಪ್ರಾರಂಭವಾಗುತ್ತದೆ. ಯುರೋಪ್ ಖಂಡದ ಉತ್ತರದ ದೇಶಗಳಲ್ಲಿ

ಇಂದು ಜಗತ್ತು ನೋಡಲಿದೆ ಸ್ಟ್ರಾಬೆರಿ ಬಣ್ಣದ ಚಂದ್ರನನ್ನು | ಇಂದು ವಿಶ್ವದ ಅತ್ಯಂತ ವಿಶೇಷ ದಿನ Read More »

ಹಿಜಾಬ್ ನಿಷೇಧಿಸಿದ ಮುಸ್ಲಿಂ ರಾಷ್ಟ್ರ ತಜಕಿಸ್ಥಾನ

ಭಾರತದಲ್ಲಿ ಒಂದು ಸಮುದಾಯದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಹೋರಾಟ ಮಾಡುತ್ತಿದ್ದಾರೆ ಆದರೆ ಪೂರ್ಣ ಮುಸ್ಲಿಂ ರಾಷ್ಟ್ರವಾಗಿರುವ ತಜಕಿಸ್ಥಾನ ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ನಿಷೇಧಿಸಲು ಆದೇಶ ಹೊರಡಿಸಿದೆ. ತಜಕಿಸ್ಥಾನ ಮುಸ್ಲಿಂ ರಾಷ್ಟ್ರವಾಗಿದ್ದರೂ ಸಾಂವಿಧಾನಿಕವಾಗಿ ಜಾತ್ಯಾತೀತ ರಾಷ್ಟ್ರವಾಗಿದೆ. ಇಲ್ಲಿನ ಸಂಸತ್ ಹಿಜಾಬ್ ಅನ್ನು ನಿಷೇಧಿಸುವ ಮಸೂದೆಯನ್ನು ಅನುಮೋದಿಸಿದೆ. ಶಾಲೆಗಳಲ್ಲಿ ಮಾತ್ರವಲ್ಲ ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲೂ ಹಿಜಾಬ್‌ ಧರಿಸುವುದನ್ನು ನಿಷೇಧಿಸಲಾಗಿದೆ. ಗಡ್ಡ ಬೆಳೆಸುವುದನ್ನೂ ಕೂಡ ತಜಿಕಿಸ್ಥಾನದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ದೇಶದಲ್ಲಿ ಶೇ. 95ರಷ್ಟು ಮುಸ್ಲಿಂ ಜನರಿದ್ದಾರೆ, ಆದರೆ

ಹಿಜಾಬ್ ನಿಷೇಧಿಸಿದ ಮುಸ್ಲಿಂ ರಾಷ್ಟ್ರ ತಜಕಿಸ್ಥಾನ Read More »

ಹಜ್ ಯಾತ್ರೆ ಸಂದರ್ಭ ಭಾರೀ ದುರಂತ l 550 ಮಂದಿ ಮೃತ್ಯು, 2 ಸಾವಿರಕ್ಕೂ ಅಧಿಕ ಮಂದಿ ಅಸ್ವಸ್ಥ

ಹಜ್ ಯಾತ್ರೆಗೆ ಹೋಗಿದ್ದ ವಿವಿಧ ದೇಶಗಳ 550 ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಉಷ್ಣಾಂಶ ಏರಿಕೆಯಿಂದ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಮೆಕ್ಕಾದ ರಸ್ತೆ ಬೀದಿಯಲ್ಲಿ ಯಾತ್ರಾರ್ಥಿಗಳು ಅಸ್ವಸ್ಥರಾಗಿ ಮಲಗಿದ್ದಾರೆ. ಯಾತ್ರೆಯಲ್ಲಿ ಉಸಿರು ಬಿಟ್ಟ ಯಾತ್ರಾರ್ಥಿಗಳ ಶವಗಳನ್ನು ವಿಲೇವಾರಿ ಮಾಡಿಲ್ಲ ಅನ್ನೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಮೆಕ್ಕಾದಲ್ಲಿ ಕಳೆದ ವರ್ಷ 240 ಮಂದಿ ಸಾವನ್ನಪ್ಪಿದ್ದರು. ಈ ಬಾರಿ ಈಜಿಪ್ಟ್ ದೇಶದ 323 ಮಂದಿ, ಜೋರ್ಡಾನ್ ದೇಶದ 60 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೆಕ್ಕಾದಲ್ಲಿ ವರ್ಷದಿಂದ ವರ್ಷಕ್ಕೆ ಉಷ್ಣಾಂಶ

ಹಜ್ ಯಾತ್ರೆ ಸಂದರ್ಭ ಭಾರೀ ದುರಂತ l 550 ಮಂದಿ ಮೃತ್ಯು, 2 ಸಾವಿರಕ್ಕೂ ಅಧಿಕ ಮಂದಿ ಅಸ್ವಸ್ಥ Read More »

ಗೂಗಲ್‌ ಕ್ಲೌಡ್ ಸಂಸ್ಥೆಯ ಉಪಾಧ್ಯಕ್ಷರಾಗಿ ರಾಜ್‌ ಪೈ ನೇಮಕ

ಮಣಿಪಾಲ : ಪೈ ಕುಟುಂಬದ ಸದಸ್ಯ ರಾಜ್‌ ಪೈ (ರಜನೇಶ್‌ ಪೈ) ಅವರು ಅಮೆರಿಕದ  ಗೂಗಲ್‌ ಕ್ಲೌಡ್ ಸಂಸ್ಥೆಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ರಾಜ್‌ ಪೈ ಅವರು ಕ್ಲೌಡ್ ಕೃತಕ ಬುದ್ಧಿ ಮತ್ತು  ತಂಡದ ನಿರ್ವಹಣೆಯನ್ನು ನೋಡಿಕೊಳ್ಳುವವರು ಆಗಿದ್ದರು. ಗೂಗಲ್‌ ಸಂಸ್ಥೆ ಕ್ಲೌಡ್ ವ್ಯವಹಾರಕ್ಕೆ ಪ್ರಾಶಸ್ತ್ಯ ನೀಡ ಬಯಸಿರುವುದು ಈ ನೇಮಕಾತಿಯ ಸಂಕೇತವಾಗಿದೆ. ಪೈಯವರು ಅಮೆಜಾನ್‌, ಸಿಯಾಟಲ್‌ನಿಂದ ಈ ಹುದ್ದೆಗೆ ಬಂದಿದ್ದಾರೆ. ಅವರು ಅಮೆಜಾನ್‌ ಎಡಬ್ಲ್ಯುಎಸ್‌ ಉಪಾಧ್ಯಕ್ಷರಾಗಿದ್ದರು. ಅಮೆಜಾನ್‌ ಸಂಸ್ಥೆಯಲ್ಲಿ ಆರಂಭದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಹಿಂದೆ ಮೈಕ್ರೋಸಾಫ್ಟ್,

ಗೂಗಲ್‌ ಕ್ಲೌಡ್ ಸಂಸ್ಥೆಯ ಉಪಾಧ್ಯಕ್ಷರಾಗಿ ರಾಜ್‌ ಪೈ ನೇಮಕ Read More »

error: Content is protected !!
Scroll to Top