ವಿದೇಶ

ಮಾಲ್‌ನಲ್ಲಿ ಅಗ್ನಿ ಅವಘಡ : ಒಂದೇ ಮಳಿಗೆಯೊಳಗೆ 30 ಮೃತದೇಹ ಪತ್ತೆ

ಭೀಕರ ಬೆಂಕಿ ದುರಂತದಲ್ಲಿ 100ಕ್ಕೂ ಅಧಿಕ ಜನರು ಸಾವಿಗೀಡಾಗಿರುವ ಶಂಕೆ ಇಸ್ಲಾಮಾಬಾದ್‌: ಕರಾಚಿಯ ಭೂಗತ ಜಗತ್ತಿನ ಪಾತಕಿ ದಾವೂದ್‌ ಇಬ್ರಾಹಿಂ ಒಡೆತನದ ಗುಲ್ ಪ್ಲಾಜಾ ಶಾಪಿಂಗ್‌ ಮಾಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಪರಿಶೀಲನೆ ವೇಳೆ ಒಂದೇ ಮಳಿಗೆಯಲ್ಲಿ 30 ಶವಗಳು ಪತ್ತೆಯಾಗಿದ್ದು, ಒಟ್ಟು ಸಾವು 100 ಮೀರಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಪಾಕಿಸ್ತಾನದ ʻಮನಿ ಕ್ಯಾಪಿಟಲ್‌ʼ ಅಂತಲೇ ಫೇಮಸ್‌ ಆಗಿರುವ ಕರಾಚಿ ಸದರ್‌ ಪ್ರದೇಶದಲ್ಲಿರುವ ಗುಲ್‌ ಶಾಪಿಂಗ್‌ ಮಾಲ್‌ನ ನೆಲಮಾಳಿಗೆಯಲ್ಲಿ ಜ.17 […]

ಮಾಲ್‌ನಲ್ಲಿ ಅಗ್ನಿ ಅವಘಡ : ಒಂದೇ ಮಳಿಗೆಯೊಳಗೆ 30 ಮೃತದೇಹ ಪತ್ತೆ Read More »

ಹೈಸ್ಪೀಡ್‌ ರೈಲುಗಳ ನಡುವೆ ಡಿಕ್ಕಿ : 21 ಪ್ರಯಾಣಿಕರು ಸಾವು

ಹಳಿತಪ್ಪಿ ಇನ್ನೊಂದು ಹಳಿಗೆ ಜಿಗಿದಾಗ ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಮ್ಯಾಡ್ರಿಡ್‌ : ಸ್ಪೇನ್ ದೇಶದ ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ತೆರಳುತ್ತಿದ್ದ ಪ್ರಯಾಣಿಕ ರೈಲೊಂದು ಆಡಮುಜ್ ಬಳಿ ಹಳಿತಪ್ಪಿ, ಇನ್ನೊಂದು ಟ್ರ್ಯಾಕ್‌ಗೆ ಜಿಗಿದು ಎದುರುನಿಂದ ಬರುತ್ತಿದ್ದ ರೈಲಿಗೆ ಅಪ್ಪಳಿಸಿದೆ ಎಂದು ಸ್ಪೇನ್‌ನ ಅದಿಪ್ ರೈಲು ನೆಟ್ ವಾರ್ಕ್ ಆಪರೇಟರ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ

ಹೈಸ್ಪೀಡ್‌ ರೈಲುಗಳ ನಡುವೆ ಡಿಕ್ಕಿ : 21 ಪ್ರಯಾಣಿಕರು ಸಾವು Read More »

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದೂ ವ್ಯಕ್ತಿಯ ಹತ್ಯೆ

ರಿಕ್ಷಾ ಚಾಲಕನನ್ನು ಕೊಂದು ಹೊಲದಲ್ಲಿ ಎಸೆದ ದುಷ್ಕರ್ಮಿಗಳು ಢಾಕಾ : ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯಾ ಸರಣಿ ಮುಂದುವರಿದಿದೆ. ದಕ್ಷಿಣ ಬಾಂಗ್ಲಾದ ಫೆನಿ ಜಿಲ್ಲೆಯ ಧಗನ್​ಭುಯಾನ್​ನಲ್ಲಿ ಅಪರಿಚಿತ ದುಷ್ಕರ್ಮಿಗಳು 28 ವರ್ಷದ ಆಟೋ ಚಾಲಕನನ್ನು ಇರಿದು ಹತ್ಯೆ ಮಾಡಿದ್ದಾರೆ. ಸಮೀರ್ ಕುಮಾರ್ ದಾಸ್ ಮೃತ ವ್ಯಕ್ತಿ. ಆಟೋ ಚಾಲಕನನ್ನು ಕೊಂದು ಆಟೋವನ್ನು ಕೂಡ ಕಳವು ಮಾಡಲಾಗಿದೆ. ಕುಟುಂಬದವರ ಪ್ರಕಾರ, ಸಮೀರ್ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಆಟೋರಿಕ್ಷಾದಲ್ಲಿ ಮನೆಯಿಂದ ಹೊರಟಿದ್ದರು, ತಡರಾತ್ರಿಯಾದರೂ ಅವನು ಹಿಂತಿರುಗದಿದ್ದಾಗ, ಕುಟುಂಬದವರು ಅವರನ್ನು

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದೂ ವ್ಯಕ್ತಿಯ ಹತ್ಯೆ Read More »

ಇರಾನ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ : 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ

ಸರ್ವಾಧಿಕಾರಿ ಖಮೇನಿ ವಿರುದ್ಧ ಭುಗಿಲೆದ್ದ ಆಕ್ರೋಶ ; ಮುಲ್ಲಾಗಳು ದೇಶಬಿಟ್ಟು ಹೋಗಲು ಒತ್ತಾಯ ಟೆಹ್ರಾನ್‌: ಇರಾನ್‌ನಲ್ಲಿ ಮುಲ್ಲಾಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಇನ್ನಷ್ಟು ಜೋರಾಗಿದೆ. ಹಣದುಬ್ಬರ, ಬೆಲೆ ಏರಿಕೆ ವಿರುದ್ಧ ಸಣ್ಣಮಟ್ಟದಲ್ಲಿ ಆರಂಭವಾದ ಪ್ರತಿಭಟನೆ ತೀವ್ರಗೊಂಡಿದ್ದು, ಇರಾನ್‌ ಜನರು ಈಗ ಮಸೀದಿಗೆ ಬೆಂಕಿ ಹಾಕುತ್ತಿದ್ದಾರೆ. ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಖಮೇನಿ ಆಡಳಿತದ ವಿರುದ್ಧ ತಿರುಗಿ ಬಿದ್ದ ಪ್ರತಿಭಟನಕಾರರು ಸುಮಾರು 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ ಹಚ್ಚಿದ್ದಾರೆ. ಇಷ್ಟರ ತನಕ ಪ್ರತಿಭಟನೆಗೆ 650ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ.

ಇರಾನ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ : 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ Read More »

ಇರಾನ್‌ನಲ್ಲಿ ನಾಗರಿಕ ದಂಗೆ : 200ಕ್ಕೂ ಹೆಚ್ಚು ಮಂದಿ ಸಾವು

ಪ್ರತಿಭಟನೆಯನ್ನು ನಿರ್ದಯವಾಗಿ ದಮನಿಸುತ್ತಿರುವ ಇರಾನ್‌ ಸರ್ಕಾರ ಟೆಹ್ರಾನ್‌: ಇರಾನ್‌ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ 13 ದಿನಕ್ಕೆ ಕಾಲಿಟ್ಟಿದ್ದು, ಹಿಂಸಾಚಾರ ಮತ್ತಷ್ಟು ಹೆಚ್ಚಿದೆ. ಸರ್ಕಾರದ ಸೂಚನೆ ಮೇರೆಗೆ ಭದ್ರತಾ ಪಡೆಗಳು ಹಲವು ಸ್ಥಳಗಳಲ್ಲಿ ಗುಂಡು ಹಾರಿಸಿದ್ದು, 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ವೈದ್ಯರ ಮಾಹಿತಿ ಪ್ರಕಾರ, ರಾಜಧಾನಿ ಟೆಹ್ರಾನ್‌ನಲ್ಲಿರುವ 6 ಆಸ್ಪತ್ರೆಗಳಲ್ಲಿ ಕನಿಷ್ಠ 217 ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಈ ಪೈಕಿ ಹೆಚ್ಚಿನವರು ಗುಂಡಿನ ದಾಳಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಟೆಹ್ರಾನ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಯುವ

ಇರಾನ್‌ನಲ್ಲಿ ನಾಗರಿಕ ದಂಗೆ : 200ಕ್ಕೂ ಹೆಚ್ಚು ಮಂದಿ ಸಾವು Read More »

ಇಸ್ರೇಲ್‌ ಪ್ರಧಾನಿಯನ್ನು ಅಪಹರಿಸಲು ಅಮೆರಿಕಕ್ಕೆ ಪಾಕಿಸ್ತಾನ ಒತ್ತಾಯ

ಬೆಂಜಮಿನ್‌ ನೆತನ್ಯಾಹು ಅವರನ್ನು ಕಿಡ್ನಾಪ್‌ ಮಾಡಿ ಎಂದು ಆಗ್ರಹ ಇಸ್ಲಾಮಾಬಾದ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಅಪಹರಿಸಬೇಕು ಎಂಬ ವಿಚಿತ್ರ ಬೇಡಿಕೆಯೊಂದನ್ನು ಅಮೆರಿಕ ಮತ್ತು ಟರ್ಕಿಯ ಮುಂದೆ ಪಾಕಿಸ್ಥಾನ ಇಟ್ಟಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅಮೆರಿಕ ಹಾಗೂ ಟರ್ಕಿಗೆ ಈ ಒತ್ತಾಯ ಮಾಡಿದ್ದಾರೆ. ಪಾಕಿಸ್ತಾನದ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಖವಾಜಾ ಆಸಿಫ್, ವೆನೆಜುವೆಲಾ ಅಧ್ಯಕ್ಷರನ್ನು ಅಮೆರಿಕ ಅಪಹರಿಸಿದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನೂ ಅಪಹರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಬೆಂಜಮಿನ್ ನೆತನ್ಯಾಹು

ಇಸ್ರೇಲ್‌ ಪ್ರಧಾನಿಯನ್ನು ಅಪಹರಿಸಲು ಅಮೆರಿಕಕ್ಕೆ ಪಾಕಿಸ್ತಾನ ಒತ್ತಾಯ Read More »

ಭಾರತದ ಮೇಲೆ ಶೇ.500 ಸುಂಕ ವಿಧಿಸಲು ಮುಂದಾದ ಟ್ರಂಪ್‌

ಮಸೂದೆ ಮಂಜೂರಾದರೆ ಭಾರತ ಸಹಿತ ಹಲವು ದೇಶಗಳ ಮೇಲೆ ಗದಾ ಪ್ರಹಾರ ವಾಷಿಂಗ್ಟನ್‌: ಯಾವ ಸುಂಕ ಬೆದರಿಕೆಗೂ ಬಗ್ಗದ ಭಾರತದ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಗದಾ ಪ್ರಹಾರವನ್ನೇ ಮಾಡಲು ಮುಂದಾಗಿದ್ದಾರೆ. ಭಾರತದ ಮೇಲೆ 500% ಸುಂಕ ವಿಧಿಸಲು ಅಧಿಕಾರ ನೀಡುವ ಮಸೂದೆಗೆ ಅಮೆರಿಕದ ಡೊನಾಲ್ಡ್‌ ಟ್ರಂಪ್‌ ಅನುಮತಿ ನೀಡಿದ್ದಾರೆ. ಇದು ಜಾರಿಗೆ ಬಂದರೆ ಅಮೆರಿಕ ಜೊತೆಗಿನ ಎಲ್ಲ ವಾಣಿಜ್ಯ ಸಂಬಂಧಗಳು ಬಹುತೇಕ ನಿಂತ ಹಾಗೇ ಎನ್ನಲಾಗುತ್ತಿದೆ. ಈ ಮಸೂದೆ ಸೆನೆಟ್‌ನಲ್ಲಿ ಅಂಗೀಕಾರವಾದರೆ ರಷ್ಯಾದ

ಭಾರತದ ಮೇಲೆ ಶೇ.500 ಸುಂಕ ವಿಧಿಸಲು ಮುಂದಾದ ಟ್ರಂಪ್‌ Read More »

ವೆನೆಜುವೆಲಾ ಮೇಲೆ ಮತ್ತೆ ಅಮೆರಿಕ ಪ್ರಹಾರ : ರಷ್ಯಾ ಧ್ವಜವಿದ್ದ ತೈಲ ಟ್ಯಾಂಕರ್‌ ವಶ

ವೆನೆಜುವೆಲಾ ತೈಲ ಮಾರಾಟ ಮಾಡದಂತೆ ದಿಗ್ಬಂಧನ ವಿಧಿಸಿರುವ ಅಮೆರಿಕ ಮಾಸ್ಕೊ: ವೆನೆಜುವೆಲಾ ಮೇಲೆ ದಾಳಿ ಮಾಡಿ ಅದರ ಅಧ್ಯಕ್ಷ ಮಡುರೋ ಅವರನ್ನು ಎತ್ತಾಕಿಕೊಂಡು ಹೋಗಿರುವ ಅಮೆರಿಕ ಇದೀಗ ಮತ್ತೊಂದು ಸುತ್ತಿನ ದಾಳಿ ಮಾಡಿದ್ದು, ಈ ಬಾರಿ ಆ ದೇಶಕ್ಕೆ ಸಂಬಂಧಿಸಿದ ತೈಲ ಹಡಗನ್ನು ವಶಕ್ಕೆ ಪಡೆದಿದೆ. ವೆನೆಜುವೆಲಾಗೆ ಸಂಬಂಧಿಸಿದ ನಿಷೇಧಿತ ತೈಲ ಟ್ಯಾಂಕರ್‌ Bella 1ನ್ನು ಉತ್ತರ ಅಟ್ಲಾಂಟಿಕಾದಲ್ಲಿ ಅಮೆರಿಕ ಸೇನೆ ವಶಪಡಿಸಿಕೊಂಡಿದೆ. ವೆನೆಜುವೆಲಾದ ಸುತ್ತ ಅಮೆರಿಕ ಹಾಕಿದ್ದ ನೌಕಾ ದಿಗ್ಬಂಧನವನ್ನು ದಾಟಲು ಯತ್ನಿಸಿದ್ದ ಆ ತೈಲ

ವೆನೆಜುವೆಲಾ ಮೇಲೆ ಮತ್ತೆ ಅಮೆರಿಕ ಪ್ರಹಾರ : ರಷ್ಯಾ ಧ್ವಜವಿದ್ದ ತೈಲ ಟ್ಯಾಂಕರ್‌ ವಶ Read More »

ಬಾಂಗ್ಲಾದೇಶದ ಜೊತೆಗಿನ ಬಿಕ್ಕಟ್ಟಿನ ನಡುವೆಯೂ ಮಾನವೀಯತೆ ಮೆರೆದ ಭಾರತ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿದ್ದರೂ, ಉಭಯ ರಾಷ್ಟ್ರಗಳ ನಡುವೆ ಬಿಗುವಿನ ‌ಸ್ಥಿತಿ ನಿರ್ಮಾಣವಾಗಿದ್ದರೂ ಮಾನವೀಯ ನೆಲೆಯಲ್ಲಿ ಮಹತ್ವದ ಕೆಲಸವೊಂದನ್ನು ಮಾಡುವ ಮೂಲಕ ಭಾರತ ಉದಾರತೆ ಮೆರೆದಿದೆ. ಪಶ್ಚಿಮ ಬಂಗಾಳದ ಯುವತಿಯೊಬ್ಬರು ಬಾಂಗ್ಲಾದೇಶದ ವ್ಯಕ್ತಿಯನ್ನು ಮದುವೆಯಾಗಿದ್ದು, ಆ ಮಹಿಳೆಯ ತಂದೆ ಮೃತಪಟ್ಟಿದ್ದಾರೆ. ಆದರೆ ಬಾಂಗ್ಲಾದೇಶದವರಿಗೆ ಭಾರತಕ್ಕೆ ಬರಲು ಅವಕಾಶ ಇಲ್ಲದಿದ್ದರೂ ಆ ಮಹಿಳೆಗೆ ತಂದೆಗೆ ಅಂತಿಮ ವಿದಾಯ ಸಲ್ಲಿಸುವ ನಿಟ್ಟಿನಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಅವಕಾಶವನ್ನು ಬಿಎಸ್‌ಎಫ್ ‌ಮಾಡಿಕೊಡುವ ಮೂಲಕ ಉದಾರತೆ ಮೆರೆದಿದೆ. ಪಶ್ಚಿಮಬಂಗಾಳದ ನಾಡಿಯಾ ಜಿಲ್ಲೆಯ ಚಾಪ್ರಾ

ಬಾಂಗ್ಲಾದೇಶದ ಜೊತೆಗಿನ ಬಿಕ್ಕಟ್ಟಿನ ನಡುವೆಯೂ ಮಾನವೀಯತೆ ಮೆರೆದ ಭಾರತ Read More »

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದು ವ್ಯಕ್ತಿಯ ಹತ್ಯೆ : ಮುಂದುವರಿದ ಕೊಲೆಗಳ ಸರಣಿ

24 ತಾಸುಗಳಲ್ಲಿ ಮೂವರು ಹಿಂದೂಗಳ ಮರ್ಡರ್‌ ಢಾಕಾ: ಬಾಂಗ್ಲಾದೇಶದಲ್ಲಿ ದಿನಸಿ ಅಂಗಡಿಯ ಮಾಲೀಕನಾಗಿದ್ದ ಹಿಂದೂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಇದು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಮೂರನೇ ಘಟನೆಯಾಗಿದೆ. ಹತ್ಯೆಯಾದವರನ್ನು ಮೋನಿ ಚಕ್ರವರ್ತಿ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನರಸಿಂಗ್ಡಿ ಜಿಲ್ಲೆಯಲ್ಲಿ ಅವರ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಸಾವನ್ನಪ್ಪಿದ್ದಾರೆ. ಈ ಘಟನೆಗೂ ಕೆಲವು ಗಂಟೆಗಳ ಮೊದಲು, ಜಶೋರ್ ಜಿಲ್ಲೆಯಲ್ಲಿ ಕಾರ್ಖಾನೆ ಮಾಲೀಕರು ಹಾಗೂ ಪತ್ರಿಕೆಯೊಂದರ

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದು ವ್ಯಕ್ತಿಯ ಹತ್ಯೆ : ಮುಂದುವರಿದ ಕೊಲೆಗಳ ಸರಣಿ Read More »

error: Content is protected !!
Scroll to Top