ವಿದೇಶ

ಯುದ್ಧಪೀಡಿತ ಇಸ್ರೇಲ್’ನಲ್ಲಿದ್ದಾರೆ 12 ಸಾವಿರ ಕನ್ನಡಿಗರು: ರಕ್ಷಣೆಗಾಗಿ ಹೀಗಿದೆ ವ್ಯವಸ್ಥೆ

ಕಾರವಾರ: ಯುದ್ಧ ಪೀಡಿತ ಇಸ್ರೇಲ್‌ನ ವಿವಿಧ ನಗರಗಳಲ್ಲಿ 12,000ಕ್ಕೂ ಹೆಚ್ಚು ಕನ್ನಡಿಗರಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆಂದು ತಿಳಿದುಬಂದಿದೆ. ಇಸ್ರೇಲ್’ನಲ್ಲಿ ಸಿಲುಕಿರುವ ಕನ್ನಡಿಗರಿಗೆ ಭಾರತ ಮತ್ತು ಇಸ್ರೇಲಿ ಸರ್ಕಾರಗಳು ಬೆಂಬಲ ನೀಡುತ್ತಿದ್ದು, ಭಾರತೀಯ ರಾಯಭಾರ ಕಚೇರಿ ಟೋಲ್-ಫ್ರೀ ಸಂಖ್ಯೆಯನ್ನೂ ನೀಡಿದೆ. ಯಾವುದೇ ತುರ್ತು ಸಂದರ್ಭದಲ್ಲಿ ಈ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಸುರಕ್ಷಿತ ಸ್ಥಳದಲ್ಲಿರುವ ಎಲ್ಲರೂ ತಮ್ಮ ತಮ್ಮ ಮನೆಗಳಿಗೆ ಕರೆ ಮಾಡಿ ತಾವು ಸುರಕ್ಷಿತರಾಗಿರುವ ಬಗ್ಗೆ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ. ಟೆಲ್ ಅವೀವ್’ನಲ್ಲಿರುವ ಕನ್ನಡಿಗ ದೀಪಕ್ ಪಿಂಟೋ ಅವರು ದೂರವಾಣಿ […]

ಯುದ್ಧಪೀಡಿತ ಇಸ್ರೇಲ್’ನಲ್ಲಿದ್ದಾರೆ 12 ಸಾವಿರ ಕನ್ನಡಿಗರು: ರಕ್ಷಣೆಗಾಗಿ ಹೀಗಿದೆ ವ್ಯವಸ್ಥೆ Read More »

ಇಸ್ರೇಲ್ – ಹಮಾಸ್ ಘರ್ಷಣೆ: ಕೇರಳ ಮೂಲದ ನರ್ಸ್’ಗೆ ಗಂಭೀರ ಗಾಯ

ಗಾಜಾ ಪಟ್ಟಿ: ಇಸ್ರೇಲ್ ಹಾಗೂ ಹಮಾಸ್ ನಡುವೆ ನಡೆಯುತ್ತಿರುವ ಘರ್ಷಣೆಯ ವೇಳೆ ಕೇರಳ ಮೂಲದ ನರ್ಸ್ ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಈ ಕುರಿತು ಮಾಹಿತಿ ಲಭ್ಯವಾಗಿದ್ದು, ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿರುವ ಕೇರಳದ ಮೂಲದ ಮಹಿಳೆ ಶೀಜಾ ಆನಂದ್ ಭಾರತದಲ್ಲಿ ವಾಸಿಸುತ್ತಿರುವ ತನ್ನ ಪತಿಯೊಂದಿಗೆ ವೀಡಿಯೊ ಕರೆ ಮಾಡಿ ಸಂಭಾಷಣೆ ನಡೆಸುತ್ತಿದ್ದ ವೇಳೆ ಪ್ಯಾಲೆಸ್ತೀನಿನ ಹಮಾಸ್‌ ದಾಳಿ ಮಾಡಿದ್ದು ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ. ಏಳು ವರ್ಷಗಳಿಂದ ಇಸ್ರೇಲ್‌ನಲ್ಲಿರುವ ಶೀಜಾ ಆನಂದ್ ಶನಿವಾರ ಮುಂಜಾನೆ ಇಸ್ರೇಲ್‌ನ ಮೇಲೆ ಹಮಾಸ್ ಅನಿರೀಕ್ಷಿತ

ಇಸ್ರೇಲ್ – ಹಮಾಸ್ ಘರ್ಷಣೆ: ಕೇರಳ ಮೂಲದ ನರ್ಸ್’ಗೆ ಗಂಭೀರ ಗಾಯ Read More »

ಇಸ್ರೇಲ್’ನಲ್ಲಿ 600 ದಾಟಿದ ನಾಗರಿಕರ ಸಾವು, ಗಾಜಾದಲ್ಲಿ 300ಕ್ಕೂ ಹೆಚ್ಚು ಮೃತ್ಯು! | ಗುಪ್ತಚರ ವೈಫಲ್ಯಕ್ಕೆ ಬಲಿಯಾಯಿತೇ ಇಸ್ರೇಲ್??

ಟೆಲ್ ಅವಿವ್: ಇಸ್ರೇಲಿ ಸೈನಿಕರು ನಿನ್ನೆ ಭಾನುವಾರ ದಕ್ಷಿಣ ಇಸ್ರೇಲ್ನ ಬೀದಿಗಳಲ್ಲಿ ಹಮಾಸ್ ಉಗ್ರರ ವಿರುದ್ಧ ಯುದ್ಧಕ್ಕಿಳಿದಿದ್ದು, ಗಾಜಾದಲ್ಲಿ ಕಟ್ಟಡಗಳನ್ನು ನೆಲಸಮಗೊಳಿಸಿದ ಪ್ರತೀಕಾರದ ದಾಳಿಯನ್ನು ಪ್ರಾರಂಭಿಸಿದರು. ಆದರೆ ಉತ್ತರ ಇಸ್ರೇಲ್ನಲ್ಲಿ ಲೆಬನಾನ್ನ ಹಿಜ್ಬುಲ್ಲಾ ಉಗ್ರಗಾಮಿ ಗುಂಪಿನೊಂದಿಗೆ ನಡೆದ ದಾಳಿ ದೊಡ್ಡ ಯುದ್ಧಕ್ಕೆ ದಾರಿಮಾಡಿಕೊಟ್ಟಿತು. ಗಾಜಾದಿಂದ ಅನಿರೀಕ್ಷಿತ ದಾಳಿಯ 24 ಗಂಟೆಗಳ ನಂತರ ಇನ್ನೂ ದಾಳಿ ಮುಂದುವರಿದಿದೆ. ಇದರಲ್ಲಿ ಹಮಾಸ್ ಉಗ್ರಗಾಮಿಗಳು ಇಸ್ರೇಲ್ನ ಭದ್ರತಾ ತಡೆಗೋಡೆಯನ್ನು ಭೇದಿಸಿ ಮತ್ತು ಹತ್ತಿರದ ಸ್ಥಳಗಳ ಮೂಲಕ ಆಗಮಿಸಿದರು. ಇಸ್ರೇಲ್ನಲ್ಲಿ ಕನಿಷ್ಠ 600

ಇಸ್ರೇಲ್’ನಲ್ಲಿ 600 ದಾಟಿದ ನಾಗರಿಕರ ಸಾವು, ಗಾಜಾದಲ್ಲಿ 300ಕ್ಕೂ ಹೆಚ್ಚು ಮೃತ್ಯು! | ಗುಪ್ತಚರ ವೈಫಲ್ಯಕ್ಕೆ ಬಲಿಯಾಯಿತೇ ಇಸ್ರೇಲ್?? Read More »

ಪ್ಯಾಲೆಸ್ತೀನ್ ಮೇಲೆ ವಾಯುದಾಳಿ ಆರಂಭಿಸಿದ ಇಸ್ರೇಲ್ | ‘ಐರನ್ ಸ್ವೋರ್ಡ್ಸ್’ ತಿರುಗೇಟಿಗೆ ಇಟ್ಟಿರುವ ಹೆಸರು

ಜೆರುಸಲೇಂ: ಹಮಾಸ್ ರಾಕೆಟ್ ದಾಳಿ ಆರಂಭಿಸಿದ ಕೆಲವೇ ಹೊತ್ತಿನಲ್ಲಿ ಇಸ್ರೇಲ್ ತಿರುಗೇಟು ನೀಡಲು ಸಿದ್ಧವಾಗಿದೆ. ಪ್ಯಾಲೆಸ್ತೇನೆ ಮೇಲೆ ಯುದ್ಧ ಸಾರಿದ್ದೇವೆ ಹಾಗೂ ಗೆದ್ದೇ ತೀರುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಂದೇಶ ರವಾನಿಸಿದ್ದಾರೆ. ಗಾಜಾಪಟ್ಟಿಯಲ್ಲಿರುವ ಹಮಾಸ್‌ ಕಟ್ಟಡಗಳ ಮೇಲೆ ಇಸ್ರೇಲ್‌ನ ರಾಕೆಟ್‌ಗಳು ದಾಳಿ ನಡೆಸಿವೆ. ಸುಮಾರು 12ಕ್ಕೂ ಅಧಿಕ ರಾಕೆಟ್‌ಗಳ ಮೂಲಕ ಹಮಾಸ್‌’ಗೆ ಇಸ್ರೇಲ್‌ ತಕ್ಕ ಪಾಠ ಕಲಿಸಿದೆ. ಹಮಾಸ್‌ ಕಟ್ಟಡಗಳ ಮೇಲೆ ರಾಕೆಟ್‌ಗಳು ದಾಳಿ ನಡೆಸುವ, ಅವುಗಳನ್ನು ಉಡಾಯಿಸುವ ವಿಡಿಯೊಗಳು ಲಭ್ಯವಾಗಿವೆ. ಇಸ್ರೇಲ್‌ ಹೇಗೆ

ಪ್ಯಾಲೆಸ್ತೀನ್ ಮೇಲೆ ವಾಯುದಾಳಿ ಆರಂಭಿಸಿದ ಇಸ್ರೇಲ್ | ‘ಐರನ್ ಸ್ವೋರ್ಡ್ಸ್’ ತಿರುಗೇಟಿಗೆ ಇಟ್ಟಿರುವ ಹೆಸರು Read More »

ಲಘು ವಿಮಾನ ಪತನ: ಇಬ್ಬರು ಭಾರತೀಯರು ಸೇರಿ ಮೂರು ಸಾವು

ಒಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಸಂಭವಿಸಿದ ಸಣ್ಣ ವಿಮಾನ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿ ಇಬ್ಬರು ಭಾರತೀಯರು ಸೇರಿದ್ದಾರೆ ಎಂದು ವರದಿಯಾಗಿದೆ. ಅವಳಿ ಎಂಜಿನ್‌ನ ಲಘು ಪೈಪರ್ ಪಿಎ-34 ಸೆನೆಕಾ ವಿಮಾನವು ಮರಗಳು ಮತ್ತು ಪೊದೆಗಳಿಗೆ ಅಪ್ಪಳಿಸಿತು ಎಂದು ರಾಯಿಟರ್ಸ್ ವರದಿಯಾಗಿದೆ. ವ್ಯಾಂಕೋವರ್‌’ನಿಂದ ಪೂರ್ವಕ್ಕೆ 100 ಕಿಲೋ ಮೀಟರ್ ದೂರದಲ್ಲಿರುವ ಚಿಲ್ಲಿವಾಕ್‌’ನ ಸ್ಥಳೀಯ ವಿಮಾನ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ವರದಿಗಳ ಆಧಾರದ ಮೇಲೆ, ಕೆನಡಾದ ಸಾರಿಗೆ ಸುರಕ್ಷತಾ ಮಂಡಳಿಯು ಘಟನೆಯ ತನಿಖೆಗೆ ತನಿಖಾಧಿಕಾರಿಗಳನ್ನು

ಲಘು ವಿಮಾನ ಪತನ: ಇಬ್ಬರು ಭಾರತೀಯರು ಸೇರಿ ಮೂರು ಸಾವು Read More »

ಜೈಲಿನಲ್ಲಿ ಬಂಧಿಯಾಗಿರುವ ಇರಾನಿನ ನರ್ಗೆಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪ್ರಶಸ್ತಿ!

ಸ್ಟಾಕ್ ಹೋಮ್: ಇರಾನ್‌ನಲ್ಲಿ ಮಹಿಳೆಯರ ಮೇಲಿನ ದಬ್ಬಾಳಿಕೆ, ಮಾನವ ಹಕ್ಕುಗಳು ಮತ್ತು ಎಲ್ಲರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ನರ್ಗೆಸ್ ಮೊಹಮ್ಮದಿ ಅವರಿಗೆ 2023ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ. ನರ್ಗೆಸ್ ಮೊಹಮ್ಮದಿ ಮಹಿಳಾ ಮತ್ತು ಮಾನವ ಹಕ್ಕುಗಳ ಪರ ವಕೀಲೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿದ್ದಾರೆ. ಈ ವರ್ಷದ ಶಾಂತಿ ಪ್ರಶಸ್ತಿಯು ಮಹಿಳೆಯರನ್ನು ಗುರಿಯಾಗಿಸುವ ತಾರತಮ್ಯ ಮತ್ತು ದಬ್ಬಾಳಿಕೆಯ ಪ್ರಭುತ್ವದ ಆಡಳಿತದ ನೀತಿಗಳ ವಿರುದ್ಧ ಪ್ರದರ್ಶಿಸಿದ ಲಕ್ಷಾಂತರ ಜನರನ್ನು ಗುರುತಿಸುತ್ತದೆ ಎಂದು ನೊಬೆಲ್ ಸಮಿತಿಯು ಹೇಳಿದೆ. ಅಪಾರವಾದ ವೈಯಕ್ತಿಕ

ಜೈಲಿನಲ್ಲಿ ಬಂಧಿಯಾಗಿರುವ ಇರಾನಿನ ನರ್ಗೆಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪ್ರಶಸ್ತಿ! Read More »

ಕೊನೆಗೂ ಕ್ರಮಕ್ಕೆ ಮುಂದಾದ ಕೆನಡಾ, ಒಬ್ಬನ ಬಂಧನ! | ಭಾರತದ ಬಿಗಿಪಟ್ಟಿಗೆ ತಲೆಬಾಗಿದ ಕೆನಡಾ!

ಒಟ್ಟಾವ: ಖಲಿಸ್ತಾನಿಗಳ ವಿಚಾರದಲ್ಲಿ ಬಿಗಿ ಪಟ್ಟು ಹಿಡಿದಿರುವ ಭಾರತದ ಮುಂದೆ ತಲೆಬಾಗಿರುವ ಕೆನಡಾ, ಕೊನೆಗೂ ಕ್ರಮಕ್ಕೆ ಮುಂದಾಗಿದೆ. ದೇವಾಲಯಗಳನ್ನು ಅಪವಿತ್ರಗೊಳಿಸಿದ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 12ರಂದು, ಸರ್ರೆಯ ಲಕ್ಷ್ಮೀನಾರಾಯಣ ಮಂದಿರದ ಮುಂಭಾಗದ ಗೇಟ್ ಮತ್ತು ಡೋರ್‌ಗಳ ಮೇಲೆ ಖಲಿಸ್ತಾನಿ ಕಿಡಿಗೇಡಿಗಳು ಖಲಿಸ್ತಾನ್ ಪರ, ಹಿಂದೂ ವಿರೋಧಿ ಹಾಗೂ ಭಾರತ ವಿರೋಧಿ ಬರಹಗಳನ್ನು ಬರೆದು ಆವರಣವನ್ನು ಅಪವಿತ್ರಗೊಳಿಸಿದ್ದರು. ಆ ಬಳಿಕ ಕೆನಡಾದ ಪೊಲೀಸರು ಮಾಡಿದ ಮೊದಲ ಬಂಧನ ಇದಾಗಿದೆ. ಆಗಸ್ಟ್ 12 ಮತ್ತು

ಕೊನೆಗೂ ಕ್ರಮಕ್ಕೆ ಮುಂದಾದ ಕೆನಡಾ, ಒಬ್ಬನ ಬಂಧನ! | ಭಾರತದ ಬಿಗಿಪಟ್ಟಿಗೆ ತಲೆಬಾಗಿದ ಕೆನಡಾ! Read More »

ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿಗೆ ಮೂವರು ವಿಜ್ಞಾನಿಗಳು ಆಯ್ಕೆ

ಸ್ಟಾಕ್‌ಹೋಂ: ಮೌಂಗಿ ಬವೆಂಡಿ, ಲೂಯಿಸ್ ಬ್ರೂಸ್ ಮತ್ತು ಅಲೆಕ್ಸಿ ಎಕಿಮೊವ್ ಅವರಿಗೆ ಸಣ್ಣ ಕ್ವಾಂಟಮ್ ಡಾಟ್‌ಗಳ (ಅರೆವಾಹಕ ನ್ಯಾನೊಕ್ರಿಸ್ಟಲ್) ಕೆಲಸಕ್ಕಾಗಿ ಈ ಸಾಲಿನ ಪ್ರತಿಷ್ಠಿತ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್‌ನ ಪ್ರಧಾನ ಕಾರ್ಯದರ್ಶಿ ಹ್ಯಾನ್ಸ್ ಎಲೆಗ್ರೆನ್ ಅವರು ಬುಧವಾರ ಸ್ಟಾಕ್‌ಹೋಮ್‌ನಲ್ಲಿ ಪ್ರಶಸ್ತಿಯನ್ನು ಘೋಷಿಸಿದ್ದಾರೆ. ಮೂವರು ಸಂಶೋಧಕರು ಬೋಸ್ಟನ್‌ನ ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೌಂಗಿ ಬವೆಂಡಿ, ನ್ಯೂಯಾರ್ಕ್‌ನ ಕೊಲಂಬಿಯಾ ವಿಶ್ವವಿದ್ಯಾಲಯದ ಲೂಯಿಸ್ ಬ್ರೂಸ್ ಮತ್ತು ಅಲೆಕ್ಸಿ ಎಕಿಮೊವ್ ನ್ಯೂಯಾರ್ಕ್‌ನ ನ್ಯಾನೊಕ್ರಿಸ್ಟಲ್ಸ್

ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿಗೆ ಮೂವರು ವಿಜ್ಞಾನಿಗಳು ಆಯ್ಕೆ Read More »

ಸೇತುವೆಯಿಂದ ವಿದ್ಯುತ್ ತಂತಿ ಮೇಲೆ ಬಿದ್ದ ಬಸ್ | 21 ಮಂದಿ ಪ್ರವಾಸಿಗರ ದಾರುಣ ಸಾವು

ವೆನಿಸ್: ಕ್ಯಾಂಪ್‌ಗ್ರೌಂಡ್‌ಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಉತ್ತರ ಇಟಲಿಯ ವೆನಿಸ್ ಬಳಿಯ ಮೇಲ್ಸೇತುವೆಯಿಂದ ಉರುಳಿಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 21 ಪ್ರವಾಸಿಗರು ಮೃತಪಟ್ಟಿದ್ದಾರೆ. ಸೇತುವೆ ಮೇಲಿಂದ 30 ಅಡಿ ಆಳಕ್ಕೆ ಬೀಳುವ ವೇಳೆ ವಿದ್ಯುತ್ ತಂತಿಗಳ ಮೇಲೆ ಬಿದ್ದ ಬಸ್ಸಿಗೆ ಬೆಂಕಿ ಹತ್ತಿಕೊಂಡು ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಸ್ ಅವಘಡಕ್ಕೆ ಸಂಬಂಧಿಸಿ ”ವೆನಿಸ್‌ನ ಮೇಯರ್ ಲುಯಿಗಿ ಬ್ರುಗ್ನಾರೊ ಟ್ವಿಟರ್ ಎಕ್ಸ್‌ನಲ್ಲಿ ಇದೊಂದು ಭೀಕರ ಅವಘಡ. ನಂಬಲು ಸಾಧ್ಯವಾಗುತ್ತಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.

ಸೇತುವೆಯಿಂದ ವಿದ್ಯುತ್ ತಂತಿ ಮೇಲೆ ಬಿದ್ದ ಬಸ್ | 21 ಮಂದಿ ಪ್ರವಾಸಿಗರ ದಾರುಣ ಸಾವು Read More »

ಖಾಸಗಿ ವಿಮಾನ ಪತನ: ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ 6 ಮಂದಿ ಮೃತ್ಯು

ಹರಾರೆ: ಖಾಸಗಿ ವಿಮಾನ ಪತನಗೊಂಡು ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ 6 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ನೈಋತ್ಯ ಜಿಂಬಾಬ್ವೆಯಲ್ಲಿ ನಡೆದಿರುವುದು ವರದಿಯಾಗಿದೆ. ಚಿನ್ನ, ಕಲ್ಲಿದ್ದಲು ಮತ್ತು ತಾಮ್ರವನ್ನು ಸಂಸ್ಕರಿಸುವ ರಿಯೋಜಿಮ್ ಗಣಿ ಕಂಪನಿಯ ಮಾಲೀಕ ಹರ್ಪಾಲ್ ರಾಂಧವಾ, ಅವರ ಮಗ ಮತ್ತು ಇತರ ನಾಲ್ವರು ವಿಮಾನ ಅಪಘಾತದಲ್ಲಿ ಮೃತಪಟ್ಟಿರುವುದಾಗಿ ʼಪಿಟಿಐʼ ವರದಿ ಮಾಡಿದೆ. ರಿಯೊಜಿಮ್ ಒಡೆತನದ ಸೆಸ್ನಾ 206 ವಿಮಾನವು ಶುಕ್ರವಾರ (ಸೆ. 29ರಂದು) ಹರಾರೆಯಿಂದ ಜಿಂಬಾಬ್ಬೆಯ ಮುರೊವಾ ವಜ್ರದ ಗಣಿ ಕಡೆಗೆ ತೆರಳುತ್ತಿದ್ದಾಗ

ಖಾಸಗಿ ವಿಮಾನ ಪತನ: ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ 6 ಮಂದಿ ಮೃತ್ಯು Read More »

error: Content is protected !!
Scroll to Top