ವಿದೇಶ

ವಾಯುವ್ಯ ಪಾಕಿಸ್ತಾನದಲ್ಲಿ ಒಂದೇ ಕುಟುಂಬದ 9 ಸದಸ್ಯರ ಗುಂಡಿಕ್ಕಿ ಹತ್ಯೆ

ಪೇಷಾವರ :  ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವ ಪ್ರಾಂತದಲ್ಲಿ ಮದುವೆಯ ಕುರಿತ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ 9 ಸದಸ್ಯರನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಲಾಕಂಡ್ ಜಿಲ್ಲೆಯ ಬಟ್‍ಖೆಲಾ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಮದುವೆಯ ವಿವಾದದ ಹಿನ್ನೆಲೆಯಲ್ಲಿ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆ. ರಾತ್ರಿ ವೇಳೆ ಮನೆಗೆ ನುಗ್ಗಿದ ಗುಂಪು, ನಿದ್ದೆಯಲ್ಲಿದ್ದ 9 ಮಂದಿಯನ್ನು ಗುಂಡು ಹಾರಿಸಿ ಹತ್ಯೆಗೈದು ಪರಾರಿಯಾಗಿರುವುದಾಗಿ ವರದಿಯಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಾಂತೀಯ ಅರೆಸೇನಾ ಪಡೆ […]

ವಾಯುವ್ಯ ಪಾಕಿಸ್ತಾನದಲ್ಲಿ ಒಂದೇ ಕುಟುಂಬದ 9 ಸದಸ್ಯರ ಗುಂಡಿಕ್ಕಿ ಹತ್ಯೆ Read More »

ಮಂಗಳೂರು-ದುಬೈ ವಿಮಾನ ಯಾನ ದರ ಏರಿಕೆ | ರಜೆಯ ಸಮಯ ಬಳಕೆ ಮಾಡಿಕೊಂಡ ಇಂಡಿಯೋ ಮತ್ತು ಏರ್​ ಇಂಡಿಯಾ ಎಕ್ಸ್​ಪ್ರೆಸ್

ಮಂಗಳೂರು: ಮಂಗಳೂರು-ದುಬೈ ವಿಮಾನಯಾನ ದರ ಏರಿಕೆಯಾಗಿದ್ದು, ಈ ಮೂಲಕ ಕರಾವಳಿ ಭಾಗದಿಂದ ಉದ್ಯೋಗಕ್ಕೆಂದು ದುಬೈನಲ್ಲಿ ತೆರಳುವವರಿಗೆ ಶಾಕ್​ ಎದುರಾಗಿದೆ. ಬಕ್ರೀದ್​ ರಜೆಯಲ್ಲಿ ಊರಿಗೆ ಮರಳಬೇಕು ಎಂದುಕೊಂಡಿರುವ ಮಧ್ಯಮವರ್ಗದ ಭಾರತೀಯರು ವಿಮಾನಯಾನದ ದರ ಕೇಳಿ ಸುಸ್ತಾಗಿದ್ದಾರೆ. ದುಬೈನಲ್ಲಿ ಸೆಖೆ ವಿಪರೀತಗೊಳ್ಳುವ ಹಿನ್ನೆಲೆಯಲ್ಲಿ ಹಲವೆಡೆ ಬೇಸಿಗೆ ರಜೆ ಆರಂಭಗೊಂಡಿದೆ, ಅಲ್ಲದೇ ಬಕ್ರೀದ್​ ಹಬ್ಬ ಬೇರೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ಅನೇಕರು ವೆಕೇಷನ್​ನಲ್ಲಿ ಊರಿಗೆ ಮರಳುವ ಸಿದ್ಧತೆಯಲ್ಲಿದ್ದಾರೆ. ಆದರೆ ಏಕಾಏಕಿ ಏರಿಕೆಗೊಂಡಿರುವ ವಿಮಾನಯಾನ ದರದಿಂದ ಊರಿಗೆ ಬರುವ ನಿರ್ಧಾರದಿಂದ ಹಿಂದೆ ಸರಿಯುವಂತಾಗಿದೆ.ದುಬೈ

ಮಂಗಳೂರು-ದುಬೈ ವಿಮಾನ ಯಾನ ದರ ಏರಿಕೆ | ರಜೆಯ ಸಮಯ ಬಳಕೆ ಮಾಡಿಕೊಂಡ ಇಂಡಿಯೋ ಮತ್ತು ಏರ್​ ಇಂಡಿಯಾ ಎಕ್ಸ್​ಪ್ರೆಸ್ Read More »

ವಿಮಾನ ಪತನಗೊಂಡ 40 ದಿನಗಳ ಬಳಿಕ ಜೀವಂತ ಸಿಕ್ಕಿದ ನಾಲ್ಕು ಮಕ್ಕಳು | ಕ್ರೂರ ಮೃಗಗಗಳಿರುವ ಕಾಡಿನಲ್ಲಿ ಬದುಕಿ ಉಳಿದದ್ದು ಹೇಗೆ | ಜಗತ್ತಿಗೆ ಕುತೂಹಲ ಕೆರಳಿಸಿದ ವಿಚಾರ

ಕೊಲಂಬಿಯ: 40 ದಿನಗಳ ಹಿಂದೆ ವಿಮಾನ ಪತನಗೊಂಡು ನಾಪತ್ತೆಯಾಗಿದ್ದ ನಾಲ್ಕು ಮಕ್ಕಳನ್ನು ಪತ್ತೆಹಚ್ಚುವಲ್ಲಿ ಕೊಲಂಬಿಯದ ಸೈನಿಕರು ಯಶಸ್ವಿಯಾಗಿದ್ದಾರೆ. ಮೇ 1 ರಂದು ಅಮೆಜಾನ್ ಕಾಡಿನ ಮಧ್ಯದಲ್ಲಿ ಸಿಸ್ನಾ ಸಿಂಗಲ್ ಇಂಜಿನ್ ಪ್ರೊಪೆಲ್ಲರ್ ಪ್ಲೇನ್ ಖಾಸಗಿ ವಿಮಾನವೊಂದು ಪತನಗೊಂಡಿತ್ತು. ವಿಮಾನದಲ್ಲಿದ್ದ ಮೂವರು ಹಿರಿಯ ಮೃತದೇಹ ೆರಡು ವಾರಗಳ ಬಳಿಕ ಘಟನೆ ನಡೆದ ಸುತ್ತಮುತ್ತ ಪತ್ತೆಯಾಗಿತ್ತು. ಆದರೆ 13, 9 4 ಹಾಗೂ 11 ವರ್ಷದ ಮಕ್ಕಳು ಸಿಕ್ಕಿರಲಿಲ್ಲ. ಮಕ್ಕಳು ಬದುಕಿದ್ದಾರೆ ಎಂದು ತೀರ್ಮಾನಿಸಿ ಪತ್ತೆ ಕಾರ್ಯ ಆರಂಭಿಸಿತ್ತು. ಇದಕ್ಕಾಗಿ

ವಿಮಾನ ಪತನಗೊಂಡ 40 ದಿನಗಳ ಬಳಿಕ ಜೀವಂತ ಸಿಕ್ಕಿದ ನಾಲ್ಕು ಮಕ್ಕಳು | ಕ್ರೂರ ಮೃಗಗಗಳಿರುವ ಕಾಡಿನಲ್ಲಿ ಬದುಕಿ ಉಳಿದದ್ದು ಹೇಗೆ | ಜಗತ್ತಿಗೆ ಕುತೂಹಲ ಕೆರಳಿಸಿದ ವಿಚಾರ Read More »

ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಅವರಿಗೆ ದುಬೈನಲ್ಲಿ ಅಭಿನಂದನೆ

ಸವಣೂರು: ಪೇಟೆ ಪಟ್ಟಣಗಳಲ್ಲಿ ಸಿಗುವ ಗುಣಮಟ್ಟದ ವಿದ್ಯಾಭ್ಯಾಸ ನಮ್ಮ ಸವಣೂರು ಗ್ರಾಮದಲ್ಲಿ ಸಿಗಬೇಕು. ಸವಣೂರು ಅಭಿವೃದ್ಧಿಯಾಗಬೇಕು, ನಮ್ಮೆಲ್ಲರಲ್ಲಿ ಒಗ್ಗಟ್ಟಿರಬೇಕು, ಜಾತ್ಯತೀತತೆ ಬೆಳೆಯಬೇಕು ಇದು ನನ್ನ ಧೈಯವಾಗಿತ್ತು ಎಂದು ವಿದ್ಯಾರಶ್ಮಿ ಸಮೂಹ ವಿದ್ಯಾ ಸಂಸ್ಥೆಗಳ ಸಂಸ್ಥಾಪಕ, ಸವಣೂರು ಸೀತಾರಾಮ ರೈ ಅವರು ದುಬೈಯಲ್ಲಿ ಹೇಳಿದರು. ದುಬೈ ನಗರದ ಐಬಿಸ್ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮ ಮತ್ತು ಅಮೃತರಶ್ಮಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.  ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ನಿರ್ಮಾಣಕ್ಕೆ ಮೊದಲು ಸವಣೂರಿನಲ್ಲಿ ಹಿರಿಯ ಪ್ರಾಥಮಿಕ ಶಾಲೆ,

ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಅವರಿಗೆ ದುಬೈನಲ್ಲಿ ಅಭಿನಂದನೆ Read More »

ಕೊಯಿಲದ ಯುವಕ  ವಿದೇಶದಲ್ಲಿ ಆತ್ಮಹತ್ಯೆ

ಕಡಬ: ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ಭಾನುವಾರ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ  ಸಂದೇಶ್ (32) ಎಂದು ಗುರುತಿಸಲಾಗಿದೆ. ಇವರು ಕೊಲ್ಲಿರಾಷ್ಟ್ರದ  ಓಮನ್ ದೇಶದ ಮಸ್ಕತ್‌ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್ ಕೂಡಾ ಮಸ್ಕತ್‌ನಲ್ಲೇ ಉದ್ಯೋಗದಲ್ಲಿದ್ದು

ಕೊಯಿಲದ ಯುವಕ  ವಿದೇಶದಲ್ಲಿ ಆತ್ಮಹತ್ಯೆ Read More »

ವಿಜಯ್‌ ಮಲ್ಯ ಒಡೆತನದಲ್ಲಿದ್ದ ಟಿಪ್ಪುವಿನ ಖಡ್ಗ 145 ಕೋಟಿ ರೂ. ಗೆ ಹರಾಜು

ಬೆಂಗಳೂರು: ಮೈಸೂರಿನ ಹುಲಿ ಎಂದೇ ಖ್ಯಾತರಾಗಿರುವ ಟಿಪ್ಪು ಸುಲ್ತಾನ್ ಗೆ ಸೇರಿದ್ದ ಖಡ್ಗವನ್ನು ಮಂಗಳವಾರ ಲಂಡನ್‌ನ ಬೊನ್ಹಾಮ್‌ನಲ್ಲಿ ಹರಾಜು ಹಾಕಲಾಗಿದ್ದು, ಈ ಖಡ್ಗ ಬರೋಬ್ಬರಿ ರೂ. 145 ಕೋಟಿಗೆ ಹರಾಜಾಗಿದೆ. ಈ ಹಿಂದೆ ವಿಜಯ್‌ ಮಲ್ಯ ಒಡೆತನದಲ್ಲಿ ಇದ್ದ ಈ ಖಡ್ಗವನ್ನು ಮಲ್ಯ ಅವರಿಂದ ರೂ 1.5 ಕೋಟಿಗೆ ಪಡೆದುಕೊಳ್ಳಲಾಗಿತ್ತು. ಈ ಖಡ್ಗವನ್ನು ಮಲ್ಯ 2004ರಲ್ಲಿ ಕೊಂಡುಕೊಂಡಿದ್ದರು. ಬ್ಯಾಂಕ್‌ಗಳಿಗೆ ಸಾಲ ಮರುಪಾವತಿಸದೆ ವಂಚಿಸಿದ ಆರೋಪ ಎದುರಿಸುತ್ತಿರುವ ಮಲ್ಯ ಈ ಖಡ್ಗ ತಮ್ಮ ಕುಟುಂಬಕ್ಕೆ ದುರದೃಷ್ಟವಾಗಿದೆ ಎಂದು ಹೇಳಿಕೊಂಡು

ವಿಜಯ್‌ ಮಲ್ಯ ಒಡೆತನದಲ್ಲಿದ್ದ ಟಿಪ್ಪುವಿನ ಖಡ್ಗ 145 ಕೋಟಿ ರೂ. ಗೆ ಹರಾಜು Read More »

ಕಾಂಗ್ರೆಸ್ ಗೆಲುವು: ದುಬೈನಲ್ಲಿ ಸಂಭ್ರಮ

ಪುತ್ತೂರು: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ದುಬೈನಲ್ಲಿ ಸಂಭ್ರಮಾಚರಿಸಲಾಯಿತು. ಸಿದ್ದರಾಮಯ್ಯ, ರಾಹುಲ್ ಗಾಂಧಿ ಅವರ ಪರ ಘೋಷಣೆಗಳನ್ನು ಕೂಗುತ್ತಾ, ಬಾವುಟಗಳನ್ನು ಹಿಡಿದು ಕಾಂಗ್ರೆಸ್ ಜಿಂದಾಬಾದ್ ಘೋಷಣೆ ಕೂಗಿದರು. ಇದೇ ಸಂದರ್ಭ ಅಲ್ಲಿ ಸೇರಿದ್ದ ಭಾರತೀಯರು ಸಿಹಿ ಹಂಚಿ ಸಂಭ್ರಮಿಸಿದರು.

ಕಾಂಗ್ರೆಸ್ ಗೆಲುವು: ದುಬೈನಲ್ಲಿ ಸಂಭ್ರಮ Read More »

ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಪೋಟ

ತೃಶೂರ್ : ಎಂಟು ವರ್ಷದ ಬಾಲಕಿ ಮೊಬೈಲ್ ಫೋನ್ ಸ್ಫೋಟಗೊಂಡು ಮೃತಪಟ್ಟಿರುವ ದಾರುಣ ಘಟನೆ ಕೇರಳದಲ್ಲಿ ಸಂಭವಿಸಿದೆ. ಮೂರನೇ ತರಗತಿ ಬಾಲಕಿ ಆದಿತ್ಯಶ್ರೀ ರಾತ್ರಿ ತಾಯಿಯ ಮೊಬೈಲ್‌ನಲ್ಲಿ ಗೇಮ್ ಆಡುತ್ತಿದ್ದಾಗ ಅದು ಸ್ಫೋಟಗೊಂಡಿದೆ. ಮುಖ ಮತ್ತು ಕೈಗೆ ಗಂಭೀರ ಸ್ವರೂಪದ ಸುಟ್ಟ ಗಾಯವಾಗಿದ್ದ ಬಾಲಕಿಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯಿದರೂ ಪ್ರಯೋಜನವಾಗಲಿಲ್ಲ. ತಶೂರು ಸಮೀಪದ ತಿರುವಿಲಾಮಲದ ಪಟ್ಟಿಪರಂಬು ಎಂಬಲ್ಲಿ ಈ ಘಟನೆ ಸಂಭವಿಸಿದೆ. ವಿಧಿವಿಜ್ಞಾನ ತಜ್ಞರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಪೋಟ Read More »

ಉ. ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಮತ್ತೆ ಜೀವ ಬೆದರಿಕೆ ಕರೆ

ಬೆದರಿಕೆಯೊಡ್ಡಿದವನನ್ನು ಗುರುತಿಸಿದ ಪೊಲೀಸರು ಲಖನೌ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದೆ. 112 ಟೋಲ್‌ಫ್ರೀ ನಂಬರ್‌ನಿಂದ ಕರೆ ಮಾಡಿ ಬೆದರಿಕೆವೊಡ್ಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಉತ್ತರ ಪ್ರದೇಶದ ಭಯೋತ್ಪಾದನೆ ನಿಗ್ರಹ ಪಡೆ ರಂಗಕ್ಕಿಳಿದಿದ್ದು, ಕರೆ ಮಾಡಿದ ವ್ಯಕ್ತಿಯನ್ನು ರಿಹಾನ್‌ ಎಂದು ಗುರುತಿಸಿದೆ. ಅವನಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈತ ಕರೆ ಮಾಡಿದ್ದಲ್ಲದೆ ಸೋಷಿಯಲ್‌ ಮೀಡಿಯಾದಲ್ಲಿ ಮೆಸೇಜ್‌ ಕೂಡ ಹಾಕಿದ್ದ. ಆತನ ಡಿಪಿಯಲ್ಲಿ ಅಲ್ಲಾವು ಎಂದು ಬರೆದಿರುವ ಫೊಟೊ ಇದೆ.

ಉ. ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಮತ್ತೆ ಜೀವ ಬೆದರಿಕೆ ಕರೆ Read More »

ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಆಯ್ಕೆ

ವಾಷಿಂಗ್ಟನ್‌ : ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಪ್ಲಂಬ್‌ ಅವರು ಏ. 22 ರಂದು ನೇಮಕಗೊಂಡಿದ್ದಾರೆ.ರಾಧಾ ಅವರು ರಕ್ಷಣಾ ಸಚಿವಾಲಯದ ಸಿಬ್ಬಂದಿ ಮುಖ್ಯಸ್ಥರಾಗಿದ್ದು, ಸೆನೆಟ್‌ನಲ್ಲಿ 68-30 ಮತಗಳೊಂದಿಗೆ ನೇಮಕ ದೃಢಪಟ್ಟಿದೆ. ಇನ್ನು ರಕ್ಷಣಾ ಸಚಿವಾಲಯದ ಹುದ್ದೆಗಳಿಗೂ ಮುನ್ನ ರಾಧಾ ಅವರು ಗೂಗಲ್‌ನಲ್ಲಿ ಭದ್ರತಾ ಸುರಕ್ಷತೆ ವಿಭಾಗ, ಫೇಸ್‌ಬುಕ್‌ನಲ್ಲಿ ನೀತಿ ವಿಶ್ಲೇಷಣೆಯ ಜಾಗತಿಕ ಮುಖ್ಯಸ್ಥರಾಗಿದ್ದರು.

ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಆಯ್ಕೆ Read More »

error: Content is protected !!
Scroll to Top