ವಿದೇಶ

ಪೂಂಚ್ ಭಯೋತ್ಪಾದಕ ದಾಳಿ

ವಾಹನಕ್ಕೆ ಬೆಂಕಿ ಹತ್ತಿಕೊಂಡು ಐವರು ಯೋಧರು ಹುತಾತ್ಮ ಪೂಂಚ್ : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಗುರುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಘಟನೆ ಬಳಿಕ ಅಡಗಿ ಕುಳಿತಿರುವ ಉಗ್ರರಿಗಾಗಿ ಸೇನಾಪಡೆಗಳು ಶುಕ್ರವಾರ ಭಾರೀ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.ದಾಳಿ ನಡೆದ ಸ್ಥಳದ ಸುತ್ತಲೂ ಭದ್ರತಾ ಪಡೆಗಳು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಉಗ್ರರ ಪತ್ತೆಗೆ ಡ್ರೋಣ್’ಗಳು, ಸ್ನಿಫ್ಪರ್ ಡಾಗ್ ಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಗಡಿ ಜಿಲ್ಲೆಗಳಾದ […]

ಪೂಂಚ್ ಭಯೋತ್ಪಾದಕ ದಾಳಿ Read More »

ಸನಾದಲ್ಲಿ ಭೀಕರ ಕಾಲ್ತುಳಿತ : 85 ಸಾವು

ದಾನ ಪಡೆಯಲು ಸೇರಿದ ಜನಜಂಗುಳಿಯಿಂದಾಗಿ ನೂಕುನುಗ್ಗಲು ಸನಾ : ಯೆಮೆನ್‌ ದೇಶದ ರಾಜಧಾನಿ ಸನಾದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ 85 ಜನರು ಸಾವಿಗೀಡಾಗಿದ್ದಾರೆ. ಶಾಲೆಯಲ್ಲಿ ಏರ್ಪಡಿಸಿದ್ದ ಜಕಾತ್‌ ಕಾರ್ಯಕ್ರಮದಲ್ಲಿ ದಾನ ಪಡೆಯಲು ಸೇರಿದ್ದ ಜನಜಂಗುಳಿಯಿಂದಾಗಿ ಕಾಲ್ತುಳಿತ ಸಂಭವಿಸಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.85 ಮಂದಿ ಸಾವಿಗೀಡಾಗಿ 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದುರ್ಘಟನೆ ಅಲ್ಲಿನ ಕಾಲಮಾನ ಪ್ರಕಾರ ಇಂದು ಬೆಳಗ್ಗೆ ಸಂಭವಿಸಿದೆ.

ಸನಾದಲ್ಲಿ ಭೀಕರ ಕಾಲ್ತುಳಿತ : 85 ಸಾವು Read More »

ಅನ್ನಪೂರ್ಣ ಪರ್ವತದಿಂದ 6 ಸಾವಿರ ಕೆಳಗೆ ಬಿದ್ದ ಭಾರತದ ಪರ್ವತಾರೋಹಿ ನಾಪತ್ತೆ

ಹೊಸದಿಲ್ಲಿ : ಭಾರತದ ಪರ್ವತಾರೋಹಿ ಅನುರಾಗ್ ಮಾಲು ನೇಪಾಳದ ಅನ್ನಪೂರ್ಣ ಪರ್ವತದಿಂದ ಬಿದ್ದು ನಾಪತ್ತೆಯಾಗಿದ್ದಾರೆ. ರಾಜಸ್ಥಾನದ ಕಿಶನ್‌ಗಢ್‌ ನಿವಾಸಿ ಅನುರಾಗ್ ಮಾಲು ಅವರು ಮೌಂಟ್ ಅನ್ನಪೂರ್ಣ ಕ್ಯಾಂಪ್ 3ರಿಂದ ಇಳಿಯುತ್ತಿರುವಾಗ ನಾಪತ್ತೆಯಾಗಿದ್ದಾರೆ.ಅನ್ನಪೂರ್ಣ ವಿಶ್ವದ ಹತ್ತನೇ ಅತಿ ಎತ್ತರದ ಪರ್ವತವಾಗಿದ್ದು, ಸಮುದ್ರ ಮಟ್ಟದಿಂದ 8,091 ಮೀಟರ್ ಎತ್ತರದಲ್ಲಿದೆ. ಸುಮಾರು 6 ಸಾವಿರ ಮೀಟರ್ ಕೆಳಗೆ ಬಿದ್ದು ನಾಪತ್ತೆಯಾಗಿದ್ದಾರೆ ಎಂದು ಸೆವೆನ್ ಸಮ್ಮಿಟ್ ಟ್ರೆಕ್ಸ್‌ನ ಅಧ್ಯಕ್ಷ ಮಿಂಗ್ಮಾ ಶೆರ್ಪಾ ತಿಳಿಸಿದ್ದಾರೆ.ಮಾಲು ಪರ್ವತಾರೋಹಣಕ್ಕಾಗಿ ಖ್ಯಾತ ಪರ್ವತಾರೋಹಿ ಬಚೇಂದ್ರಿ ಪಾಲ್ ಅವರ ಮಾರ್ಗದರ್ಶನ

ಅನ್ನಪೂರ್ಣ ಪರ್ವತದಿಂದ 6 ಸಾವಿರ ಕೆಳಗೆ ಬಿದ್ದ ಭಾರತದ ಪರ್ವತಾರೋಹಿ ನಾಪತ್ತೆ Read More »

ಸಿಧು ಮೂಸೆವಾಲಾ ಹತ್ಯೆಗೆ ಬಳಸಲಾಗಿದ್ದ ಪಿಸ್ತೂಲ್‌ನ್ನೇ ಅತೀಕ್, ಅಶ್ರಫ್ ಹತ್ಯೆಗೆ ಬಳಸಲಾಗಿದೆ

ಲಖನೌ : ಮಾಫಿಯಾ ಡಾನ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಹತ್ಯೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಗೆ ಬಳಸಲಾಗಿದ್ದ ಜಿಗಾನಾ ಮೇಡ್ ಪಿಸ್ತೂಲ್ ಅನ್ನೇ ಇಬ್ಬರೂ ಸಹೋದರ ಹತ್ಯೆಗೆ ಬಳಸಲಾಗಿದೆ. ಜಿಗಾನಾ ಮೇಡ್ ಪಿಸ್ತೂಲ್ ಅನ್ನು ಟರ್ಕಿಯಲ್ಲಿ ತಯಾರಿಸಲಾಗುತ್ತದೆ. ಗುಂಡಿನ ದಾಳಿ ನಡೆಸಿದ್ದ ಲವಲೇಶ್ ತಿವಾರಿ, ಸನ್ನಿ ಮತ್ತು ಅರುಣ್ ಮೌರ್ಯ ಎಂಬ ಮೂವರು ದಾಳಿಕೋರರನ್ನು ಬಂಧಿಸಿದ್ದು ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ

ಸಿಧು ಮೂಸೆವಾಲಾ ಹತ್ಯೆಗೆ ಬಳಸಲಾಗಿದ್ದ ಪಿಸ್ತೂಲ್‌ನ್ನೇ ಅತೀಕ್, ಅಶ್ರಫ್ ಹತ್ಯೆಗೆ ಬಳಸಲಾಗಿದೆ Read More »

ಪೊಲೀಸ್, ಪತ್ರಕರ್ತರ ಎದುರೇ ಕುಖ್ಯಾತ ಪಾತಕಿ, ಬಿಎಸ್‌ಪಿ ನಾಯಕ ಅತೀಕ್‌ ಅಹ್ಮದ್‌ ಹತ್ಯೆ

ಮಗ ಎನ್‌ಕೌಂಟರ್‌ಗೆ ಬಲಿಯಾದ ಎರಡೇ ದಿನದಲ್ಲಿ ತಂದೆಯ ಹತ್ಯೆ ಲಖನೌ : ನೂರಕ್ಕೂ ಅಧಿಕ ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗಿರುವ ಉತ್ತರ ಪ್ರದೇಶದ ದರೋಡೆಕೋರ ಅತೀಕ್ ಅಹ್ಮದ್ ಮತ್ತು ಅವನ ಸಹೋದರ ಅಶ್ರಫ್ ಅಹ್ಮದ್‌ನನ್ನು, ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯುತ್ತಿದ್ದಾಗ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಪತ್ರಕರ್ತರ ಸೋಗಿನಲ್ಲಿ ಬಂದ ಹಂತಕರು ಅಹ್ಮದ್‌ ಸಹೋದರರನ್ನು ಪೊಲೀಸರು ಮತ್ತು ಪತ್ರಕರ್ತರ ಎದುರೇ ಅತಿ ಸಮೀಪದಿಂದ ತಲೆಗೆ ಗುರಿಯಿಟ್ಟು ಗುಂಡು ಹಾರಿಸಿ ಕೊಂದಿದ್ದಾರೆ. ಇಡೀ ಹತ್ಯೆ ಕೃತ್ಯ

ಪೊಲೀಸ್, ಪತ್ರಕರ್ತರ ಎದುರೇ ಕುಖ್ಯಾತ ಪಾತಕಿ, ಬಿಎಸ್‌ಪಿ ನಾಯಕ ಅತೀಕ್‌ ಅಹ್ಮದ್‌ ಹತ್ಯೆ Read More »

ಉಕ್ರೇನ್‌ಗೆ ಹೆಚ್ಚುವರಿ ನೆರವು ನೀಡುವಂತೆ ಕೋರಿ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಪ್ರಧಾನಿ ಮೋದಿಗೆ ಪತ್ರ

ದೆಹಲಿ : ರಷ್ಯಾ- ಉಕ್ರೇನ್ ಕದನದಲ್ಲಿ ಮಧ್ಯಪ್ರವೇಶ ಮಾಡುವಂತೆ ಹಾಗೂ ಯುದ್ಧದಿಂದ ತತ್ತರಿಸಿರುವ ಉಕ್ರೇನ್‌ಗೆ ಹೆಚ್ಚುವರಿ ಮಾನವೀಯ ನೆರವು ನೀಡುವಂತೆ ಕೋರಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಉಕ್ರೇನ್‌ ಉಪ ವಿದೇಶಾಂಗ ಸಚಿವೆ ಎಮಿನೆ ಜಪರೊವಾ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸ್ಕೃತಿ ರಾಜ್ಯ ಖಾತೆ ಸಚಿವೆ ಮೀನಾಕ್ಷಿ ಲೇಖಿ ಅವರಿಗೆ ಈ ಪತ್ರವನ್ನು ಹಸ್ತಾಂತರಿಸಿದ್ದಾರೆ. ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ

ಉಕ್ರೇನ್‌ಗೆ ಹೆಚ್ಚುವರಿ ನೆರವು ನೀಡುವಂತೆ ಕೋರಿ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಪ್ರಧಾನಿ ಮೋದಿಗೆ ಪತ್ರ Read More »

ಇರಾಕ್ ಗಿಂತ ದುಪ್ಪಟ್ಟು ಪ್ರಮಾಣದಲ್ಲಿ ಕಚ್ಚಾ ತೈಲ ರಷ್ಯಾದಿಂದ ಭಾರತಕ್ಕೆ ಆಮದು

ದೆಹಲಿ : ಭಾರತ ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿರುವ ಕಚ್ಚಾ ತೈಲದ ಪ್ರಮಾಣ ಹೊಸ ದಾಖಲೆ ನಿರ್ಮಿಸಿದೆ. ಇರಾಕ್ ನಿಂದ ಆಮದು ಮಾಡಿಕೊಳ್ಳುತ್ತಿದ್ದಕ್ಕಿಂತಲೂ ದುಪ್ಪಟ್ಟು ಪ್ರಮಾಣದಲ್ಲಿ ನಾವು ಈಗ ರಷ್ಯಾದಿಂದ ತೈಲವನ್ನು ಖರೀದಿಸಿದ್ದೇವೆ. ಬೆಳವಣಿಗೆ ನಿಧಾನಗತಿಯಲ್ಲಿರುವುದರಿಂದ ತೈಲ ಆಮದಿನಲ್ಲಿ ಯಾವುದೇ ಬದಲಾವಣೆಯೂ ಕಂಡುಬಂದಿಲ್ಲ. ರಷ್ಯಾ ಕಚ್ಚಾ ತೈಲ ಪೂರೈಕೆ ಮಾಡುತ್ತಿರುವ ಏಕೈಕ ದೊಡ್ಡ ರಾಷ್ಟ್ರವಾಗಿದ್ದು, ಭಾರತ ಆಮದು ಮಾಡಿಕೊಳ್ಳುತ್ತಿರುವ ಒಟ್ಟಾರೆ ತೈಲದ ಪೈಕಿ ಮೂರನೇ ಒಂದರಷ್ಟನ್ನು ಪೂರೈಕೆ ಮಾಡುತ್ತಿರುವ ಮೂಲಕ ರಷ್ಯಾ ಸತತ 6 ನೇ ತಿಂಗಳು ಈ

ಇರಾಕ್ ಗಿಂತ ದುಪ್ಪಟ್ಟು ಪ್ರಮಾಣದಲ್ಲಿ ಕಚ್ಚಾ ತೈಲ ರಷ್ಯಾದಿಂದ ಭಾರತಕ್ಕೆ ಆಮದು Read More »

5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ವಿಷ ಪ್ರಾಷನ

ಇರಾನ್‌ನಲ್ಲಿ ಶಾಲಾ ಬಾಲಕಿಯರಿಗೆ ವಿಷವುಣ್ಣಿಸುತ್ತಿರುವ ಪ್ರಕರಣ ಹೆಚ್ಚಳ ಟೆಹ್ರಾನ್: ಹಿಜಾಬ್‌ ವಿರೋಧಿ ಪ್ರತಿಭಟನೆಯಿಂದ ಕುಲುಮೆಯಂತಾಗಿರುವ ಇರಾನ್‌ನಲ್ಲಿ ಈಗ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಮಕ್ಕಳಿಗೆ ವಿಷವಿಕ್ಕುವ ಬರ್ಬರ ಕೃತ್ಯ ನಡೆಯುತ್ತಿದೆ. ಕೆಲವು ತಿಂಗಳುಗಳಿಂದ ಇರಾನ್‌ನಲ್ಲಿ ಬೆಚ್ಚಿ ಬೀಳಿಸಿರುವ ನಿಗೂಢ ವಿದ್ಯಮಾನಗಳು ನಡೆಯುತ್ತಿವೆ. ಶನಿವಾರ ಹಲವಾರು ಶಾಲೆಗಳಲ್ಲಿ ಬಾಲಕಿಯರಿಗೆ ನಿಧಾನ ವಿಷ ಪ್ರಾಷನ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನವೆಂಬರ್ ಅಂತ್ಯದಿಂದ ಅನೇಕ ಶಾಲೆಗಳಲ್ಲಿ ಬಾಲಕಿಯರು ದಿಢೀರನೇ ವಿಷ ಪ್ರಾಷನ ಪ್ರಕರಣಕ್ಕೆ ಒಳಗಾಗುತ್ತಿದ್ದಾರೆ. ಕೆಲವು ಪ್ರಕರಣಗಳಲ್ಲಿ ವಿದ್ಯಾರ್ಥಿಗಳು

5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ವಿಷ ಪ್ರಾಷನ Read More »

ನಾಯಿ ಮುಖ ನಾಪತ್ತೆಯಾಗಿ ಮತ್ತೆ ಟ್ವಿಟರ್‌ ಗೆ ಮರಳಿದ ನೀಲಿ ಹಕ್ಕಿ

ಸ್ಯಾನ್‌ ಫ್ರಾನ್ಸಿಸ್ಕೊ : ಕೆಲವೇ ದಿನಗಳ ಹಿಂದೆಯಷ್ಟೇ ಟ್ವಿಟರ್‌ನ ಸಿಇಒ ಎಲಾನ್‌ ಮಸ್ಕ್‌ ಅವರು ಟ್ವಿಟರ್‌ನ ಲೋಗೊದಲ್ಲಿ ನೀಲಿ ಹಕ್ಕಿಯ ಚಿತ್ರವನ್ನು ತೆಗೆದು ಹಾಕಿ ಅದರ ಬದಲಿಗೆ ಡಾಗ್‌ ಕಾಯಿನ್‌ ಎಂಬ ಕ್ರಿಪ್ಟೊ ಕರೆನ್ಸಿ ಮೇಲಿರುವ ನಾಯಿಯ ಮೀಮ್ಸ್‌ ಚಿತ್ರವನ್ನು ಟ್ವಿಟರ್‌ನ ಲೋಗೊವಾಗಿ ಬಳಸಿದ್ದರು. ಆದರೆ ಇದೀಗ ಏ. 7 ರಂದು ನಾಯಿ ಮುಖದ ಲೋಗೋ ನಾಪತ್ತೆಯಾಗಿ ಮತ್ತೆ ನೀಲಿ ಹಕ್ಕಿಯನ್ನೇ ಬಳಸಲಾಗಿದೆ.2013ರಲ್ಲಿ ಜೋಕ್‌ನಂತೆ ಸೃಷ್ಟಿಯಾದ ಡಾಗ್‌ ಕಾಯಿನ್‌ ಬಳಿಕ ವ್ಯಾಪಕವಾಗಿ ಬಳಕೆಯಾಗಿ ಜನಪ್ರಿಯವಾಗಿದ್ದು, ಟೆಸ್ಲಾದಲ್ಲೂ ಡಾಗ್‌

ನಾಯಿ ಮುಖ ನಾಪತ್ತೆಯಾಗಿ ಮತ್ತೆ ಟ್ವಿಟರ್‌ ಗೆ ಮರಳಿದ ನೀಲಿ ಹಕ್ಕಿ Read More »

ನೀಲಿ ಚಿತ್ರದ ನಟಿಗೆ ಹಣ ವರ್ಗಾವಣೆ ಪ್ರಕರಣ : ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್‌ ಬಂಧನ

ನ್ಯೂಯಾರ್ಕ್: ನೀಲಿಚಿತ್ರ ನಟಿಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನವಾಗಿದೆ. ಟ್ರಂಪ್‌ ವಿರುದ್ಧ ಕೇಳಿಬಂದ ಆರೋಪ ತನಿಖೆ ನಡೆಸಲು ಸೂಕ್ತವಾಗಿದೆ ಎಂದು ಇತ್ತೀಚೆಗೆ ಗ್ರ್ಯಾಂಡ್‌ ಜ್ಯೂರಿ ಶಿಫಾರಸು ಮಾಡಿದ್ದ ಹಿನ್ನೆಲೆಯಲ್ಲಿ ಭಾರಿ ಬಿಗಿಭದ್ರತೆಯೊಂದಿಗೆ ಟ್ರಂಪ್‌ ಮಂಗಳವಾರ ನ್ಯೂಯಾರ್ಕ್‌ನ ಮ್ಯಾನ್‌ಹ್ಯಾಟನ್ ನ್ಯಾಯಾಲಯಕ್ಕೆ ಹಾಜರಾದರು. ಈ ವೇಳೆ ಅವರನ್ನು ಬಂಧಿಸಿದ ಪೊಲೀಸರು ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು,. ಲೈಂಗಿಕ ಪ್ರಕರಣ ಮುಚ್ಚಿಡಲು ಹಣ ನೀಡಿದ್ದೂ ಸೇರಿದಂತೆ ಹಣ ವಂಚನೆಯ 30ಕ್ಕೂ ಹೆಚ್ಚು ದೋಷಾರೋಪಗಳನ್ನು

ನೀಲಿ ಚಿತ್ರದ ನಟಿಗೆ ಹಣ ವರ್ಗಾವಣೆ ಪ್ರಕರಣ : ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್‌ ಬಂಧನ Read More »

error: Content is protected !!
Scroll to Top