ವಿದೇಶ

ತೀವ್ರಗೊಂಡ ಇಸ್ರೇಲ್‌-ಇರಾನ್‌ ಸಮರ : ಇರಾನ್‌ನಲ್ಲಿ ಮತ್ತೆ 60 ಸಾವು

ಇರಾನ್‌ ಗ್ಯಾಸ್‌ ಸ್ಥಾವರಕ್ಕೆ ಕ್ಷಿಪಣಿ ದಾಳಿ; ಇಸ್ರೇಲ್‌ನ ಐರನ್‌ ಡೋಮ್‌ ಭೇದಿಸಿದ ಇರಾನ್‌ ಟೆಲ್‌ ಅವೀವ್‌: ರಾತ್ರಿಯಿಡೀ ಇಸ್ರೇಲ್‌ ಮತ್ತು ಇರಾನ್‌ ನಡುವೆ ಭೀಕರ ಸಮರ ನಡೆದಿದ್ದು, ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಇರಾನ್‌ನಲ್ಲಿ ಮತ್ತೆ 60ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಎರಡೂ ದೇಶಗಳು ವೈಮಾನಿಕ ದಾಳಿಯನ್ನು ತೀವ್ರಗೊಳಿಸಿದ್ದು, ಮಧ್ಯಪ್ರಾಚ್ಯದಲ್ಲಿ ಆತಂಕದ ಪರಿಸ್ಥಿತಿ ಉಂಟಾಗಿದೆ. ಇರಾನ್‌ನ ಜೀವನಾಡಿ ಎಂದೇ ಹೇಳಲಾಗುವ ಬೃಹತ್‌ ಗ್ಯಾಸ್‌ ಸ್ಥಾವರಕ್ಕೆ ಶನಿವಾರ ರಾತ್ರಿ ಇಸ್ರೇಲ್‌ನ ಕ್ಷಿಪಣಿಗಳು ಬಂದೆರಗಿದ್ದು, ಆಪಾರ ಹಾನಿ ಸಂಭವಿಸಿದೆ. ಆಪರೇಷನ್‌ ರೈಸಿಂಗ್‌ […]

ತೀವ್ರಗೊಂಡ ಇಸ್ರೇಲ್‌-ಇರಾನ್‌ ಸಮರ : ಇರಾನ್‌ನಲ್ಲಿ ಮತ್ತೆ 60 ಸಾವು Read More »

ಇಸ್ರೇಲ್‌ ಮೇಲೆ ಇರಾನ್‌ ಪ್ರತಿಕಾರದ ದಾಳಿ : ಹೆಚ್ಚಿದ ಯುದ್ಧದ ಆತಂಕ

ಇರಾನ್‌ನ ಸೇನಾಧಿಕಾರಿಗಳು, ವಿಜ್ಞಾನಿಗಳು ಸೇರಿ 76 ಮಂದಿ ಸಾವು ಜೆರುಸೆಲಂ: ಇರಾನ್‌ ಮೇಲೆ ಇಸ್ರೇಲ್ ಶುಕ್ರವಾರ ನಸುಕಿನ ಹೊತ್ತು ದಾಳಿ ಮಾಡಿದ ಬಳಿಕ ಮಧ್ಯಪೂರ್ವದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ದಾಳಿಗೆ ಪ್ರತಿಕಾರವಾಗಿ ಇಂದು ನಸುಕಿನ ಹೊತ್ತು ಇಸ್ರೇಲ್‌ ಮೇಲೆ ಇರಾನ್‌ ಕ್ಷಿಪಣಿಗಳ ಮಳೆಗರೆದಿದ್ದು, ಇದರ ಪರಿಣಾಮವಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇರಾನ್‌ ಪ್ರತಿಕಾರದ ಪಣತೊಟ್ಟಿರುವ ಹಿನ್ನೆಲೆಯಲ್ಲಿ ಇಸ್ರೇಲ್‌ ಜಗತ್ತಿನಾದ್ಯಂತ ಇರುವ ತನ್ನ ದೂತವಾಸಗಳನ್ನು ಹಾಗೂ ಇತರ ರಾಜತಾಂತ್ರಿಕ ಸಂಸ್ಥಾಪನೆಗಳನ್ನು ಮುಚ್ಚಿದೆ. ಜಗತ್ತಿನೆಲ್ಲೆಡೆ ಇರುವ ಯೆಹೂದಿಗಳಿಗೆ ಯೆಹೂದಿ ಎಂದು

ಇಸ್ರೇಲ್‌ ಮೇಲೆ ಇರಾನ್‌ ಪ್ರತಿಕಾರದ ದಾಳಿ : ಹೆಚ್ಚಿದ ಯುದ್ಧದ ಆತಂಕ Read More »

ಇಸ್ರೇಲ್‌ ದಾಳಿಗೆ ಇರಾನ್‌ ಸೇನೆಯ ದಂಡನಾಯಕನೇ ಬಲಿ: ಹಲವು ನ್ಯೂಕ್ಲಿಯರ್‌ ವಿಜ್ಞಾನಿಗಳೂ ಸಾವು

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ; ಭಾರತೀಯರಿಗೆ ಎಚ್ಚರಿಕೆ ಸಂದೇಶ ರವಾನೆ ಟೆಹ್ರಾನ್: ಇರಾನ್‌ನ ಪರಮಾಣು ಶಸ್ತ್ರಾಸ್ತ್ರ ಸ್ಥಾವರಗಳು ಹಾಗೂ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್‌ನ ಡಜನ್‌ಗಟ್ಟಲೆ ಜೆಟ್‌ಗಳು ಶುಕ್ರವಾರ ನಸುಕಿನ ಹೊತ್ತು ನಡೆಸಿದ ಭೀಕರ ದಾಳಿಯ ಬಳಿಕ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಇರಾನ್‌ ಈಗಾಗಲೇ ಪ್ರತಿಕಾರದ ನಡೆಯಿಟ್ಟಿದ್ದು, ಕ್ಷಿಪಣಿಗಳನ್ನು ಇಸ್ರೇಲ್‌ನತ್ತ ಹಾರಿಸಿದೆ. ಇಸ್ರೇಲ್‌ ದಾಳಿಯಲ್ಲಿ ಇರಾನ್‌ನ ಪ್ಯಾರಾಮಿಲಿಟರಿ ರೆವಲ್ಯೂಷನರಿ ಗಾರ್ಡ್ ಮುಖ್ಯಸ್ಥ ಜನರಲ್ ಹೊಸೈನ್ ಸಲಾಮಿ, ಸಶಸ್ತ್ರ ಪಡೆಗಳ ಮುಖ್ಯಸ್ಥ ಮೊಹಮ್ಮದ್‌ ಬಘೇರಿ, ಸಶಸ್ತ್ರ ಪಡೆಗಳ

ಇಸ್ರೇಲ್‌ ದಾಳಿಗೆ ಇರಾನ್‌ ಸೇನೆಯ ದಂಡನಾಯಕನೇ ಬಲಿ: ಹಲವು ನ್ಯೂಕ್ಲಿಯರ್‌ ವಿಜ್ಞಾನಿಗಳೂ ಸಾವು Read More »

ಇರಾನ್‌ ಮೇಲೆ ಇಸ್ರೇಲ್‌ ಹಠಾತ್‌ ದಾಳಿ : ಅಣ್ವಸ್ತ್ರ ನೆಲೆಗಳೇ ಗುರಿ

ಇರಾನ್ ಸೇನಾಧಿಕಾರಿಗಳು, ಪರಮಾಣು ವಿಜ್ಞಾನಿಗಳು ಸಾವನ್ನಪ್ಪಿರುವ ಶಂಕೆ ಜೆರುಸಲೇಂ : ಇರಾನ್‌ನ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಸೇನೆ ಶುಕ್ರವಾರ ಬೆಳಗಿನ ಜಾವ ಹಠಾತ್ ದಾಳಿ ನಡೆಸಿದೆ. ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಕಡೆಗಳಲ್ಲಿ ಸ್ಫೋಟದ ಸದ್ದು ಕೇಳಿಸಿದೆ. ಈ ದಾಳಿಯಲ್ಲಿ ಇರಾನ್ ಸೇನೆಯ ಪ್ರಮುಖ ಅಧಿಕಾರಿಗಳು, ಪರಮಾಣು ವಿಜ್ಞಾನಿಗಳು ಸೇರಿದಂತೆ ಅನೇಕ ಪ್ರಮುಖರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇರಾನ್‌ಗೆ ಭಾರಿ ಹಾನಿಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಇರಾನ್ ಪರಮಾಣು ನೆಲೆಗಳನ್ನು ಗುರಿಯಾಗಿಸಿ ನಮ್ಮ ಸೇನೆ

ಇರಾನ್‌ ಮೇಲೆ ಇಸ್ರೇಲ್‌ ಹಠಾತ್‌ ದಾಳಿ : ಅಣ್ವಸ್ತ್ರ ನೆಲೆಗಳೇ ಗುರಿ Read More »

ಶುಭಾಂಶು ಶುಕ್ಲ ಗಗನಯಾತ್ರೆ ಮತ್ತೊಮ್ಮೆ ಮುಂದೂಡಿಕೆ

ರಾಕೆಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಮುಂದೂಡಿಕೆ ಹೊಸದಿಲ್ಲಿ: ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಅವರ ಗಗನಯಾತ್ರೆ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ. ಈ ಸಲ ಅವರು ಪ್ರಯಾಣಿಸಬೇಕಿದ್ದ ರಾಕೆಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಮುಂದೂಡಿಕೆಗೆ ಕಾರಣವಾಗಿದೆ. ಮಂಗಳವಾರಕ್ಕೆ ನಿಗದಿಯಾಗಿದ್ದ ಗಗನಯಾತ್ರೆ ಪ್ರತಿಕೂಲ ವಾತಾವರಣದ ಕಾರಣ ಬುಧವಾರಕ್ಕೆ ಮುಂದೂಡಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ತಾಂತ್ರಿಕ ದೋಷ ಪತ್ತೆಯಾಗಿ ಎರಡನೇ ಸಲ ಮುದೂಡಿಕೆಯಾಗಿದೆ. ಶುಭಾಂಶು ಶುಕ್ಲ ಸೇರಿ ನಾಲ್ವರು ಗಗನಯಾತ್ರಿಗಳನ್ನು ಹೊತ್ತೊಯ್ಯಬೇಕಿದ್ದ ಆ್ಯಕ್ಸಿಯಮ್-4 ಮಿಷನ್ ಉಡಾವಣೆಯನ್ನು ರಾಕೆಟ್‍ನಲ್ಲಿ ಕಂಡುಬಂದ ತಾಂತ್ರಿಕ ದೋಷದ

ಶುಭಾಂಶು ಶುಕ್ಲ ಗಗನಯಾತ್ರೆ ಮತ್ತೊಮ್ಮೆ ಮುಂದೂಡಿಕೆ Read More »

ನಾಳೆ ಶುಭಾಂಶು ಶುಕ್ಲ ಗಗನ ಯಾತ್ರೆ

ರಾಕೇಶ್‌ ಶರ್ಮ ಬಳಿಕ 41 ವರ್ಷಗಳ ನಂತರ ಇತಿಹಾಸ ರಚಿಸಲಿರುವ ಭಾರತದ ಗಗನ ಯಾತ್ರಿ ನವದೆಹಲಿ: ಭಾರತೀಯ ಗಗನ ಯಾತ್ರಿ ಶುಭಾಂಶು ಶುಕ್ಲ ಜೂ.11ರಂದು ಗಗನಯಾತ್ರೆ ಕೈಗೊಳ್ಳಲಿದ್ದಾರೆ. ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಫಾಲ್ಕನ್‌-9 (SpaceX’s Falcon-9) ಗಗನ ನೌಕೆ ಬುಧವಾರ ಸಂಜೆ ಉಡಾವಣೆಗೊಳ್ಳಲಿದ್ದು, ಇದರಲ್ಲಿ ಬಾಹ್ಯಾಕಾಶ ಯಾತ್ರೆ ಆರಂಭಿಸಲಿದ್ದಾರೆ. ಶುಕ್ಲ ಜೊತೆಗೆ ಇತರ ಮೂವರು ಗಗನಯಾತ್ರಿಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಸಿದ್ಧರಾಗಿದ್ದಾರೆ. 1984ರಲ್ಲಿ ಸೋವಿಯತ್ ರಷ್ಯಾದ ಸೋಯುಜ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ

ನಾಳೆ ಶುಭಾಂಶು ಶುಕ್ಲ ಗಗನ ಯಾತ್ರೆ Read More »

ಪಾಕಿಸ್ತಾನದ ಇನ್ನೋರ್ವ ಉಗ್ರ ಮುಖಂಡ ಫಿನಿಷ್‌

ಭಯೋತ್ಪಾದಕರಲ್ಲಿ ನಡುಕ ಹುಟ್ಟಿಸಿದ ಉಗ್ರನ ನಿಗೂಢ ಸಾವು ಇಸ್ಲಾಮಾಬಾದ್ : ಭಾರತದ ವಿರುದ್ಧ ಸದಾ ವಿಷ ಕಾರುತ್ತಿದ್ದ ಜೈಶ್‌ ಎ ಮೊಹಮ್ಮದ್‌ ಉvಗ್ರ ಸಂಘಟನೆಯ ಕಮಾಂಡರ್‌ ಒಬ್ಬ ಪಾಕಿಸ್ತಾನದಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ನಿಗೂಢವಾಗಿ ಸಾವನ್ನಪ್ಪಿರುವ ಉಗ್ರ. ಈ ನಿಗೂಢ ಸಾವು ಭಯೋತ್ಪಾದಕರಲ್ಲಿ ನಡುಕ ಹುಟ್ಟಿಸಿದೆ. ಮೌಲಾನಾ ಅಬ್ದುಲ್ ಅಜೀಜ್ ಕಳೆದ ತಿಂಗಳು ಪಾಕಿಸ್ತಾನದಲ್ಲಿ ನಡೆದ ಜೈಶ್ ಸಭೆಯಲ್ಲಿ ಭಾರತದ ವಿರುದ್ಧ ವಿಷ ಕಾರಿ, ಭಾರತಕ್ಕೂ ಯುಎಸ್ಎಸ್ಆರ್ ಗತಿಯಾಗಲಿದೆ

ಪಾಕಿಸ್ತಾನದ ಇನ್ನೋರ್ವ ಉಗ್ರ ಮುಖಂಡ ಫಿನಿಷ್‌ Read More »

ಪಾಕಿಸ್ತಾನದಲ್ಲಿ ನೀರಿಗಾಗಿ ಶುರುವಾಗಿದೆ ಹಾಹಾಕಾರ

ಸಿಂಧೂ ನದಿ ಒಪ್ಪಂದ ಪರಿಣಾಮ ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹ ಇಳಿಮುಖ ಇಸ್ಲಾಮಾಬಾದ್ : ಉಗ್ರರನ್ನು ಪೋಷಿಸುವ ಪಾಕಿಸ್ತಾನಕ್ಕೆ ಬುದ್ಧಿಕಲಿಸಲು ಭಾರತ ಕೈಗೊಂಡ ಸಿಂಧೂ ಜಲ ಒಪ್ಪಂದ ರದ್ದತಿಯ ಪರಿಣಾಮ ಈಗಲೇ ಅಲ್ಲಿ ಗೋಚರಿಸತೊಡ ಗಿದೆ. ಪಾಕಿಸ್ತಾನಕ್ಕೆ ಹೋಗುತ್ತಿದ್ದ ಬಹುಪಾಲು ನೀರನ್ನು ತಡೆ ಹಿಡಿದ ಪರಿಣಾಮ ಪಾಕಿಸ್ತಾನದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಅಲ್ಲಿನ ಪ್ರಮುಖ ಬೆಳೆಗಳು ಕೂಡ ಅಪಾಯದಲ್ಲಿವೆ. ವಿದೇಶಗಳಲ್ಲಿ ಭಿಕ್ಷಾಟನೆ ಮಾಡಿ ದುಡ್ಡು ಸಂಗ್ರಹಿಸಿ ಬದುಕು ಸಾಗಿಸುತ್ತಿರುವ ಪಾಕಿಸ್ತಾನದಲ್ಲಿ ಬಿತ್ತನೆ ಕಾಲ ಬಂದಾಗ ಪರಿಸ್ಥಿತಿ ತೀರಾ ಕೆಟ್ಟದಾಗಿರಲಿದೆ.

ಪಾಕಿಸ್ತಾನದಲ್ಲಿ ನೀರಿಗಾಗಿ ಶುರುವಾಗಿದೆ ಹಾಹಾಕಾರ Read More »

ರಷ್ಯಾ ವಾಯುನೆಲೆ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ : 40 ಯುದ್ಧ ವಿಮಾನಗಳು ನಾಶ

ಟ್ರಕ್‌ಗಳಲ್ಲಿ ಡ್ರೋನ್‌ಗಳನ್ನು ಸಾಗಿಸಿ ವಾಯುನೆಲೆಗಳ ಮೇಲೆ ದಾಳಿ ಮಾಡಿದ ಉಕ್ರೇನ್‌ ಮಾಸ್ಕೊ : ಒಂದೆಡೆ ರಷ್ಯಾ ಮತ್ತು ಉಕ್ರೇನ್ ಯುದ್ಧ ನಿಲ್ಲಿಸಲು ಪ್ರಯತ್ನ ನಡೆಯುತ್ತಿದ್ದರೆ ಇನ್ನೊಂದೆಡೆ ಕಾಳಗ ಭೀಕರ ಸ್ವರೂಪ ಪಡೆದುಕೊಂಡಿದೆ. ಉಭಯ ದೇಶಗಳ ನಡುವೆ ಶಾಂತಿ ಮಾತುಕತೆ ಆರಂಭವಾಗುವ ಮೊದಲೇ ಭಾನುವಾರ ಉಕ್ರೇನ್ ರಷ್ಯಾದ ವಾಯುನೆಲೆಗಳ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿ 40ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ನಾಶಮಾಡಿದೆ. ಈ ದಾಳಿ ಉಕ್ರೇನಿನ ಗುಪ್ತಚರ ಸಂಸ್ಥೆಗಳು ದೀರ್ಘಕಾಲದಿಂದ ಯೋಜಿಸಿ ಮಾಡಿದ ಕಾರ್ಯಾಚರಣೆಯಾಗಿತ್ತು. ಉಕ್ರೇನಿಯನ್ ಭದ್ರತಾ

ರಷ್ಯಾ ವಾಯುನೆಲೆ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ : 40 ಯುದ್ಧ ವಿಮಾನಗಳು ನಾಶ Read More »

ಹಮಾಸ್‌ ಮುಖ್ಯಸ್ಥ ಮುಹಮ್ಮದ್‌ ಸಿನ್ವಾರ್‌ ಇಸ್ರೇಲ್‌ ದಾಳಿಗೆ ಬಲಿ

ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಅಡಗಿಕೊಂಡಿದ್ದ ಉಗ್ರನನ್ನು ಹುಡುಕಿ ಕೊಂದ ಇಸ್ರೇಲ್‌ ಪಡೆ ಟೆಲ್‌ ಅವೀವ್‌: ಇಸ್ರೇಲ್ ವಾಯುದಾಳಿಯಲ್ಲಿ ಹಮಾಸ್‌ನ ಉಗ್ರಗಾಮಿ ಪಡೆಯ ಮುಖ್ಯಸ್ಥ ಮುಹಮ್ಮದ್ ಸಿನ್ವಾರ್ ಸತ್ತಿರುವುದನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೃಢಪಡಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ದಕ್ಷಿಣ ಗಾಜಾದಲ್ಲಿ ಇಸ್ರೇಲ್ ಮಿಲಿಟರಿಯಿಂದ ಕೊಲ್ಲಲ್ಪಟ್ಟ ಗಾಜಾದ ಮಾಜಿ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್‌ನ ಕಿರಿಯ ಸಹೋದರ ಮುಹಮ್ಮದ್ ಸಿನ್ವಾರ್. ಈತನನ್ನು ಸಾಯಿಸುವ ಮೂಲಕ ಹಮಾಸ್‌ ವಿರುದ್ಧದ ಯುದ್ಧದಲ್ಲಿ ಇಸ್ರೇಲ್‌ ನಿರ್ಣಾಯಕ ಗೆಲುವು ಪಡೆದುಕೊಂಡಿದೆ. ಗಾಜಾದ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಅಡಗಿಕೊಂಡಿದ್ದ

ಹಮಾಸ್‌ ಮುಖ್ಯಸ್ಥ ಮುಹಮ್ಮದ್‌ ಸಿನ್ವಾರ್‌ ಇಸ್ರೇಲ್‌ ದಾಳಿಗೆ ಬಲಿ Read More »

error: Content is protected !!
Scroll to Top