ವಿದೇಶ

ಪಾಕ್‌ ರೈಲು ಹೈಜಾಕ್‌ : ರಕ್ಷಣಾ ಕಾರ್ಯಾಚರಣೆ ಮುಕ್ತಾಯ, 33 ಬಂಡುಕೋರರ ಹತ್ಯೆ

500 ಪ್ರಯಣಿಕರಿದ್ದ ಪ್ಯಾಸೆಂಜರ್‌ ರೈಲನ್ನು ಅಪಹರಿಸಿದ್ದ ಬಲೂಚಿಸ್ಥಾನ ಬಂಡುಕೋರರು ಇಸ್ಲಾಮಾಬಾದ್‌ : ಬಲೂಚಿಸ್ಥಾನದಲ್ಲಿ ಜಾಫರ್‌ ಎಕ್ಸ್‌ಪ್ರೆಸ್‌ ಪ್ಯಾಸೆಂಜರ್‌ ರೈಲು ಅಪಹರಿಸಿ ಪ್ರಯಾಣಿಕರನ್ನು ಒತ್ತೆಸೆರೆಯಲ್ಲಿಟ್ಟಿದ್ದ ಎಲ್ಲ 33 ಬಂಡುಕೋರರನ್ನು ಸಾಯಿಸಿ, ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಪಾಕಿಸ್ಥಾನದ ಸೇನೆ ಹೇಳಿಕೊಂಡಿದೆ.ಮಂಗಳವಾರ ಕ್ವೆಟ್ಟಾದಿಂದ ಪೇಷಾವರಕ್ಕೆ ಬರುತ್ತಿದ್ದ ರೈಲನ್ನು ಬಲೂಚಿಸ್ಥಾನದ ಬಲೂನ್‌ ಎಂಬಲ್ಲಿ ಹಳಿಯನ್ನು ಸ್ಫೋಟಿಸಿ ಅಪಹರಿಸಿದ್ದ ಬಂಡುಕೋರರು ಪ್ರಯಾಣಿಕರನ್ನು ಒತ್ತೆಸೆರೆಯಲ್ಲಿಟ್ಟು, ಸೆರೆಮನೆಗಳಲ್ಲಿರುವ ಬಲೂಚಿಸ್ಥಾನದ ರಾಜಕೀಯ ಕೈದಿಗಳನ್ನು ಬಿಡುಗಡೆಗೊಳಿಸಿ ಬಲೂಚಿಸ್ಥಾನವನ್ನು ಸ್ವತಂತ್ರ ದೇಶವಾಗಿ ಘೋಷಿಸಬೇಕೆಂಬ ಬೇಡಿಕೆ ಇಟ್ಟಿದ್ದರು.ಾಪಹರಿಸಿದ ರೈಲಿನಲ್ಲಿ ಸುಮಾರು 500 ಪ್ರಯಾಣಿಕರು […]

ಪಾಕ್‌ ರೈಲು ಹೈಜಾಕ್‌ : ರಕ್ಷಣಾ ಕಾರ್ಯಾಚರಣೆ ಮುಕ್ತಾಯ, 33 ಬಂಡುಕೋರರ ಹತ್ಯೆ Read More »

ಪಾಕಿಸ್ಥಾನ ರೈಲು ಹೈಜಾಕ್‌ : 155 ಪ್ರಯಾಣಿಕರನ್ನು ರಕ್ಷಿಸಿದ ಭದ್ರತಾ ಪಡೆ

27 ಬಂಡುಕೋರರ ಹತ್ಯೆ, 200ಕ್ಕೂ ಅಧಿಕ ಪ್ರಯಾಣಿಕರು ಒತ್ತೆಸೆರೆಯಲ್ಲಿ ಇಸ್ಲಾಮಾಬಾದ್‌ : ಪಾಕಿಸ್ಥಾನದಲ್ಲಿ ಬಲೂಚಿಸ್ಥಾನದ ಪ್ರತ್ಯೇಕವಾದಿಗಳು ಒಂದಿಡೀ ರೈಲನ್ನು ಅಪಹರಿಸಿ ನೂರಾರು ಪ್ರಯಾಣಿಕರನ್ನು ಒತ್ತೆಸೆರೆಯಲ್ಲಿಟ್ಟುಕೊಂಡಿದ್ದು, ಪ್ರಯಾಣಿಕರನ್ನು ರಕ್ಷಿಸಲು ಭದ್ರತಾ ಪಡೆಗಳು ತೀವ್ರ ಕಾರ್ಯಾಚರಣೆ ನಡೆಸುತ್ತಿವೆ. ಮಂಗಳವಾರ ಕ್ವೆಟ್ಟಾದಿಂದ ಪೇಷಾವರಕ್ಕೆ ಬರುತ್ತಿದ್ದ ಜಾಫರ್‌ ಎಕ್ಸ್‌ಪ್ರೆಸ್‌ ಪ್ಯಾಸೆಂಜರ್‌ ರೈಲನ್ನು ʼದ ಬಲೂಚಿಸ್ಥಾನ್‌ ಲಿಬರೇಶನ್‌ ಆರ್ಮಿʼಯ ಬಂಡುಕೋರರು ಪ್ರಯಾಣಿಕರು ಮತ್ತು ಭದ್ರತಾ ಸಿಬ್ಬಂದಿ ಸಮೇತ ಅಪಹರಿಸಿಕೊಂಡು ಹೋಗಿದ್ದಾರೆ.ರಾತ್ರಿಗಾಗುವಾಗ ಮಹಿಳೆಯರು ಮತ್ತು ಮಕ್ಕಳು ಸೇರಿ 155 ಪ್ರಯಾಣಿಕರನ್ನು ರಕ್ಷಿಸಲಾಗಿದೆ, ಹಾಗೂ ಈ ಕಾರ್ಯಾಚರಣೆಯಲ್ಲಿ

ಪಾಕಿಸ್ಥಾನ ರೈಲು ಹೈಜಾಕ್‌ : 155 ಪ್ರಯಾಣಿಕರನ್ನು ರಕ್ಷಿಸಿದ ಭದ್ರತಾ ಪಡೆ Read More »

ಸಿರಿಯಾ : ಭದ್ರತಾ ಪಡೆಗಳಿಂದ 1000ಕ್ಕೂ ಅಧಿಕ ನಾಗರಿಕರ ಹತ್ಯೆ

ಮಾಜಿ ಅಧ್ಯಕ್ಷ ಅಸಾದ್‌ ಬೆಂಬಲಿಗರ ಮೇಲೆ ಪ್ರತೀಕಾರದ ಹಿಂಸಾಚಾರ ಬೇರೂತ್‌: ಸಿರಿಯಾದಲ್ಲಿ ಕಳೆದ ಎರಡು ದಿನಗಳಿಂದ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಾಶರ್‌ ಅಲ್‌ ಅಸಾದ್‌ ಬೆಂಬಲಿಗರ ನಡುವೆ ನಡೆಯುತ್ತಿರುವ ಭೀಕರ ಹಿಂಸಾಚಾರದಲ್ಲಿ 1000ಕ್ಕೂ ಅಧಿಕ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೆಡಿಟೇರಿಯನ್‌ ಕರಾವಳಿಯಲ್ಲಿ ಎರಡು ದಿನಗಳಿಂದ ಭೀಕರ ಹಿಂಸಾಚಾರ ನಡೆಯುತ್ತಿದೆ. ದಂಗೆಯೆದ್ದಿರುವ ಅಲ್ವೈಟ್‌ ಸಮುದಾಯದ ಜನರನ್ನು ಭದ್ರತಾ ಪಡೆ ನಿರ್ದಯವಾಗಿ ಸಾಯಿಸುತ್ತಿದೆ ಎನ್ನಲಾಗಿದೆ.ಸಿರಿಯಾದ ಹೊಸ ಸರಕಾರ ಮತ್ತು ಮಾಜಿ ಅಧ್ಯಕ್ಷ ಅಸಾದ್‌ ಬೆಂಬಲಿಗರ ನಡುವೆ

ಸಿರಿಯಾ : ಭದ್ರತಾ ಪಡೆಗಳಿಂದ 1000ಕ್ಕೂ ಅಧಿಕ ನಾಗರಿಕರ ಹತ್ಯೆ Read More »

ಚಾಂಪಿಯನ್ಸ್‌ ಟ್ರೋಫಿ : ಫೈನಲ್‌ ಪಂದ್ಯದ ಮೇಲೆ ನಡೆದಿದೆ ಭರ್ಜರಿ ಬೆಟ್ಟಿಂಗ್‌

ಭಾರತ-ನ್ಯೂಜಿಲ್ಯಾಂಡ್‌ ಫೈನಲ್‌ ಕದನಕ್ಕೆ ಕ್ಷಣಗಣನೆ; ಭಾರತವೇ ಬುಕ್ಕಿಗಳ ಫೇವರಿಟ್‌ ದುಬೈ : ಭಾರತ ಮತ್ತು ನ್ಯೂಜಿಲ್ಯಾಂಡ್‌ ತಂಡಗಳ ನಡುವೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಐಸಿಸಿ ಟೂರ್ನಿಯ ಫೈನಲ್​ನಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಭಾರತ ಗೆದ್ದ ಇತಿಹಾಸವಿಲ್ಲ. ಹೀಗಾಗಿ ಈ ಬಾರಿ ಏನಾಗಲಿದೆ ಎಂಬ ತೀವ್ರ ಕುತೂಹಲ ಕ್ರಿಕೆಟ್‌ ಪ್ರೇಮಿಗಳಲ್ಲಿದೆ. ಇದರ ಜೊತೆಗೆ ಈ ಪಂದ್ಯದ ಮೇಲೆ ಭರ್ಜರಿ ಬೆಟ್ಟಿಂಗ್‌ ಕೂಡ ನಡೆದಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ ಪಂದ್ಯ ಶುರುವಾಗಲಿದೆ.

ಚಾಂಪಿಯನ್ಸ್‌ ಟ್ರೋಫಿ : ಫೈನಲ್‌ ಪಂದ್ಯದ ಮೇಲೆ ನಡೆದಿದೆ ಭರ್ಜರಿ ಬೆಟ್ಟಿಂಗ್‌ Read More »

ಲಂಡನ್‌ನಲ್ಲಿ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮೇಲೆ ಖಲಿಸ್ಥಾನಿ ಉಗ್ರರಿಂದ ಹಲ್ಲೆ ಯತ್ನ

ವಾಹನಕ್ಕೆ ಕಟ್ಟಿದ್ದ ಭಾರತದ ಧ್ವಜವನ್ನು ಹರಿದು ಹಾಕಿದ ಉಗ್ರರು ಲಂಡನ್ : ಲಂಡನ್‌ಗೆ ಭೇಟಿ ನೀಡಿದ್ದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮೇಲೆ ಖಲಿಸ್ತಾನ್ ಉಗ್ರರ ಗುಂಪೊಂದು ದಾಳಿ ನಡೆಸಲು ಯತ್ನಿಸಿದ ಮಾಹಿತಿ ಲಭ್ಯವಾಗಿದೆ. ವರದಿಗಳ ಪ್ರಕಾರ ಸಚಿವರು ಶೆವನಿಂಗ್ ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಿಂದ ಹೊರಬಂದ ನಂತರ ಈ ಘಟನೆ ನಡೆದಿದೆ. ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ವೀಡಿಯೊವೊಂದರಲ್ಲಿ ವ್ಯಕ್ತಿಯೊಬ್ಬ ವಿದೇಶಾಂಗ ಸಚಿವರ ಕಾರಿನ ಕಡೆಗೆ ಓಡಿಹೋಗಿ ರಾಷ್ಟ್ರಧ್ವಜವನ್ನು ಹರಿದು ಹಾಕುತ್ತಿರುವುದು ಕಾಣಿಸುತ್ತಿದೆ. ಮತ್ತೊಂದು ವೀಡಿಯೊದಲ್ಲಿ ಖಾಲಿಸ್ಥಾನ್ ಉಗ್ರಗಾಮಿಗಳು ಹೊರಗೆ ಧ್ವಜಗಳನ್ನು

ಲಂಡನ್‌ನಲ್ಲಿ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮೇಲೆ ಖಲಿಸ್ಥಾನಿ ಉಗ್ರರಿಂದ ಹಲ್ಲೆ ಯತ್ನ Read More »

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್‌ ಫೈಟ್‌

ಆರು ಪ್ರಮುಖ ಆಟಗಾರರಿಲ್ಲದೆ ಆಸೀಸ್‌ ಕಂಗಾಲು, ಇಂಡಿಯಾಕ್ಕೆ ಸೆಲೆಕ್ಷನ್‌ ಕಗ್ಗಂಟು ದುಬೈ : ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್‌ ಪಂದ್ಯ ಇಂದು ದುಬೈಯಲ್ಲಿ ನಡೆಯಲಿದ್ದು, ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್​​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಪ್ರಮುಖ ಆಟಗಾರರು ಕಾಣಿಸಿಕೊಳ್ಳುವುದಿಲ್ಲ ಎಂಬುದು ವಿಶೇಷ. ಏಕೆಂದರೆ ಆಸೀಸ್ ಪಡೆಯ 6 ಮಂದಿ ಈಗಾಗಲೇ ನಾನಾ ಕಾರಣಗಳಿಂದಾಗಿ ಹೊರಗುಳಿದಿದ್ದಾರೆ. ಟೂರ್ನಿ ಆರಂಭಕ್ಕೂ ಮುನ್ನ ಮತ್ತು ಆ ಬಳಿಕ ತಂಡದಿಂದ

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್‌ ಫೈಟ್‌ Read More »

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ನ್ಯೂಜಿಲ್ಯಾಂಡ್‌ ಪಂದ್ಯ

ಸೆಮಿಫೈನಲ್‌ ತಲುಪಿದ ಎರಡು ತಂಡಗಳ ಮುಖಾಮುಖಿ ದುಬೈ : ಚಾಂಪಿಯನ್ಸ್ ಟ್ರೋಫಿಯ ಗುಂಪು ಹಂತದ ಕೊನೆಯ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಇಂದು ದುಬೈಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಎರಡೂ ತಂಡಗಳು ಈಗಾಗಲೇ ಸೆಮಿಫೈನಲ್‌ಗೆ ತಲುಪಿವೆ. ಗುಂಪು ಹಂತದಲ್ಲಿ ಅಗ್ರಸ್ಥಾನ ಪಡೆಯಲು ಎರಡೂ ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ. ಆದಾಗ್ಯೂ, ಮುಂಬರುವ ನಾಕೌಟ್ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಪಂದ್ಯದ ಗೆಲುವು ಉಭಯ ತಂಡಗಳಿಗೆ ಅವಶ್ಯಕವಾಗಿದೆ. ಹೀಗಾಗಿ ಭಾರತ ತಂಡ ಬಲಿಷ್ಠ

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ನ್ಯೂಜಿಲ್ಯಾಂಡ್‌ ಪಂದ್ಯ Read More »

ಉಕ್ರೇನ್‌ ಅಧ್ಯಕ್ಷ ಜೆಲೆನ್‌ಸ್ಕಿಯನ್ನು ಶ್ವೇತಭವನದಿಂದ ಹೊರದಬ್ಬಿದ ಟ್ರಂಪ್‌

ಉಭಯ ನಾಯಕರ ದ್ವಿಪಕ್ಷೀಯ ಮಾತುಕತೆ ವೇಳೆ ಮಾತಿನ ಚಕಮಕಿ ನಾವು ಸಾವು ತಡೆಯಲು ಯತ್ನಿಸಿದರೆ, ನೀವು ಹೆಣಗಳನ್ನು ನೋಡಲು ಹೋಗುತ್ತಿದ್ದೀರಿ ಎಂದು ಕೆಂಡಾಮಂಡಲವಾದ ಟ್ರಂಪ್‌ ವಾಷಿಂಗ್ಟನ್‌ : ಅಮೆರಿಕ ಮತ್ತು ಉಕ್ರೇನ್‌ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ಉಭಯ ದೇಶಗಳ ಧ್ಯಕ್ಷರ ಮಾತಿನ ಚಕಮಕಿಯಲ್ಲಿ ಅಂತ್ಯಗೊಂಡಿದ್ದು, ವ್ಲಾದಿಮಿರ್‌ ಜೆಲೆನ್‌ಸ್ಕಿಯನ್ನು ಡೊನಾಲ್ಡ್‌ ಟ್ರಂಪ್‌ ಅಕ್ಷರಶಃ ಶ್ವೇತಭವನದಿಂದ ಹೊರದಬ್ಬಿದ್ದಾರೆ. ಉಭಯ ದೇಶಗಳ ದ್ವಪಕ್ಷೀಯ ಮಾತುಕತೆ ಸಂದರ್ಭದಲ್ಲಿ ಈಂಥ ಘಟನೆ ನಡೆದಿರುವುದು ಅಪರೂಪದ ವಿದ್ಯಮಾನದ ಎನ್ನಲಾಗಿದೆ.ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು

ಉಕ್ರೇನ್‌ ಅಧ್ಯಕ್ಷ ಜೆಲೆನ್‌ಸ್ಕಿಯನ್ನು ಶ್ವೇತಭವನದಿಂದ ಹೊರದಬ್ಬಿದ ಟ್ರಂಪ್‌ Read More »

ನೇಪಾಳದಲ್ಲಿ ಪ್ರಬಲ ಭೂಕಂಪ : ಗಾಬರಿಯಾದ ಜನ

ಭಾರತ, ಚೀನಾದಲ್ಲೂ ಭೂಮಿ ಕಂಪಿಸಿದ ಅನುಭವ ಕಾಠ್ಮಂಡು: ನೇಪಾಳದ ಕಾಠ್ಮಂಡುವಿನಲ್ಲಿ ಇಂದು ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ. ನೇಪಾಳದ ಪೂರ್ವ ಮತ್ತು ಮಧ್ಯ ಭಾಗಗಳಲ್ಲಿರುವ ಜನರಿಗೆ ಭೂಕಂಪದ ಅನುಭವ ಆಗಿದೆ. ಭಾರತ,ಚೀನಾ ಮತ್ತು, ಟಿಬೆಟ್‌ನ ಕೆಲವು ಭಾಗಗಳಲ್ಲೂ ಭೂಕಂಪದ ಅನುಭವ ಆಗಿದೆ.ನೇಪಾಳದ ಮಧ್ಯ ಭಾಗದಲ್ಲಿರುವ ಹಿಮಾಲಯ ಪ್ರದೇಶದಲ್ಲಿ ಸಿಂಧುಪಾಲ್ ಚೌಕ್ ಜಿಲ್ಲೆಯ ಭೈರವಕುಂಡದಲ್ಲಿ ಭೂಕಂಪದ ಕೇಂದ್ರ ಬಿಂದು ಇದೆ ಎಂದು ಹೇಳಲಾಗಿದೆ. ಭೂಕಂಪದ ಕೇಂದ್ರಬಿಂದು ಸಿಂಧುಪಾಲ್ ಚೌಕ್ ಜಿಲ್ಲೆಯ ಭೈರವಕುಂಡದಲ್ಲಿದ್ದು,

ನೇಪಾಳದಲ್ಲಿ ಪ್ರಬಲ ಭೂಕಂಪ : ಗಾಬರಿಯಾದ ಜನ Read More »

ಚಾಂಪಿಯನ್ಸ್‌ ಟ್ರೋಫಿ ಕೂಟಕ್ಕೆ ಉಗ್ರರ ಕರಿನೆರಳು : ಒಬ್ಬೊಬ್ಬ ಆಟಗಾರನಿಗೆ 100 ಪೊಲೀಸರ ಭದ್ರತೆ

13 ಸಾವಿರ ಸೈನಿಕರಿಂದ ಕಟ್ಟೆಚ್ಚರದ ಕಾವಲು ಇಸ್ಲಾಮಾಬಾದ್‌ : ಪಾಕಿಸ್ಥಾನದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್‌ ಕೂಟದ ಮೇಲೆ ಭಯೋತ್ಪಾದಕರ ಕರಿನೆರಳು ಆವರಿಸಿದೆ. ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ (ಐಎಸ್‌ಕೆಪಿ) ಎಂಬ ಭಯೋತ್ಪಾದಕ ಸಂಘಟನೆ ವಿದೇಶಿ ಪ್ರವಾಸಿಗರನ್ನು ಅಪಹರಿಸಿ ಒತ್ತೆ ಹಣಕ್ಕೆ ಬೇಡಿಕೆ ಇಡಬಹುದು ಎಂಬ ಗುಪ್ತಚರ ಮಾಹಿತಿ ಬಂದ ಬಳಿಕ ಪಾಕಿಸ್ಥಾನದಲ್ಲಿ ಕ್ರಿಕೆಟ್‌ ಆಡುತ್ತಿರುವ ವಿದೇಶಿ ಆಟಗಾರರಿಗೆ ಜೀವ ಬೆದರಿಕೆ ಶುರುವಾಗಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಕೂಟಕ್ಕೆ ಪಾಕ್‌ ಸರಕಾರ ಭಾರಿ ಭದ್ರತೆಯ ಏರ್ಪಾಡು ಮಾಡಿದೆ.

ಚಾಂಪಿಯನ್ಸ್‌ ಟ್ರೋಫಿ ಕೂಟಕ್ಕೆ ಉಗ್ರರ ಕರಿನೆರಳು : ಒಬ್ಬೊಬ್ಬ ಆಟಗಾರನಿಗೆ 100 ಪೊಲೀಸರ ಭದ್ರತೆ Read More »

error: Content is protected !!
Scroll to Top