ವಿದೇಶ

ಶಾಂತಿ ಮಾತುಕತೆಯ ಪ್ರಸ್ತಾಪ ಇಟ್ಟ ಪಾಕ್‌ ಪ್ರಧಾನಿ ಶೆಹಬಾಜ್‌ ಶರೀಫ್‌

ಕಾಶ್ಮೀರ ಸಮಸ್ಯೆಯನ್ನೂ ಒಳಗೊಂಡು ಚರ್ಚೆಯ ಪ್ರಸ್ತಾಪ ಇಸ್ಲಾಮಾಬಾದ್: ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಮೂಲಕ ಕೊಟ್ಟ ಹೊಡೆತಕ್ಕೆ ತತ್ತರಿಸಿ ಹೋಗಿರುವ ಪಾಕಿಸ್ಥಾನ ಈಗ ತಾನಾಗಿಯೇ ಮಾತುಕತೆಗೆ ಮುಂದೆ ಬಂದಿದೆ. ಪಾಕಿಸ್ಥಾನ ಶಾಂತಿಗಾಗಿ ತೊಡಗಿಸಿಕೊಳ್ಳಲು ಸಿದ್ಧವಾಗಿದೆ ಎಂದು ಅಲ್ಲಿನ ಪ್ರಧಾನಿ ಶೆಹಬಾಜ್‌ ಶರೀಫ್‌ ಭಾರತದ ಮುಂದೆ ಮಾತುಕತೆ ಪ್ರಸ್ತಾಪ ಇಟ್ಟಿದ್ದಾರೆ. ಭಾರತದೊಂದಿಗಿನ ಮಿಲಿಟರಿ ಮುಖಾಮುಖಿಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಮತ್ತು ಸೈನಿಕರೊಂದಿಗೆ ಸಂವಾದ ನಡೆಸಲು ಗುರುವಾರ ಪಂಜಾಬ್ ಪ್ರಾಂತ್ಯದ ಕಮ್ರಾ ವಾಯುನೆಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶೆಹಬಾಜ್ ಈ ಹೇಳಿಕೆ ನೀಡಿದ್ದಾರೆ.ಶಾಂತಿಗಾಗಿ […]

ಶಾಂತಿ ಮಾತುಕತೆಯ ಪ್ರಸ್ತಾಪ ಇಟ್ಟ ಪಾಕ್‌ ಪ್ರಧಾನಿ ಶೆಹಬಾಜ್‌ ಶರೀಫ್‌ Read More »

ಅಮೇರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತ್ಯು

ವಾಷಿಂಗ್ಟನ್ : ಅಮೇರಿಕದ ನ್ಯೂಯಾರ್ಕ್ ನ ರಸ್ತೆ ಅಪಘಾತದಲ್ಲಿ ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಮಾಹಿತಿಯನ್ನು  ಭಾರತೀಯ ಕಾನ್ಸುಲೇಟ್ ಮಂಗಳವಾರ ತಿಳಿಸಿದೆ. ಮಾನವ್ ಪಟೇಲ್ (20) ಮತ್ತು ಸೌರವ್ ಪ್ರಭಾಕರ್ (23) ಮೃತಪಟ್ಟ ವಿದ್ಯಾರ್ಥಿಗಳೆನ್ನಲಾಗಿದೆ . ಲ್ಯಾಂಕಾಸ್ಟ‌ರ್ ಕೌಂಟಿ ಕರೋನರ್ ಕಚೇರಿಯ ಪ್ರಕಾರ, ಮೇ 10 ರಂದು ಪೂರ್ವ ಕೊಕಾಲಿಕೊ ಟೌನ್‌ಶಿಪ್‌ನಲ್ಲಿ ಅಪಘಾತ ಸಂಭವಿಸಿದಾಗ ಪ್ರಭಾಕರ್ ಕಾರು ಚಾಲನೆ ಮಾಡುತ್ತಿದ್ದರು. ಪ್ರಭಾಕರ್ ಮತ್ತು ಪಟೇಲ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಮುಂದಿನ

ಅಮೇರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತ್ಯು Read More »

ಲಾಹೋರ್‌ನಲ್ಲಿ ಹಗಲೇ ಭಾರಿ ಸ್ಫೋಟ : ಬೆಚ್ಚಿಬಿದ್ದ ಜನತೆ

ಪಾಕಿಸ್ಥಾನದ ಸೇನಾ ನೆಲೆಯ ಪಕ್ಕದಲ್ಲೇ ಸ್ಫೋಟ ಲಾಹೋರ್‌: ಭಾರತ ಆಪರೇಷನ್ ಸಿಂದೂರ್ ನಡೆಸಿದ ಮರುದಿನವೇ ಪಾಕಿಸ್ಥಾನದ ಪ್ರಮುಖ ನಗರ ಲಾಹೋರ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಜನರು ಭೀತಿಯಿಂದ ಹೊರಗೋಡಿ ಬಂದಿದ್ದಾರೆ. ಲಾಹೋರ್‌ನ ವಿಮಾನ ನಿಲ್ದಾಣದ ಬಳಿ ಈ ಸ್ಫೋಟ ಸಂಭವಿಸಿದೆ. ಇಲ್ಲಿಯೇ ಸಮೀಪ ಲಷ್ಕರ್‌ ಇ ತೈಬಾದ ಮುಖಂಡ ಹಾಫಿಜ್‌ ಸಯೀದ್‌ನ ಮನೆಯಿದೆ ಎಂದು ಕೆಲದಿನಗಳ ಹಿಂದೆ ವರದಿಯಾಗಿತ್ತು. ಇಂದು ಬೆಳಗ್ಗೆ ಪಾಕಿಸ್ಥಾನದ ಲಾಹೋರ್‌ನಲ್ಲಿ ದೊಡ್ಡ ಸ್ಫೋಟಗಳು ನಡೆದಿವೆ. ದೂರದವರೆಗೆ ಸ್ಫೋಟದ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಅಲರ್ಟ್

ಲಾಹೋರ್‌ನಲ್ಲಿ ಹಗಲೇ ಭಾರಿ ಸ್ಫೋಟ : ಬೆಚ್ಚಿಬಿದ್ದ ಜನತೆ Read More »

ರಕ್ತದ ಪ್ರತಿ ಹನಿಗೂ ಸೇಡು ತೀರಿಸುತ್ತೇವೆ: ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌

ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಯಿಂದ ಕಂಗೆಟ್ಟುಹೋದ ಪಾಕಿಸ್ಥಾನಕ್ಕೆ ಸೇಡಿನ ತವಕ ಇಸ್ಲಾಮಾಬಾದ್‌: ತನ್ನ ನೆಲದಲ್ಲಿರುವ ಉಗ್ರ ತಾಣಗಳ ಮೇಲೆ ಭಾರತ ನಡೆಸಿದ ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಯಿಂದ ಕಂಗೆಟ್ಟು ಹೋಗಿರುವ ಪಾಕಿಸ್ಥಾನ ಈಗ ಸೇಡು ತೀರಿಸಿಕೊಳ್ಳಲು ತವಕಿಸುತ್ತಿದೆ. ಪಾಕಿಸ್ಥಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳದೆ ಬಿಡುವುದಿಲ್ಲ ಎಂದು ತನ್ನ ದೇಶವಾಸಿಗಳಿಗೆ ಭರವಸೆ ನೀಡಿದ್ದಾರೆ. ಬುಧವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಷರೀಫ್‌, ಹಿಂದುಸ್ಥಾನ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ, ಅವರು ಮಾಡಿದ ತಪ್ಪಿಗೆ ಭಾರಿ ಬೆಲೆ ತೆರಬೇಕಾಗುತ್ತದೆ. ಪ್ರತಿ

ರಕ್ತದ ಪ್ರತಿ ಹನಿಗೂ ಸೇಡು ತೀರಿಸುತ್ತೇವೆ: ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ Read More »

ಐಇಡಿ ಸ್ಫೋಟದಿಂದ ಪಾಕ್‌ ಸೇನಾ ವಾಹನ ಛಿದ್ರ : 12 ಯೋಧರು ಸಾವು

ಸ್ಫೋಟದ ಬಿರುಸಿಗೆ ಹಲವು ಮೀಟರ್‌ ದೂರ ಹಾರಿದ ಸೈನಿಕರ ದೇಹಗಳು ಇಸ್ಲಾಮಾಬಾದ್‌ : ಭಾರತ ಆಪರೇಷನ್‌ ಸಿಂದೂರ್ ಮೂಲಕ ಪಾಕಿಸ್ಥಾನಕ್ಕೆ ಎಂದೂ ಮರೆಯಲಾಗದ ಏಟು ಕೊಟ್ಟಿದ್ದರೆ ಇನ್ನೊಂದೆಡೆಯಿಂದ ಬಲೂಚಿಸ್ಥಾನ ಸ್ವಾತಂತ್ರ್ಯ ಹೋರಾಟಗಾರರು ಪಾಕಿಸ್ಥಾನವನ್ನು ಇನ್ನಿಲ್ಲದಂತೆ ಕಾಡಲು ತೊಡಗಿದ್ದಾರೆ. ಪಾಕಿಸ್ಥಾನದ ಸೇನಾ ವಾಹನದ ಮೇಲೆ ಬಲೂಚಿಸ್ಥಾನ್ ಲಿಬರೇಷನ್ ಆರ್ಮಿ (ಬಿಎಲ್‌ಎ) ನಡೆಸಿದ ದಾಳಿಯಲ್ಲಿ ಕನಿಷ್ಠ 12 ಮಂದಿ ಪಾಕ್‌ ಯೋಧರು ಮೃತಪಟ್ಟಿದ್ದಾರೆ. ಐಇಡಿ ಮೂಲಕ ಪಾಕ್ ಸೇನಾ ವಾಹನವನ್ನು ಸ್ಫೋಟಿಸಿರುವುದಾಗಿ ಬಲೂಚಿಸ್ಥಾನ ಸೇನೆ ಹೇಳಿಕೊಂಡಿದೆ. ಈ ಘಟನೆ ಬಲೂಚಿಸ್ಥಾನದ

ಐಇಡಿ ಸ್ಫೋಟದಿಂದ ಪಾಕ್‌ ಸೇನಾ ವಾಹನ ಛಿದ್ರ : 12 ಯೋಧರು ಸಾವು Read More »

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಪಾಕಿಸ್ಥಾನಕ್ಕೆ ಮುಖಭಂಗ

ಪಹಲ್ಗಾಮ್‌ ದಾಳಿ ಕುರಿತು ಕಠಿಣ ಪ್ರಶ್ನೆಗಳನ್ನು ಕೇಳಿ ಛೀಮಾರಿ ಹೊಸದಿಲ್ಲಿ: ಪಹಲ್ಗಾಮ್‌ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ಸ್ಥಿತಿಯನ್ನು ವಿಶ್ವಸಂಸ್ಥೆಗೆ ಒಯ್ದು ಬಚವಾಗಲು ಯತ್ನಿಸಿದ್ದ ಕಂತ್ರಿ ಪಾಕಿಸ್ಥಾನಕ್ಕೆ ದೊಡ್ಡಮಟ್ಟದಲ್ಲಿ ಮುಖಭಂಗವಾಗಿದೆ. ಪಾಕಿಸ್ಥಾನದ ಒತ್ತಾಯದ ಮೇರೆಗೆ ಇಂದು ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ರಹಸ್ಯ ಸಮಾಲೋಚನಾ ಸಭೆಯಲ್ಲಿ ಯಾವುದೇ ನಿರ್ಣಯ ಕೈಗೊಂಡಿಲ್ಲ. ಆದರೆ ಇದೇ ವೇಳೆ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ಥಾನಕ್ಕೆ ವಿಶ್ವಸಂಸ್ಥೆ ಕಠಿಣ ಪ್ರಶ್ನೆಗಳನ್ನು ಕೇಳಿ ಛೀಮಾರಿ ಹಾಕಿದೆ. ಮೇ ತಿಂಗಳಿನ ವಿಶ್ವಸಂಸ್ಥೆ ಭದ್ರತಾ ಮಂಡಳಿಯ

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಪಾಕಿಸ್ಥಾನಕ್ಕೆ ಮುಖಭಂಗ Read More »

ಇಸ್ರೇಲ್‌ ಪ್ರತೀಕಾರದ ದಾಳಿ : ಯೆಮೆನ್‌ ಬಂದರು ಧ್ವಂಸ

30 ಯುದ್ಧ ವಿಮಾನಗಳಿಂದ ಬಾಂಬ್‌ಗಳ ಸುರಿಮಳೆ ಟೆಲ್‌ ಅವೀವ್‌: ತನ್ನ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಹೌತಿ ಉಗ್ರರು ದಾಳಿ ಮಾಡಿದ್ದಕ್ಕೆ ಪ್ರತೀಕಾರವಾಗಿ ಇಸ್ರೇಲ್‌ ಸೋಮವಾರ ರಾತ್ರಿ ಯೆಮೆನ್‌ನ ಹೊಡೈದಾ ಬಂದರು ಮೇಲೆ ಭಯಾನಕ ಬಾಂಬ್‌ ದಾಳಿ ನಡೆಸಿದೆ. ಈ ಸಾವಿನಿಂದಾದ ನಾಶನಷ್ಟ ಮತ್ತು ಸಾವುನೋವಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಆದರೆ ಇಡೀ ಬಂದರು ಮತ್ತು ಅದರ ಸಮೀಪವಿದ್ದ ಸಿಮೆಂಟ್‌ ಫ್ಯಾಕ್ಟರಿ ಸರ್ವನಾಶವಾಗಿದೆ ಎಂದು ವರದಿಗಳು ತಿಳಿಸಿವೆ. ಇಸ್ರೇಲ್‌ನ 30 ಯುದ್ಧ ವಿಮಾನಗಳು ಯೆಮೆನ್‌ನ ಹೊಡೈದಾ

ಇಸ್ರೇಲ್‌ ಪ್ರತೀಕಾರದ ದಾಳಿ : ಯೆಮೆನ್‌ ಬಂದರು ಧ್ವಂಸ Read More »

ಭಾರತದಿಂದ ಯುದ್ದ ಭೀತಿ : ಅಲ್ಲಾಹುನೇ ಈ ಯುದ್ಧ ನಿಲ್ಲಿಸಬೇಕು – ಪಾಕ್‍ ರಕ್ಷಣಾ ಸಚಿವ

ಇಸ್ಲಾಮಾಬಾದ್: ಭಾರತ ಮತ್ತು ಪಾಕ್ ನಡುವಿನ ಸಂಘರ್ಷದ ಸಾಧ್ಯತೆಗಳು ಹೆಚ್ಚುತ್ತಿವೆ. ಅಲ್ಲಾಹುನೇ ಈ ಯುದ್ಧ ನಿಲ್ಲಿಸಬೇಕು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಹೇಳಿಕೆ ನೀಡಿದ್ದಾರೆ. ನೆರೆಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆಯನ್ನು ಶಮನಗೊಳಿಸಲು ಇತರ ದೇಶಗಳು ಪ್ರಯತ್ನಗಳನ್ನು ಮಾಡಿದರೂ, ಕಾಲ ಕಳೆದಂತೆ ಭಾರತದೊಂದಿಗೆ ಸಂಘರ್ಷದ ಸಾಧ್ಯತೆಗಳು ಹೆಚ್ಚುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಗಮನಹರಿಸಿದಾಗ, ಕಾಲ ಕಳೆದಂತೆ ಸಂಘರ್ಷದ ಸಾಧ್ಯತೆ ಹೆಚ್ಚುತ್ತಿದ್ದು, ಕಡಿಮೆಯಾಗುತ್ತಿಲ್ಲ. ಆದರೂ ಅನೇಕ ದೇಶಗಳು ಪರಿಸ್ಥಿತಿಯನ್ನು ತಪ್ಪಿಸಲು ಪ್ರಯತ್ನಿಸುತ್ತಿವೆ ಎಂದು

ಭಾರತದಿಂದ ಯುದ್ದ ಭೀತಿ : ಅಲ್ಲಾಹುನೇ ಈ ಯುದ್ಧ ನಿಲ್ಲಿಸಬೇಕು – ಪಾಕ್‍ ರಕ್ಷಣಾ ಸಚಿವ Read More »

ಪಾಕಿಸ್ಥಾನದಲ್ಲಿ ತಾರಕಕ್ಕೇರಿದ ಯುದ್ಧ ಭೀತಿ : 36 ತಾಸಿನೊಳಗೆ ದಾಳಿ ಶುರುವಾಗಬಹುದು ಎಂದ ಸಚಿವ

ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿದ ಪಾಕ್‌ ಸರಕಾರ ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರ ಆಗಲೇಬೇಕು ಎಂದು ಭಾರತ ಪಣತೊಟ್ಟಿದೆ. ಭಾರತದ ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಕಾರ್ಯಾಚರಣೆ ನಡೆಸಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಇದರ ಬೆನ್ನಿಗೆ ಪಾಕಿಸ್ಥಾನದಲ್ಲಿ ಯುದ್ಧ ಭೀತಿ ತಾರಕಕ್ಕೇರಿದೆ. ಸ್ವತಹ ಪಾಕಿಸ್ಥಾನದ ಸಚಿವರೇ 36 ತಾಸಿನೊಳಗೆ ನಮ್ಮ ಮೇಲೆ ದಾಳಿಯಾಗಬಹುದು ಎಂದು ಹೇಳಿಕೊಂಡಿದ್ದಾರೆ. ಭಯೋತ್ಪಾದನೆಗೆ ತಕ್ಕ ಹೊಡೆತ ನೀಡುವುದು ನಮ್ಮ ರಾಷ್ಟ್ರೀಯ ಸಂಕಲ್ಪ ಎಂದು ಪ್ರಧಾನಿ ಪುನರುಚ್ಚರಿಸಿದ್ದಾರೆ. ಭಾರತೀಯ ಸೇನೆಯಲ್ಲಿ ನನಗೆ

ಪಾಕಿಸ್ಥಾನದಲ್ಲಿ ತಾರಕಕ್ಕೇರಿದ ಯುದ್ಧ ಭೀತಿ : 36 ತಾಸಿನೊಳಗೆ ದಾಳಿ ಶುರುವಾಗಬಹುದು ಎಂದ ಸಚಿವ Read More »

ಯುದ್ಧಕ್ಕೆ ಹೆದರಿ ಸೇನೆ ತೊರೆಯುತ್ತಿರುವ ಪಾಕ್‌ ಯೋಧರು

ಎರಡು ದಿನದಲ್ಲಿ 5 ಸಾವಿರಕ್ಕೂ ಅಧಿಕ ಸೈನಿಕರ ರಾಜೀನಾಮೆ ಇಸ್ಲಾಮಾಬಾದ್‌: ಪಹಲ್ಗಾಮ್‌ ಉಗ್ರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ಥಾನ ನಡುವೆ ಉದ್ವಿಗ್ನ ಸ್ಥಿತಿ ಉಂಟಾಗಿ ಯಾವುದೇ ಕ್ಷಣದಲ್ಲಿ ಯುದ್ಧ ಶುರುವಾಗಬಹುದು ಎಂಬ ಪರಿಸ್ಥಿತಿ ಇರುವಾಗಲೇ ಪಾಕಿಸ್ಥಾನ ವಿಚಿತ್ರ ಸಮಸ್ಯೆಯೊಂದರಲ್ಲಿ ಸಿಲುಕಿ ಒದ್ದಾಡುತ್ತಿದೆ. ಯುದ್ಧ ಭೀತಿಯಿಂದ ಪಾಕಿಸ್ಥಾನದ ಸೈನಿಕರು ಸಾಮೂಹಿಕವಾಗಿ ರಾಜೀನಾಮೆ ನೀಡಲು ಶುರು ಮಾಡಿದ್ದಾರೆ. ರಾಜೀನಾಮೆ ನೀಡಿದವರಲ್ಲಿ ಬರೀ ಸೈನಿಕರು ಮಾತ್ರವಲ್ಲ, ಕ್ಯಾಪ್ಟನ್‌, ಕಮಾಂಡರ್‌ಗಳು ಸೇರಿ ಸೇನೆಯ ಉನ್ನತ ಅಧಿಕಾರಿಗಳೂ ಇದ್ದಾರೆ ಎಂದು ಕೆಲವು ಮಾಧ್ಯಮಗಳು

ಯುದ್ಧಕ್ಕೆ ಹೆದರಿ ಸೇನೆ ತೊರೆಯುತ್ತಿರುವ ಪಾಕ್‌ ಯೋಧರು Read More »

error: Content is protected !!
Scroll to Top