ವಿದೇಶ

ಪಾಕಿಸ್ಥಾನದ ಭೂಸೇನಾ ಮುಖ್ಯಸ್ಥ ಮುನೀರ್‌ನನ್ನು ಉಗ್ರ ಒಸಾಮ ಬಿನ್‌ ಲಾಡೆನ್‌ಗೆ ಹೋಲಿಸಿದ ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ

ಪಹಲ್ಗಾಮ್‌ ದಾಳಿಗೆ ಮುನೀರ್‌ ಕಾರಣ ಎಂದು ನೇರ ಆರೋಪ ವಾಷಿಂಗ್ಟನ್‌ : ಪಾಕಿಸ್ತಾನದ ಭೂಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ಅಮೆರಿಕ ಅಲ್‌ ಕಾಯಿದಾ ಉಗ್ರ ಒಸಾಮಾ ಬಿನ್ ಲಾಡೆನ್‌ಗೆ ಹೋಲಿಸಿದೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರನ್ನು ಬಲಿ ಪಡೆದ ಭಯಾನಕ ದಾಳಿಯಲ್ಲಿ ಪಾಕಿಸ್ಥಾನದ ಪಾತ್ರವಿದೆ ಎಂದು ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ಮೈಕಲ್ ರೂಬಿನ್ ನೇರವಾಗಿ ಆರೋಪಿಸಿದ್ದಾರೆ. ಜನರಲ್‌ ಮುನೀರ್‌ ಅರಮನೆಯಲ್ಲಿ ವಾಸಿಸುತ್ತಿದ್ದರೆ, ಬಿನ್ ಲಾಡೆನ್ ಗುಹೆಯಲ್ಲಿ ವಾಸಿಸುತ್ತಿದ್ದ. ಇವರಿಬ್ಬರ ನಡುವೆ ಇದೊಂದೇ ವ್ಯತ್ಯಾಸ […]

ಪಾಕಿಸ್ಥಾನದ ಭೂಸೇನಾ ಮುಖ್ಯಸ್ಥ ಮುನೀರ್‌ನನ್ನು ಉಗ್ರ ಒಸಾಮ ಬಿನ್‌ ಲಾಡೆನ್‌ಗೆ ಹೋಲಿಸಿದ ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ Read More »

ಪಹಲ್ಗಾಮ್‌ ದಾಳಿಯ ಮಾಸ್ಟರ್‌ಮೈಂಡ್‌ ಸೈಫುಲ್ಲಾ ಖಾಲಿದ್‌

ಭಾರತದ ಪ್ರಧಾನಿಗಿಂತಲೂ ಹೆಚ್ಚಿನ ಭದ್ರತೆ ಇದೆಯಂತೆ ಪಾಕಿಸ್ಥಾನದ ಈ ಉಗ್ರನಿಗೆ ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸೂತ್ರಧಾರ ಸೈಫುಲ್ಲಾ ಖಾಲಿದ್‌ ಎಂಬ ಉಗ್ರ ಮುಖಂಡ ಎಂದು ತಿಳಿದುಬಂದಿದೆ. ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯ ಅಂಗಸಂಸ್ಥೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್‌ಎಫ್) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್ ಎನ್ನಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಈ ಸೈಫುಲ್ಲಾ ಖಾಲಿದ್‌. ಸೈಫುಲ್ಲಾ ಖಾಲಿದ್​ನನ್ನು ಸೈಫುಲ್ಲಾ

ಪಹಲ್ಗಾಮ್‌ ದಾಳಿಯ ಮಾಸ್ಟರ್‌ಮೈಂಡ್‌ ಸೈಫುಲ್ಲಾ ಖಾಲಿದ್‌ Read More »

ಶನಿವಾರ ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆ

ವ್ಯಾಟಿಕನ್ ಸಿಟಿ : ಏಪ್ರಿಲ್ 21ರಂದು ನಿಧನರಾಗಿರುವ ಕ್ರೈಸ್ತ ಧರ್ಮದ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ 8 ಗಂಟೆಗೆ ವ್ಯಾಟಿಕನ್ ನಗರದ ಸೇಂಟ್ ಪೀಟರ್ಸ್ ಬೆಸಿಲಿಕಾದಲ್ಲಿ ನಡೆಯಲಿದೆ ಎಂದು ವ್ಯಾಟಿಕನ್ ತಿಳಿಸಿದೆ.ಪೋಪ್ ಫ್ರಾನ್ಸಿಸ್ ಅವರ ಸಾರ್ವಜನಿಕ ದರ್ಶನ ಬುಧವಾರ ಸೇಂಟ್ ಪೀಟರ್ಸ್ ಬೆಸಿಲಿಕಾದಲ್ಲಿ ಪ್ರಾರಂಭವಾಗಿದೆ ಎಂದು ಕಾರ್ಡಿನಲ್‌ಗಳು ತಿಳಿಸಿದ್ದಾರೆ. ಅವರ ಶವಪೆಟ್ಟಿಗೆಯನ್ನು ಅವರು ವಾಸಿಸುತ್ತಿದ್ದ ವ್ಯಾಟಿಕನ್ ಹೋಟೆಲ್‌ನಿಂದ ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋದ ನಂತರ ಅಂತ್ಯಕ್ರಿಯೆ ನಡೆಸಲಾಗುವುದು.ಪೋಪ್ ಫ್ರಾನ್ಸಿಸ್ ಅವರ ಮರಣದ

ಶನಿವಾರ ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆ Read More »

ವಿಮಾನಕ್ಕೆ ಬೆಂಕಿ ಹತ್ತಿಕೊಂಡರೂ 282 ಪ್ರಯಾಣಿಕರು ಪವಾಡಸದೃಶವಾಗಿ ಪಾರು

ಟೇಕಾಫ್‌ ಆಗುತ್ತಿದ್ದ ವಿಮಾನದ ಎರಡೂ ಇಂಜಿನ್‌ಗಳಲ್ಲಿ ಬೆಂಕಿ ವಾಷಿಂಗ್ಟನ್‌: ಅಮೆರಿಕದ ಫ್ಲೋರಿಡಾದಲ್ಲಿ ಭೀಕರ ವಿಮಾನ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, 282 ಪ್ರಯಾಣಿಕರು ಪವಾಡಸದೃಶವಾಗಿ ಪಾರಾಗಿದ್ದಾರೆ. ಸೋಮವಾರ (ಸ್ಥಳೀಯ ಸಮಯ) ಒರ್ಲ್ಯಾಂಡೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೆಲ್ಟಾ ಏರ್ ಲೈನ್ಸ್ ವಿಮಾನ ಟೇಕ್ ಆಫ್ ಆಗುವಾಗ ವಿಮಾನದ ಎರಡೂ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡಿದೆ. ಇದನ್ನು ಗಮನಿಸಿದ ಪೈಲಟ್ ಕೂಡಲೇ ವಿಮಾನವನ್ನು ನಿಲ್ಲಿಸಿದ್ದು, ನಂತರ ಪ್ರಯಾಣಿಕರನ್ನು ತುರ್ತು ಸ್ಲೈಡ್‌ಗಳ ಮೂಲಕ ಸ್ಥಳಾಂತರಿಸಲಾಗಿದೆ.ಅಟ್ಲಾಂಟಾಗೆ ತೆರಳುತ್ತಿದ್ದ ವಿಮಾನ ರನ್‌ವೇಗೆ ಹೊರಟಾಗ ಎರಡು

ವಿಮಾನಕ್ಕೆ ಬೆಂಕಿ ಹತ್ತಿಕೊಂಡರೂ 282 ಪ್ರಯಾಣಿಕರು ಪವಾಡಸದೃಶವಾಗಿ ಪಾರು Read More »

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದೂ ಮುಖಂಡನ ಭೀಕರ ಹತ್ಯೆ

ಅಪಹರಿಸಿ ಮನಬಂದಂತೆ ಥಳಿಸಿ ಕೊಂದು ಹಾಕಿದ ದುಷ್ಕರ್ಮಿಗಳು ಢಾಕಾ : ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ನಾಯಕನನ್ನು ಮತಾಂಧರು ಭೀಕರವಾಗಿ ಸಾಯಿಸಿದ್ದಾರೆ. ಬಾಂಗ್ಲಾದೇಶ ಪೂಜಾ ಉದ್ಜಪನ್ ಪರಿಷತ್‌ನ ಬಿರಾಲ್ ಘಟಕದ ಉಪಾಧ್ಯಕ್ಷರಾಗಿದ್ದ ಭಾಬೇಶ್‌ ಚಂದ್ರ ಅವರನ್ನು ನಿನ್ನೆ ಭೀಕರವಾಗಿ ಕೊಲೆ ಮಾಡಲಾಗಿದೆ. ಭಾಬೇಶ್‌ ಚಂದ್ರ ಅವರನ್ನು ದಿನಾಜ್‌ಪುರದ ಬಳಿ ಅಪಹರಿಸಿ, ಮನಬಂದಂತೆ ಥಳಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ.ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಭಾಬೇಶ್‌ ಚಂದ್ರ ಅವರನ್ನು ಅಪಹರಣ ಮಾಡಿ ಬಿರಾಲ್‌ನಿಂದ ದಿನಾಜ್‌ಪುರ್‌ ಮಾರ್ಗವಾಗಿ ನರಾಬರಿ

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದೂ ಮುಖಂಡನ ಭೀಕರ ಹತ್ಯೆ Read More »

ಭಾರತೀಯ ಔಷಧ ಕಂಪನಿ ಗೋದಾಮಿನ ಮೇಲೆ ರಷ್ಯಾ ದಾಳಿ

ಉದ್ದೇಶಪೂರ್ವಕವಾಗಿ ದಾಳಿ ಮಾಡಿ ಔಷಧಗಳ ನಾಶ ಎಂದು ಆರೋಪಿಸಿದ ಉಕ್ರೇನ್‌ ನವದೆಹಲಿ: ಉಕ್ರೇನ್‌ನ ಕೀವ್‌ನಲ್ಲಿರುವ ಭಾರತೀಯ ಮೂಲದ ಔಷಧ ಕಂಪನಿಯ ಗೋದಾಮನ್ನು ರಷ್ಯಾ ಕ್ಷಿಪಣಿ ದಾಳಿ ನಡೆಸಿ ನಾಶ ಮಾಡಿದೆ ಎಂದು ಉಕ್ರೇನ್‌ ಹೇಳಿಕೊಂಡಿದೆ. ಉಕ್ರೇನ್‌ನಲ್ಲಿರುವ ಭಾರತೀಯ ವ್ಯವಹಾರಗಳನ್ನು ಭಾರತದ ಪರಮಾಪ್ತ ಮಿತ್ರ ಎಂದು ಹೇಳಿಕೊಳ್ಳುವ ರಷ್ಯಾ ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿದೆ ಎಂದು ಭಾರತದಲ್ಲಿನ ಉಕ್ರೇನ್‌ನ ರಾಯಭಾರ ಕಚೇರಿ ಆರೋಪಿಸಿದೆ.ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿ ಕುಸುಮ್‌ನ ಗೋದಾಮಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಭಾರತದೊಂದಿಗೆ ವಿಶೇಷ ಸ್ನೇಹವಿದೆ

ಭಾರತೀಯ ಔಷಧ ಕಂಪನಿ ಗೋದಾಮಿನ ಮೇಲೆ ರಷ್ಯಾ ದಾಳಿ Read More »

ಹಾರುತ್ತಿರುವಾಗಲೇ ರೆಕ್ಕೆ ತುಂಡಾಗಿ ಹೆಲಿಕಾಪ್ಟರ್‌ ನದಿಗೆ ಪತನ : 6 ಮಂದಿ ಸಾವು

ನ್ಯೂಯಾರ್ಕ್ : ಹಾರುತ್ತಿದ್ದ ಹೆಲಿಕಾಪ್ಟರ್‌ನ ರೆಕ್ಕೆ ತುಂಡಾದ ಪರಿಣಾಮ ಅದು ನದಿಗೆ ಪತನಗೊಂಡು ಆರು ಮಂದಿ ಮೃತಪಟ್ಟ ಘಟನೆ ಅಮೆರಿಕದ ಮ್ಯಾನ್‌ಹಾಟನ್ ಬಳಿ ಸಂಭವಿಸಿದ್ದು, ಈ ಅವಘಡದ ವೀಡಿಯೊ ಜಗತ್ತಿನಾದ್ಯಂತ ಸಿಕ್ಕಾಪಟ್ಟೆ ವೈರಲ್‌ ಆಗಿದೆ.ಗುರುವಾರ ಹೆಲಿಕಾಪ್ಟರ್ ಹಡ್ಸನ್‌ ನದಿಗೆ ಬಿದ್ದಿದೆ. ಮೃತಪಟ್ಟವರಲ್ಲಿ ಸೀಮನ್ಸ್ ಕಂಪನಿಯ ಅಧ್ಯಕ್ಷ ಆಗಸ್ಟಿನ್ ಎಸ್ಕೋಬರ್, ಅವರ ಪತ್ನಿ ಹಾಗೂ ಮೂವರು ಮಕ್ಕಳು ಸೇರಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಅಮೆರಿಕದಲ್ಲಿ ವಾಯುಮಾರ್ಗ ಮಧ್ಯದಲ್ಲಿ ಸಂಭವಿಸುತ್ತಿರುವ ಅಪಘಾತಗಳ ಸರಣಿಗೆ ಇದು ಹೊಸ ಸೇರ್ಪಡೆಯಾಗಿದೆ.ಪ್ರತ್ಯಕ್ಷದರ್ಶಿಗಳು ಈ ಘಟನೆಯನ್ನು

ಹಾರುತ್ತಿರುವಾಗಲೇ ರೆಕ್ಕೆ ತುಂಡಾಗಿ ಹೆಲಿಕಾಪ್ಟರ್‌ ನದಿಗೆ ಪತನ : 6 ಮಂದಿ ಸಾವು Read More »

ಯೆಹೂದಿಗಳ ವಿರುದ್ಧ ಪೋಸ್ಟ್‌ ಹಾಕಿದರೆ ಸಿಗಲ್ಲ ಅಮೆರಿಕ ವಿಸಾ

ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿರುವವರಿಗೆ ತನ್ನಲ್ಲಿ ಜಾಗವಿಲ್ಲ ಎಂಬ ಕಠಿಣ ಸಂದೇಶ ವಾಷಿಂಗ್ಟನ್: ವಲಸಿಗರ ವಿಚಾರದಲ್ಲಿ ಅಮೆರಿಕ ಕಠಿಣ ನಿಲುವು ತಳೆದಿರುವ ಅಮೆರಿಕ ಮತ್ತೆ ಹೊಸ ನಿಯಮವೊಂದನ್ನು ಜಾರಿ ಮಾಡಿದ್ದು, ಯೆಹೂದಿ ಸಮುದಾಯವನ್ನು ನಿಂದಿಸುವವರಿಗೆ ವಿಸಾ ನೀಡದಿರಲು ನಿರ್ಧರಿಸಿದೆ.ಸೋಷಿಯಲ್ ಮೀಡಿಯಾದಲ್ಲಿ ಯಾರಾದರೂ ಯೆಹೂದಿಗಳ ವಿರುದ್ಧ ಪೋಸ್ಟ್ ಹಾಕಿದರೆ ಅಂಥವರಿಗೆ ವೀಸಾ ಹಾಗೂ ಗ್ರೀನ್ ಕಾರ್ಡ್ ನೀಡುವುದಿಲ್ಲ ಎಂದು ತಿಳಿಸಿದೆ. ಈ ಆದೇಶ ತಕ್ಷಣದಿಂದಲೇ ಜಾರಿಯಾಗಲಿದೆ ಎಂದು ವಲಸಿಗರನ್ನು ಎಚ್ಚರಿಸಿದೆ.ವಿದ್ಯಾರ್ಥಿ ವೀಸಾ ಸೇರಿದಂತೆ ಗ್ರೀನ್ ಕಾರ್ಡ್ ಅರ್ಜಿದಾರರ ಸೋಷಿಯಲ್

ಯೆಹೂದಿಗಳ ವಿರುದ್ಧ ಪೋಸ್ಟ್‌ ಹಾಕಿದರೆ ಸಿಗಲ್ಲ ಅಮೆರಿಕ ವಿಸಾ Read More »

ಮುಂಬಯಿ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಭಾರತಕ್ಕೆ ಗಡಿಪಾರು

ಬಿಗುಭದ್ರತೆಯಲ್ಲಿ ಕರೆತರುತ್ತಿರುವ ಅಧಿಕಾರಿಗಳು, ತಡರಾತ್ರಿ ಬಂದಿಳಿಯುವ ಸಾಧ್ಯತೆ ನವದೆಹಲಿ : ವಾಣಿಜ್ಯ ನಗರಿ ಮುಂಬಯಿ ಮೇಲೆ 2008ರಲ್ಲಾದ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಕೊನೆಗೂ ಅಮೆರಿಕದಿಂದ ಗಡಿಪಾರು ಆಗಿದ್ದು, ಇಂದು ಅಧಿಕಾರಿಗಳು ಅವನನ್ನು ಭಾರತಕ್ಕೆ ಕರೆತರುತ್ತಿದ್ದಾರೆ. ತನಿಖಾಧಿಕಾರಿಗಳ ಜೊತೆ ವಿಶೇಷ ಭದ್ರತಾ ತಂಡವೊಂದು ತಹಾವುರ್‌ ರಾಣಾನನ್ನು ಭಾರತಕ್ಕೆ ಕರೆತರುತ್ತಿದೆ. ತಡರಾತ್ರಿ ಅಥವಾ ನಾಳೆ ನಸುಕಿನ ಹೊತ್ತು ಅವರ ವಿಮಾನ ಭಾರತದಲ್ಲಿ ಬಂದಿಳಿಯಲಿದೆ. ತಹಾವುರ್‌ ರಾಣಾನನ್ನು ಯಾವ ಜೈಲಿನಲ್ಲಿಡಲಾಗುತ್ತದೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಆದರೆ ದಿಲ್ಲಿಯ

ಮುಂಬಯಿ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಭಾರತಕ್ಕೆ ಗಡಿಪಾರು Read More »

ಇಸ್ರೇಲ್‌ ದಾಳಿಗೆ 10 ದಿನದಲ್ಲಿ 300 ಮಕ್ಕಳು ಸಾವು : ಯುನಿಸೆಫ್‌ ವರದಿ

15,000ಕ್ಕೂ ಅಧಿಕ ಮಕ್ಕಳನ್ನು ಬಲಿತೆಗೆದುಕೊಂಡ 18 ತಿಂಗಳ ಯುದ್ಧ ಗಾಜಾ: ಕದನ ವಿರಾಮ ಒಪ್ಪಂದ ಆದ ಬಳಿಕ ಪ್ಯಾಲೆಸ್ತೀನ್‌ ಮೇಲೆ ಇಸ್ರೇಲ್‌ ನಡೆಸಿದ ಎರಡನೇ ಸುತ್ತಿನ ದಾಳಿಯಲ್ಲಿ 300ಕ್ಕೂ ಅಧಿಕ ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ವಿಶ್ವಸಂಸ್ಥೆಯ ಯುನಿಸೆಫ್‌ ವರದಿ ತಿಳಿಸಿದೆ. ಗಾಜಾದ ಪ್ಯಾಲೆಸ್ತೀಯನ್‌ ಪ್ರದೇಶದಲ್ಲಿ ಕಳೆದ 10 ದಿನಗಳಲ್ಲಿ 322 ಮಕ್ಕಳು ಸಾವನ್ನಪ್ಪಿದ್ದಾರೆ. 609 ಮಕ್ಕಳು ಗಾಯಗೊಂಡಿದ್ದಾರೆ ಎಂದು ಯುನಿಸೆಫ್ ತಿಳಿಸಿದೆ. ಮಾ.23ರಂದು ದಕ್ಷಿಣ ಗಾಜಾದಲ್ಲಿರುವ ಅಲ್ ನಾಸರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮೇಲೆ ನಡೆದ ದಾಳಿಯಲ್ಲಿ

ಇಸ್ರೇಲ್‌ ದಾಳಿಗೆ 10 ದಿನದಲ್ಲಿ 300 ಮಕ್ಕಳು ಸಾವು : ಯುನಿಸೆಫ್‌ ವರದಿ Read More »

error: Content is protected !!
Scroll to Top