ವಿದೇಶ

ಜಗತ್ತಿನ ಗಮನ ಸೆಳೆದ ಮೋದಿ-ಟ್ರಂಪ್‌ ಮಾತುಕತೆ

ಯುದ್ಧದ ನಡುವೆ ಮೋದಿಗೆ ಕರೆ ಮಾಡಿ 40 ನಿಮಿಷ ಚರ್ಚಿಸಿದ ಟ್ರಂಪ್‌ ನವದೆಹಲಿ: ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಹಾಗೂ ಶಾಂತಿ ಮಾತುಕತೆ ವಿಫಲವಾದ ನಂತರ ಪ್ರಧಾನಿ ನರೇಂದ್ರ ಮೋದಿಗೆ ಮೊದಲ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿದ್ದಾರೆ. ಇಬ್ಬರೂ ನಾಯಕರು 40 ನಿಮಿಷಗಳ ಕಾಲ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದಾರೆ. ಅಮೆರಿಕದ ಹಾರ್ಮುಜ್ ಜಲಸಂಧಿ ದಿಗ್ಬಂಧನ ನಡುವೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಧಾನಿ ಮೋದಿ ಮಂಗಳವಾರ ದೂರವಾಣಿಯಲ್ಲಿ 40 ನಿಮಿಷ ಸಂಭಾಷಣೆ ನಡೆಸಿರುವುದು […]

ಜಗತ್ತಿನ ಗಮನ ಸೆಳೆದ ಮೋದಿ-ಟ್ರಂಪ್‌ ಮಾತುಕತೆ Read More »

7 ವರ್ಷದ ಬಳಿಕ ಇರಾನ್‌ ತೈಲ ಹೊತ್ತ ಹಡಗುಗಳು ಭಾರತಕ್ಕೆ ಆಗಮನ

ಯುದ್ಧದ ನಡುವೆಯೇ ಭಾರತಕ್ಕೆ ತೈಲ ನೀಡಿದ ಇರಾನ್‌ ಮುಂಬೈ: ತೈಲ ಸಂಸ್ಕರಣಾಗಾರರಿಗೆ ಕಳೆದ ತಿಂಗಳು ಅಮೆರಿಕ (America) ನೀಡಿದ್ದ ತಾತ್ಕಾಲಿಕ ವಿನಾಯಿತಿ ಬಳಸಿಕೊಂಡು ಭಾರತ 7 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇರಾನ್‌ನಿಂದ ಕಚ್ಚಾತೈಲ ಖರೀದಿ ಮಾಡಿದೆ. ಇರಾನಿನ ಕಚ್ಚಾತೈಲ ತುಂಬಿದ 2 ಬೃಹತ್‌ ಟ್ಯಾಂಕರ್‌ಗಳು ಭಾರತದ ಬಂದರುಗಳನ್ನು ತಲುಪಿವೆ ಎಂದು ಎಲ್‌ಎಸ್‌ಇಜಿ ಹಡಗು ಟ್ರ್ಯಾಕಿಂಗ್‌ ದತ್ತಾಂಶ ತೋರಿಸಿದೆ ಎಂದು ವರದಿಯಾಗಿದೆ. ಹಡಗು ಟ್ರ್ಯಾಕಿಂಗ್‌ ದತ್ತಾಂಶದ ಪ್ರಕಾರ ಇರಾನ್‌ನ ಧ್ವಜ ಹೊತ್ತ ʻFelicityʼ ಹಡಗು ಪಶ್ಚಿಮ ಭಾರತದ

7 ವರ್ಷದ ಬಳಿಕ ಇರಾನ್‌ ತೈಲ ಹೊತ್ತ ಹಡಗುಗಳು ಭಾರತಕ್ಕೆ ಆಗಮನ Read More »

ಭಾರತದ ತೈಲ ಟ್ಯಾಂಕರ್‌ಗಳಿಗೆ ಶುಲ್ಕವಿಲ್ಲ : ಇರಾನ್‌ ಭರವಸೆ

ಹಾರ್ಮುಜ್‌ ಜಲಸಂಧಿ ಹಾದು ಹೋಗುವ ಹಡಗುಗಳಿಂದ ಶುಲ್ಕ ವಸೂಲಿ ಟೆಹರಾನ್: ಇರಾನ್ ಬಂದರುಗಳನ್ನು ಅಮೆರಿಕ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು, ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಸುಂಕವನ್ನು ವಿಧಿಸುವುದಿಲ್ಲ ಎಂದು ಇರಾನ್ ಭಾರತಕ್ಕೆ ಮತ್ತೆ ಭರವಸೆ ನೀಡಿದೆ. ಉಭಯ ರಾಷ್ಟ್ರಗಳು ಬಲವಾದ ಸಂಬಂಧ ಹೊಂದಿದ್ದು, ಸಾಮಾನ್ಯ ಹಿತಾಸಕ್ತಿ ಹೊಂದಿವೆ ಎಂದು ಭಾರತದಲ್ಲಿರುವ ಇರಾನ್ ರಾಯಭಾರಿ ಹೇಳಿದ್ದು, ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳ ಸಂಚಾರಕ್ಕೆ ನಿರಂತರ ಸಹಕಾರವನ್ನು

ಭಾರತದ ತೈಲ ಟ್ಯಾಂಕರ್‌ಗಳಿಗೆ ಶುಲ್ಕವಿಲ್ಲ : ಇರಾನ್‌ ಭರವಸೆ Read More »

ಸಮರ ಸಂಧಾನ ಕೆಡಿಸಿದ್ದು ನೆತನ್ಯಾಹು ಫೋನ್‌ ಕರೆ!

ಒಂದು ಫೋನ್‌ ಕರೆಯಿಂದಾಗಿ ಇಡೀ ಮಾತುಕತೆ ವಿಫಲವಾಯಿತು ಎಂದು ದೂರಿದ ಇರಾನ್‌ ಟೆಹ್ರಾನ್‌: ಅಮೆರಿಕ ಮತ್ತು ಇರಾನ್ ನಡುವೆ ಸಂಧಾನವಾಗಿ ಯುದ್ಧ ನಿಂತು ಜಗತ್ತು ಶಾಂತಿಯತ್ತ ಮರಳುತ್ತದೆ ಎಂಬ ನಿರೀಕ್ಷೆ ನಿನ್ನೆ ಹುಸಿಯಾಗಿದೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾಯಿತು.‌ ಈ ಬೆಳವಣಿಯ ಕೆಲ ಗಂಟೆಗಳ ನಂತರ ಇರಾನ್‌ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್‌ ಪ್ರಧಾನಿ ಕಾರಣ ಎಂದು ಹೇಳಿದೆ. ಅಮೆರಿಕ – ಇರಾನ್‌ ಮಾತುಕತೆ ಮಧ್ಯೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌

ಸಮರ ಸಂಧಾನ ಕೆಡಿಸಿದ್ದು ನೆತನ್ಯಾಹು ಫೋನ್‌ ಕರೆ! Read More »

ಪಾಕಿಸ್ತಾನ ಕರಾವಳಿ ರಕ್ಷಣಾ ಪಡೆಯ ಮೇಲೆ ಬಲೂಚಿಸ್ತಾನ ಬಂಡುಕೋರರ ದಾಳಿ : ಮೂವರು ಸಾವು

ದಾಳಿಯನ್ನು ಭೂಮಿಯಿಂದ ಸಮುದ್ರಕ್ಕೆ ವಿಸ್ತರಿಸಿದ ಬಂಡುಕೋರರು ಇಸ್ಲಾಮಾಬಾದ್ : ಬಲೂಚಿಸ್ತಾನದ ಬಂಡುಕೋರರು ಭಾನುವಾರ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನ ಕರಾವಳಿ ರಕ್ಷಣಾ ಪಡೆಯ ಮೇಲೆ ನಡೆಸಿದ ಭೀಕರ ದಾಳಿಯಲ್ಲಿ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಕಡಲ ಪ್ರಾಧಿಕಾರದ ಹಡಗಿನ ಮೇಲೆ ನಡೆದ ಇತಿಹಾಸದ ಮೊದಲ ದಾಳಿ ಇದಾಗಿದೆ. ಪಾಕಿಸ್ತಾನ-ಇರಾನ್ ಗಡಿಯ ಸಮೀಪವಿರುವ ಕರಾವಳಿ ಪ್ರದೇಶದಲ್ಲಿ ಕೋಸ್ಟ್ ಗಾರ್ಡ್ ದೋಣಿಯು ಎಂದಿನಂತೆ ಗಸ್ತು ತಿರುಗುತ್ತಿತ್ತು. ಈ ವೇಳೆ ದೋಣಿಯನ್ನು ಸುತ್ತುವರಿದ ಬಂಡುಕೋರರು ಮನಬಂದಂತೆ ಗುಂಡಿನ ಮಳೆ ಕರೆದಿದ್ದಾರೆ. ಅನಿರೀಕ್ಷಿತ ದಾಳಿಯಿಂದ ಕಂಗೆಟ್ಟ

ಪಾಕಿಸ್ತಾನ ಕರಾವಳಿ ರಕ್ಷಣಾ ಪಡೆಯ ಮೇಲೆ ಬಲೂಚಿಸ್ತಾನ ಬಂಡುಕೋರರ ದಾಳಿ : ಮೂವರು ಸಾವು Read More »

ಅಮೆರಿಕ-ಇರಾನ್‌ ಸಂಧಾನ ವಿಫಲ : ಮತ್ತೆ ಯುದ್ಧದ ಕಾರ್ಮೋಡ

ಒಪ್ಪಂದವಿಲ್ಲದೆ ಹಿಂದಿರುಗಿದ ಅಮೆರಿಕದ ರಾಜತಾಂತ್ರಿಕರು ಇಸ್ಲಾಮಾಬಾದ್‌: ಅಮೆರಿಕ ಮತ್ತು ಇರಾನ್ ನಡುವಿನ ದೀರ್ಘಕಾಲದ ವೈಮನಸ್ಸು ಶಮನಗೊಳಿಸಲು ಪಾಕಿಸ್ತಾನದಲ್ಲಿ ನಡೆದ ಸಂಧಾನಕ್ಕೆ ಹಿನ್ನಡೆಯಾಗಿದೆ. ಸತತ 21 ಗಂಟೆಗಳ ಕಾಲ ಎರಡೂ ದೇಶಗಳ ಪ್ರತಿನಿಧಿಗಳು ಮುಖಾಮುಖಿಯಾಗಿ ಚರ್ಚಿಸಿದರೂ ಅಂತಿಮವಾಗಿ ಯಾವುದೇ ಒಪ್ಪಂದಕ್ಕೆ ಸಹಿ ಹಾಕಲು ಸಾಧ್ಯವಾಗಿಲ್ಲ ಎಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಘೋಷಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ನಡೆದ ಸುದೀರ್ಘ 21 ಗಂಟೆಗಳ ಹೈವೋಲ್ಟೇಜ್ ರಾಜತಾಂತ್ರಿಕ ಸಂವಾದ ಅಂತಿಮವಾಗಿ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಇಡೀ ಜಗತ್ತು ಕುತೂಹಲದಿಂದ ಕಾಯುತ್ತಿದ್ದ ಅಮೆರಿಕ-ಇರಾನ್ ನೇರ

ಅಮೆರಿಕ-ಇರಾನ್‌ ಸಂಧಾನ ವಿಫಲ : ಮತ್ತೆ ಯುದ್ಧದ ಕಾರ್ಮೋಡ Read More »

ಇಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್‌ ಕದನ ವಿರಾಮ ಮಾತುಕತೆ

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನಡೆಯುತ್ತಿರುವ ಮಾತುಕತೆ ಮೇಲೆ ಜಗತ್ತಿನ ದೃಷ್ಟಿ ಇಸ್ಲಾಮಾಬಾದ್ : ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆರಂಭಗೊಂಡಿದೆ. ಈ ಮಹತ್ವದ ಸಭೆಯಲ್ಲಿ ಅಮೆರಿಕವನ್ನು ಉಪಾಧ್ಯಕ್ಷ ಜೆಡಿ ಬ್ಯಾನ್ಸ್ ಪ್ರತಿನಿಧಿಸುತ್ತಿದ್ದರೆ, ಇರಾನ್ ಸ್ಪೀಕರ್ ಮೊಹಮ್ಮದ್ ಭಗರ್ ಭಾಗಿಯಾಗಿದ್ದಾರೆ. ಮಾತುಕತೆಗೂ ಮುನ್ನ ಎರಡು ವಾರಗಳ ಕದನ ವಿರಾಮ ಘೋಷಿಸಲಾಗಿತ್ತು. ಉಭಯ ರಾಷ್ಟ್ರಗಳ ನಡುವಿನ ಒಪ್ಪಂದಗಳು ಮತ್ತು ಅವುಗಳ ಷರತ್ತುಗಳ ಕುರಿತು ಇಂದು ಚರ್ಚೆ ನಡೆಯಲಿದೆ. ನಾಯಕರ ಸುರಕ್ಷತೆ ದೃಷ್ಟಿಯಿಂದ ಇಸ್ಲಾಮಾಬಾದ್ ನಗರವನ್ನು ಸಂಪೂರ್ಣವಾಗಿ

ಇಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್‌ ಕದನ ವಿರಾಮ ಮಾತುಕತೆ Read More »

ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್-2 ಮಿಷನ್‌

ಫೆಸಿಫಿಕ್‌ ಮಹಾಸಾಗರದಲ್ಲಿ ಲ್ಯಾಂಡ್‌ ಆದ ನಾಲ್ವರು ಗಗನಯಾತ್ರಿಗಳು ನ್ಯೂಯಾರ್ಕ್‌: ಚಂದ್ರನ ಸುತ್ತಲೂ ಐತಿಹಾಸಿಕ ಪ್ರಯಾಣ ಪೂರ್ಣಗೊಳಿಸಿದ ಬಳಿಕ ನಾಸಾದ ಆರ್ಟಿಮಿಸ್-2 ಮಿಷನ್‌ ಈಗ ಭೂಮಿಗೆ ಮರಳಿದೆ. ನಾಲ್ವರು ಗಗನಯಾತ್ರಿಗಳು ಭಾರತೀಯ ಕಾಲಮಾನದ ಪ್ರಕಾರ ಶನಿವಾರ ನಸುಕಿನ ಹೊತ್ತು ಫೆಸಿಫಿಕ್‌ ಮಹಾಸಾಗರದಲ್ಲಿ ಪ್ಯಾರಾಚೂಟ್‌ ಮೂಲಕ ಸುರಕ್ಷಿತವಾಗಿ ಇಳಿದಿದ್ದು, ಅವರನ್ನು ಕೂಡಲೇ ಭೂಮಿಗೆ ಕರೆತರಲಾಗಿದೆ. ಭೂಮಿಯಿಂದ 4,06,778 ಕಿ.ಮೀ. ದೂರ ಹೋಗಿದ್ದ ಈ ಚಂದ್ರಯಾನ ಮಾನವನ ಇತಿಹಾಸದಲ್ಲಿ ಅತಿ ದೂರದ ಮತ್ತು ಭಾರಿ ದಿಟ್ಟತನದ ಗಗನಯಾನ ಎಂಬ ಹಿರಿಮೆಗೆ ಪಾತ್ರವಾಗಿದೆ.

ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್-2 ಮಿಷನ್‌ Read More »

ಕದನ ವಿರಾಮದಲ್ಲಿ ಪಾಕಿಸ್ತಾನ ಬರೀ ಸಂದೇಶ ವಾಹಕ?

ಪಾಕಿಸ್ತಾನದ ವಿಶ್ವಾಸಾರ್ಹತೆಯ ಬಗ್ಗೆ ಇದೆ ಹಲವು ಅನುಮಾನ ವಾಷಿಂಗ್ಟನ್ : ಅಮೆರಿಕ-ಇಸ್ರೇಲ್‌-ಇರಾನ್‌ ಕದನ ವಿರಾಮಕ್ಕೆ ನಾನು ಕಾರಣ ಎಂದು ಪಾಕಿಸ್ತಾನ ಹೇಳಿಕೊಳ್ಳುತ್ತಿದ್ದರೂ ಅದರ ಪಾತ್ರದ ಬಗ್ಗೆ ನಾನಾ ರೀತಿಯ ಗುಮಾನಿಗಳು ಎದ್ದಿವೆ. ಆರಂಭದಲ್ಲೇ ಪಾಕಿಸ್ತಾನ ಟ್ವೀಟ್‌ ಮಾಡಿ ಎಡವಟ್ಟು ಮಾಡಿಕೊಂಡಿತ್ತು. ಇದು ಅಮೆರಿಕ ರಚಿಸಿಕೊಟ್ಟ ಟ್ವೀಟ್‌ ಸಂದೇಶ ಎಂಬುದಕ್ಕೆ ಸ್ವತಹ ಪಾಕಿಸ್ತಾನವೇ ಸಾಕ್ಷಿ ಒದಗಿಸಿತ್ತು. ಇದೀಗ ಅಮೆರಿಕವೇ ಕದನ ವಿರಾಮದಲ್ಲಿ ಪಾಕಿಸ್ತಾನ ಸಂಧಾನಕಾರನ ಪಾತ್ರ ನಿಭಾಯಿಸಿಲ್ಲ, ಬದಲಾಗಿ ಬರೀ ಸಂದೇಶ ವಾಹಕನಾಗಿ ಕಾರ್ಯನಿರ್ವಹಿಸಿದೆ ಎಂದು ಹೇಳುತ್ತಿದೆ. ಜಾಗತಿಕ

ಕದನ ವಿರಾಮದಲ್ಲಿ ಪಾಕಿಸ್ತಾನ ಬರೀ ಸಂದೇಶ ವಾಹಕ? Read More »

ಲೆಬನಾನ್‌ ಮೇಲೆ ಇಸ್ರೇಲ್‌ ಭೀಕರ ದಾಳಿ : 250ಕ್ಕೂ ಹೆಚ್ಚು ಮಂದಿ ಸಾವು

10 ನಿಮಿಷದಲ್ಲಿ 100ಕ್ಕೂ ಹೆಚ್ಚು ಕ್ಷಿಪಣಿ ಅಟ್ಯಾಕ್‌ ಹೊರ್ಮುಜ್‌ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್‌ ಟೆಲ್‌ ಅವಿವ್‌: ಕದನ ವಿರಾಮ ಘೋಷಣೆಯಾಗಿದ್ದರೂ ಇದನ್ನು ಕ್ಯಾರೇ ಮಾಡದ ಇಸ್ರೇಲ್‌ ವಾಯುಪಡೆ ಲೆಬನಾನ್‌ ಮೇಲೆ ಕೇವಲ 10 ನಿಮಿಷಗಳಲ್ಲಿ 100 ಕ್ಷಿಪಣಿ ದಾಳಿ ನಡೆಸಿದೆ. ಇದನ್ನು ಈ ಯುದ್ಧದ ಅತ್ಯಂತ ದೊಡ್ಡ ಸಂಘಟಿತ ದಾಳಿ ಎಂದು ಇಸ್ರೇಲ್ ಬಣ್ಣಿಸಿದೆ. ಈ ಬೆಳವಣಿಗೆ ಬೆನ್ನಲ್ಲೇ ಇರಾನ್‌ ಹೊರ್ಮುಜ್‌ ಜಲಸಂಧಿಯನ್ನು ಮತ್ತೆ ಮುಚ್ಚಿದೆ. ರಾಜಧಾನಿ ಬೈರೂತ್ ಮಧ್ಯಭಾಗ, ಬೆಕಾ ವ್ಯಾಲಿ ಮತ್ತು ದಕ್ಷಿಣ

ಲೆಬನಾನ್‌ ಮೇಲೆ ಇಸ್ರೇಲ್‌ ಭೀಕರ ದಾಳಿ : 250ಕ್ಕೂ ಹೆಚ್ಚು ಮಂದಿ ಸಾವು Read More »

error: Content is protected !!
Scroll to Top