ವಿದೇಶ

ಭಯೋತ್ಪಾದಕರ ದಾಳಿಗೆ ಹೆದರಿ ಸೇನೆ ತೊರೆಯುತ್ತಿರುವ ಪಾಕ್‌ ಯೋಧರು

ಒಂದೇ ವಾರದಲ್ಲಿ 2500 ಸೈನಿಕರ ರಾಜೀನಾಮೆ ಇಸ್ಲಾಮಾಬಾದ್‌: ಬಲೂಚಿಸ್ಥಾನ ಪ್ರತ್ಯೇಕವಾದಿ ಹೋರಾಟಗಾರರು ಇತ್ತೀಚೆಗೆ ಬೆನ್ನುಬೆನ್ನಿಗೆ ನಡೆಸಿದ ಎರಡು ದಾಳಿಗಳಿಂದ ಕಂಗೆಟ್ಟಿರುವ ಪಾಕಿಸ್ಥಾನದ ಸೈನಿಕರು ಈಗ ಸೈನ್ಯವನ್ನೇ ಬಿಟ್ಟು ಹೋಗುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಬಂಡುಕೋರರು ಒಂದಿಡೀ ರೈಲನ್ನೇ ಅಪಹರಿಸಿ ಒತ್ತೆಸೆರೆಯಲ್ಲಿಟ್ಟಿದ್ದರು. ಈ ಕಾರ್ಯಾಚರಣೆಯಲ್ಲಿ ಪ್ರಯಾಣಿಕರ ಜೊತೆ ಅನೇಕ ಯೋಧರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಇದಾದ ಎರಡೇ ದಿನದಲ್ಲಿ ಸೇನೆಯ ವಾಹನಗಳ ಮೇಲೆ ದಾಳಿ ಮಾಡಿ 90 ಯೋಧರನ್ನು ಕೊಂದಿದ್ದರು. ಈ ಎರಡು ಘಟನೆಗಳು ಪಾಕಿಸ್ಥಾನ ಸೇನೆಯ ಜಂಘಾಬಲವನ್ನು […]

ಭಯೋತ್ಪಾದಕರ ದಾಳಿಗೆ ಹೆದರಿ ಸೇನೆ ತೊರೆಯುತ್ತಿರುವ ಪಾಕ್‌ ಯೋಧರು Read More »

ಸುನೀತಾ ವಿಲ್ಲಿಯಮ್ಸ್‌ ಭೂಮಿಗೆ ಆಗಮಿಸುವ ಪ್ರಕ್ರಿಯೆ ಶುರು

ಭಾರತದ ಕಾಲಮಾನ ಪ್ರಕಾರ ಬುಧವಾರ ಬೆಳಗ್ಗೆ 3.27ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಭೂಸ್ಪರ್ಶ ನ್ಯೂಯಾರ್ಕ್‌: ಕಳೆದ 9 ತಿಂಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಜ್ ವಿಲ್ಮೋರ್ ಅವರ ಭೂಮಿಗೆ ಮರಳುವ ಪ್ರಯಾಣ ಶುರುವಾಗಿದ್ದು, ನಾಸಾ ಇದನ್ನು ನೇರ ಪ್ರಸಾರ ಮಾಡುತ್ತಿದೆ. ಅಮೆರಿಕ ಕಾಲಮಾನ ಪ್ರಕಾರ ಮಂಗಳವಾರ ಸಂಜೆ ಸುನೀತಾ ವಿಲ್ಲಿಯಮ್ಸ್‌ ಹೊತ್ತ ಗಗನನೌಕೆ ಭೂಸ್ಪರ್ಶ ಮಾಡಲಿದೆ. ಈ ಇಬ್ಬರು ಗಗನಯಾತ್ರಿಗಳು ಫ್ಲೋರಿಡಾ ಕರಾವಳಿಯಲ್ಲಿ ಇಳಿಯಲಿದ್ದು, ಈ ಅಪರೂಪದ ಕ್ಷಣಗಳನ್ನು ನಾಸಾ ನೇರಪ್ರಸಾರ

ಸುನೀತಾ ವಿಲ್ಲಿಯಮ್ಸ್‌ ಭೂಮಿಗೆ ಆಗಮಿಸುವ ಪ್ರಕ್ರಿಯೆ ಶುರು Read More »

ನಾಳೆಯೇ ಸುನೀತಾ ವಿಲ್ಲಿಯಮ್ಸ್‌ ಭೂಮಿಗೆ ಮರಳುವ ಸಾಧ್ಯತೆ

9 ತಿಂಗಳ ಅಂತರಿಕ್ಷ ವಾಸಕ್ಕೆ ಕೊನೆಗೂ ಮುಕ್ತಿ ಸನ್ನಿಹಿತ ನ್ಯೂಯಾರ್ಕ್‌ : ಒಂಬತ್ತು ತಿಂಗಳಿಂದ ಅಂತರಿಕ್ಷದಲ್ಲಿ ಸಿಕ್ಕಿಬಿದ್ದಿರುವ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲ್ಲಿಯಮ್ಸ್‌ ಅವರನ್ನು ಭೂಮಿಗೆ ಕರೆತರಲು ಕ್ಷಣಗಣನೆ ಶುರುವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮಂಗಳವಾರ ಸಂಜೆಗಾಗುವಾಗ ಸುನೀತಾ ವಿಲ್ಲಿಯಮ್ಸ್‌ ಇರುವ ಗಗನನೌಕೆ ಭೂಮಿ ಸ್ಪರ್ಶ ಮಾಡಲಿದೆ. ಆ ಮೂಲಕ ಸುದೀರ್ಘ 9 ತಿಂಗಳ ಅಂತರಿಕ್ಷ ವಾಸ ಅಂತ್ಯಗೊಳ್ಳಲಿದೆ. ಆರಂಭದಲ್ಲಿ ಬುಧವಾರ ಅಥವಾ ಗುರುವಾರ ಇಬ್ಬರು ಗಗನಯಾತ್ರಿಗಳನ್ನು ವಾಪಸ್‌ ಕರೆತರಲು ಯೋಜನೆ ರಚಿಸಲಾಗಿತ್ತು. ಆದರೆ ಈ

ನಾಳೆಯೇ ಸುನೀತಾ ವಿಲ್ಲಿಯಮ್ಸ್‌ ಭೂಮಿಗೆ ಮರಳುವ ಸಾಧ್ಯತೆ Read More »

ಕಾಫಿ ಮೈಮೇಲೆ ಚೆಲ್ಲಿದ್ದಕ್ಕೆ 415 ಕೋ. ರೂ. ದಂಡ!

ಸ್ಟಾರ್‌ಬಕ್ಸ್‌ ಕಂಪನಿ ವಿರುದ್ಧ ತೀರ್ಪು ನೀಡಿದ ನ್ಯಾಯಾಲಯ ಕ್ಯಾಲಿಫೋರ್ನಿಯಾ : ಕಾಫಿ ಮೈಮೇಲೆ ಚೆಲ್ಲಿದ್ದಕ್ಕೆ ಸ್ಟಾರ್‌ಬಕ್ಸ್‌ ಭಾರಿ ಬೆಲೆಯನ್ನೇ ತೆರಬೇಕಾಗಿ ಬಂದಿದೆ. ಸ್ಟಾರ್‌ಬಕ್ಸ್‌ನ ಬಿಸಿ ಕಾಫಿ ತೊಡೆ ಭಾಗದ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಗೆ 50 ಮಿಲಿಯನ್‌ ಡಾಲರ್‌ ಅಂದರೆ ಸುಮಾರು 415 ಕೋಟಿ ರೂ. ಪರಿಹಾರ ನೀಡಬೇಕೆಂದು ಸ್ಟಾರ್‌ಬಕ್ಸ್‌ಗೆ ಕೋರ್ಟ್ ಆದೇಶ ನೀಡಿದೆ. ಕಾಫಿ ಮುಚ್ಚಳವನ್ನು ಸರಿಯಾಗಿ ಮುಚ್ಚದೆ ಕೊಟ್ಟಿದ್ದರಿಂದ ಬಿಸಿ ಕಾಫಿ ತೊಡೆ ಮೇಲೆ ಬಿದ್ದಿದ್ದು, ಪರಿಣಾಮ ಆ ವ್ಯಕ್ತಿಯ ಜನನಾಂಗಕ್ಕೂ ಗಾಯಗಳಾಗಿದ್ದವು.

ಕಾಫಿ ಮೈಮೇಲೆ ಚೆಲ್ಲಿದ್ದಕ್ಕೆ 415 ಕೋ. ರೂ. ದಂಡ! Read More »

ಲಷ್ಕರ್‌ನ ಮೋಸ್ಟ್‌ ವಾಂಟೆಡ್‌ ಉಗ್ರ ಅಬ್ದುಲ್‌ ಖತಲ್‌ನ ಹತ್ಯೆ

ರಾತ್ರಿ ಅಜ್ಞಾತ ವ್ಯಕ್ತಿಗಳ ಗುಂಡಿಗೆ ಬಲಿಯಾದ ಉಗ್ರ ಸಂಘಟನೆಯ ಕಮಾಂಡರ್‌ ಇಸ್ಲಾಮಾಬಾದ್‌ : ಪಾಕಿಸ್ಥಾನದ ಉಗ್ರ ಸಂಘಟನೆ ಲಷ್ಕರ್‌ ಇ ತಯ್ಯಬದ ಕಮಾಂಡರ್‌, ಮೋಸ್ಟ್‌ ವಾಂಟೆಡ್‌ ಲಿಸ್ಟ್‌ನಲ್ಲಿದ್ದ ಉಗ್ರನೊಬ್ಬನನ್ನು ಅಜ್ಞಾತ ವ್ಯಕ್ತಿಗಳು ನಿನ್ನೆ ರಾತ್ರಿ ಸಾಯಿಸಿದ್ದಾರೆ. ಕೊಲೆಯಾಗಿರುವ ಅಬ್ದುಲ್‌ ಖತಲ್‌ ಜಮ್ಮು-ಕಾಶ್ಮೀರದಲ್ಲಿ ನಡೆದ ಹಲವು ಉಗ್ರ ದಾಳಿಗಳ ರೂವಾರಿಯಾಗಿದ್ದ. ಭಾರತದ ಪಾಲಿಗೆ ಅವನು ತಲೆನೋವಾಗಿದ್ದ. ಶನಿವಾರ ರಾತ್ರಿ ಅವನನ್ನು ಅಜ್ಞಾತ ವ್ಯಕ್ತಿಗಳು ಗುಂಡಿಕ್ಕಿ ಸಾಯಿಸಿದ್ದಾರೆ ಎಂದು ವರದಿಯಾಗಿದೆ.ಲಷ್ಕರ್‌ನ ಸ್ಥಾಪಕ ಹಾಗೂ ಮುಂಬಯಿ ಮೇಲೆ ನಡೆದ ಭಯೋತ್ಪಾದಕ ದಾಳಿಯ

ಲಷ್ಕರ್‌ನ ಮೋಸ್ಟ್‌ ವಾಂಟೆಡ್‌ ಉಗ್ರ ಅಬ್ದುಲ್‌ ಖತಲ್‌ನ ಹತ್ಯೆ Read More »

ಗಗನ ಯಾತ್ರಿ ಸುನೀತಾ ವಿಲ್ಲಿಯಮ್ಸ್‌ರನ್ನು ಭೂಮಿಗೆ ಕರೆತರುವ ಕಾರ್ಯಾಚರಣೆ ಶುರು

ಒಂಬತ್ತು ತಿಂಗಳಿಂದ ಅಂತರಿಕ್ಷದಲ್ಲಿ ಬಾಕಿಯಾಗಿರುವ ಭಾರತೀಯ ಮೂಲದ ಖಗೋಲ ವಿಜ್ಞಾನಿ ವಾಷಿಂಗ್ಟನ್: ಗಗನಯಾತ್ರಿ ಸುನೀತಾ ವಿಲ್ಲಿಯಮ್ಸ್‌ ಅವರ ಅಂತರಿಕ್ಷ ವಾಸಕ್ಕೆ ಕೊನೆಗೂ ಮುಕ್ತಿ ಸಿಗುವ ಗಳಿಗೆ ಸನ್ನಿಹಿತವಾಗಿದೆ. ತಾಂತ್ರಿಕ ಅಡಚಣೆಗಳಿಂದಾಗಿ ಸುಮಾರು 9 ತಿಂಗಳುಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿರುವ ಭಾರತ ಮೂಲದ ಖಗೋಳ ವಿಜ್ಞಾನಿ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಅವರನ್ನು ಭೂಮಿಗೆ ವಾಪಸ್ ಕರೆತರುವ ಕಾರ್ಯಾಚರಣೆಯನ್ನು ನಾಸಾ ಮರಳಿ ಪ್ರಾರಂಭಿಸಿದೆ.ಅಮೆರಿಕ ಬ್ಯಾಹ್ಯಾಕಾಶ ಸಂಸ್ಥೆ (ನಾಸಾ) ಮತ್ತು ಉದ್ಯಮಿ ಎಲಾನ್ ಮಸ್ಕ್ ಅವರ ಸ್ಪೇಸ್

ಗಗನ ಯಾತ್ರಿ ಸುನೀತಾ ವಿಲ್ಲಿಯಮ್ಸ್‌ರನ್ನು ಭೂಮಿಗೆ ಕರೆತರುವ ಕಾರ್ಯಾಚರಣೆ ಶುರು Read More »

ಹೈಜಾಕ್‌ ಮಾಡಿದ ರೈಲಿನಲ್ಲಿದ್ದ 214 ಪ್ರಯಾಣಿಕರ ಹತ್ಯೆ : ಬಂಡುಕೋರರ ಹೇಳಿಕೆ

ಪಾಕ್‌ ಸೇನೆ ಸುಳ್ಳು ಹೇಳಿ ಜಗತ್ತಿನ ದಿಕ್ಕುತಪ್ಪಿಸಿದೆ ಎಂದು ಆರೋಪ ಇಸ್ಲಾಮಾಬಾದ್: ಜಾಫರ್‌ ಎಕ್ಸ್‌ಪ್ರೆಸ್‌ ಅಪಹರಿಸಿ ಒತ್ತೆಯಾಳಾಗಿರಿಸಿಕೊಂಡಿದ್ದ ಎಲ್ಲ 214 ಪ್ರಯಾಣಿಕರನ್ನು ಹತ್ಯೆ ಮಾಡಲಾಗಿದೆ ಎಂದು ಬಲೂಚ್‌ ಲಿಬರೇಶನ್‌ ಆರ್ಮಿ (ಬಿಎಲ್‌ಎ) ಹೇಳಿಕೊಂಡಿದೆ.ನಮ್ಮ ಹೋರಾಟಗಾರರಿಂದ ಒತ್ತೆಯಾಳುಗಳಾಗಿದ್ದ ಎಲ್ಲ 214 ಮಂದಿಯನ್ನೂ ಹತ್ಯೆ ಮಾಡಲಾಗಿದೆ. ಪಾಕಿಸ್ಥಾನಿ ಭದ್ರತಾ ಪಡೆಗಳೊಂದಿಗೆ ಇನ್ನೂ ಎನ್‌ಕೌಂಟರ್ ನಡೆಯುತ್ತಿದೆ ಎಂದು ತಿಳಿಸಿದೆ. ಬಿಎಲ್‌ಎ ಪ್ರತ್ಯೇಕತಾವಾದಿಗಳನ್ನು ಸದೆಬಡಿದು ಜನರ ರಕ್ಷಣೆ ಮಾಡಿರುವುದಾಗಿ ಪಾಕಿಸ್ಥಾನ ಹೇಳಿಕೆ ನೀಡಿತ್ತು. ಆದರೆ, ಈ ಹೇಳಿಕೆಗೆ ತದ್ವಿರುದ್ಧವಾದ ಹೇಳಿಕೆಯನ್ನು ಬಿಎಲ್‌ಎ ನೀಡಿದೆ.

ಹೈಜಾಕ್‌ ಮಾಡಿದ ರೈಲಿನಲ್ಲಿದ್ದ 214 ಪ್ರಯಾಣಿಕರ ಹತ್ಯೆ : ಬಂಡುಕೋರರ ಹೇಳಿಕೆ Read More »

ಪಾಕ್‌ ರೈಲು ಹೈಜಾಕ್‌ : ರಕ್ಷಣಾ ಕಾರ್ಯಾಚರಣೆ ಮುಕ್ತಾಯ, 33 ಬಂಡುಕೋರರ ಹತ್ಯೆ

500 ಪ್ರಯಣಿಕರಿದ್ದ ಪ್ಯಾಸೆಂಜರ್‌ ರೈಲನ್ನು ಅಪಹರಿಸಿದ್ದ ಬಲೂಚಿಸ್ಥಾನ ಬಂಡುಕೋರರು ಇಸ್ಲಾಮಾಬಾದ್‌ : ಬಲೂಚಿಸ್ಥಾನದಲ್ಲಿ ಜಾಫರ್‌ ಎಕ್ಸ್‌ಪ್ರೆಸ್‌ ಪ್ಯಾಸೆಂಜರ್‌ ರೈಲು ಅಪಹರಿಸಿ ಪ್ರಯಾಣಿಕರನ್ನು ಒತ್ತೆಸೆರೆಯಲ್ಲಿಟ್ಟಿದ್ದ ಎಲ್ಲ 33 ಬಂಡುಕೋರರನ್ನು ಸಾಯಿಸಿ, ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಪಾಕಿಸ್ಥಾನದ ಸೇನೆ ಹೇಳಿಕೊಂಡಿದೆ.ಮಂಗಳವಾರ ಕ್ವೆಟ್ಟಾದಿಂದ ಪೇಷಾವರಕ್ಕೆ ಬರುತ್ತಿದ್ದ ರೈಲನ್ನು ಬಲೂಚಿಸ್ಥಾನದ ಬಲೂನ್‌ ಎಂಬಲ್ಲಿ ಹಳಿಯನ್ನು ಸ್ಫೋಟಿಸಿ ಅಪಹರಿಸಿದ್ದ ಬಂಡುಕೋರರು ಪ್ರಯಾಣಿಕರನ್ನು ಒತ್ತೆಸೆರೆಯಲ್ಲಿಟ್ಟು, ಸೆರೆಮನೆಗಳಲ್ಲಿರುವ ಬಲೂಚಿಸ್ಥಾನದ ರಾಜಕೀಯ ಕೈದಿಗಳನ್ನು ಬಿಡುಗಡೆಗೊಳಿಸಿ ಬಲೂಚಿಸ್ಥಾನವನ್ನು ಸ್ವತಂತ್ರ ದೇಶವಾಗಿ ಘೋಷಿಸಬೇಕೆಂಬ ಬೇಡಿಕೆ ಇಟ್ಟಿದ್ದರು.ಾಪಹರಿಸಿದ ರೈಲಿನಲ್ಲಿ ಸುಮಾರು 500 ಪ್ರಯಾಣಿಕರು

ಪಾಕ್‌ ರೈಲು ಹೈಜಾಕ್‌ : ರಕ್ಷಣಾ ಕಾರ್ಯಾಚರಣೆ ಮುಕ್ತಾಯ, 33 ಬಂಡುಕೋರರ ಹತ್ಯೆ Read More »

ಪಾಕಿಸ್ಥಾನ ರೈಲು ಹೈಜಾಕ್‌ : 155 ಪ್ರಯಾಣಿಕರನ್ನು ರಕ್ಷಿಸಿದ ಭದ್ರತಾ ಪಡೆ

27 ಬಂಡುಕೋರರ ಹತ್ಯೆ, 200ಕ್ಕೂ ಅಧಿಕ ಪ್ರಯಾಣಿಕರು ಒತ್ತೆಸೆರೆಯಲ್ಲಿ ಇಸ್ಲಾಮಾಬಾದ್‌ : ಪಾಕಿಸ್ಥಾನದಲ್ಲಿ ಬಲೂಚಿಸ್ಥಾನದ ಪ್ರತ್ಯೇಕವಾದಿಗಳು ಒಂದಿಡೀ ರೈಲನ್ನು ಅಪಹರಿಸಿ ನೂರಾರು ಪ್ರಯಾಣಿಕರನ್ನು ಒತ್ತೆಸೆರೆಯಲ್ಲಿಟ್ಟುಕೊಂಡಿದ್ದು, ಪ್ರಯಾಣಿಕರನ್ನು ರಕ್ಷಿಸಲು ಭದ್ರತಾ ಪಡೆಗಳು ತೀವ್ರ ಕಾರ್ಯಾಚರಣೆ ನಡೆಸುತ್ತಿವೆ. ಮಂಗಳವಾರ ಕ್ವೆಟ್ಟಾದಿಂದ ಪೇಷಾವರಕ್ಕೆ ಬರುತ್ತಿದ್ದ ಜಾಫರ್‌ ಎಕ್ಸ್‌ಪ್ರೆಸ್‌ ಪ್ಯಾಸೆಂಜರ್‌ ರೈಲನ್ನು ʼದ ಬಲೂಚಿಸ್ಥಾನ್‌ ಲಿಬರೇಶನ್‌ ಆರ್ಮಿʼಯ ಬಂಡುಕೋರರು ಪ್ರಯಾಣಿಕರು ಮತ್ತು ಭದ್ರತಾ ಸಿಬ್ಬಂದಿ ಸಮೇತ ಅಪಹರಿಸಿಕೊಂಡು ಹೋಗಿದ್ದಾರೆ.ರಾತ್ರಿಗಾಗುವಾಗ ಮಹಿಳೆಯರು ಮತ್ತು ಮಕ್ಕಳು ಸೇರಿ 155 ಪ್ರಯಾಣಿಕರನ್ನು ರಕ್ಷಿಸಲಾಗಿದೆ, ಹಾಗೂ ಈ ಕಾರ್ಯಾಚರಣೆಯಲ್ಲಿ

ಪಾಕಿಸ್ಥಾನ ರೈಲು ಹೈಜಾಕ್‌ : 155 ಪ್ರಯಾಣಿಕರನ್ನು ರಕ್ಷಿಸಿದ ಭದ್ರತಾ ಪಡೆ Read More »

ಸಿರಿಯಾ : ಭದ್ರತಾ ಪಡೆಗಳಿಂದ 1000ಕ್ಕೂ ಅಧಿಕ ನಾಗರಿಕರ ಹತ್ಯೆ

ಮಾಜಿ ಅಧ್ಯಕ್ಷ ಅಸಾದ್‌ ಬೆಂಬಲಿಗರ ಮೇಲೆ ಪ್ರತೀಕಾರದ ಹಿಂಸಾಚಾರ ಬೇರೂತ್‌: ಸಿರಿಯಾದಲ್ಲಿ ಕಳೆದ ಎರಡು ದಿನಗಳಿಂದ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಾಶರ್‌ ಅಲ್‌ ಅಸಾದ್‌ ಬೆಂಬಲಿಗರ ನಡುವೆ ನಡೆಯುತ್ತಿರುವ ಭೀಕರ ಹಿಂಸಾಚಾರದಲ್ಲಿ 1000ಕ್ಕೂ ಅಧಿಕ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೆಡಿಟೇರಿಯನ್‌ ಕರಾವಳಿಯಲ್ಲಿ ಎರಡು ದಿನಗಳಿಂದ ಭೀಕರ ಹಿಂಸಾಚಾರ ನಡೆಯುತ್ತಿದೆ. ದಂಗೆಯೆದ್ದಿರುವ ಅಲ್ವೈಟ್‌ ಸಮುದಾಯದ ಜನರನ್ನು ಭದ್ರತಾ ಪಡೆ ನಿರ್ದಯವಾಗಿ ಸಾಯಿಸುತ್ತಿದೆ ಎನ್ನಲಾಗಿದೆ.ಸಿರಿಯಾದ ಹೊಸ ಸರಕಾರ ಮತ್ತು ಮಾಜಿ ಅಧ್ಯಕ್ಷ ಅಸಾದ್‌ ಬೆಂಬಲಿಗರ ನಡುವೆ

ಸಿರಿಯಾ : ಭದ್ರತಾ ಪಡೆಗಳಿಂದ 1000ಕ್ಕೂ ಅಧಿಕ ನಾಗರಿಕರ ಹತ್ಯೆ Read More »

error: Content is protected !!
Scroll to Top